Homeಮುಖಪುಟತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ

- Advertisement -
- Advertisement -

ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಟಿಪಿಸಿಸಿ ಅಧ್ಯಕ್ಷ ಹಾಗೂ ಕೊಡಂಗಲ್‌ ಶಾಸಕ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್‌ 7 ಗುರುವಾರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿಯಾಗಿ ಯಾರನ್ನು ನೇಮಿಸಲಾಗುವುದು ಎಂದು ಮುಂದೆ ಮಾಹಿತಿ ನೀಡುವುದಾಗಿ ವೇಣುಗೋಪಾಲ್‌ ಹೇಳಿದ್ದಾರೆ. ನೂತನ ಸಿಎಂ ಜೊತೆ ಇತರ ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

ಡಿಸೆಂಬರ್ 3ರಂದು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಡೆದಿತ್ತು. ಈ ಸಭೆಯಲ್ಲಿ ರೇವಂತ್ ರೆಡ್ಡಿ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲಾಗಿತ್ತು.

ಶಾಸಕರ ಅಭಿಪ್ರಾಯ ಮತ್ತು ಎಐಸಿಸಿ ಅಧ್ಯಕ್ಷರ ನಿರ್ಧಾರದಂತೆ ರೇವಂತ್ ರೆಡ್ಡಿ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ವೇಣುಗೋಪಾಲ್ ತಿಳಿಸಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 64 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲು ಅಣಿಯಾಗಿದೆ. ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಯಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರೇವಂತ್ ರೆಡ್ಡಿ ಅವರು ಕೆಸಿಆರ್‌ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ರೇವಂತ್ ರೆಡ್ಡಿ ಮಾತ್ರವಲ್ಲದೆ, ದಲಿತ ಸಮುದಾಯದ ನಾಯಕ ಮಲ್ಲು ಭಟ್ಟಿ ವಿಕ್ರಮಾರ್ಕ ಮತ್ತು ಏಳು ಬಾರಿಯ ಶಾಸಕ ಹಾಗೂ ವಾಯುಪಡೆಯ ಮಾಜಿ ಪೈಲಟ್ ಉತ್ತಮ್ ಕುಮಾರ್ ರೆಡ್ಡಿ ಸಿಎಂ ಸ್ಥಾನದ ರೇಸ್‌ನಲ್ಲಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ನಿರೀಕ್ಷೆಯಂತೆ ರೇವಂತ್ ರೆಡ್ಡಿಗೆ ಮನೆ ಹಾಕಿದೆ.

ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ, ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ ಬಿಆರ್‌ಎಸ್‌ ಪಕ್ಷ 39 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರ ಕಳೆದುಕೊಂಡಿದೆ. 8 ಸ್ಥಾನಗಳನ್ನು ಪಡೆದ ಬಿಜೆಪಿ ಮೂರನೇ ಪಕ್ಷವಾಗಿ ಹೊರ ಹೊಮ್ಮಿದ್ದು, ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ 7 ಸ್ಥಾನಗಳನ್ನು ಗೆಲ್ಲುವ ಮೂಲಕ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಇತರರು 1 ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ತೆಲಂಗಾಣ ಚುನಾವಣೆಯಲ್ಲಿ ಸಂಚಲನ ಸೃಷ್ಟಿಸಿದ್ದ ‘ಎಮ್ಮೆ ಕಾಯುವ’ ಹುಡುಗಿ ಏನಾದ್ರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...