Homeಮುಖಪುಟರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ ವೇಮುಲಾ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದು, ಈ ವೇಳೆ ಪ್ರಕರಣದ ಮರು ತನಿಖೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಮುಕ್ತಾಯದ (ಫೈಲ್ ಕ್ಲೋಸ್) ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್ ಮತ್ತು ಉಪಕುಲಪತಿ ಅಪ್ಪಾ ರಾವ್, ಎಬಿವಿಪಿ ಮುಖಂಡರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದರು.

ತೆಲಂಗಾಣ ಹೈಕೋರ್ಟ್‌ಗೆ ಈ ಕುರಿತು ವರದಿ ಸಲ್ಲಿಕೆಯಾಗಿದ್ದು, ವರದಿಯು ರೋಹಿತ್ ‘ಪರಿಶಿಷ್ಟ ಜಾತಿಗೆ ಸೇರಿದವನಲ್ಲ’ ಎಂದು ಹೇಳಿದೆ ಮತ್ತು ತನ್ನ “ನಿಜವಾದ ಜಾತಿಯ ಗುರುತು” ಪತ್ತೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಊಹಿಸಲಾಗಿದೆ ಎಂದು ಹೇಳಲಾಗಿದೆ. ಆತನ ಕುಟುಂಬದ ಜಾತಿ ಪ್ರಮಾಣಪತ್ರಗಳನ್ನು ಯಾವುದೇ ಸಾಕ್ಷ್ಯವನ್ನು ನೀಡದೆ ನಕಲಿ ಮಾಡಲಾಗಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

ಇದರ ಬೆನ್ನಲ್ಲಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ರವಿ ಗುಪ್ತಾ ಅವರು ಪ್ರತಿಕ್ರಿಯಿಸಿದ್ದು, ಪ್ರಕರಣದ ವರದಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆ ನ್ಯಾಯಾಲಯದ ಮಧ್ಯಪ್ರವೇಶವನ್ನು ಕೋರುತ್ತಿದ್ದೇವೆ, ಈ ಕುರಿತು ಹೆಚ್ಚಿನ ತನಿಖೆಗೆ ಅನುಮತಿ ನೀಡುವಂತೆ ಮ್ಯಾಜಿಸ್ಟ್ರೇಟ್‌ಗೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ವರದಿಯಲ್ಲಿ ಕೆಲವು ಅನುಮಾನಗಳಿವೆ. ಪ್ರಕರಣದ ಬಗ್ಗೆ ಪರಿಶೀಲಿಸಲು ನಾವು ನ್ಯಾಯಾಲಯವನ್ನು ಕೋರುತ್ತೇವೆ ಎಂದು ಹೇಳಿದರು. ಮೃತ ರೋಹಿತ್ ವೇಮುಲನ ತಾಯಿ ಹಾಗೂ ಇತರರಿಂದ ಕೆಲವು ಅನುಮಾನಗಳು ವ್ಯಕ್ತವಾಗಿರುವುದರಿಂದ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲು ನಿರ್ಧರಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆಗೆ ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಮಾದಾಪುರದ ಸಹಾಯಕ ಪೊಲೀಸ್ ಆಯುಕ್ತರಾಗಿದ್ದು, ಕಳೆದ ನವೆಂಬರ್ 2023ರ ಮೊದಲು ಪ್ರಕರಣದ ಅಂತಿಮ ಮುಕ್ತಾಯ ವರದಿಯನ್ನು ಅವರು ನಡೆಸಿದ್ದ ತನಿಖೆಯ ಆಧಾರದ ಮೇಲೆ ಸಿದ್ಧಪಡಿಸಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ.

 

ಇದನ್ನು ಓದಿ: ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...