Homeಮುಖಪುಟತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ :...

ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

- Advertisement -
- Advertisement -

ಪರಿಶಿಷ್ಟ ಜಾತಿಯಲ್ಲಿ (ಎಸ್‌ಸಿ) ಉಪ-ವರ್ಗೀಕರಣಕ್ಕೆ ಅಥವಾ ಎಸ್‌ಸಿ ಒಳ ಮೀಸಲಾತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಒಳ ಮೀಸಲಾತಿ ಜಾರಿಗೊಳಿಸಿದ ಮೊದಲ ರಾಜ್ಯ ನಮ್ಮದಾಗಲಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪುನರುಚ್ಚರಿಸಿದ್ದಾರೆ.

ಶಾಸಕರು, ಸಂಸದರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಮೇಯರ್‌ಗಳು ಮತ್ತು ಇತರ ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಗ್ರೂಪ್-1 ಸರ್ಕಾರಿ ಸೇವೆ ಮತ್ತು ಅಂತಹುದೇ ಹುದ್ದೆಗಳಲ್ಲಿರುವವರನ್ನು ಮೀಸಲಾತಿಯ ಪ್ರಯೋಜನಗಳಿಂದ ಹೊರಗಿಡಬೇಕೆಂದು ಸೂಚಿಸುವ ಮೀಸಲಾತಿಯೊಳಗೆ ಕೆನೆಪದರವನ್ನು ಪರಿಚಯಿಸುವ ಏಕಸದಸ್ಯ ನ್ಯಾಯಾಂಗ ಆಯೋಗದ ಶಿಫಾರಸನ್ನು ಸರ್ಕಾರ ತಿರಸ್ಕರಿಸಿದೆ ಎಂದು ರೇವಂತ್ ರೆಡ್ಡಿ ತಿಳಿಸಿದ್ದಾರೆ.

ಮಂಗಳವಾರ (ಫೆ.4) ವಿಧಾನಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಖ್ತರ್ ಅವರ ಆಯೋಗ ಸಲ್ಲಿಸಿದ ವರದಿಯನ್ನು ಮಂಡಿಸಿದ ರೇವಂತ್ ರೆಡ್ಡಿ, ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳಲ್ಲಿ 59 ಉಪಜಾತಿಗಳನ್ನು ಸಮಿತಿ ಗುರುತಿಸಿದೆ ಮತ್ತು ಅಸ್ತಿತ್ವದಲ್ಲಿರುವ ಶೇಖಡ 15 ಮೀಸಲಾತಿಯೊಳಗೆ ಅವುಗಳನ್ನು ಮೂರು ಗುಂಪುಗಳಾಗಿ ವರ್ಗೀಕರಿಸಲು ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ.

ಆಯೋಗದ ಶಿಫಾರಸ್ಸಿನಂತೆ ಶೇಖಡ 3.288 ಜನ ಸಂಖ್ಯೆಯ ಪಾಲನ್ನು ಹೊಂದಿರುವ 15 ಉಪ ಜಾತಿಗಳನ್ನು ಒಳಗೊಂಡಿರುವ ಗುಂಪು 1 ಶೇಖಡ 1 ಮೀಸಲಾತಿ ಪಡೆಯುತ್ತದೆ. ಶೇಖಡ 62.748 ಜನಸಂಖ್ಯೆಯ ಪಾಲು ಹೊಂದಿರುವ 18 ಉಪಜಾತಿಗಳ ಗುಂಪು 2 ಶೇಖಡ 9 ಮೀಸಲಾತಿ ಪಡೆಯುತ್ತದೆ ಮತ್ತು ಶೇ 33.963 ಜನ ಸಂಖ್ಯೆಯ ಪಾಲನ್ನು ಹೊಂದಿರುವ 26 ಉಪಜಾತಿಗಳನ್ನು ಒಳಗೊಂಡಿರುವ ಗುಂಪು 3 ಶೇಖಡ 5 ಮೀಸಲಾತಿ ಪಡೆಯುತ್ತದೆ ಎಂದು ತಿಳಿಸಿದ್ದಾರೆ.

