Homeರಾಜಕೀಯಆರ್ಯಪುತ್ರ ರೇವಣ್ಣನನ್ನ ಭವಾನಿ ತಿದ್ದಬೇಕು

ಆರ್ಯಪುತ್ರ ರೇವಣ್ಣನನ್ನ ಭವಾನಿ ತಿದ್ದಬೇಕು

- Advertisement -
ದೇಶದ ಚುನಾವಣೆ ಹತ್ತಿರ ಬರುತ್ತಿದೆ. ಅದನ್ನು ಎದುರಿಸಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಗಳು ಯಾವ ತಂತ್ರ ರೂಪಿಸಬಹುದೆಂದು ದೇಶದ ಬುದ್ಧಿಜೀವಿಗಳು ಗಾಢವಾಗಿ ಯೋಚಿಸುತ್ತ ಕುಳಿತಿರಬೇಕಾದರೆ, ಮೋದಿ ಟೀಮು “ಪ್ರಧಾನಿ ಹತ್ಯೆಗೆ ಸಂಚು” ಎಂಬ ಸುದ್ದಿ ಹಬ್ಬಿಸಿ ಮಾವೊವಾದಿಗಳ ಬೇಟೆಗೆ ತೊಡಗಿದೆಯಲ್ಲ. ಇನ್ನು ಮುಂದಿನ ಕಾರ್ಯ ಯಾವುದೆಂದರೆ ಮಾವೋ ಸಾಹಿತ್ಯದ ಪುಸ್ತಕ ಇಟ್ಟುಕೊಂಡುವರ ಮೇಲೆ ದಾಳಿ ಮಾಡುವುದು. ಅವರೆಲ್ಲಾ ಮೋದಿಯನ್ನು ಮನೆಗೆ ಕರೆದು ಇಲಿಪಾಶಾಣ ಹಾಕಿ ಕೊಲ್ಲಲು ರೆಡಿ ಇದ್ದರೆಂಬ ರೆಕಾರ್ಡ್ ತಯಾರಿಸುವುದು ಅಂತೂ ಬಿಜೆಪಿಗಳು ಬರಲಿರುವ ಚುನಾವಣೆ ಎದುರಿಸಲು ಸಖತ್ತಾಗಿ ಸಾಮಗ್ರಿಗಳನ್ನೇ ಸಂಗ್ರಹಿಸತೊಡಗಿವೆಯಂತಲ್ಲಾ.
ಎಷ್ಟೇ ಆಗಲಿ ಲಾಹೋರ್‍ಗೆ ಬಸ್ ಬರುತ್ತಲೇ. ಭಾರತದ ಗಡಿಯೊಳಕ್ಕೆ ಪಾಕಿಸ್ತಾನಿಗಳನ್ನು ನುಸುಳಿಸಿಕೊಂಡು ನಮ್ಮ ದೇಶದ ಅತ್ಯಂತ ಸಮರ್ಥ 580 ಜನ ಸೈನಿಕರನ್ನು ಬಲಿಕೊಟ್ಟವರಲ್ಲದೆ ಈ ಬಿಜೆಪಿಗಳು. ಇನ್ನ ಚುನಾವಣೆ ಟೈಮಿಗೆ ಯಾವ ಯಾವ ಸಂಚು ರೂಪಿಸಿ ಅದೇನು ಮಾಡುತ್ತಾರೋ ಮೋದಿ ಪರಮಾತ್ಮನೇ ಬಲ್ಲ ಥೂತ್ತೇರಿ.
*********
ದೇಶ ಆಳಿ ಅನುಭವವಿಲ್ಲದ ಚೆಡ್ಡಿಗಳು ಯಾಕಿಂತಹ ಮನೆಮುರುಕು ಕೆಲಸಕ್ಕೆ ಕೈಹಾಕಿವೆ ಎಂದರೆ. ಅರ್ಧ ರಾತ್ರಿಯಲ್ಲಿ ನೋಟುಬ್ಯಾನು  ಮಾಡಿ ದೇಶವನ್ನೇ ಸಂಕಷ್ಟಕ್ಕೆ ದೂಡಿದವು. ಹೊಸ ನೋಟು ಕೇಸರಿ ಬಣ್ಣ ಮಿಕ್ಸ್ ಮಾಡಿದವು. ಆಮೇಲೆ ಜಿ.ಎಸ್.ಟಿ ತಂದು ಸಣ್ಣಪುಟ್ಟ ಉದ್ದಿಮೆ ಬಾಗಿಲಾಕುವಂತೆ ಮಾಡಿದವು. ಅವುಗಳ ಮುಂದೆ ಇನ್ನಾವ ಘನಕಾರ್ಯವೂ ಉಳಿದಿಲ್ಲವಾಗಿ ಮತ್ತೆ ದೇಶಕ್ಕೆ ವಕ್ಕರಿಸಲು ಮೋದಿ ಮಹಾತ್ಮ ಹುತಾತ್ಮನ ನಾಟಕ ಶುರುಹಚ್ಚಿಕೊಂಡಿದೆ.
