Homeರಾಜಕೀಯಆರ್ಯಪುತ್ರ ರೇವಣ್ಣನನ್ನ ಭವಾನಿ ತಿದ್ದಬೇಕು

ಆರ್ಯಪುತ್ರ ರೇವಣ್ಣನನ್ನ ಭವಾನಿ ತಿದ್ದಬೇಕು

- Advertisement -
ದೇಶದ ಚುನಾವಣೆ ಹತ್ತಿರ ಬರುತ್ತಿದೆ. ಅದನ್ನು ಎದುರಿಸಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಗಳು ಯಾವ ತಂತ್ರ ರೂಪಿಸಬಹುದೆಂದು ದೇಶದ ಬುದ್ಧಿಜೀವಿಗಳು ಗಾಢವಾಗಿ ಯೋಚಿಸುತ್ತ ಕುಳಿತಿರಬೇಕಾದರೆ, ಮೋದಿ ಟೀಮು “ಪ್ರಧಾನಿ ಹತ್ಯೆಗೆ ಸಂಚು” ಎಂಬ ಸುದ್ದಿ ಹಬ್ಬಿಸಿ ಮಾವೊವಾದಿಗಳ ಬೇಟೆಗೆ ತೊಡಗಿದೆಯಲ್ಲ. ಇನ್ನು ಮುಂದಿನ ಕಾರ್ಯ ಯಾವುದೆಂದರೆ ಮಾವೋ ಸಾಹಿತ್ಯದ ಪುಸ್ತಕ ಇಟ್ಟುಕೊಂಡುವರ ಮೇಲೆ ದಾಳಿ ಮಾಡುವುದು. ಅವರೆಲ್ಲಾ ಮೋದಿಯನ್ನು ಮನೆಗೆ ಕರೆದು ಇಲಿಪಾಶಾಣ ಹಾಕಿ ಕೊಲ್ಲಲು ರೆಡಿ ಇದ್ದರೆಂಬ ರೆಕಾರ್ಡ್ ತಯಾರಿಸುವುದು ಅಂತೂ ಬಿಜೆಪಿಗಳು ಬರಲಿರುವ ಚುನಾವಣೆ ಎದುರಿಸಲು ಸಖತ್ತಾಗಿ ಸಾಮಗ್ರಿಗಳನ್ನೇ ಸಂಗ್ರಹಿಸತೊಡಗಿವೆಯಂತಲ್ಲಾ.
ಎಷ್ಟೇ ಆಗಲಿ ಲಾಹೋರ್‍ಗೆ ಬಸ್ ಬರುತ್ತಲೇ. ಭಾರತದ ಗಡಿಯೊಳಕ್ಕೆ ಪಾಕಿಸ್ತಾನಿಗಳನ್ನು ನುಸುಳಿಸಿಕೊಂಡು ನಮ್ಮ ದೇಶದ ಅತ್ಯಂತ ಸಮರ್ಥ 580 ಜನ ಸೈನಿಕರನ್ನು ಬಲಿಕೊಟ್ಟವರಲ್ಲದೆ ಈ ಬಿಜೆಪಿಗಳು. ಇನ್ನ ಚುನಾವಣೆ ಟೈಮಿಗೆ ಯಾವ ಯಾವ ಸಂಚು ರೂಪಿಸಿ ಅದೇನು ಮಾಡುತ್ತಾರೋ ಮೋದಿ ಪರಮಾತ್ಮನೇ ಬಲ್ಲ ಥೂತ್ತೇರಿ.
*********
ದೇಶ ಆಳಿ ಅನುಭವವಿಲ್ಲದ ಚೆಡ್ಡಿಗಳು ಯಾಕಿಂತಹ ಮನೆಮುರುಕು ಕೆಲಸಕ್ಕೆ ಕೈಹಾಕಿವೆ ಎಂದರೆ. ಅರ್ಧ ರಾತ್ರಿಯಲ್ಲಿ ನೋಟುಬ್ಯಾನು  ಮಾಡಿ ದೇಶವನ್ನೇ ಸಂಕಷ್ಟಕ್ಕೆ ದೂಡಿದವು. ಹೊಸ ನೋಟು ಕೇಸರಿ ಬಣ್ಣ ಮಿಕ್ಸ್ ಮಾಡಿದವು. ಆಮೇಲೆ ಜಿ.ಎಸ್.ಟಿ ತಂದು ಸಣ್ಣಪುಟ್ಟ ಉದ್ದಿಮೆ ಬಾಗಿಲಾಕುವಂತೆ ಮಾಡಿದವು. ಅವುಗಳ ಮುಂದೆ ಇನ್ನಾವ ಘನಕಾರ್ಯವೂ ಉಳಿದಿಲ್ಲವಾಗಿ ಮತ್ತೆ ದೇಶಕ್ಕೆ ವಕ್ಕರಿಸಲು ಮೋದಿ ಮಹಾತ್ಮ ಹುತಾತ್ಮನ ನಾಟಕ ಶುರುಹಚ್ಚಿಕೊಂಡಿದೆ.
ಇನ್ನು ಮುಂದೆ ತಾನು ದೇಶಕ್ಕಾಗಿ ಒಂದು ಚಟಾಕು ರಕ್ತ ಹರಿಸಲು ತಯಾರು ಎಂಬ ಹೃದಯವಿದ್ರಾವಕ ಭಾಷಣ ಮಾಡಲು ತಯಾರಿ ನಡೆಸಬಹುದು. ಬಿಜೆಪಿಗಳು ಯಾವುದೇ ಕೆಲಸ ಮಾಡಿದರೂ ಅದರಲ್ಲೊಂದು ಸಂಚು ಇದ್ದೇ ಇರುತ್ತದೆ. ಹಾಗೆಯೇ ಈವರೆಗಿನ ಅದರ ಆಡಳಿತವೇ ಸಂಚಿನ ಸರಮಾಲೆಯಿಂದ ಕೂಡಿದ್ದು ಮುಂದು ಕೂಡ ತನ್ನ ಅಜೆಂಡಾಗಳನ್ನು ದೇಶದ ಮೇಲೆ ಹೇರುವ ಸಂಚುಗಳಿಂದಲೇ ಮುನ್ನಡೆವ ಆ ಪಕ್ಷ ದೇಶನಾಶ ಮಾಡಲೂ ಹೇಸುವುದಿಲ್ಲವಂತಲ್ಲಾ ಥೂತ್ತೇರಿ.
*********
ಇತ್ತ ಕರ್ನಾಟಕದ ಸಮಾಚಾರ ಶಾನೆ ಮಜವಾಗಿದೆಯಲ್ಲಾ. ಇನ್ನ ಕಾವೇರಿಯಲ್ಲೇ ಪವಡಿಸಿರುವ ಸಿದ್ದು ನಿದ್ದೆಯಿಂದೆದ್ದು “ನಾನು ತಿರಗ ಮುಖ್ಯಮಂತ್ರಿ ಆಯ್ತಿನಿ” ಎಂದು ಬಿಟ್ಟರಂತಲ್ಲಾ. ಇದರಿಂದ ಪುಳಕಿತರಾದ ಸುತ್ತಲೂ ಇದ್ದ ಕುರುಬ ಸಮಾಜದ ಮಾಜಿಗಳು ಮುಂದಾದ್ರು ನಮುಗ್ಯಾವುದರ ಬೊರ್ಡು, ನಿಗಮ ಅಕಾಡೆಮಿ ಇತ್ಯಾದಿ ಅನ್ನದಂಡದ ಹುದ್ದೆಗಳನ್ನು ಕರುಣಿಸಬೇಕೆಂದು ಅಂಗಲಾಚಿದರಂತಲ್ಲಾ.
