HomeUncategorizedದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

ದಿಕ್ಕು ತಪ್ಪಿದ ಮಾತುಗಳು ಮತ್ತು ಅಡ್ಡ ಹಾದಿ ಹಿಡಿದ ಚುನಾವಣಾ ಕಥನ

- Advertisement -
- Advertisement -

ಪ್ರಜಾತಂತ್ರದ ಹಬ್ಬಗಳೆಂದು ಕರೆಯುವ ಚುನಾವಣೆಗಳು ಬಂದಿವೆ. ಜನರ ಬೇಕುಬೇಡಗಳನ್ನು ನಿರ್ಧರಿಸುವ ಸಮಯವಿದು. ಹಾಗಾಗಿ ಜನರ ದನಿಗಳು ಜೋರಾದರೆ ಮಾತ್ರ ಆಳಲು ಹೋಗುವವರಿಗೆ ಕೇಳಿಸಲು ಸಾಧ್ಯ. ಏಕೆಂದರೆ ಈಗ ಮಾತ್ರ ರಾಜಕೀಯ ಪಕ್ಷಗಳ ನಾಯಕರುಗಳು ಜನರ ಮನೆ ಮುಂದೆ ಬರುತ್ತಾರೆ. ಹೀಗೆ ಬರುವುದು ಅವರಿಗೆ ಅನಿವಾರ್ಯವಾಗಿರುತ್ತದೆ. ಇದನ್ನೆ ನಾವು ಪ್ರಜಾತಂತ್ರ ಎಂದು ಕರೆಯುವುದು. ಈ ಸಂದರ್ಭದಲ್ಲಿ ಮಾಧ್ಯಮಗಳು ಜನರ ದನಿಯಾಗಿ ಜನ ಮತ್ತು ರಾಜಕೀಯ ಪಕ್ಷಗಳ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ಪ್ರಜಾತಂತ್ರದ ಯಶಸ್ಸಿಗೆ ಇದು ಅಗತ್ಯ.
ಕರ್ನಾಟಕದಲ್ಲಿ ಚುನಾವಣೆ ಎರಡು ಹಂತಗಳಲ್ಲಿ ನಡೆಯುತ್ತಿದ್ದು ದಿನೇ ದಿನೇ ಕಾವೇರುತ್ತಿದೆ. ಆದರೆ ಬಹುತೇಕ ಮಾಧ್ಯಮಗಳು ಮಂಡ್ಯ ಕ್ಷೇತ್ರದ ಮೇಲೆ ಮಾತ್ರ ಗಮನ ಹರಿಸುತ್ತಿದ್ದಾರೆ, ಉಳಿದ ಕ್ಷೇತ್ರಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂಬ ಆರೋಪಗಳು ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿವೆ. ಮಂಡ್ಯ ಅಂದ್ರೆ ಇಂಡ್ಯ ಇದ್ದ ಹಾಗೆ ಎಂದು ತಮಾಷೆಗೆ ಹೇಳುತ್ತಿದ್ದುದ್ದನ್ನು ನಿಜ ಮಾಡಲು ಹೊರಟಂತಿದೆ ಮಾಧ್ಯಮಗಳ ನಡೆ. ಚಿತ್ರನಟರು ಇದ್ದರೆ ಟಿಆರ್‍ಪಿ ಸಿಗುತ್ತದೆ ಎಂಬ ಕಾರಣಕ್ಕೆ ಹೆಚ್ಚಿನ ಸಮಯ ಅದಕ್ಕೆ ಮೀಸಲಿಡುವುದು ಎಷ್ಟು ಸರಿ?
ಕರ್ನಾಟಕದಲ್ಲಿರುವ ಚಾಮರಾಜನಗರದಲ್ಲಿ ಅಭಿವೃದ್ದಿ ಕೆಲಸಗಳು ಆಗುತ್ತಿವೆಯೇ ಇಲ್ಲವೇ? ಬೀದರ್‍ನ ಜನಗಳ ಪರಿಸ್ಥಿತಿ ಏನು? ರಾಜ್ಯದ ಜನರಿಗೆ ವಿದ್ಯುತ್ ಕೊಡುವುದಕ್ಕೋಸ್ಕರ ನೆಲೆ ಕಳೆದುಕೊಂಡ ಉತ್ತರ ಕನ್ನಡದ ಜನ ಈಗ ಹೇಗಿದ್ದಾರೆ? ಅಲ್ಲಿನ ಸಂಸದನ ಬೆಂಕಿಯುಗುಳುವ, ತೇಜೋವಧೆಯ ಭಾಷಣಗಳಿಂದ ಅಲ್ಲಿನ ಜನಕ್ಕೇನಾದರೂ ಉಪಯೋಗವಿದೆಯೇ? ಚಿತ್ರದುರ್ಗದ ಜನರು ಬರದಿಂದ ಬೇಯುತ್ತಿರುವುದಕ್ಕೆ ಪರಿಹಾರಗಳೇನು? ಕೋಲಾರ ಚಿಕ್ಕಬಳ್ಳಾಪುರದ ಜನರಿಗೆ ಕುಡಿಯಲು ಉತ್ತಮ ನೀರು ಸಿಗುತ್ತಿದೆಯೇ? ಈ ಯಾವ ವಿಷಯಗಳ ಕುರಿತು ಚುನಾವಣಾ ಸಂದರ್ಭದಲ್ಲಾದರೂ ಮಾಧ್ಯಮಗಳು ಗಮನಹರಿಸುತ್ತಿಲ್ಲ ಎಂಬುದನ್ನು ನಾವು ಮರೆಯಬಾರದು.
