Homeಮುಖಪುಟರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ ವೇಮುಲಾ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದು, ಈ ವೇಳೆ ಪ್ರಕರಣದ ಮರು ತನಿಖೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

2016ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಮುಕ್ತಾಯದ (ಫೈಲ್ ಕ್ಲೋಸ್) ವರದಿಯನ್ನು ಸಲ್ಲಿಸಿದ್ದು, ಆಗಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್ ಮತ್ತು ಉಪಕುಲಪತಿ ಅಪ್ಪಾ ರಾವ್, ಎಬಿವಿಪಿ ಮುಖಂಡರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದರು.

ತೆಲಂಗಾಣ ಹೈಕೋರ್ಟ್‌ಗೆ ಈ ಕುರಿತು ವರದಿ ಸಲ್ಲಿಕೆಯಾಗಿದ್ದು, ವರದಿಯು ರೋಹಿತ್ ‘ಪರಿಶಿಷ್ಟ ಜಾತಿಗೆ ಸೇರಿದವನಲ್ಲ’ ಎಂದು ಹೇಳಿದೆ ಮತ್ತು ತನ್ನ “ನಿಜವಾದ ಜಾತಿಯ ಗುರುತು” ಪತ್ತೆಯಾಗುತ್ತದೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಊಹಿಸಲಾಗಿದೆ ಎಂದು ಹೇಳಲಾಗಿದೆ. ಆತನ ಕುಟುಂಬದ ಜಾತಿ ಪ್ರಮಾಣಪತ್ರಗಳನ್ನು ಯಾವುದೇ ಸಾಕ್ಷ್ಯವನ್ನು ನೀಡದೆ ನಕಲಿ ಮಾಡಲಾಗಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ.

ಇದರ ಬೆನ್ನಲ್ಲಿ ತೆಲಂಗಾಣದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ), ರವಿ ಗುಪ್ತಾ ಅವರು ಪ್ರತಿಕ್ರಿಯಿಸಿದ್ದು, ಪ್ರಕರಣದ ವರದಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಈ ಹಿನ್ನೆಲೆ ನ್ಯಾಯಾಲಯದ ಮಧ್ಯಪ್ರವೇಶವನ್ನು ಕೋರುತ್ತಿದ್ದೇವೆ, ಈ ಕುರಿತು ಹೆಚ್ಚಿನ ತನಿಖೆಗೆ ಅನುಮತಿ ನೀಡುವಂತೆ ಮ್ಯಾಜಿಸ್ಟ್ರೇಟ್‌ಗೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ವರದಿಯಲ್ಲಿ ಕೆಲವು ಅನುಮಾನಗಳಿವೆ. ಪ್ರಕರಣದ ಬಗ್ಗೆ ಪರಿಶೀಲಿಸಲು ನಾವು ನ್ಯಾಯಾಲಯವನ್ನು ಕೋರುತ್ತೇವೆ ಎಂದು ಹೇಳಿದರು. ಮೃತ ರೋಹಿತ್ ವೇಮುಲನ ತಾಯಿ ಹಾಗೂ ಇತರರಿಂದ ಕೆಲವು ಅನುಮಾನಗಳು ವ್ಯಕ್ತವಾಗಿರುವುದರಿಂದ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲು ನಿರ್ಧರಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆಗೆ ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಮಾದಾಪುರದ ಸಹಾಯಕ ಪೊಲೀಸ್ ಆಯುಕ್ತರಾಗಿದ್ದು, ಕಳೆದ ನವೆಂಬರ್ 2023ರ ಮೊದಲು ಪ್ರಕರಣದ ಅಂತಿಮ ಮುಕ್ತಾಯ ವರದಿಯನ್ನು ಅವರು ನಡೆಸಿದ್ದ ತನಿಖೆಯ ಆಧಾರದ ಮೇಲೆ ಸಿದ್ಧಪಡಿಸಿದ್ದಾರೆ ಎಂದು ಡಿಜಿಪಿ ಹೇಳಿದ್ದಾರೆ.

 

ಇದನ್ನು ಓದಿ: ಅಮಿತ್‌ ಶಾ ಸ್ಪರ್ಧಿಸುವ ಗಾಂಧಿನಗರದಲ್ಲಿ ಸ್ಪರ್ಧಿಸದಂತೆ ಅಭ್ಯರ್ಥಿಗಳಿಗೆ ಬಿಜೆಪಿ ನಾಯಕರು ಮತ್ತು ಪೊಲೀಸರಿಂದ ಬೆದರಿಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...