Homeಮುಖಪುಟ‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

- Advertisement -
- Advertisement -

1991ರಲ್ಲಿ ಭಾರತ ಸರ್ಕಾರ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣಕ್ಕೆ ತೆರೆದುಕೊಂಡ ಬಳಿಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಜಾಗದಲ್ಲಿ ಖಾಸಗಿಯವರು ಆಕ್ರಮಿಸಿಕೊಳ್ಳುತ್ತಾ, ಹೇಗೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿಕೊಂಡಿದ್ದಾರೆ ಎಂಬುದನ್ನು ‘ಕಮರ್ಷಿಯಲ್‌’ ಎಲಿಮೆಂಟ್‌ಗಳೊಂದಿಗೆ ಹೇಳುವ ಸಿನಿಮಾ ‘ವಾತಿ’ (ತಮಿಳು). ‘ವೆಂಕಿ ಅತ್ಲುರಿ’ ನಿರ್ದೇಶನದ ಈ ಸಿನಿಮಾ ತಮಿಳು ಮತ್ತು ತೆಲುಗು (ಸರ್‌)- ಎರಡು ಭಾಷೆಯಲ್ಲೂ ಬಿಡುಗಡೆಯಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಭಾಗವಾಗಿದ್ದ ಮಾಸ್ಟರ್‌‌ (ವಾತಿ) ಬಾಲ ಮುರುಗನ್‌ (ಧನುಷ್‌), ಸರ್ಕಾರದ ನೀತಿಗಳ ಫಲವಾಗಿ ಅನುದಾನಿತ ಸರ್ಕಾರಿ ಶಾಲೆಯೊಂದಕ್ಕೆ ನೇಮಕವಾಗುತ್ತಾನೆ. ತಾನು ನಂಬಿದ್ದ ತಿರುಪತಿ (ಸಮುದ್ರಕನಿ) ನಡೆಸುತ್ತಿರುವ ಶಿಕ್ಷಣ ಮಾಫಿಯಾವನ್ನು ಅರ್ಥಮಾಡಿಕೊಂಡು ಆ ನಂತರ ಆತನ ವಿರುದ್ಧ ಸಿಡಿದೇಳುತ್ತೇನೆ. ಮುಂದೇನಾಗುತ್ತಾನೆ ಎಂಬುದೇ ಇಲ್ಲಿನ ಕತೆ.

2022ರ ಕಾಲಘಟ್ಟದಲ್ಲಿ ಕತೆ ಆರಂಭವಾದರೂ, 90ರ ದಶಕಕ್ಕೆ ಜಾರುತ್ತದೆ. ಬಾಲ ಮುರುