Homeಮುಖಪುಟಒಲಂಪಿಕ್ ಅಂಗಳಕ್ಕೆ ಟಿಕೆಟ್‌ ಕಲೆಕ್ಟರ್‌ : ಬಡತನದ ಕುಲುಮೆಯಲ್ಲರಳಿದ ಕ್ರೀಡಾರತ್ನ ರೇವತಿ ವೀರಮಣಿ

ಒಲಂಪಿಕ್ ಅಂಗಳಕ್ಕೆ ಟಿಕೆಟ್‌ ಕಲೆಕ್ಟರ್‌ : ಬಡತನದ ಕುಲುಮೆಯಲ್ಲರಳಿದ ಕ್ರೀಡಾರತ್ನ ರೇವತಿ ವೀರಮಣಿ

ರೇವತಿ ಓಡಿದ್ದು ಹೂವಿನ ಹಾಸಿಗೆಯ ಮೇಲಲ್ಲ, ಅವರ ಜೀವನದ ಓಟ ಸಾಗಿದ್ದು ಮುಳ್ಳು ಬೇಲಿಗಳ ಮೇಲೆ. ಕಡುಬಡತನದ ನಡುವೆಯೂ ಅವರು ತಮ್ಮ ಒಲಂಪಿಕ್‌ ಕನಸನ್ನು ಕೈಬಿಡಲಿಲ್ಲ.

- Advertisement -
- Advertisement -

ಒಲಂಪಿಕ್ ಕನಸು ಕಾಣದ ಕ್ರೀಡಾಪಟುಗಳೇ ಇಲ್ಲ ಎನ್ನಬಹುದು. ವಿಶ್ವದ ಅತ್ಯಂತ ದೊಡ್ಡ ಕ್ರೀಡಾಕೂಟದಲ್ಲಿ ಭಾಗವಹಿಸುವ ಆಸೆ ಮತ್ತು ಕನಸು ಪ್ರತಿಯೊಬ್ಬ ಕ್ರೀಡಾಪಟುವಿನ ಜೀವನದಲ್ಲೂ ಇರುತ್ತದೆ. ಬಹುತೇಕ ಕ್ರೀಡಾಪಟುಗಳು ಆರ್ಥಿಕ, ಕೌಟುಂಬಿಕ ಮತ್ತು ವಯಕ್ತಿಕ ಸಮಸ್ಯೆಗಳು ಮತ್ತು ಸಾಮರ್ಥ್ಯಗಳ ಕಾರಣದಿಂದ ಒಲಂಪಿಕ್ ಹಾದಿಯನ್ನು ಅರ್ಧಕ್ಕೇ ಮೊಟಕುಗೊಳಿಸುತ್ತಾರೆ. ಕೆಲವೇ ಕೆಲವರು  ಛಲ ಬಿಡದ ತ್ರಿವಿಕ್ರಮನಂತೆ ಜಿದ್ದಿಗೆ ಬಿದ್ದು ಅತ್ಯುನ್ನತ ಕ್ರೀಡಾಕೂಟಕ್ಕೆ ಟಿಕೇಟ್ ಗಿಟ್ಟಿಸಿಕೊಳ್ಳುತ್ತಾರೆ. ಅಂತಹ ಛಲಗಾರ್ತಿ ತಮಿಳುನಾಡಿನ  ರೇವತಿ. ಜೀವನಕ್ಕೆ ಉದ್ಯೋಗ ಮಾಡುವುದು ರೈಲ್ವೆ ಟಿಕೆಟ್‌ ಕಲೆಕ್ಟರ್‌ ಆಗಿ. ಆದರೆ ಕನಸು ಒಲಂಪಿಕ್‌ನದ್ದು. ಮಧುರೈ ರೈಲ್ವೆ ನಿಲ್ಧಾಣದಲ್ಲಿ ಟಿಕೆಟ್‌ ಕಲೆಕ್ಟರ್‌ ಆಗಿ ಕೆಲಸ ಮಾಡುತ್ತಿರುವ 23 ವರ್ಷದ ರೇವತಿ ವೀರಮಣಿ 400 ಮೀಟರ್‌ ರಿಲೇಯಲ್ಲಿ ಒಲಂಪಿಕ್ಗೆ ಅರ್ಹತೆ ಪಡೆದಿದ್ದಾರೆ.

