Homeಮುಖಪುಟ‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

- Advertisement -
- Advertisement -

1991ರಲ್ಲಿ ಭಾರತ ಸರ್ಕಾರ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣಕ್ಕೆ ತೆರೆದುಕೊಂಡ ಬಳಿಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಜಾಗದಲ್ಲಿ ಖಾಸಗಿಯವರು ಆಕ್ರಮಿಸಿಕೊಳ್ಳುತ್ತಾ, ಹೇಗೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿಕೊಂಡಿದ್ದಾರೆ ಎಂಬುದನ್ನು ‘ಕಮರ್ಷಿಯಲ್‌’ ಎಲಿಮೆಂಟ್‌ಗಳೊಂದಿಗೆ ಹೇಳುವ ಸಿನಿಮಾ ‘ವಾತಿ’ (ತಮಿಳು). ‘ವೆಂಕಿ ಅತ್ಲುರಿ’ ನಿರ್ದೇಶನದ ಈ ಸಿನಿಮಾ ತಮಿಳು ಮತ್ತು ತೆಲುಗು (ಸರ್‌)- ಎರಡು ಭಾಷೆಯಲ್ಲೂ ಬಿಡುಗಡೆಯಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಭಾಗವಾಗಿದ್ದ ಮಾಸ್ಟರ್‌‌ (ವಾತಿ) ಬಾಲ ಮುರುಗನ್‌ (ಧನುಷ್‌), ಸರ್ಕಾರದ ನೀತಿಗಳ ಫಲವಾಗಿ ಅನುದಾನಿತ ಸರ್ಕಾರಿ ಶಾಲೆಯೊಂದಕ್ಕೆ ನೇಮಕವಾಗುತ್ತಾನೆ. ತಾನು ನಂಬಿದ್ದ ತಿರುಪತಿ (ಸಮುದ್ರಕನಿ) ನಡೆಸುತ್ತಿರುವ ಶಿಕ್ಷಣ ಮಾಫಿಯಾವನ್ನು ಅರ್ಥಮಾಡಿಕೊಂಡು ಆ ನಂತರ ಆತನ ವಿರುದ್ಧ ಸಿಡಿದೇಳುತ್ತೇನೆ. ಮುಂದೇನಾಗುತ್ತಾನೆ ಎಂಬುದೇ ಇಲ್ಲಿನ ಕತೆ.

2022ರ ಕಾಲಘಟ್ಟದಲ್ಲಿ ಕತೆ ಆರಂಭವಾದರೂ, 90ರ ದಶಕಕ್ಕೆ ಜಾರುತ್ತದೆ. ಬಾಲ ಮುರುಗನ್‌ ಎಂಬ ಮೇಷ್ಟ್ರ ಜೀವನಗಾಥೆ ಎಳೆಎಳೆಯಾಗಿ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ.

ಮುರುಗನ್‌ ಶಿಕ್ಷಕನಾಗಿ ಬಂದಿರುವ ಆ ಗ್ರಾಮದಲ್ಲಿ ಶಿಕ್ಷಣವೆಂಬುದು ಮರೀಚಿಕೆ. ಇಲ್ಲಿನ ಎಲ್ಲ ಜನಕ್ಕೂ ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ತಾತ್ಸಾರವಿದೆ. ಅವರದ್ದೇ ಆದ ಜಂಜಾಟಗಳಲ್ಲಿರುವ ಜನರು ಮಕ್ಕಳನ್ನು ದುಡಿಮೆಗೆ ದೂಡಿದ್ದಾರೆ. ಇಲ್ಲಿನ ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವ ನಿಟ್ಟಿನಲ್ಲಿ ಮೇಷ್ಟ್ರು ಪಣತೊಡುತ್ತಾನೆ. ಇದು ಸಿನಿಮಾ ಭಾಷೆಯ ಮಿತಿಗಳನ್ನು ಮೀರಿ ಹೆಚ್ಚಿನ ಕಮರ್ಷಿಯಲ್ ಆಯಾಮಗಳೊಂದಿಗೆ ಚಿತ್ರಿತವಾಗಿರುವುದು ಭಾರವೆನಿಸುತ್ತದೆ. ಅತಿಯಾದ ವೈಭವೀಕರಣಕ್ಕೆ ಒತ್ತು ನೀಡಿರುವುದು ಅನಗತ್ಯವೆನಿಸುತ್ತದೆ. ಕೆಳ ಮಧ್ಯಮವರ್ಗದವನ್ನು ಕೇಂದ್ರೀಕರಿಸಿದ್ದರೂ ಇಡೀ ಗ್ರಾಮವೇ ಫ್ಯೂಡಲ್ ವ್ಯವಸ್ಥೆಯನ್ನು ಒಪ್ಪಿಕೊಂಡು, ಅದರಂತೆಯೇ ಜೀವಿಸುತ್ತಿರುವುದಾಗಿ ಚಿತ್ರಿಸಲಾಗಿದೆ. ಶಿಕ್ಷಣ ಮಾಫಿಯಾದೊಂದಿಗೆ ಕೈಜೋಡಿಸಿರುವ ಗ್ರಾಮದ ಅಧ್ಯಕ್ಷನು ಮೇಷ್ಟ್ರಿಗೆ ತೊಂದರೆ ಕೊಡುವುದು, ಸರ್ಕಾರಿ ಶಾಲೆಗೆ ಒಳ್ಳೆಯ ಅಂಕಗಳು ಬಂದರೆ ಖಾಸಗಿ ಸಂಸ್ಥೆಗಳಿಗೆ ಧಕ್ಕೆಯಾಗುತ್ತದೆ ಎಂದು ಖಾಸಗೀ ಮಾಫಿಯಾಗಳು ಶಿಕ್ಷಕನ ಮೇಲೆ ದಾಳಿ ಮಾಡುವುದು, ಮೆಚ್ಚಿನ ಮೇಷ್ಟ್ರು ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಊರು ಬಿಟ್ಟು ಹೊರಡುವಾಗ ಇಡೀ ಊರಿನ ಮಕ್ಕಳೆಲ್ಲ ಅವರ ಹಿಂದೆ ನಡೆದು ಬಂದು, ಬಸ್ಸು ಹತ್ತಿಸುವುದು- ಇವೆಲ್ಲವೂ ತೀವ್ರ ಭಾವಕತೆಯನ್ನು ಹೊತ್ತು, ಒಂದು ಗೆರೆ ದಾಟಿದೆ ಎನ್ನುವಷ್ಟರ ಮಟ್ಟಿಗೆ ಅತಿಯಾಗಿವೆ. ಇಂತಹ ಎಳೆಗಳನ್ನು ಕೊಂಚ ಕಡಿಮೆ ಮಾಡಬಹುದಿತ್ತು ಎನಿಸುತ್ತದೆ.