ಇನ್ನು ಮುಂದೆ ತಾನು ದೇಶಕ್ಕಾಗಿ ಒಂದು ಚಟಾಕು ರಕ್ತ ಹರಿಸಲು ತಯಾರು ಎಂಬ ಹೃದಯವಿದ್ರಾವಕ ಭಾಷಣ ಮಾಡಲು ತಯಾರಿ ನಡೆಸಬಹುದು. ಬಿಜೆಪಿಗಳು ಯಾವುದೇ ಕೆಲಸ ಮಾಡಿದರೂ ಅದರಲ್ಲೊಂದು ಸಂಚು ಇದ್ದೇ ಇರುತ್ತದೆ. ಹಾಗೆಯೇ ಈವರೆಗಿನ ಅದರ ಆಡಳಿತವೇ ಸಂಚಿನ ಸರಮಾಲೆಯಿಂದ ಕೂಡಿದ್ದು ಮುಂದು ಕೂಡ ತನ್ನ ಅಜೆಂಡಾಗಳನ್ನು ದೇಶದ ಮೇಲೆ ಹೇರುವ ಸಂಚುಗಳಿಂದಲೇ ಮುನ್ನಡೆವ ಆ ಪಕ್ಷ ದೇಶನಾಶ ಮಾಡಲೂ ಹೇಸುವುದಿಲ್ಲವಂತಲ್ಲಾ ಥೂತ್ತೇರಿ.
*********
ಇತ್ತ ಕರ್ನಾಟಕದ ಸಮಾಚಾರ ಶಾನೆ ಮಜವಾಗಿದೆಯಲ್ಲಾ. ಇನ್ನ ಕಾವೇರಿಯಲ್ಲೇ ಪವಡಿಸಿರುವ ಸಿದ್ದು ನಿದ್ದೆಯಿಂದೆದ್ದು “ನಾನು ತಿರಗ ಮುಖ್ಯಮಂತ್ರಿ ಆಯ್ತಿನಿ” ಎಂದು ಬಿಟ್ಟರಂತಲ್ಲಾ. ಇದರಿಂದ ಪುಳಕಿತರಾದ ಸುತ್ತಲೂ ಇದ್ದ ಕುರುಬ ಸಮಾಜದ ಮಾಜಿಗಳು ಮುಂದಾದ್ರು ನಮುಗ್ಯಾವುದರ ಬೊರ್ಡು, ನಿಗಮ ಅಕಾಡೆಮಿ ಇತ್ಯಾದಿ ಅನ್ನದಂಡದ ಹುದ್ದೆಗಳನ್ನು ಕರುಣಿಸಬೇಕೆಂದು ಅಂಗಲಾಚಿದರಂತಲ್ಲಾ.