ರೇವತಿ ಸಾಧನೆಗೆ ದಕ್ಷಿಣ ರೈಲ್ವೆ ಅಭಿನಂದಿಸಿದ್ದು ಒಲಂಪಿಕ್‌ನಲ್ಲಿ ಅವರು ಚಿನ್ನವನ್ನು ಗೆದ್ದು ಬರಲಿ ಎಂದು ಹಾರೈಸಿದೆ.

ಮಧುರೈ ತಮಿಳುನಾಡಿನ ಚಿಕ್ಕ ಪಟ್ಟಣ. ಬಾಂಬೆ, ಮದ್ರಾಸು, ದೆಹಲಿಗಳಂತೆ ಇಲ್ಲಿ ದೊಡ್ಡ ದೊಡ್ಡ ಕ್ರೀಡಾ ಸಂಕೀರ್ಣಗಳಾಗಲಿ ಅಥವಾ ತರಬೇತಿ ಕೇಂದ್ರಗಳಾಗಲಿ ಇಲ್ಲ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳು ತೀರಾ ವಿರಳ. ಹಾಗಂತ ರೇವತಿಯವರು ತಮ್ಮ ಕನಸನ್ನು ಎಂದೂ ಕೈಬಿಡಲಿಲ್ಲ. ರೇವತಿ ಓಡಿದ್ದು ಹೂವಿನ ಹಾಸಿಗೆಯ ಮೇಲಲ್ಲ, ಅವರ ಜೀವನದ ಓಟ ಸಾಗಿದ್ದು ಮುಳ್ಳು ಬೇಲಿಗಳ ಮೇಲೆ.

ರೇವತಿ ಚಿಕ್ಕ ವಯಸ್ಸಿನಲ್ಲಿಯೇ ಸಾಕಷ್ಟ ದುರಂತವನ್ನು ಎದುರಿಸಿದರು. ಅವರು ಮತ್ತು ಸಹೋದರಿ ಬಾಲ್ಯದಲ್ಲಿಯೇ ತಂದೆ ತಾಯಿಯರನ್ನು ಕಳೆದುಕೊಂಡು ಅನಾಥರಾದರು. ನಂತರ ಇಬ್ಬರು ಹೆಣ್ಣು ಮಕ್ಕಳ ಪೋಷಣೆಗೆ ನಿಂತಿದ್ದು ಮಧುರೈನಲ್ಲಿರುವ ರೇವತಿಯವರ ಅಜ್ಜಿ .  ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಅವರ ಅಜ್ಜಿ ಅವರನ್ನು ಬೆಳೆಸಲು ಹೆಣಗಾಡಿದರು. ಮನೆಯಲ್ಲಿ ಬಡತನ, ವೃದ್ಧೆ ಅಜ್ಜಿ, ತಂದೆ ತಾಯಿಯರ ಸಾವು ಎಂತವರನ್ನೂ ಕಂಗೆಡೆಸದೇ, ಕುಗ್ಗಿಸದೇ ಇರಲಾರದು. ರೇವತಿ ಕಷ್ಟಗಳು ಎದುರಾದಷ್ಟು ಪುಟಿಯುತ್ತಲೇ ಹೋದರು. ಅವರ ಅಜ್ಜಿ ಮೊಮ್ಮಕ್ಕಳಿಗೆ  ಮತ್ತು ಎಲ್ಲಾ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅವಕಾಶವನ್ನು ನೀಡಿದರು.

ಇದನ್ನೂ ಓದಿ: ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

ಶಾಲೆಯ ದಿನಗಳಲ್ಲಿ ರೇವತಿ ವಿ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದರು. ಎಲ್ಲರೂ ಮಕ್ಕಳಾಟ ಎಂದು ನಂಬಿದ್ದರೇ ವಿನ: ರೇವತಿ ಒಲಂಪಿಕ್‌ಗೆ ಆಯ್ಕೆಯಾಗುವ ಊಹೆಯನ್ನೂ ಮಾಡಿರಲಿಲ್ಲ. ಚಿಗುರೆಯಂತೆ ಓಡುವ ಪುಟ್ಟ ಹುಡುಗಿಯಲ್ಲಿ ಅಡಗಿದ್ದ ಸುಪ್ತ ಪ್ರತಿಭೆಯನ್ನು ಗುರುತಿಸಿದವರು ಕೋಚ್ ಕಣ್ಣನ್.

