Homeರಾಜಕೀಯಆರ್ಯಪುತ್ರ ರೇವಣ್ಣನನ್ನ ಭವಾನಿ ತಿದ್ದಬೇಕು

ಆರ್ಯಪುತ್ರ ರೇವಣ್ಣನನ್ನ ಭವಾನಿ ತಿದ್ದಬೇಕು

- Advertisement -
ದೇಶದ ಚುನಾವಣೆ ಹತ್ತಿರ ಬರುತ್ತಿದೆ. ಅದನ್ನು ಎದುರಿಸಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಗಳು ಯಾವ ತಂತ್ರ ರೂಪಿಸಬಹುದೆಂದು ದೇಶದ ಬುದ್ಧಿಜೀವಿಗಳು ಗಾಢವಾಗಿ ಯೋಚಿಸುತ್ತ ಕುಳಿತಿರಬೇಕಾದರೆ, ಮೋದಿ ಟೀಮು “ಪ್ರಧಾನಿ ಹತ್ಯೆಗೆ ಸಂಚು” ಎಂಬ ಸುದ್ದಿ ಹಬ್ಬಿಸಿ ಮಾವೊವಾದಿಗಳ ಬೇಟೆಗೆ ತೊಡಗಿದೆಯಲ್ಲ. ಇನ್ನು ಮುಂದಿನ ಕಾರ್ಯ ಯಾವುದೆಂದರೆ ಮಾವೋ ಸಾಹಿತ್ಯದ ಪುಸ್ತಕ ಇಟ್ಟುಕೊಂಡುವರ ಮೇಲೆ ದಾಳಿ ಮಾಡುವುದು. ಅವರೆಲ್ಲಾ ಮೋದಿಯನ್ನು ಮನೆಗೆ ಕರೆದು ಇಲಿಪಾಶಾಣ ಹಾಕಿ ಕೊಲ್ಲಲು ರೆಡಿ ಇದ್ದರೆಂಬ ರೆಕಾರ್ಡ್ ತಯಾರಿಸುವುದು ಅಂತೂ ಬಿಜೆಪಿಗಳು ಬರಲಿರುವ ಚುನಾವಣೆ ಎದುರಿಸಲು ಸಖತ್ತಾಗಿ ಸಾಮಗ್ರಿಗಳನ್ನೇ ಸಂಗ್ರಹಿಸತೊಡಗಿವೆಯಂತಲ್ಲಾ.
ಎಷ್ಟೇ ಆಗಲಿ ಲಾಹೋರ್‍ಗೆ ಬಸ್ ಬರುತ್ತಲೇ. ಭಾರತದ ಗಡಿಯೊಳಕ್ಕೆ ಪಾಕಿಸ್ತಾನಿಗಳನ್ನು ನುಸುಳಿಸಿಕೊಂಡು ನಮ್ಮ ದೇಶದ ಅತ್ಯಂತ ಸಮರ್ಥ 580 ಜನ ಸೈನಿಕರನ್ನು ಬಲಿಕೊಟ್ಟವರಲ್ಲದೆ ಈ ಬಿಜೆಪಿಗಳು. ಇನ್ನ ಚುನಾವಣೆ ಟೈಮಿಗೆ ಯಾವ ಯಾವ ಸಂಚು ರೂಪಿಸಿ ಅದೇನು ಮಾಡುತ್ತಾರೋ ಮೋದಿ ಪರಮಾತ್ಮನೇ ಬಲ್ಲ ಥೂತ್ತೇರಿ.
*********
ದೇಶ ಆಳಿ ಅನುಭವವಿಲ್ಲದ ಚೆಡ್ಡಿಗಳು ಯಾಕಿಂತಹ ಮನೆಮುರುಕು ಕೆಲಸಕ್ಕೆ ಕೈಹಾಕಿವೆ ಎಂದರೆ. ಅರ್ಧ ರಾತ್ರಿಯಲ್ಲಿ ನೋಟುಬ್ಯಾನು  ಮಾಡಿ ದೇಶವನ್ನೇ ಸಂಕಷ್ಟಕ್ಕೆ ದೂಡಿದವು. ಹೊಸ ನೋಟು ಕೇಸರಿ ಬಣ್ಣ ಮಿಕ್ಸ್ ಮಾಡಿದವು. ಆಮೇಲೆ ಜಿ.ಎಸ್.ಟಿ ತಂದು ಸಣ್ಣಪುಟ್ಟ ಉದ್ದಿಮೆ ಬಾಗಿಲಾಕುವಂತೆ ಮಾಡಿದವು. ಅವುಗಳ ಮುಂದೆ ಇನ್ನಾವ ಘನಕಾರ್ಯವೂ ಉಳಿದಿಲ್ಲವಾಗಿ ಮತ್ತೆ ದೇಶಕ್ಕೆ ವಕ್ಕರಿಸಲು ಮೋದಿ ಮಹಾತ್ಮ ಹುತಾತ್ಮನ ನಾಟಕ ಶುರುಹಚ್ಚಿಕೊಂಡಿದೆ.