ಮುಖ್ಯಮಂತ್ರಿಗಿರಿ ಹೋದ ನೂರೇ ದಿನಕ್ಕೆ ನಿರುದ್ಯೋಗ ಎದುರಿಸುತ್ತಿರುವ ಸಿದ್ದು. ಈ ತರಹ ಹೇಳಿಕೆ ಕೊಡಬೇಕಾದರೆ ಕಾರಣವೇನೆಂದು ಮಾಧ್ಯಮದ ಮಂದಮತಿಗಳು ಸದರಿ ಹೇಳೆಕೆಯನ್ನ ಅಳೆದು ಸುರಿದು ಹಂಚುತ್ತಿರಬೇಕಾದರೆ, ಅತ್ತ ಕುಮಾರಣ್ಣ ಸಿದ್ದು ಮಾತಿಗೆ ಆಕ್ರೋಶಗೊಂಡರೂ ಅದುಮಿಟ್ಟುಕೊಂಡು ಸಂತೋಷ ಬಹಳ ಸಂತೋಷ ಎಂದರಂತಲ್ಲಾ. ಹೇಳಿಕೇಳಿ ಇದು ಸಮ್ಮಿಶ್ರ ಸರಕಾರ ಕಾಂಗೈದು ಎಪ್ಪತ್ತೈದು ಭಾಗವಾದರೆ ಜೆಡಿಎಸ್‍ದು ಇಪ್ಪತ್ತೈದು ಭಾಗ. ಆದ್ದರಿಂದ ನಾಯಿಬಾಲ ಅಲ್ಲಾಡಿಸಬೇಕೆ ಹೊರತು, ಬಾಲವೇ ನಾಯಿ ಅಲ್ಲಾಡಿಸಬಾರದು ಎಂದು ಕಡ್ಡಿರಂಗ ವಾದಿಸುತ್ತಿರಲಾಗಿ, ಇತ್ತ ರಂಗನನ್ನು ಕಂಡಲಾಗದ ಸಿಂಗರು ನಾಯಿ ದುರ್ಬಲವಾಗಿರುವಾಗ ಅಕಸ್ಮಾತ್ ಅದು ಬಾಲ ಅಲ್ಲಾಡಿಸಲು ಯತ್ನಿಸಿದಾಗ ಅದೂ ಕೂಡ ಅಲ್ಲಾಡಬೇಕಾಗುತ್ತೆ. ಒಟ್ಟು ಕುಮ್ಮಿ ಸರಕಾರ ಈಗ ಅಲ್ಲಾಡುತ್ತಿದೆ ಎಂದವಂತಲ್ಲಾ ಥೂತ್ತೇರಿ.
*********
ಸಿರ್ಸಿ ಸಿದ್ದಾಪುರ ಕಡೆಯ ಅನಂತಕುಮಾರ ಹೆಗಡೆ ಎಂಬ ತಲೆಕೆಟ್ಟ ಗಿರಾಕಿ, ತಲೆಗೆ ಏಟುಬಿದ್ದಂತೆ ಸುಮ್ಮನಿರುವಾಗ ಬಿಜಾಪುರದ ಯತ್ನಾಳ್ ಎಂಬ ಯಡವಟ್ಟನ ಮೇಲೆ ಹೆಗಡೆ ಭೂತ ಆವರಿಸಿಕೊಂಡಿದೆಯಂತಲ್ಲಾ. ಕೇರಳದಲ್ಲಿನ ಭೀಕರ ಮಳೆಗೆ ನಾಡೇ ಕೊಚ್ಚಿ ಹೋಗಿದೆ. ಜನ ಜಾನುವಾರು, ಕಟ್ಟಡ, ರಸ್ತೆಗಳು ನೀರು ಪಾಲಾಗಿದೆ, ಇಂತಹ ಪ್ರಕೃತಿ ವಿಕೋಪಕ್ಕೆ ಯತ್ನಾಳಿಗೆ ಹೊಳೆದ ಕಾರಣವೆಂದರೆ ಕೇರಳಿಗರು ಗೋವುಗಳನ್ನು ಹತ್ಯೆ ಮಾಡಿರುವುದು. ಇಂತದೇ ಅನಾಹುತ ಕೊಡಗಿನಲ್ಲೂ ಸಂಭವಿಸಿದೆ. ಆದರೆ ಯತ್ನಾಳ್ ಎಂಬ ಮೂರ್ಖನಿಗೆ ಇಲ್ಲಿಯ ಕಾರಣ ಹೊಳೆದಿಲ್ಲ. ಏಕೆಂದರೆ ಕೊಡಗು ಈಗ ಬಿಜಿಪಿ ಮಯವಾಗಿದೆ. ಸೂಕ್ಷ್ಮವಾಗಿ ನೋಡಿದರೆ ಈ ಯತ್ನಾಳ್‍ನ ಮೆದುಳಿಗೆ ಕಾರಣ ಹೊಳೆಯಬೇಕಿತ್ತು. ಅದಾವುದಪ್ಪ ಎಂದರೆ ಕೊಡಗಿನಲ್ಲಿ ವರಾಹ ಸಂತತಿಯ ಮಾರಣಹೋಮ ನಡೆಯುತ್ತಲೇ ಇದೆ. ವರಹ ವಿಷ್ಣುವಿನ ಅವತಾರ ಆ ಅವತಾರವೆತ್ತಿದ ಮಹಾವಿಷ್ಣು ಭೂದೇವಿಯನ್ನ ರಕಿÀ್ಷಸಿ ಸ್ಥಾಪಿಸದಿದ್ದರೆ ಕೊಡಗೇನು ಭೂಮಂಡಲವೇ ಇರುತ್ತಿರಲಿಲ್ಲ. ಇಂತಹ ಕಾರಣ ಮಂದಮತಿ ಯತ್ನಾಳನಿಗೆ ಈವರೆಗೆ ಹೊಳೆಯದಿರುವುದೇ ಬಿಜಾಪುರದ ದುರಂತವಲ್ಲವೆ ಥೂತ್ತೇರಿ.