ಇನ್ನು ಚುನಾವಣಾ ಸಮಯದಲ್ಲಿ ಕೆಲ ರಾಜಕಾರಣಿಗಳು ಮನಸ್ಸಿಗೆ ಬಂದಹಾಗೆ ಮಾತಾಡುವುದು, ಕೆಟ್ಟ ಕೊಳಕು ಬೈಯ್ಯುವುದನ್ನು ತಮ್ಮ ಕಾಯಕ ಮಾಡಿಕೊಂಡಿರುತ್ತಾರೆ. ಎದುರಾಳಿಗಳನ್ನು ಹಣಿಯಲು ಈ ಕುತಂತ್ರವನ್ನು ಬಳಸುತ್ತಾರೆ. ಕರ್ನಾಟಕದಲ್ಲಿ ಈ ಹಿಂದೆ ಉಪಚುನಾವಣೆಯೊಂದರ ಸಂದರ್ಭದಲ್ಲಿ ಬಿಜೆಪಿ ಪ್ರತಾಪ್ ಸಿಂಹ ಎಂಬ ವ್ಯಕ್ತಿ ‘ಇನ್ನೂ ಗಂಡ ಸತ್ತು ಒಂದು ವಾರ ಆಗಿಲ್ಲ, ಆಗಲೇ ಅವರಿಗೆ ಗೂಟದ ಕಾರಿನ ಮೇಲೆ ಆಸೆ’ ಎಂದಿದ್ದನು. ಇನ್ನು ಈ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅನ್ನು ಟೀಕಿಸುವ ಭರದಲ್ಲಿ ಗಂಡ ಸತ್ತು ತಿಂಗಳಾಗಿಲ್ಲ ಆಗಲೇ ಚುನಾವಣೆಗೆ ಬೇಕಾಯ್ತಾ ಎಂದು ಜೆಡಿಎಸ್‍ನ ಎಚ್.ಡಿ ರೇವಣ್ಣ ಹೇಳುವ ಮೂಲಕ ಸರಿಯಾಗಿ ಛೀಮಾರಿ ಹಾಕಿಸಿಕೊಂಡರು.
ಇಂದು ಕಾಂಗ್ರೆಸ್ ಜೊತೆಗಿರುವ ಪಕ್ಷದ ನಾಯಕಮಣಿಯೊಬ್ಬ ಉತ್ತರ ಪ್ರದೇಶದಲ್ಲಿ ತಮ್ಮ ಪ್ರತಿಸ್ಪರ್ಧಿ ಮಹಿಳಾ ಅಭ್ಯರ್ಥಿಯ ವಿರುದ್ಧ ಅವರು ಎಷ್ಟು ಅಗಲ ಬಿಂದಿ ಇಟ್ಟುಕೊಂಡಿದ್ದಾರೆ ಅಷ್ಟು ಗಂಡಂದಿರು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಇದೇ ಉತ್ತರ ಪ್ರದೇಶದ ಬಿಜೆಪಿ ವ್ಯಕ್ತಿಯೊಬ್ಬರು ಮಾಯವತಿಯವರು ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ, ಸೌಂದರ್ಯಕ್ಕೆ ಹೆಚ್ಚಿನ ಸಮಯ ನೀಡುತ್ತಾರೆ ಅವರನ್ನು ಗೆಲ್ಲಿಸಬಾರದು ಎಂದಿದ್ದ. ಇವೆಲ್ಲಾ ಉಸಾಬರಿ ಇವರಿಗೆ ಏಕೆ ಎಂಬುದು ಸರಳ ಪ್ರಶ್ನೆ. ಆದರೆ ಇವರೆಲ್ಲರೂ ಮಹಿಳೆಯವರ ವಿರುದ್ಧವೇ ಏಕೆ ತಮ್ಮ ನಾಲಿಗೆಯನ್ನು ಹರಿಯಬಿಡುತ್ತಾರೆ ಎಂಬುದು ಬಹಳ ದೊಡ್ಡ ಪ್ರಶ್ನೆಯಾಗಿದೆ. ಇಂದಿಗೂ ನಮ್ಮನ್ನು ಆಳಲು ಹೋಗುವವರು ಮಹಿಳೆಯರ ಕುರಿತು ಎಂತಹ ಕೀಳು ಮನಸ್ಥಿತಿ ಹೊಂದಿದ್ದಾರೆ ಎಂಬುದು ಇದರಿಂದ ತಿಳಿದುಬರುತ್ತದೆ. ಇದರಲ್ಲಿ ಪಕ್ಷಭೇದವೇ ಇಲ್ಲವಾದರೂ ಸಂಸ್ಕøತಿ ರಕ್ಷಕರ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿಯವರು ಬೆಂಕಿ ಹಚ್ಚುವ ಮಾತಾಡುವುದರಲ್ಲಿ, ಸಮುದಾಯಗಳನ್ನು ಅವಮಾನಿಸುವ ವಿಚಾರದಲ್ಲಿ ಅಗ್ರಗಣ್ಯರು.
