Homeರಾಜಕೀಯಆರ್ಯಪುತ್ರ ರೇವಣ್ಣನನ್ನ ಭವಾನಿ ತಿದ್ದಬೇಕು

ಆರ್ಯಪುತ್ರ ರೇವಣ್ಣನನ್ನ ಭವಾನಿ ತಿದ್ದಬೇಕು

- Advertisement -
ದೇಶದ ಚುನಾವಣೆ ಹತ್ತಿರ ಬರುತ್ತಿದೆ. ಅದನ್ನು ಎದುರಿಸಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಗಳು ಯಾವ ತಂತ್ರ ರೂಪಿಸಬಹುದೆಂದು ದೇಶದ ಬುದ್ಧಿಜೀವಿಗಳು ಗಾಢವಾಗಿ ಯೋಚಿಸುತ್ತ ಕುಳಿತಿರಬೇಕಾದರೆ, ಮೋದಿ ಟೀಮು “ಪ್ರಧಾನಿ ಹತ್ಯೆಗೆ ಸಂಚು” ಎಂಬ ಸುದ್ದಿ ಹಬ್ಬಿಸಿ ಮಾವೊವಾದಿಗಳ ಬೇಟೆಗೆ ತೊಡಗಿದೆಯಲ್ಲ. ಇನ್ನು ಮುಂದಿನ ಕಾರ್ಯ ಯಾವುದೆಂದರೆ ಮಾವೋ ಸಾಹಿತ್ಯದ ಪುಸ್ತಕ ಇಟ್ಟುಕೊಂಡುವರ ಮೇಲೆ ದಾಳಿ ಮಾಡುವುದು. ಅವರೆಲ್ಲಾ ಮೋದಿಯನ್ನು ಮನೆಗೆ ಕರೆದು ಇಲಿಪಾಶಾಣ ಹಾಕಿ ಕೊಲ್ಲಲು ರೆಡಿ ಇದ್ದರೆಂಬ ರೆಕಾರ್ಡ್ ತಯಾರಿಸುವುದು ಅಂತೂ ಬಿಜೆಪಿಗಳು ಬರಲಿರುವ ಚುನಾವಣೆ ಎದುರಿಸಲು ಸಖತ್ತಾಗಿ ಸಾಮಗ್ರಿಗಳನ್ನೇ ಸಂಗ್ರಹಿಸತೊಡಗಿವೆಯಂತಲ್ಲಾ.
ಎಷ್ಟೇ ಆಗಲಿ ಲಾಹೋರ್‍ಗೆ ಬಸ್ ಬರುತ್ತಲೇ. ಭಾರತದ ಗಡಿಯೊಳಕ್ಕೆ ಪಾಕಿಸ್ತಾನಿಗಳನ್ನು ನುಸುಳಿಸಿಕೊಂಡು ನಮ್ಮ ದೇಶದ ಅತ್ಯಂತ ಸಮರ್ಥ 580 ಜನ ಸೈನಿಕರನ್ನು ಬಲಿಕೊಟ್ಟವರಲ್ಲದೆ ಈ ಬಿಜೆಪಿಗಳು. ಇನ್ನ ಚುನಾವಣೆ ಟೈಮಿಗೆ ಯಾವ ಯಾವ ಸಂಚು ರೂಪಿಸಿ ಅದೇನು ಮಾಡುತ್ತಾರೋ ಮೋದಿ ಪರಮಾತ್ಮನೇ ಬಲ್ಲ ಥೂತ್ತೇರಿ.
*********
ದೇಶ ಆಳಿ ಅನುಭವವಿಲ್ಲದ ಚೆಡ್ಡಿಗಳು ಯಾಕಿಂತಹ ಮನೆಮುರುಕು ಕೆಲಸಕ್ಕೆ ಕೈಹಾಕಿವೆ ಎಂದರೆ. ಅರ್ಧ ರಾತ್ರಿಯಲ್ಲಿ ನೋಟುಬ್ಯಾನು  ಮಾಡಿ ದೇಶವನ್ನೇ ಸಂಕಷ್ಟಕ್ಕೆ ದೂಡಿದವು. ಹೊಸ ನೋಟು ಕೇಸರಿ ಬಣ್ಣ ಮಿಕ್ಸ್ ಮಾಡಿದವು. ಆಮೇಲೆ ಜಿ.ಎಸ್.ಟಿ ತಂದು ಸಣ್ಣಪುಟ್ಟ ಉದ್ದಿಮೆ ಬಾಗಿಲಾಕುವಂತೆ ಮಾಡಿದವು. ಅವುಗಳ ಮುಂದೆ ಇನ್ನಾವ ಘನಕಾರ್ಯವೂ ಉಳಿದಿಲ್ಲವಾಗಿ ಮತ್ತೆ ದೇಶಕ್ಕೆ ವಕ್ಕರಿಸಲು ಮೋದಿ ಮಹಾತ್ಮ ಹುತಾತ್ಮನ ನಾಟಕ ಶುರುಹಚ್ಚಿಕೊಂಡಿದೆ.