ಜಾತಿಗಣತಿ ವರದಿ ಮತ್ತು ಒಳ ಮೀಸಲಾತಿ ವರದಿಯನ್ನು ಮಂಡಿಸಿರುವ ಕ್ಷಣವನ್ನು ಇದನ್ನು ಐತಿಹಾಸಿಕ ಎಂದು ಬಣ್ಣಿಸಿದ ರೇವಂತ್ ರೆಡ್ಡಿ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಬೇಕು ಎನ್ನುವುದು ಮೂರು ದಶಕಗಳ ಬೇಡಿಕೆ ಎಂದಿದ್ದಾರೆ. ತಮ್ಮ ಸರ್ಕಾರದ ಕ್ರಮವನ್ನು ಕೊಂಡಾಡಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ದೃಢ ನಿಶ್ಚಯ ಹೊಂದಿದೆ ಎಂದು ರೇವಂತ್ ರೆಡ್ಡಿ ಒತ್ತಿ ಹೇಳಿದರು. ಅಭಿವೃದ್ದಿ ಯೋಜನೆಗಳು ಅತ್ಯಂತ ತಳಮಟ್ಟದಲ್ಲಿರುವವರಿಗೆ ತಲುಪುವಂತೆ ನೋಡಿಕೊಳ್ಳುವ ಮೂಲಕ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ದೃಷ್ಟಿಕೋನದಲ್ಲಿ ನಾವು ಬದ್ಧತೆ ಮೆರೆದಿದ್ದೇವೆ ಎಂದು ಹೇಳಿದ್ದಾರೆ.

ಒಂದು ಸಮಯದಲ್ಲಿ ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದರೆ ನಾನು ಉಚ್ಚಾಟನೆ ಆಗುವ ಸಾಧ್ಯತೆ ಇತ್ತು. ಆದರೆ, ಇಂದು ಸದನದ ನಾಯಕನಾಗಿ ನಾನು ಈ ವರದಿಯನ್ನು ಮಂಡಿಸಲು ಹೆಮ್ಮೆ ಪಡುತ್ತೇನೆ. ಈ ನಿರ್ಣಾಯಕ ಹೆಜ್ಜೆಯನ್ನು ಬೆಂಬಲಿಸುವಂತೆ ನಾನು ಎಲ್ಲಾ ಸದಸ್ಯರನ್ನು ಕೋರುತ್ತೇನೆ ಎಂದು ವರದಿ ಮಂಡನೆ ಸಂದರ್ಭ ರೇವಂತ್ ರೆಡ್ಡಿ ಮಾತನಾಡಿದ್ದಾರೆ.

ಸಿಎಂ ರೇವಂತ್ ರೆಡ್ಡಿ ವಿಧಾನಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಮಂಡಿಸಿದ ಬಳಿಕ ಸದನದಲ್ಲಿ ಗದ್ದಲ ಉಂಟಾಗಿತ್ತು. ಪ್ರತಿಪಕ್ಷ ಬಿಆರ್‌ಎಸ್‌ನ ಸದಸ್ಯರು ಹಲವು ದೋಷಗಳು ಮತ್ತು ವ್ಯತ್ಯಾಸಗಳನ್ನು ಉಲ್ಲೇಖಿಸಿ ವರದಿಯನ್ನು ವಿರೋಧಿಸಿದ್ದಾರೆ.

ಸರ್ಕಾರವು ತಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ ಪ್ರತಿಪಕ್ಷ ಶಾಸಕರು, ಈ ವಿಷಯದ ಬಗ್ಗೆ ನ್ಯಾಯಯುತ ಚರ್ಚೆಗೆ ಒತ್ತಾಯಿಸಿದ್ದಾರೆ ಮತ್ತು ಪ್ರತಿಭಟಿಸಿ ಸದನದಿಂದ ಹೊರ ನಡೆದಿದ್ದಾರೆ.

ಮಾದಿಗ ಸಮುದಾಯದ ಹಲವಾರು ಕಾಂಗ್ರೆಸ್ ಶಾಸಕರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದರು. ಒಳ ಮೀಸಲಾತಿ ಜಾರಿಗೆ ತರುವ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.

ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...