ಕಳೆದ ಐದು ವರ್ಷಗಳ ಅವಧಿಯಲ್ಲಿ ತಮ್ಮ ಪಕ್ಷ ಮತ್ತು ತಾನು ಏನೆಲ್ಲಾ ಮಾಡಿದ್ದೇನೆ ಎಂಬುದರ ಆಧಾರದಲ್ಲಿ ಆಡಳಿತ ಪಕ್ಷ ಮತ್ತು ಅದರ ಅಭ್ಯರ್ಥಿಗಳು ಮತ ಕೇಳಬೇಕು. ಹಾಗೆಯೇ ವಿರೋಧ ಪಕ್ಷಗಳು ಆಳುವ ಪಕ್ಷ ಹೇಗೆ ವಿಫಲವಾಗಿದೆ ಮತ್ತು ನಾವು ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಎಂಬದರ ಮೇಲೆ ಮತಯಾಚಿಸಬೇಕು. ಆದರೆ ಇಂದು ಏನಾಗುತ್ತಿದೆ? ಆಡಳಿತ ನಡೆಸುತ್ತಿದ್ದ ಪಕ್ಷವೂ ಗಡಿಯನ್ನು, ಸೈನಿಕರನ್ನು ದೇಶದ ರಕ್ಷಣೆಯನ್ನು ಮುಂದಿಟ್ಟು ಓಟು ಕೇಳುತ್ತದೆ. ಸ್ವತಃ ಪ್ರಧಾನಿಯವರೇ ಧರ್ಮವನ್ನು ಮುಂದಿಟ್ಟು ಅತಿರೇಕದ ಮಾತುಗಳನ್ನು ಆಡುತ್ತಿದ್ದರೆ, ಮಾಧ್ಯಮಗಳು ಸಹ ರಾಷ್ಟ್ರ ಅಪಾಯದಲ್ಲಿದೆ ಎಂದು ಬಿಂಬಿಸುತ್ತವೆ. ದುರ್ಬಲ ಪ್ರತಿಪಕ್ಷಗಳು ದಿಕ್ಕು ತೋಚದೇ ಕೂರುತ್ತವೆ. ಎಲ್ಲೊ ಒಂದಿಷ್ಟು ಜನಪರವಾಗಿ ಪ್ರತಿಪಕ್ಷಗಳು ಮಾತಾಡಿದರೂ ಸಹ ಈಗಾಗಲೇ ಮಾರಿಕೊಂಡಿರುವ ಮಾಧ್ಯಮಗಳು ಅದಕ್ಕೆ ಮಹತ್ವ ಕೊಡುವುದಿಲ್ಲ.
ಇಂದು ದೊಡ್ಡ ಕಾರ್ಪೊರೇಟ್‍ಗಳು, ಯಾರು ಗೆದ್ದರೆ ನಮಗೆ ಅನುಕೂಲ ಎಂಬ ಆಧಾರದಲ್ಲಿ ಚುನಾವಣೆಗಳನ್ನು ನಿರ್ಧರಿಸಲು ಸಾವಿರಾರು ಕೋಟಿ ಫಂಡ್ ಮಾಡಲು ಚುನಾವಣಾ ಬಾಂಡ್‍ಗಳಂತಹ ಅಧಿಕೃತ ದಾರಿಗಳೂ ತೆರೆದುಕೊಂಡಿವೆ. ತಮ್ಮ ಅನುಕೂಲಕ್ಕೆ ತಕ್ಕಂತೆ ಅಭಿಪ್ರಾಯ ರೂಪಿಸಲು ಅವರು ಮಾಧ್ಯಮಗಳನ್ನು ತಯಾರು ಮಾಡಿಕೊಂಡಿರುತ್ತಾರೆ. ಮಾಧ್ಯಮಗಳು ಅವರು ಹೇಳಿದಂತೆ ತುತ್ತೂರಿ ಊದುತ್ತವೆ. ಇದನ್ನು ಬದಲಿಸಬೇಕಾದ ಜವಾಬ್ದಾರಿಯನ್ನು ಇಂದು ಪರ್ಯಾಯ ಮಾಧ್ಯಮಗಳು ಹೊತ್ತಿಕೊಳ್ಳಲೇಬೇಕಿದೆ. ಇದು ಕಾಲದ ತುರ್ತಾಗಿದ್ದು ದೇಶದ ಆರೋಗ್ಯದ ದೃಷ್ಟಿಯಿಂದ, ಪ್ರಜಾತಂತ್ರದ ದೃಷ್ಟಿಯಿಂದ, ಭವಿಷ್ಯದ ದೃಷ್ಟಿಯಿಂದ ಬಹಳ ಬಹಳ ಮಹತ್ವದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...