ಇನ್ನು ಮುಂದೆ ತಾನು ದೇಶಕ್ಕಾಗಿ ಒಂದು ಚಟಾಕು ರಕ್ತ ಹರಿಸಲು ತಯಾರು ಎಂಬ ಹೃದಯವಿದ್ರಾವಕ ಭಾಷಣ ಮಾಡಲು ತಯಾರಿ ನಡೆಸಬಹುದು. ಬಿಜೆಪಿಗಳು ಯಾವುದೇ ಕೆಲಸ ಮಾಡಿದರೂ ಅದರಲ್ಲೊಂದು ಸಂಚು ಇದ್ದೇ ಇರುತ್ತದೆ. ಹಾಗೆಯೇ ಈವರೆಗಿನ ಅದರ ಆಡಳಿತವೇ ಸಂಚಿನ ಸರಮಾಲೆಯಿಂದ ಕೂಡಿದ್ದು ಮುಂದು ಕೂಡ ತನ್ನ ಅಜೆಂಡಾಗಳನ್ನು ದೇಶದ ಮೇಲೆ ಹೇರುವ ಸಂಚುಗಳಿಂದಲೇ ಮುನ್ನಡೆವ ಆ ಪಕ್ಷ ದೇಶನಾಶ ಮಾಡಲೂ ಹೇಸುವುದಿಲ್ಲವಂತಲ್ಲಾ ಥೂತ್ತೇರಿ.
*********
ಇತ್ತ ಕರ್ನಾಟಕದ ಸಮಾಚಾರ ಶಾನೆ ಮಜವಾಗಿದೆಯಲ್ಲಾ. ಇನ್ನ ಕಾವೇರಿಯಲ್ಲೇ ಪವಡಿಸಿರುವ ಸಿದ್ದು ನಿದ್ದೆಯಿಂದೆದ್ದು “ನಾನು ತಿರಗ ಮುಖ್ಯಮಂತ್ರಿ ಆಯ್ತಿನಿ” ಎಂದು ಬಿಟ್ಟರಂತಲ್ಲಾ. ಇದರಿಂದ ಪುಳಕಿತರಾದ ಸುತ್ತಲೂ ಇದ್ದ ಕುರುಬ ಸಮಾಜದ ಮಾಜಿಗಳು ಮುಂದಾದ್ರು ನಮುಗ್ಯಾವುದರ ಬೊರ್ಡು, ನಿಗಮ ಅಕಾಡೆಮಿ ಇತ್ಯಾದಿ ಅನ್ನದಂಡದ ಹುದ್ದೆಗಳನ್ನು ಕರುಣಿಸಬೇಕೆಂದು ಅಂಗಲಾಚಿದರಂತಲ್ಲಾ.