ಹೃತಿಕ್ ರೋಷನ್ ಅಭಿನಯದ ‘ಸೂಪರ್ 30’ ಸಿನಿಮಾದ ಛಾಯೆ ‘ವಾತಿ’ಯಲ್ಲೂ ಇದೆ. 30 ಬಡ ಮಕ್ಕಳು ಐಐಟಿ ಪ್ರವೇಶ ಪರೀಕ್ಷೆಯನ್ನು ಪಾಸ್‌ ಮಾಡುವಂತೆ ಗಣಿತ ಶಿಕ್ಷಕ ಆನಂದ್‌ ತರಬೇತಿ ನೀಡುತ್ತಾರೆಂಬ ಕತೆಯನ್ನು ‘ಸೂಪರ್‌ 30’  ಒಳಗೊಂಡಿದೆ. ಇಲ್ಲೂ ಅದೇ ಮಾದರಿ ಕಂಡು ಬರುತ್ತದೆ. ‘ವಾದಿ’ ಸಿನಿಮಾದಲ್ಲಿನ ಮೇಷ್ಟ್ರು ಕೂಡ ‘ಗಣಿತ ಶಿಕ್ಷಕ!’. ಆದರೆ ಸೂಪರ್‌ 30ಯಷ್ಟು ತೀವ್ರತೆ ‘ವಾದಿ’ಯಲ್ಲಿ ಇಲ್ಲವಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರನ್ನು ‘ಕಸ್ಟಮರ್ಸ್’ (ಗ್ರಾಹಕರು) ಎಂದು ನಮೂದಿಸಿ ಖಾಸಗಿ ಮಾಫಿಯಾದ ಪ್ರತಿನಿಧಿ ಮಾತನಾಡುತ್ತಾನೆ. ಇದು ವಾಸ್ತವಕ್ಕೆ ಹತ್ತಿರವಾಗಿದೆ. ಶಿಕ್ಷಣ ದಂಧೆಕೋರರ ಕಣ್ಣಿಗೆ ಮಕ್ಕಳು ಮತ್ತು ಪೋಷಕರು ಗ್ರಾಹಕರೇ ತಾನೆ?