ಇನ್ನು ಮುಂದೆ ತಾನು ದೇಶಕ್ಕಾಗಿ ಒಂದು ಚಟಾಕು ರಕ್ತ ಹರಿಸಲು ತಯಾರು ಎಂಬ ಹೃದಯವಿದ್ರಾವಕ ಭಾಷಣ ಮಾಡಲು ತಯಾರಿ ನಡೆಸಬಹುದು. ಬಿಜೆಪಿಗಳು ಯಾವುದೇ ಕೆಲಸ ಮಾಡಿದರೂ ಅದರಲ್ಲೊಂದು ಸಂಚು ಇದ್ದೇ ಇರುತ್ತದೆ. ಹಾಗೆಯೇ ಈವರೆಗಿನ ಅದರ ಆಡಳಿತವೇ ಸಂಚಿನ ಸರಮಾಲೆಯಿಂದ ಕೂಡಿದ್ದು ಮುಂದು ಕೂಡ ತನ್ನ ಅಜೆಂಡಾಗಳನ್ನು ದೇಶದ ಮೇಲೆ ಹೇರುವ ಸಂಚುಗಳಿಂದಲೇ ಮುನ್ನಡೆವ ಆ ಪಕ್ಷ ದೇಶನಾಶ ಮಾಡಲೂ ಹೇಸುವುದಿಲ್ಲವಂತಲ್ಲಾ ಥೂತ್ತೇರಿ.
*********
ಇತ್ತ ಕರ್ನಾಟಕದ ಸಮಾಚಾರ ಶಾನೆ ಮಜವಾಗಿದೆಯಲ್ಲಾ. ಇನ್ನ ಕಾವೇರಿಯಲ್ಲೇ ಪವಡಿಸಿರುವ ಸಿದ್ದು ನಿದ್ದೆಯಿಂದೆದ್ದು “ನಾನು ತಿರಗ ಮುಖ್ಯಮಂತ್ರಿ ಆಯ್ತಿನಿ” ಎಂದು ಬಿಟ್ಟರಂತಲ್ಲಾ. ಇದರಿಂದ ಪುಳಕಿತರಾದ ಸುತ್ತಲೂ ಇದ್ದ ಕುರುಬ ಸಮಾಜದ ಮಾಜಿಗಳು ಮುಂದಾದ್ರು ನಮುಗ್ಯಾವುದರ ಬೊರ್ಡು, ನಿಗಮ ಅಕಾಡೆಮಿ ಇತ್ಯಾದಿ ಅನ್ನದಂಡದ ಹುದ್ದೆಗಳನ್ನು ಕರುಣಿಸಬೇಕೆಂದು ಅಂಗಲಾಚಿದರಂತಲ್ಲಾ.