ಮುಖ್ಯಮಂತ್ರಿಗಿರಿ ಹೋದ ನೂರೇ ದಿನಕ್ಕೆ ನಿರುದ್ಯೋಗ ಎದುರಿಸುತ್ತಿರುವ ಸಿದ್ದು. ಈ ತರಹ ಹೇಳಿಕೆ ಕೊಡಬೇಕಾದರೆ ಕಾರಣವೇನೆಂದು ಮಾಧ್ಯಮದ ಮಂದಮತಿಗಳು ಸದರಿ ಹೇಳೆಕೆಯನ್ನ ಅಳೆದು ಸುರಿದು ಹಂಚುತ್ತಿರಬೇಕಾದರೆ, ಅತ್ತ ಕುಮಾರಣ್ಣ ಸಿದ್ದು ಮಾತಿಗೆ ಆಕ್ರೋಶಗೊಂಡರೂ ಅದುಮಿಟ್ಟುಕೊಂಡು ಸಂತೋಷ ಬಹಳ ಸಂತೋಷ ಎಂದರಂತಲ್ಲಾ. ಹೇಳಿಕೇಳಿ ಇದು ಸಮ್ಮಿಶ್ರ ಸರಕಾರ ಕಾಂಗೈದು ಎಪ್ಪತ್ತೈದು ಭಾಗವಾದರೆ ಜೆಡಿಎಸ್‍ದು ಇಪ್ಪತ್ತೈದು ಭಾಗ. ಆದ್ದರಿಂದ ನಾಯಿಬಾಲ ಅಲ್ಲಾಡಿಸಬೇಕೆ ಹೊರತು, ಬಾಲವೇ ನಾಯಿ ಅಲ್ಲಾಡಿಸಬಾರದು ಎಂದು ಕಡ್ಡಿರಂಗ ವಾದಿಸುತ್ತಿರಲಾಗಿ, ಇತ್ತ ರಂಗನನ್ನು ಕಂಡಲಾಗದ ಸಿಂಗರು ನಾಯಿ ದುರ್ಬಲವಾಗಿರುವಾಗ ಅಕಸ್ಮಾತ್ ಅದು ಬಾಲ ಅಲ್ಲಾಡಿಸಲು ಯತ್ನಿಸಿದಾಗ ಅದೂ ಕೂಡ ಅಲ್ಲಾಡಬೇಕಾಗುತ್ತೆ. ಒಟ್ಟು ಕುಮ್ಮಿ ಸರಕಾರ ಈಗ ಅಲ್ಲಾಡುತ್ತಿದೆ ಎಂದವಂತಲ್ಲಾ ಥೂತ್ತೇರಿ.
*********
ಸಿರ್ಸಿ ಸಿದ್ದಾಪುರ ಕಡೆಯ ಅನಂತಕುಮಾರ ಹೆಗಡೆ ಎಂಬ ತಲೆಕೆಟ್ಟ ಗಿರಾಕಿ, ತಲೆಗೆ ಏಟುಬಿದ್ದಂತೆ ಸುಮ್ಮನಿರುವಾಗ ಬಿಜಾಪುರದ ಯತ್ನಾಳ್ ಎಂಬ ಯಡವಟ್ಟನ ಮೇಲೆ ಹೆಗಡೆ ಭೂತ ಆವರಿಸಿಕೊಂಡಿದೆಯಂತಲ್ಲಾ. ಕೇರಳದಲ್ಲಿನ ಭೀಕರ ಮಳೆಗೆ ನಾಡೇ ಕೊಚ್ಚಿ ಹೋಗಿದೆ. ಜನ ಜಾನುವಾರು, ಕಟ್ಟಡ, ರಸ್ತೆಗಳು ನೀರು ಪಾಲಾಗಿದೆ, ಇಂತಹ ಪ್ರಕೃತಿ ವಿಕೋಪಕ್ಕೆ ಯತ್ನಾಳಿಗೆ ಹೊಳೆದ ಕಾರಣವೆಂದರೆ ಕೇರಳಿಗರು ಗೋವುಗಳನ್ನು ಹತ್ಯೆ ಮಾಡಿರುವುದು. ಇಂತದೇ ಅನಾಹುತ ಕೊಡಗಿನಲ್ಲೂ ಸಂಭವಿಸಿದೆ. ಆದರೆ ಯತ್ನಾಳ್ ಎಂಬ ಮೂರ್ಖನಿಗೆ ಇಲ್ಲಿಯ ಕಾರಣ ಹೊಳೆದಿಲ್ಲ. ಏಕೆಂದರೆ ಕೊಡಗು ಈಗ ಬಿಜಿಪಿ ಮಯವಾಗಿದೆ. ಸೂಕ್ಷ್ಮವಾಗಿ ನೋಡಿದರೆ ಈ ಯತ್ನಾಳ್‍ನ ಮೆದುಳಿಗೆ ಕಾರಣ ಹೊಳೆಯಬೇಕಿತ್ತು. ಅದಾವುದಪ್ಪ ಎಂದರೆ ಕೊಡಗಿನಲ್ಲಿ ವರಾಹ ಸಂತತಿಯ ಮಾರಣಹೋಮ ನಡೆಯುತ್ತಲೇ ಇದೆ. ವರಹ ವಿಷ್ಣುವಿನ ಅವತಾರ ಆ ಅವತಾರವೆತ್ತಿದ ಮಹಾವಿಷ್ಣು ಭೂದೇವಿಯನ್ನ ರಕಿÀ್ಷಸಿ ಸ್ಥಾಪಿಸದಿದ್ದರೆ ಕೊಡಗೇನು ಭೂಮಂಡಲವೇ ಇರುತ್ತಿರಲಿಲ್ಲ. ಇಂತಹ ಕಾರಣ ಮಂದಮತಿ ಯತ್ನಾಳನಿಗೆ ಈವರೆಗೆ ಹೊಳೆಯದಿರುವುದೇ ಬಿಜಾಪುರದ ದುರಂತವಲ್ಲವೆ ಥೂತ್ತೇರಿ.