ಪ್ರವೇಶ ಪರೀಕ್ಷೆಗಳಿಂದಾಗಿ ತಲೆ ಎತ್ತಿರುವ ‘ಕೋಚಿಂಗ್ ಸೆಂಟರ್‌ ಮಾಫಿಯಾ’ಗಳ ಕುರಿತು ‘ವಾತಿ’ ಸ್ಪಷ್ಟವಾಗಿ ಮಾತನಾಡಿದೆ. ಕಳೆದ ವರ್ಷ ನಡೆದ ಘಟನೆ. ನೀಟ್‌ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ, ಈ ಟಾಪರ್‌ಗಳೆಲ್ಲ ನಮ್ಮಲ್ಲಿ ತರಬೇತಿ ಪಡೆದಿದ್ದಾರೆ ಎಂದು ವಿವಿಧ ಕೋಚಿಂಗ್ ಸೆಂಟರ್‌ಗಳು ಜಾಹೀರಾತು ಪ್ರಕಟಿಸಿದ್ದು ಸುದ್ದಿಯಾಗಿತ್ತಲ್ಲವೇ? ಟಾಪರ್‌ಗಳನ್ನು ನಾವು ಸೃಷ್ಟಿ ಮಾಡುತ್ತೇವೆ ಎಂದು ತೋರಿಸಿಕೊಂಡು ಪೋಷಕರನ್ನು ನಂಬಿಸುವುದು ಈ ಜಾಹೀರಾತುಗಳ ಹಿಂದಿನ ಜಾಲ. ‘ವಾತಿ’ ಕೂಡ ಈ ದಂಧೆಯ ಕುರಿತು ಸುಳಿವನ್ನು ನೀಡಿದೆ. ಜಾಹೀರಾತುಗಳಿಗೆ ಮರುಳಾಗಬೇಡಿ ಎಂದು ಸಂದೇಶ ನೀಡಿದೆ. ಜನಪ್ರತಿನಿಧಿಗಳು ಮತ್ತು ಕಾರ್ಪೊರೆಟ್ ಶಕ್ತಿಗಳ ನಡುವಿನ ಆತ್ಮೀಯ ಸಂಬಂಧಗಳಿಂದಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಮೂರಾಬಟ್ಟೆಯಾಗುತ್ತಿರುವುದನ್ನು ತನ್ನೆಲ್ಲ ಮಿತಿಗಳ ನಡುವೆ ‘ವಾತಿ’ ಚರ್ಚಿಸಿದೆ. ತಾರತಮ್ಯದ ಭಾವನೆಗಳು ಮಕ್ಕಳಲ್ಲಿ ಮೊಳೆಯದಂತೆ ಅರಿವು ಮೂಡಿಸುವ ಕರ್ತವ್ಯ ಶಿಕ್ಷಕರ ಮೇಲಿದೆ ಎಂಬುದನ್ನು ಸ್ಪಷ್ಟವಾಗಿ ದಾಟಿಸಿದೆ.

ಇದನ್ನೂ ಓದಿರಿ: ಗೌರಿ ಸಾಕ್ಷ್ಯಚಿತ್ರ; ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಬೇಕಾದ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ ಸಿನಿಮಾ

ಸಹ ಶಿಕ್ಷಕಿ ಮೀನಾಕ್ಷಿ (ಸಂಯುಕ್ತ ಮೆನಾನ್‌) ಪಾತ್ರಕ್ಕೆ ಹೆಚ್ಚಿನ ಸ್ಪೇಸ್ ಇಲ್ಲ. ‘ಗಂಡಿಗೊಂದು ಹೆಣ್ಣು’ ಎಂಬ ಸಿದ್ಧ ಮಾದರಿ ಮಸಾಲೆ ಫಾರ್‍ಮುಲಾಕ್ಕಾಗಿ ನಾಯಕ ನಟಿಯ ಪಾತ್ರ ಬಂದಿದೆ ಎನಿಸುತ್ತದೆ. ಕತೆಯ ಕೇಂದ್ರಬಿಂದುವಿನೊಳಗೆ ಮೀನಾಕ್ಷಿ ಪಾತ್ರವನ್ನು ಕಟ್ಟುವ ಪ್ರಯತ್ನ ಮಾಡಿದ್ದರೂ ಅದು ಮೂರರಲ್ಲಿ ಮತ್ತೊಂದು ಆಗಿದೆಯಷ್ಟೇ. ಆದರೆ ಇಡೀ ಸಿನಿಮಾ ‘ಧನುಷ್‌’ ಕೇಂದ್ರಿತವಾಗಿ ಸಾಗುತ್ತದೆ.

ಸಾಯಿಕುಮಾರ್‌, ಸಮುದ್ರಕನಿ, ತನಿಕೆಲ್ಲ ಭರಣಿ, ಕೇನ್‌ ಕರುಣನ್‌ ಮೊದಲಾದವರ ಅಭಿನಯ ಮನೋಜ್ಞವಾಗಿದೆ. ಜಿ.ವಿ.ಪ್ರಕಾಶ್ ಕುಮಾರ್‌ ಅವರ ಸಂಗೀತವು ಸಿನಿಮಾದ ಕೆಲವು ಕೊರತೆಗಳನ್ನು ನೀಗಿಸಿದೆ. ಖಾಸಗಿ ಶಿಕ್ಷಣ ಮಾಫಿಯಾದ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕನ್ನಡದಲ್ಲಿ ‘ಕ್ರಾಂತಿ’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಕಮರ್ಷಿಯಲ್‌ ಎಳೆಗಳನ್ನು ಕೊಂಚ ಕಡಿಮೆಯಾಗಿಸಿ, ಕತೆಯ ಆಶಯಗಳ ಮೇಲೆ ಹೆಚ್ಚು ಕೇಂದ್ರೀಕೃತಗೊಳಿಸಿ ‘ಖಾಸಗಿ ಶಿಕ್ಷಣ ಮಾಫಿಯಾ’ ಕುರಿತು ಮತ್ತಷ್ಟು ಪರಿಣಾಮಕಾರಿ ಸಿನಿಮಾಗಳು ನಿರ್ಮಾಣವಾಗುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...