ಮುಖ್ಯಮಂತ್ರಿಗಿರಿ ಹೋದ ನೂರೇ ದಿನಕ್ಕೆ ನಿರುದ್ಯೋಗ ಎದುರಿಸುತ್ತಿರುವ ಸಿದ್ದು. ಈ ತರಹ ಹೇಳಿಕೆ ಕೊಡಬೇಕಾದರೆ ಕಾರಣವೇನೆಂದು ಮಾಧ್ಯಮದ ಮಂದಮತಿಗಳು ಸದರಿ ಹೇಳೆಕೆಯನ್ನ ಅಳೆದು ಸುರಿದು ಹಂಚುತ್ತಿರಬೇಕಾದರೆ, ಅತ್ತ ಕುಮಾರಣ್ಣ ಸಿದ್ದು ಮಾತಿಗೆ ಆಕ್ರೋಶಗೊಂಡರೂ ಅದುಮಿಟ್ಟುಕೊಂಡು ಸಂತೋಷ ಬಹಳ ಸಂತೋಷ ಎಂದರಂತಲ್ಲಾ. ಹೇಳಿಕೇಳಿ ಇದು ಸಮ್ಮಿಶ್ರ ಸರಕಾರ ಕಾಂಗೈದು ಎಪ್ಪತ್ತೈದು ಭಾಗವಾದರೆ ಜೆಡಿಎಸ್‍ದು ಇಪ್ಪತ್ತೈದು ಭಾಗ. ಆದ್ದರಿಂದ ನಾಯಿಬಾಲ ಅಲ್ಲಾಡಿಸಬೇಕೆ ಹೊರತು, ಬಾಲವೇ ನಾಯಿ ಅಲ್ಲಾಡಿಸಬಾರದು ಎಂದು ಕಡ್ಡಿರಂಗ ವಾದಿಸುತ್ತಿರಲಾಗಿ, ಇತ್ತ ರಂಗನನ್ನು ಕಂಡಲಾಗದ ಸಿಂಗರು ನಾಯಿ ದುರ್ಬಲವಾಗಿರುವಾಗ ಅಕಸ್ಮಾತ್ ಅದು ಬಾಲ ಅಲ್ಲಾಡಿಸಲು ಯತ್ನಿಸಿದಾಗ ಅದೂ ಕೂಡ ಅಲ್ಲಾಡಬೇಕಾಗುತ್ತೆ. ಒಟ್ಟು ಕುಮ್ಮಿ ಸರಕಾರ ಈಗ ಅಲ್ಲಾಡುತ್ತಿದೆ ಎಂದವಂತಲ್ಲಾ ಥೂತ್ತೇರಿ.
*********
ಸಿರ್ಸಿ ಸಿದ್ದಾಪುರ ಕಡೆಯ ಅನಂತಕುಮಾರ ಹೆಗಡೆ ಎಂಬ ತಲೆಕೆಟ್ಟ ಗಿರಾಕಿ, ತಲೆಗೆ ಏಟುಬಿದ್ದಂತೆ ಸುಮ್ಮನಿರುವಾಗ ಬಿಜಾಪುರದ ಯತ್ನಾಳ್ ಎಂಬ ಯಡವಟ್ಟನ ಮೇಲೆ ಹೆಗಡೆ ಭೂತ ಆವರಿಸಿಕೊಂಡಿದೆಯಂತಲ್ಲಾ. ಕೇರಳದಲ್ಲಿನ ಭೀಕರ ಮಳೆಗೆ ನಾಡೇ ಕೊಚ್ಚಿ ಹೋಗಿದೆ. ಜನ ಜಾನುವಾರು, ಕಟ್ಟಡ, ರಸ್ತೆಗಳು ನೀರು ಪಾಲಾಗಿದೆ, ಇಂತಹ ಪ್ರಕೃತಿ ವಿಕೋಪಕ್ಕೆ ಯತ್ನಾಳಿಗೆ ಹೊಳೆದ ಕಾರಣವೆಂದರೆ ಕೇರಳಿಗರು ಗೋವುಗಳನ್ನು ಹತ್ಯೆ ಮಾಡಿರುವುದು. ಇಂತದೇ ಅನಾಹುತ ಕೊಡಗಿನಲ್ಲೂ ಸಂಭವಿಸಿದೆ. ಆದರೆ ಯತ್ನಾಳ್ ಎಂಬ ಮೂರ್ಖನಿಗೆ ಇಲ್ಲಿಯ ಕಾರಣ ಹೊಳೆದಿಲ್ಲ. ಏಕೆಂದರೆ ಕೊಡಗು ಈಗ ಬಿಜಿಪಿ ಮಯವಾಗಿದೆ. ಸೂಕ್ಷ್ಮವಾಗಿ ನೋಡಿದರೆ ಈ ಯತ್ನಾಳ್‍ನ ಮೆದುಳಿಗೆ ಕಾರಣ ಹೊಳೆಯಬೇಕಿತ್ತು. ಅದಾವುದಪ್ಪ ಎಂದರೆ ಕೊಡಗಿನಲ್ಲಿ ವರಾಹ ಸಂತತಿಯ ಮಾರಣಹೋಮ ನಡೆಯುತ್ತಲೇ ಇದೆ. ವರಹ ವಿಷ್ಣುವಿನ ಅವತಾರ ಆ ಅವತಾರವೆತ್ತಿದ ಮಹಾವಿಷ್ಣು ಭೂದೇವಿಯನ್ನ ರಕಿÀ್ಷಸಿ ಸ್ಥಾಪಿಸದಿದ್ದರೆ ಕೊಡಗೇನು ಭೂಮಂಡಲವೇ ಇರುತ್ತಿರಲಿಲ್ಲ. ಇಂತಹ ಕಾರಣ ಮಂದಮತಿ ಯತ್ನಾಳನಿಗೆ ಈವರೆಗೆ ಹೊಳೆಯದಿರುವುದೇ ಬಿಜಾಪುರದ ದುರಂತವಲ್ಲವೆ ಥೂತ್ತೇರಿ.