“ಇಬ್ಬರು ಹೆಣ್ಣು ಮಕ್ಕಳು ಐದು ವರ್ಷದವರಿದ್ದಾಗ  ನನ್ನ ಮಗಳು ಮತ್ತು ಸೊಸೆ ತೀರಿಕೊಂಡರು. ನಾನು ಅವರನ್ನು ಕರೆದುಕೊಂಡು ಹೋಗಿ ಶಿಕ್ಷಣ ನೀಡಿದೆ. ಶಾಲೆಯ ಕೋಚ್‌ ರೇವತಿ ಚೆನ್ನಾಗಿ ಓಡುತ್ತಾರೆ ಎಂದು ಮೆಚ್ಚಿ ಅವಳಿಗೆ ತರಬೇತಿ ಪ್ರಾರಂಭಿಸಲು ಹೇಳಿದರು. ನಾನು ಆರಂಭದಲ್ಲಿ ಹಿಂಜರಿಯುತ್ತಿದ್ದರೂ, ನಾನು ರೇವತಿಯನ್ನು ತರಬೇತಿಗೆ ಹೋಗಲು ಅನುಮತಿಸಿದೆ. ಈಗ ನನ್ನ ಮೊಮ್ಮಗಳು  ಒಲಿಂಪಿಕ್ಸ್‌ಗೆ ಆಯ್ಕೆಯಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತದೆ. ಮತ್ತು ಅವಳ ಸಾಧನೆಗೆ ಕಾರಣವಾದ, ಮಾರ್ಗದರ್ಶನವನ್ನು ನೀಡಿದ ಕೋಚ್‌ಗೆ ನಾನು ಧನ್ಯವಾದ ಹೇಳುತ್ತೇನೆ”” ಎಂದು ರೇವತಿಯರ ಅಜ್ಜಿ ಕೆ.ಅರ್ಮಲ್‌ ಹಿಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ.

ಕೆ.ಅರ್ಮಲ್‌ ಅವರ ಹಿರಿಯ ಮೊಮ್ಮಗಳಾದ ರೇವತಿ, ಇಬ್ಬರು ಹೆಣ್ಣುಮಕ್ಕಳಲ್ಲಿ ಮೊದಲನೆಯವಳು   ಟವನ್ನು ಪಡೆಯುವುದು ತುಂಬಾ ಕಷ್ಟ, ಅವರ ಅಜ್ಜಿ, ಹುಡುಗಿಯರನ್ನು ಸರ್ಕಾರಿ ಹಾಸ್ಟೆಲ್ನಲ್ಲಿ ಬಿಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಅವರ ಎರಡನೆಯ ತರಗತಿಯಿಂದ ಹಿಡಿದು ಹನ್ನೆರಡನೇ ತರಗತಿ ಮುಗಿಸುವವರೆಗೆ, ಸಹೋದರಿಯರು ಹಾಸ್ಟೆಲ್‌ನಲ್ಲಿಯೇ ಉಳಿದು ತಮ್ಮ ಶಿಕ್ಷಣವನ್ನು ಮುಂದುವರೆಸಿದರು.

ಕಣ್ಣನ್ ಅವರೇ ರೇವತಿಯರಿಗೆ ಮುಂದೆ ತರಬೇತಿ ನೀಡಿದರು. ಆರ್ಥಿಕವಾಗಿ ರೇವತಿಯವರ ಬೆನ್ನೆಲುಬಾಗಿ ನಿಂತ ಕೋಚ್‌ ಕಣ್ಣನ್‌ ತಮ್ಮ  ಮನೆಯಲ್ಲಿ ರೇವತಿಯವರಿಗೆ ವಾಸಿಸಲು ಅವಕಾಶ ನೀಡಿ ಸ್ವಂತ ಮಗಳಂತೆ ನೋಡಿಕೊಂಡರು. ರೇವತಿಯ ಅಪಾರ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಅರಿತುಕೊಂಡ ಕೋಚ್‌ ಅವರು ಯುವ ಕ್ರೀಡಾಪಟು ಹೆಚ್ಚು ಶ್ರಮವಹಿಸಿ ಕ್ರೀಡೆಯಲ್ಲಿ ತಮ್ಮ ವೃತ್ತಿಜೀವನವನ್ನು ಮುಂದುವರೆಸಬೇಕೆಂದು ಒತ್ತಾಯಿಸಿದರು. ಕಣ್ಣನ್‌ ಅವರ ಸಹಾಯದಿಂದ ರೇವತಿ ಮಧುರೈನ ಲೇಡಿ ಡಾಕ್ ಕಾಲೇಜಿನಲ್ಲಿ ಪ್ರವೇಶ ಪಡೆದರು, ನಂತರ ಅಲ್ಲಿಯೇ ಅವರು ತರಬೇತಿ ಮುಂದುವರಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಭಿಕ್ಷೆ ಬೇಡುತ್ತಿದ್ದ, ಚಿಂದಿ ಆಯುತ್ತಿದ್ದ ಮಕ್ಕಳೀಗ ಕ್ರೀಡಾಪ್ರವೀಣರು!

