Homeಮುಖಪುಟತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ :...

ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ (ಎಸ್‌ಸಿ) ಉಪ-ವರ್ಗೀಕರಣಕ್ಕೆ ಅಥವಾ ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಒಳ ಮೀಸಲಾತಿ ಜಾರಿಗೊಳಿಸಿದ ಮೊದಲ ರಾಜ್ಯ ನಮ್ಮದಾಗಲಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪುನರುಚ್ಚರಿಸಿದ್ದಾರೆ.

ಶಾಸಕರು, ಸಂಸದರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಮೇಯರ್‌ಗಳು ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಗ್ರೂಪ್-1 ಸರ್ಕಾರಿ ಸೇವೆ ಮತ್ತು ಅಂತಹುದೇ ಹುದ್ದೆಗಳಲ್ಲಿರುವವರನ್ನು ಮೀಸಲಾತಿಯ ಪ್ರಯೋಜನಗಳಿಂದ ಹೊರಗಿಡಬೇಕೆಂದು ಸೂಚಿಸುವ ಮೀಸಲಾತಿಯೊಳಗೆ ಕೆನೆಪದರವನ್ನು ಪರಿಚಯಿಸುವ ಏಕಸದಸ್ಯ ನ್ಯಾಯಾಂಗ ಆಯೋಗದ ಶಿಫಾರಸನ್ನು ಸರ್ಕಾರ ತಿರಸ್ಕರಿಸಿದೆ ಎಂದು ರೇವಂತ್ ರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ (ಫೆ.4) ವಿಧಾನಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಖ್ತರ್ ಅವರ ಆಯೋಗ ಸಲ್ಲಿಸಿದ ವರದಿಯನ್ನು ಮಂಡಿಸಿದ ರೇವಂತ್ ರೆಡ್ಡಿ, ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳಲ್ಲಿ 59 ಉಪಜಾತಿಗಳನ್ನು ಸಮಿತಿ ಗುರುತಿಸಿದೆ ಮತ್ತು ಅಸ್ತಿತ್ವದಲ್ಲಿರುವ ಶೇಖಡ 15 ಮೀಸಲಾತಿಯೊಳಗೆ ಅವುಗಳನ್ನು ಮೂರು ಗುಂಪುಗಳಾಗಿ ವರ್ಗೀಕರಿಸಲು ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.

ಆಯೋಗದ ಶಿಫಾರಸ್ಸಿನಂತೆ ಶೇಖಡ 3.288 ಜನ ಸಂಖ್ಯೆಯ ಪಾಲನ್ನು ಹೊಂದಿರುವ 15 ಉಪ ಜಾತಿಗಳನ್ನು ಒಳಗೊಂಡಿರುವ ಗುಂಪು 1 ಶೇಖಡ 1 ಮೀಸಲಾತಿ ಪಡೆಯುತ್ತದೆ. ಶೇಖಡ 62.748 ಜನಸಂಖ್ಯೆಯ ಪಾಲು ಹೊಂದಿರುವ 18 ಉಪಜಾತಿಗಳ ಗುಂಪು 2 ಶೇಖಡ 9 ಮೀಸಲಾತಿ ಪಡೆಯುತ್ತದೆ ಮತ್ತು ಶೇ 33.963 ಜನ ಸಂಖ್ಯೆಯ ಪಾಲನ್ನು ಹೊಂದಿರುವ 26 ಉಪಜಾತಿಗಳನ್ನು ಒಳಗೊಂಡಿರುವ ಗುಂಪು 3 ಶೇಖಡ 5 ಮೀಸಲಾತಿ ಪಡೆಯುತ್ತದೆ ಎಂದು ತಿಳಿಸಿದ್ದಾರೆ.

ಜಾತಿಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಮಂಡಿಸಿರುವ ಕ್ಷಣವನ್ನು ಇದನ್ನು ಐತಿಹಾಸಿಕ ಎಂದು ಬಣ್ಣಿಸಿದ ರೇವಂತ್ ರೆಡ್ಡಿ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಬೇಕು ಎನ್ನುವುದು ಮೂರು ದಶಕಗಳ ಬೇಡಿಕೆ ಎಂದಿದ್ದಾರೆ. ತಮ್ಮ ಸರ್ಕಾರದ ಕ್ರಮವನ್ನು ಕೊಂಡಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ದೃಢ ನಿಶ್ಚಯ ಹೊಂದಿದೆ ಎಂದು ರೇವಂತ್ ರೆಡ್ಡಿ ಒತ್ತಿ ಹೇಳಿದರು. ಅಭಿವೃದ್ದಿ ಯೋಜನೆಗಳು ಅತ್ಯಂತ ತಳಮಟ್ಟದಲ್ಲಿರುವವರಿಗೆ ತಲುಪುವಂತೆ ನೋಡಿಕೊಳ್ಳುವ ಮೂಲಕ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ದೃಷ್ಟಿಕೋನದಲ್ಲಿ ನಾವು ಬದ್ಧತೆ ಮೆರೆದಿದ್ದೇವೆ ಎಂದು ಹೇಳಿದ್ದಾರೆ.

ಒಂದು ಸಮಯದಲ್ಲಿ ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದರೆ ನಾನು ಉಚ್ಚಾಟನೆ ಆಗುವ ಸಾಧ್ಯತೆ ಇತ್ತು. ಆದರೆ, ಇಂದು ಸದನದ ನಾಯಕನಾಗಿ ನಾನು ಈ ವರದಿಯನ್ನು ಮಂಡಿಸಲು ಹೆಮ್ಮೆ ಪಡುತ್ತೇನೆ. ಈ ನಿರ್ಣಾಯಕ ಹೆಜ್ಜೆಯನ್ನು ಬೆಂಬಲಿಸುವಂತೆ ನಾನು ಎಲ್ಲಾ ಸದಸ್ಯರನ್ನು ಕೋರುತ್ತೇನೆ ಎಂದು ವರದಿ ಮಂಡನೆ ಸಂದರ್ಭ ರೇವಂತ್ ರೆಡ್ಡಿ ಮಾತನಾಡಿದ್ದಾರೆ.

ಸಿಎಂ ರೇವಂತ್ ರೆಡ್ಡಿ ವಿಧಾನಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಮಂಡಿಸಿದ ಬಳಿಕ ಸದನದಲ್ಲಿ ಗದ್ದಲ ಉಂಟಾಗಿತ್ತು. ಪ್ರತಿಪಕ್ಷ ಬಿಆರ್‌ಎಸ್‌ನ ಸದಸ್ಯರು ಹಲವು ದೋಷಗಳು ಮತ್ತು ವ್ಯತ್ಯಾಸಗಳನ್ನು ಉಲ್ಲೇಖಿಸಿ ವರದಿಯನ್ನು ವಿರೋಧಿಸಿದ್ದಾರೆ.

ಸರ್ಕಾರವು ತಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ ಪ್ರತಿಪಕ್ಷ ಶಾಸಕರು, ಈ ವಿಷಯದ ಬಗ್ಗೆ ನ್ಯಾಯಯುತ ಚರ್ಚೆಗೆ ಒತ್ತಾಯಿಸಿದ್ದಾರೆ ಮತ್ತು ಪ್ರತಿಭಟಿಸಿ ಸದನದಿಂದ ಹೊರ ನಡೆದಿದ್ದಾರೆ.

ಮಾದಿಗ ಸಮುದಾಯದ ಹಲವಾರು ಕಾಂಗ್ರೆಸ್ ಶಾಸಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು. ಒಳ ಮೀಸಲಾತಿ ಜಾರಿಗೆ ತರುವ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...