*******
ಕುಮ್ಮಿ ಸರಕಾರದ ಮನರಂಜನೆ ಎಂದರೆ ರೇವಣ್ಣ. ಯಾವುದೇ ಸರಕಾರ ಘನಗಂಭೀರವಾಗಿ ಸಾಗಬಾರದು. ಅಲ್ಲಿ ಒಂದಿಷ್ಟು ಮನರಂಜನೆ ಇರಬೇಕು, ಆದರೆ ಈ ರೇವಣ್ಣನಂತಹ ರೇವಣ್ಣನನ್ನ ಇನ್ನೂ ಐದು ವರ್ಷ ಸಹಿಸಿಕೊಳ್ಳಬೇಕಲ್ಲಾ ಎಂದು ನೆನಸಿಕೊಂಡರೆ ನೇತಾಕಿಕೊಳ್ಳಬೇಕೆನಿಸುತ್ತದಲ್ಲಾ. ನೇತಾಕಿಕೊಳ್ಳೋಣವೆಂದರೆ, ಕುಮಾರಣ್ಣ ನಮ್ಮ ಸಾಲವನ್ನು ಸಂಪೂರ್ಣ ಮನ್ನ ಮಾಡಿದ್ದಾರೆ. ಇರೋಣವೆಂದರೆ ರೇವಣ್ಣ ರಾದ್ಧಾಂತ. ಅಂತೂ ನಮ್ಮ ಪಿತೃಸಮಾನರಾದ ದೇವೇಗೌಡರಿಗೆ ಕರ್ನಾಟಕದ ಮೇಲೆ ಅದೆಂತಹ ಪ್ರೀತಿಯಿತ್ತೋ ಏನೋ ಮುದ್ದಾದ ನಾಲ್ಕು ಮಕ್ಕಳನ್ನ ಕರ್ನಾಟಕದ ಮೇಲೆ ಎಸೆದಿದ್ದಾರೆ. ಆ ಪೈಕಿ ರೇವಣ್ಣನ ಜೊಲ್ಲು-ಗೊಣ್ಣೆಯನ್ನು ಯಾರಾದರೂ ಒರೆಸಲೇಬೇಕಿದೆ. ತಾಯಿ ಭವಾನಿ ನಿಜಕ್ಕೂ ಮಹಾಮಾತೆ, ಆ ಮಾತೆ ತಮ್ಮ ಪ್ರಾಣಕಾಂತನಿಗೆ ಒಂದಿಷ್ಟು ನಾಗರಿಕ ನಡವಳಿಕೆ ಕಲಿಸಿ ಕೈಬಿಟ್ಟಿದ್ದರೇ ಕನ್ನಡ ಜನತೆ ಕೃತಾರ್ಥವಾಗುತ್ತಿತ್ತು. ಈಗಲೂ ಕಾಲಮಿಂಚಿಲ್ಲ. ತಾಯಿ ಭವಾನಿ ತಮ್ಮ ಆರ್ಯಪುತ್ರನಿಗೆ ಒಳ್ಳೆ ಕಟಿಂಗ್ ಮಾಡಿಸಿ, ಒಳ್ಳೆ ಬಟ್ಟೆ ಇಕ್ಕಿ, ಹಾಗೆ ಬಾಯಿ ಮೂಗು ಕ್ಲೀನ್ ಮಾಡಿ, ಕೈಗೆ ಸಿಕ್ಕಿದ್ದನ್ನು ಎಸೆಯದಂತೆ ಬುದ್ಧಿ ಹೇಳಿ ಕಳಿಸಿದರೆ; ಕನ್ನಡ ಜನತೆ ಆರ್ಯಪುತ್ರನ ಅಭಿಮಾನಿಗಳಾಗುವುದರಲ್ಲಿ ಯಾವ ಸಂಶಯವೂ ಇಲ್ಲವಂತಲ್ಲಾ ಥೂತ್ತೇರಿ.
– ಯಾಹೂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...