ಅಲ್ಲಿಂದ ರೇವತಿ ಮತ್ತೆ ಹಿಂತಿರುಗಿ ನೋಡಲಿಲ್ಲ. 2016 ರಲ್ಲಿ ನಡೆದ ರಾಷ್ಟ್ರೀಯ ಜ್ಯನಿಯರ್‌ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ನಲ್ಲಿ 100 ಮೀ ಮತ್ತು 200 ಮೀ. ಎರಡರಲ್ಲೂ ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡರು. ನಂತರ ಸೀನಿಯರ್ ಶಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕವನ್ನು ಪಡೆದರು. ರೇವತಿಯವರ ಪ್ರತಿಭೆಗೆ ದೇಶದ ಅತ್ಯುನ್ನತ ಕ್ರೀಡಾ ತರಬೇತಿ ಸಂಸ್ಥೆ ಪಟಿಯಾಲಾದ ಭಾರತೀಯ ರಾಷ್ಟ್ರೀಯ ಅಥ್ಲೆಟಿಕ್‌ ಶಾಲೆಯಲ್ಲಿ ಅವಕಾಶ ದೊರೆಯಿತು

ನ್ಯಾಷನಲ್ ಕ್ಯಾಂಪ್‌ ನಲ್ಲಿ ಕೋಚ್ ಗಲಿನಾ ಬುಖಾರಿನಾ ಅವರ ಅಡಿಯಲ್ಲಿ ತರಬೇತಿ ಪಡೆದ ಅವರು ದೋಹಾದಲ್ಲಿ ನಡೆದ 2019 ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಿ 4×100 ಮೀಟರ್ ರಿಲೇಯಲ್ಲಿ 4 ನೇ ಸ್ಥಾನವನ್ನು ಗಳಿಸಿದರು. ಕೋಚ್‌ ಸಲಹೆಯ ಮೇರೆಗೆ,  ರೇವತಿ 100 ಮೀ ವಿಭಾಗವನ್ನು ಬಿಟ್ಟು 400 ಮೀ ವಿಭಾಗದಲ್ಲಿ ಸ್ಪರ್ಧಿಸ ತೊಡಗಿದರು. ಅದೇ ವರ್ಷ ಅವರಿಗೆ 4×400 ಮೀಟರ್ ರಿಲೇಯ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಅವಕಾಶ ದೊರೆಯಿತು.

2019 ರಲ್ಲಿ ಅವರು ದಕ್ಷಿಣ ರೈಲ್ವೆಯ ಮಧುರೈ ವಿಭಾಗದಲ್ಲಿ ಟಿಕೆಟ್ ಪರೀಕ್ಷಕರಾಗಿ ಉದ್ಯೋಗಕ್ಕೆ ಸೇರಿಕೊಂಡರು. ಅಜ್ಜಿ ಕೆ. ಅರ್ಮುಲ ಆರೋಗ್ಯ ಬಿಗಡಾಯಿಸಿದಾಗ ದೂರದ ಪಟಿಯಾಲದಲ್ಲಿದ್ದು ಅವರಿಗೆ ಸೂಕ್ತ ಚಿಕಿತ್ಸೆ ನೀಡುವುದು ಸಾಧ್ಯವಿರಲಿಲ್ಲ ಹಾಗಾಗಿ ಮಧುರೈನಲ್ಲಿ ರೈಲ್ವೆ ಕೆಲಸಕ್ಕೆ ಸೇರಿಕೊಂಡೆ ಎನ್ನುತ್ತಾರೆ ಯುವ ಕ್ರೀಡಾಪಟು ರೇವತಿ ವೀರಮಣಿ.