*******
ಕುಮ್ಮಿ ಸರಕಾರದ ಮನರಂಜನೆ ಎಂದರೆ ರೇವಣ್ಣ. ಯಾವುದೇ ಸರಕಾರ ಘನಗಂಭೀರವಾಗಿ ಸಾಗಬಾರದು. ಅಲ್ಲಿ ಒಂದಿಷ್ಟು ಮನರಂಜನೆ ಇರಬೇಕು, ಆದರೆ ಈ ರೇವಣ್ಣನಂತಹ ರೇವಣ್ಣನನ್ನ ಇನ್ನೂ ಐದು ವರ್ಷ ಸಹಿಸಿಕೊಳ್ಳಬೇಕಲ್ಲಾ ಎಂದು ನೆನಸಿಕೊಂಡರೆ ನೇತಾಕಿಕೊಳ್ಳಬೇಕೆನಿಸುತ್ತದಲ್ಲಾ. ನೇತಾಕಿಕೊಳ್ಳೋಣವೆಂದರೆ, ಕುಮಾರಣ್ಣ ನಮ್ಮ ಸಾಲವನ್ನು ಸಂಪೂರ್ಣ ಮನ್ನ ಮಾಡಿದ್ದಾರೆ. ಇರೋಣವೆಂದರೆ ರೇವಣ್ಣ ರಾದ್ಧಾಂತ. ಅಂತೂ ನಮ್ಮ ಪಿತೃಸಮಾನರಾದ ದೇವೇಗೌಡರಿಗೆ ಕರ್ನಾಟಕದ ಮೇಲೆ ಅದೆಂತಹ ಪ್ರೀತಿಯಿತ್ತೋ ಏನೋ ಮುದ್ದಾದ ನಾಲ್ಕು ಮಕ್ಕಳನ್ನ ಕರ್ನಾಟಕದ ಮೇಲೆ ಎಸೆದಿದ್ದಾರೆ. ಆ ಪೈಕಿ ರೇವಣ್ಣನ ಜೊಲ್ಲು-ಗೊಣ್ಣೆಯನ್ನು ಯಾರಾದರೂ ಒರೆಸಲೇಬೇಕಿದೆ. ತಾಯಿ ಭವಾನಿ ನಿಜಕ್ಕೂ ಮಹಾಮಾತೆ, ಆ ಮಾತೆ ತಮ್ಮ ಪ್ರಾಣಕಾಂತನಿಗೆ ಒಂದಿಷ್ಟು ನಾಗರಿಕ ನಡವಳಿಕೆ ಕಲಿಸಿ ಕೈಬಿಟ್ಟಿದ್ದರೇ ಕನ್ನಡ ಜನತೆ ಕೃತಾರ್ಥವಾಗುತ್ತಿತ್ತು. ಈಗಲೂ ಕಾಲಮಿಂಚಿಲ್ಲ. ತಾಯಿ ಭವಾನಿ ತಮ್ಮ ಆರ್ಯಪುತ್ರನಿಗೆ ಒಳ್ಳೆ ಕಟಿಂಗ್ ಮಾಡಿಸಿ, ಒಳ್ಳೆ ಬಟ್ಟೆ ಇಕ್ಕಿ, ಹಾಗೆ ಬಾಯಿ ಮೂಗು ಕ್ಲೀನ್ ಮಾಡಿ, ಕೈಗೆ ಸಿಕ್ಕಿದ್ದನ್ನು ಎಸೆಯದಂತೆ ಬುದ್ಧಿ ಹೇಳಿ ಕಳಿಸಿದರೆ; ಕನ್ನಡ ಜನತೆ ಆರ್ಯಪುತ್ರನ ಅಭಿಮಾನಿಗಳಾಗುವುದರಲ್ಲಿ ಯಾವ ಸಂಶಯವೂ ಇಲ್ಲವಂತಲ್ಲಾ ಥೂತ್ತೇರಿ.
– ಯಾಹೂ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...