Homeಮುಖಪುಟತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ :...

ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ (ಎಸ್‌ಸಿ) ಉಪ-ವರ್ಗೀಕರಣಕ್ಕೆ ಅಥವಾ ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಒಳ ಮೀಸಲಾತಿ ಜಾರಿಗೊಳಿಸಿದ ಮೊದಲ ರಾಜ್ಯ ನಮ್ಮದಾಗಲಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪುನರುಚ್ಚರಿಸಿದ್ದಾರೆ.

ಶಾಸಕರು, ಸಂಸದರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಮೇಯರ್‌ಗಳು ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಗ್ರೂಪ್-1 ಸರ್ಕಾರಿ ಸೇವೆ ಮತ್ತು ಅಂತಹುದೇ ಹುದ್ದೆಗಳಲ್ಲಿರುವವರನ್ನು ಮೀಸಲಾತಿಯ ಪ್ರಯೋಜನಗಳಿಂದ ಹೊರಗಿಡಬೇಕೆಂದು ಸೂಚಿಸುವ ಮೀಸಲಾತಿಯೊಳಗೆ ಕೆನೆಪದರವನ್ನು ಪರಿಚಯಿಸುವ ಏಕಸದಸ್ಯ ನ್ಯಾಯಾಂಗ ಆಯೋಗದ ಶಿಫಾರಸನ್ನು ಸರ್ಕಾರ ತಿರಸ್ಕರಿಸಿದೆ ಎಂದು ರೇವಂತ್ ರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ (ಫೆ.4) ವಿಧಾನಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಖ್ತರ್ ಅವರ ಆಯೋಗ ಸಲ್ಲಿಸಿದ ವರದಿಯನ್ನು ಮಂಡಿಸಿದ ರೇವಂತ್ ರೆಡ್ಡಿ, ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳಲ್ಲಿ 59 ಉಪಜಾತಿಗಳನ್ನು ಸಮಿತಿ ಗುರುತಿಸಿದೆ ಮತ್ತು ಅಸ್ತಿತ್ವದಲ್ಲಿರುವ ಶೇಖಡ 15 ಮೀಸಲಾತಿಯೊಳಗೆ ಅವುಗಳನ್ನು ಮೂರು ಗುಂಪುಗಳಾಗಿ ವರ್ಗೀಕರಿಸಲು ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.

ಆಯೋಗದ ಶಿಫಾರಸ್ಸಿನಂತೆ ಶೇಖಡ 3.288 ಜನ ಸಂಖ್ಯೆಯ ಪಾಲನ್ನು ಹೊಂದಿರುವ 15 ಉಪ ಜಾತಿಗಳನ್ನು ಒಳಗೊಂಡಿರುವ ಗುಂಪು 1 ಶೇಖಡ 1 ಮೀಸಲಾತಿ ಪಡೆಯುತ್ತದೆ. ಶೇಖಡ 62.748 ಜನಸಂಖ್ಯೆಯ ಪಾಲು ಹೊಂದಿರುವ 18 ಉಪಜಾತಿಗಳ ಗುಂಪು 2 ಶೇಖಡ 9 ಮೀಸಲಾತಿ ಪಡೆಯುತ್ತದೆ ಮತ್ತು ಶೇ 33.963 ಜನ ಸಂಖ್ಯೆಯ ಪಾಲನ್ನು ಹೊಂದಿರುವ 26 ಉಪಜಾತಿಗಳನ್ನು ಒಳಗೊಂಡಿರುವ ಗುಂಪು 3 ಶೇಖಡ 5 ಮೀಸಲಾತಿ ಪಡೆಯುತ್ತದೆ ಎಂದು ತಿಳಿಸಿದ್ದಾರೆ.

ಜಾತಿಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಮಂಡಿಸಿರುವ ಕ್ಷಣವನ್ನು ಇದನ್ನು ಐತಿಹಾಸಿಕ ಎಂದು ಬಣ್ಣಿಸಿದ ರೇವಂತ್ ರೆಡ್ಡಿ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಬೇಕು ಎನ್ನುವುದು ಮೂರು ದಶಕಗಳ ಬೇಡಿಕೆ ಎಂದಿದ್ದಾರೆ. ತಮ್ಮ ಸರ್ಕಾರದ ಕ್ರಮವನ್ನು ಕೊಂಡಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ದೃಢ ನಿಶ್ಚಯ ಹೊಂದಿದೆ ಎಂದು ರೇವಂತ್ ರೆಡ್ಡಿ ಒತ್ತಿ ಹೇಳಿದರು. ಅಭಿವೃದ್ದಿ ಯೋಜನೆಗಳು ಅತ್ಯಂತ ತಳಮಟ್ಟದಲ್ಲಿರುವವರಿಗೆ ತಲುಪುವಂತೆ ನೋಡಿಕೊಳ್ಳುವ ಮೂಲಕ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ದೃಷ್ಟಿಕೋನದಲ್ಲಿ ನಾವು ಬದ್ಧತೆ ಮೆರೆದಿದ್ದೇವೆ ಎಂದು ಹೇಳಿದ್ದಾರೆ.

ಒಂದು ಸಮಯದಲ್ಲಿ ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದರೆ ನಾನು ಉಚ್ಚಾಟನೆ ಆಗುವ ಸಾಧ್ಯತೆ ಇತ್ತು. ಆದರೆ, ಇಂದು ಸದನದ ನಾಯಕನಾಗಿ ನಾನು ಈ ವರದಿಯನ್ನು ಮಂಡಿಸಲು ಹೆಮ್ಮೆ ಪಡುತ್ತೇನೆ. ಈ ನಿರ್ಣಾಯಕ ಹೆಜ್ಜೆಯನ್ನು ಬೆಂಬಲಿಸುವಂತೆ ನಾನು ಎಲ್ಲಾ ಸದಸ್ಯರನ್ನು ಕೋರುತ್ತೇನೆ ಎಂದು ವರದಿ ಮಂಡನೆ ಸಂದರ್ಭ ರೇವಂತ್ ರೆಡ್ಡಿ ಮಾತನಾಡಿದ್ದಾರೆ.

ಸಿಎಂ ರೇವಂತ್ ರೆಡ್ಡಿ ವಿಧಾನಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಮಂಡಿಸಿದ ಬಳಿಕ ಸದನದಲ್ಲಿ ಗದ್ದಲ ಉಂಟಾಗಿತ್ತು. ಪ್ರತಿಪಕ್ಷ ಬಿಆರ್‌ಎಸ್‌ನ ಸದಸ್ಯರು ಹಲವು ದೋಷಗಳು ಮತ್ತು ವ್ಯತ್ಯಾಸಗಳನ್ನು ಉಲ್ಲೇಖಿಸಿ ವರದಿಯನ್ನು ವಿರೋಧಿಸಿದ್ದಾರೆ.

ಸರ್ಕಾರವು ತಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ ಪ್ರತಿಪಕ್ಷ ಶಾಸಕರು, ಈ ವಿಷಯದ ಬಗ್ಗೆ ನ್ಯಾಯಯುತ ಚರ್ಚೆಗೆ ಒತ್ತಾಯಿಸಿದ್ದಾರೆ ಮತ್ತು ಪ್ರತಿಭಟಿಸಿ ಸದನದಿಂದ ಹೊರ ನಡೆದಿದ್ದಾರೆ.

ಮಾದಿಗ ಸಮುದಾಯದ ಹಲವಾರು ಕಾಂಗ್ರೆಸ್ ಶಾಸಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು. ಒಳ ಮೀಸಲಾತಿ ಜಾರಿಗೆ ತರುವ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...