ಇದನ್ನೂ ಓದಿ:  ಒಲಂಪಿಕ್ಸ್‌ ಕ್ರೀಡಾಪಟು “ಹಿಮಾ‌ ದಾಸ್‌” ಅಸ್ಸಾಮ್ ಡಿಎಸ್ಪಿಯಾಗಿ ನೇಮಕ

2020 ರ ಅಂತ್ಯ ಮತ್ತು 2021 ರ ಆರಂಭ ರೇವತಿಯ ಕ್ರೀಡಾ ಜೀವನದ ಅತ್ಯಂತ ಕಠಿಣ ದಿನಗಳು. ಆದಿನಗಳಲ್ಲಿ ಅವರು ಅನುಭವಿಸಿದ ನೋವು ಮತ್‌ತು ಮಾನಸಿಕ ಖಿನ್ನತೆಯನ್ನು ರೇವತಿ ಈ ರೀತಿಯಾಗಿ ಹಂಚಿಕೊಳ್ಳುತ್ತಾರೆ.

2020 ರ ನವೆಂಬರ್‌ನಲ್ಲಿ ಮೊಣಕಾಲು ನೋವು ತೀವ್ರವಾಗಿ ಬಾಧಿಸಿತು. ನೋವು ಮತ್ತಷ್ಟು ಉಲ್ಬಣಗೊಂಡು ಒಂದು ದಿನ ಓಟವನ್ನೇ ನಿಲ್ಲಿಸಬೇಕೆಂದುಕೊಂಡೆ. ತಿಂಗಳುಗಳ ಕಾಲ ಟ್ರ್ಯಾಕ್‌ನಿಂದ ದೂರ ಉಳಿದೆ. 6 ತಿಂಗಳು ಬೆಡ್‌ ರೆಸ್ಟ್‌ನಲ್ಲಿದ್ದು  ಫಿಸಿಯೋ ಸಿಮೋನಿ ಷಾ ಅವರಿಂದ ಚಿಕಿತ್ಸೆ ಪಡೆದೆ. ನನ್ನ ಕ್ರೀಡಾ ಬದುಕಿನ ಅತ್ಯಂತ ಕಠಿಣ ದಿನಗಳು ಅವು. ಸುಮಾರು 6 ತಿಂಗಳ ನಂತರ  ಚೇತರಿಸಿಕೊಂಡು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದೆ. ಅಲ್ಲಿನ ಗೆಲುವು ನನಗೆ ಮರು ಜೀವ ನೀಡಿತು. ಒಲಂಪಿಕ್ ಅರ್ಹತಾ ಸ್ಪರ್ಧೆಯಲ್ಲಿ 400 ಮೀಟರ್‌ ಓಟವನ್ನು 53.55 ಸೆಕೆಂಡುಗಳಲ್ಲಿ ಮುಗಿಸಿದೆ. ಇದು ನನ್ನ ಇದುವರೆಗಿನ ಅತ್ಯುತ್ತ ದಾಖಲೆ. ಒಲಂಪಿಕ್ ಅರ್ಹತೆ ನನ್ನ ಜೀವನದ ಹಿಂದಿನ ದಿನಗಳ ಕಷ್ಟಗಳನ್ನು ಮರೆಸಿದೆ. ನನಗಿಂತಲೂ 76 ವರ್ಷ ವಯಸ್ಸಿನ ನನ್ನ ಅಜ್ಜಿ ಈ ಸಾಧನೆಯಿಂದ ಸಂತೋಷಗೊಂಡಿದ್ದಾರೆ.

ತಮ್ಮ ಕ್ರೀಡಾ ಜೀವನದ ಆರಂಭದಲ್ಲಿ ಇದ್ದ ಸೌಲಭ್ಯದ ಕೊರತೆ, ಆರ್ಥಿಕ ಬಡತನಗಳನ್ನು ಮೆಟ್ಟಿನಿಂತ ರೇವತಿ ಒಲಂಪಿಕ್‌ ಕ್ರೀಡಾಕೂಟದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿಸುವ ಸ್ಪೂರ್ತಿಯುತ ಮಾತನಾಡುತ್ತಾರೆ. ಪರಿಶ್ರಮದ ಹಿಂದೆ ಯಶಸ್ಸು ಹೇಗೆ ಬೆನ್ನತ್ತುತ್ತದೆ ಎಂಬುದಕ್ಕೆ ರೇವತಿ ವೀರಮಣಿ ಜೀವಂತ ಉದಾಹರಣೆ.