ಮುಖ್ಯಮಂತ್ರಿಗಿರಿ ಹೋದ ನೂರೇ ದಿನಕ್ಕೆ ನಿರುದ್ಯೋಗ ಎದುರಿಸುತ್ತಿರುವ ಸಿದ್ದು. ಈ ತರಹ ಹೇಳಿಕೆ ಕೊಡಬೇಕಾದರೆ ಕಾರಣವೇನೆಂದು ಮಾಧ್ಯಮದ ಮಂದಮತಿಗಳು ಸದರಿ ಹೇಳೆಕೆಯನ್ನ ಅಳೆದು ಸುರಿದು ಹಂಚುತ್ತಿರಬೇಕಾದರೆ, ಅತ್ತ ಕುಮಾರಣ್ಣ ಸಿದ್ದು ಮಾತಿಗೆ ಆಕ್ರೋಶಗೊಂಡರೂ ಅದುಮಿಟ್ಟುಕೊಂಡು ಸಂತೋಷ ಬಹಳ ಸಂತೋಷ ಎಂದರಂತಲ್ಲಾ. ಹೇಳಿಕೇಳಿ ಇದು ಸಮ್ಮಿಶ್ರ ಸರಕಾರ ಕಾಂಗೈದು ಎಪ್ಪತ್ತೈದು ಭಾಗವಾದರೆ ಜೆಡಿಎಸ್‍ದು ಇಪ್ಪತ್ತೈದು ಭಾಗ. ಆದ್ದರಿಂದ ನಾಯಿಬಾಲ ಅಲ್ಲಾಡಿಸಬೇಕೆ ಹೊರತು, ಬಾಲವೇ ನಾಯಿ ಅಲ್ಲಾಡಿಸಬಾರದು ಎಂದು ಕಡ್ಡಿರಂಗ ವಾದಿಸುತ್ತಿರಲಾಗಿ, ಇತ್ತ ರಂಗನನ್ನು ಕಂಡಲಾಗದ ಸಿಂಗರು ನಾಯಿ ದುರ್ಬಲವಾಗಿರುವಾಗ ಅಕಸ್ಮಾತ್ ಅದು ಬಾಲ ಅಲ್ಲಾಡಿಸಲು ಯತ್ನಿಸಿದಾಗ ಅದೂ ಕೂಡ ಅಲ್ಲಾಡಬೇಕಾಗುತ್ತೆ. ಒಟ್ಟು ಕುಮ್ಮಿ ಸರಕಾರ ಈಗ ಅಲ್ಲಾಡುತ್ತಿದೆ ಎಂದವಂತಲ್ಲಾ ಥೂತ್ತೇರಿ.
*********
ಸಿರ್ಸಿ ಸಿದ್ದಾಪುರ ಕಡೆಯ ಅನಂತಕುಮಾರ ಹೆಗಡೆ ಎಂಬ ತಲೆಕೆಟ್ಟ ಗಿರಾಕಿ, ತಲೆಗೆ ಏಟುಬಿದ್ದಂತೆ ಸುಮ್ಮನಿರುವಾಗ ಬಿಜಾಪುರದ ಯತ್ನಾಳ್ ಎಂಬ ಯಡವಟ್ಟನ ಮೇಲೆ ಹೆಗಡೆ ಭೂತ ಆವರಿಸಿಕೊಂಡಿದೆಯಂತಲ್ಲಾ. ಕೇರಳದಲ್ಲಿನ ಭೀಕರ ಮಳೆಗೆ ನಾಡೇ ಕೊಚ್ಚಿ ಹೋಗಿದೆ. ಜನ ಜಾನುವಾರು, ಕಟ್ಟಡ, ರಸ್ತೆಗಳು ನೀರು ಪಾಲಾಗಿದೆ, ಇಂತಹ ಪ್ರಕೃತಿ ವಿಕೋಪಕ್ಕೆ ಯತ್ನಾಳಿಗೆ ಹೊಳೆದ ಕಾರಣವೆಂದರೆ ಕೇರಳಿಗರು ಗೋವುಗಳನ್ನು ಹತ್ಯೆ ಮಾಡಿರುವುದು. ಇಂತದೇ ಅನಾಹುತ ಕೊಡಗಿನಲ್ಲೂ ಸಂಭವಿಸಿದೆ. ಆದರೆ ಯತ್ನಾಳ್ ಎಂಬ ಮೂರ್ಖನಿಗೆ ಇಲ್ಲಿಯ ಕಾರಣ ಹೊಳೆದಿಲ್ಲ. ಏಕೆಂದರೆ ಕೊಡಗು ಈಗ ಬಿಜಿಪಿ ಮಯವಾಗಿದೆ. ಸೂಕ್ಷ್ಮವಾಗಿ ನೋಡಿದರೆ ಈ ಯತ್ನಾಳ್‍ನ ಮೆದುಳಿಗೆ ಕಾರಣ ಹೊಳೆಯಬೇಕಿತ್ತು. ಅದಾವುದಪ್ಪ ಎಂದರೆ ಕೊಡಗಿನಲ್ಲಿ ವರಾಹ ಸಂತತಿಯ ಮಾರಣಹೋಮ ನಡೆಯುತ್ತಲೇ ಇದೆ. ವರಹ ವಿಷ್ಣುವಿನ ಅವತಾರ ಆ ಅವತಾರವೆತ್ತಿದ ಮಹಾವಿಷ್ಣು ಭೂದೇವಿಯನ್ನ ರಕಿÀ್ಷಸಿ ಸ್ಥಾಪಿಸದಿದ್ದರೆ ಕೊಡಗೇನು ಭೂಮಂಡಲವೇ ಇರುತ್ತಿರಲಿಲ್ಲ. ಇಂತಹ ಕಾರಣ ಮಂದಮತಿ ಯತ್ನಾಳನಿಗೆ ಈವರೆಗೆ ಹೊಳೆಯದಿರುವುದೇ ಬಿಜಾಪುರದ ದುರಂತವಲ್ಲವೆ ಥೂತ್ತೇರಿ.