*******
ಕುಮ್ಮಿ ಸರಕಾರದ ಮನರಂಜನೆ ಎಂದರೆ ರೇವಣ್ಣ. ಯಾವುದೇ ಸರಕಾರ ಘನಗಂಭೀರವಾಗಿ ಸಾಗಬಾರದು. ಅಲ್ಲಿ ಒಂದಿಷ್ಟು ಮನರಂಜನೆ ಇರಬೇಕು, ಆದರೆ ಈ ರೇವಣ್ಣನಂತಹ ರೇವಣ್ಣನನ್ನ ಇನ್ನೂ ಐದು ವರ್ಷ ಸಹಿಸಿಕೊಳ್ಳಬೇಕಲ್ಲಾ ಎಂದು ನೆನಸಿಕೊಂಡರೆ ನೇತಾಕಿಕೊಳ್ಳಬೇಕೆನಿಸುತ್ತದಲ್ಲಾ. ನೇತಾಕಿಕೊಳ್ಳೋಣವೆಂದರೆ, ಕುಮಾರಣ್ಣ ನಮ್ಮ ಸಾಲವನ್ನು ಸಂಪೂರ್ಣ ಮನ್ನ ಮಾಡಿದ್ದಾರೆ. ಇರೋಣವೆಂದರೆ ರೇವಣ್ಣ ರಾದ್ಧಾಂತ. ಅಂತೂ ನಮ್ಮ ಪಿತೃಸಮಾನರಾದ ದೇವೇಗೌಡರಿಗೆ ಕರ್ನಾಟಕದ ಮೇಲೆ ಅದೆಂತಹ ಪ್ರೀತಿಯಿತ್ತೋ ಏನೋ ಮುದ್ದಾದ ನಾಲ್ಕು ಮಕ್ಕಳನ್ನ ಕರ್ನಾಟಕದ ಮೇಲೆ ಎಸೆದಿದ್ದಾರೆ. ಆ ಪೈಕಿ ರೇವಣ್ಣನ ಜೊಲ್ಲು-ಗೊಣ್ಣೆಯನ್ನು ಯಾರಾದರೂ ಒರೆಸಲೇಬೇಕಿದೆ. ತಾಯಿ ಭವಾನಿ ನಿಜಕ್ಕೂ ಮಹಾಮಾತೆ, ಆ ಮಾತೆ ತಮ್ಮ ಪ್ರಾಣಕಾಂತನಿಗೆ ಒಂದಿಷ್ಟು ನಾಗರಿಕ ನಡವಳಿಕೆ ಕಲಿಸಿ ಕೈಬಿಟ್ಟಿದ್ದರೇ ಕನ್ನಡ ಜನತೆ ಕೃತಾರ್ಥವಾಗುತ್ತಿತ್ತು. ಈಗಲೂ ಕಾಲಮಿಂಚಿಲ್ಲ. ತಾಯಿ ಭವಾನಿ ತಮ್ಮ ಆರ್ಯಪುತ್ರನಿಗೆ ಒಳ್ಳೆ ಕಟಿಂಗ್ ಮಾಡಿಸಿ, ಒಳ್ಳೆ ಬಟ್ಟೆ ಇಕ್ಕಿ, ಹಾಗೆ ಬಾಯಿ ಮೂಗು ಕ್ಲೀನ್ ಮಾಡಿ, ಕೈಗೆ ಸಿಕ್ಕಿದ್ದನ್ನು ಎಸೆಯದಂತೆ ಬುದ್ಧಿ ಹೇಳಿ ಕಳಿಸಿದರೆ; ಕನ್ನಡ ಜನತೆ ಆರ್ಯಪುತ್ರನ ಅಭಿಮಾನಿಗಳಾಗುವುದರಲ್ಲಿ ಯಾವ ಸಂಶಯವೂ ಇಲ್ಲವಂತಲ್ಲಾ ಥೂತ್ತೇರಿ.
– ಯಾಹೂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...