“ಈ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾಪಟುಗಳಿಗೆ ಪ್ರತ್ಯೇಕ ಹಾಸ್ಟೆಲ್‌ಗಳಿವೆ, ತರಬೇತಿ ಮತ್ತು ಶಾಲಾ ಶಿಕ್ಷಣವು ಉಚಿತವಾಗಿದೆ ಮತ್ತು  ಸರ್ಕಾರವೇ ಎಲ್ಲವನ್ನೂ ನೋಡಿಕೊಳ್ಳುತ್ತದೆ. ನಮ್ಮ ದಿನಗಳಲ್ಲಿ, ಈ ಬಗ್ಗೆ ನಮಗೆ ಹೆಚ್ಚು ತಿಳಿದಿರಲಿಲ್ಲ. ನಮ್ಮ ಸಾಮರ್ಥ್ಯದ ಪೂರ್ಣ ಪ್ರಮಾಣದಲ್ಲಿ ಪ್ರದರ್ಶನ ನೀಡುವುದು  ಅತ್ಯಂತ ಮುಖ್ಯವಾದ ಭಾಗವಾಗಿದೆ – ಪರಿಶ್ರಮದ ಹಿಂದೆ ಪ್ರಾಯೋಜಕರು, ತರಬೇತಿ ಮತ್ತು ಬೆಂಬಲ ಸೌಲಭ್ಯಗಳೆಲ್ಲವೂ ಅನುಸರಿಸುತ್ತವೆ ”, ಎಂದು ರೇವತಿ ಅಭಿಪ್ರಾಯಪಡುತ್ತಾರೆ.

23 ವರ್ಷದ ರೇವತಿ ವೀರಮಣಿ ಜುಲೈ 26 ರಿಂದ ಆರಂಭವಾಗುವ ಟೋಕಿಯೊ ಒಲಂಪಿಕನಲ್ಲಿ ದೇಶವನ್ನು ಪ್ರತಿನಿಧಿಸಿ ಚಿನ್ನದ ಪದಕವನ್ನು ಗೆದ್ದು ಬರಲಿ ಎಂಬುದೊಂದೇ ನಮ್ಮ ಹಾರೈಕೆ. ಬಡತನದ ಬೆಂಕಿಯಲ್ಲಿ ಬೆಂದು, ಕುಟುಂಬಕ್ಕಾಗಿ ರೈಲ್ವೆಯಲ್ಲಿ ಕೆಲಸಮಾಡುತ್ತ ಒಲಂಪಿಕ್‌ಗೆ ಅವಕಾಶ ಗಿಟ್ಟಿಸಿದ 23 ವರ್ಷದ ರೇವತಿ ವೀರಮಣಿ ಅವರ ಬದುಕು ಮತ್ತು ಸಾಧನೆ ನಮ್ಮೆಲ್ಲರಿಗೂ ಸ್ಪೂರ್ತಿಯಾಗಲಿ.  ಹೆಚ್ಚು ಹೆಚ್ಚು ಕ್ರೀಡಾಪಟುಗಳು ಒಲಂಪಿಕ್ ಅಂಗಳದಲ್ಲಿ ದೇಶವನ್ನು ಪ್ರತಿನಿಧಿಸಿ ಪದಕವನ್ನು ಗೆದ್ದು ಬರಲಿ.

-ರಾಜೇಶ್ ಹೆಬ್ಬಾರ್

ಇದನ್ನೂ ಓದಿ:  ಭತ್ತದ ಗದ್ದೆಯಿಂದ ವಿಶ್ವ ಅಥ್ಲೆಟಿಕ್ಸ್‌ವರೆಗೆ ಓಡಿದ ಚಿನ್ನದ ಹುಡುಗಿ ಹಿಮಾ ದಾಸ್ ಬಗ್ಗೆ ನಿಮಗೆ ಗೊತ್ತೆ?

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....