*******
ಕುಮ್ಮಿ ಸರಕಾರದ ಮನರಂಜನೆ ಎಂದರೆ ರೇವಣ್ಣ. ಯಾವುದೇ ಸರಕಾರ ಘನಗಂಭೀರವಾಗಿ ಸಾಗಬಾರದು. ಅಲ್ಲಿ ಒಂದಿಷ್ಟು ಮನರಂಜನೆ ಇರಬೇಕು, ಆದರೆ ಈ ರೇವಣ್ಣನಂತಹ ರೇವಣ್ಣನನ್ನ ಇನ್ನೂ ಐದು ವರ್ಷ ಸಹಿಸಿಕೊಳ್ಳಬೇಕಲ್ಲಾ ಎಂದು ನೆನಸಿಕೊಂಡರೆ ನೇತಾಕಿಕೊಳ್ಳಬೇಕೆನಿಸುತ್ತದಲ್ಲಾ. ನೇತಾಕಿಕೊಳ್ಳೋಣವೆಂದರೆ, ಕುಮಾರಣ್ಣ ನಮ್ಮ ಸಾಲವನ್ನು ಸಂಪೂರ್ಣ ಮನ್ನ ಮಾಡಿದ್ದಾರೆ. ಇರೋಣವೆಂದರೆ ರೇವಣ್ಣ ರಾದ್ಧಾಂತ. ಅಂತೂ ನಮ್ಮ ಪಿತೃಸಮಾನರಾದ ದೇವೇಗೌಡರಿಗೆ ಕರ್ನಾಟಕದ ಮೇಲೆ ಅದೆಂತಹ ಪ್ರೀತಿಯಿತ್ತೋ ಏನೋ ಮುದ್ದಾದ ನಾಲ್ಕು ಮಕ್ಕಳನ್ನ ಕರ್ನಾಟಕದ ಮೇಲೆ ಎಸೆದಿದ್ದಾರೆ. ಆ ಪೈಕಿ ರೇವಣ್ಣನ ಜೊಲ್ಲು-ಗೊಣ್ಣೆಯನ್ನು ಯಾರಾದರೂ ಒರೆಸಲೇಬೇಕಿದೆ. ತಾಯಿ ಭವಾನಿ ನಿಜಕ್ಕೂ ಮಹಾಮಾತೆ, ಆ ಮಾತೆ ತಮ್ಮ ಪ್ರಾಣಕಾಂತನಿಗೆ ಒಂದಿಷ್ಟು ನಾಗರಿಕ ನಡವಳಿಕೆ ಕಲಿಸಿ ಕೈಬಿಟ್ಟಿದ್ದರೇ ಕನ್ನಡ ಜನತೆ ಕೃತಾರ್ಥವಾಗುತ್ತಿತ್ತು. ಈಗಲೂ ಕಾಲಮಿಂಚಿಲ್ಲ. ತಾಯಿ ಭವಾನಿ ತಮ್ಮ ಆರ್ಯಪುತ್ರನಿಗೆ ಒಳ್ಳೆ ಕಟಿಂಗ್ ಮಾಡಿಸಿ, ಒಳ್ಳೆ ಬಟ್ಟೆ ಇಕ್ಕಿ, ಹಾಗೆ ಬಾಯಿ ಮೂಗು ಕ್ಲೀನ್ ಮಾಡಿ, ಕೈಗೆ ಸಿಕ್ಕಿದ್ದನ್ನು ಎಸೆಯದಂತೆ ಬುದ್ಧಿ ಹೇಳಿ ಕಳಿಸಿದರೆ; ಕನ್ನಡ ಜನತೆ ಆರ್ಯಪುತ್ರನ ಅಭಿಮಾನಿಗಳಾಗುವುದರಲ್ಲಿ ಯಾವ ಸಂಶಯವೂ ಇಲ್ಲವಂತಲ್ಲಾ ಥೂತ್ತೇರಿ.
– ಯಾಹೂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...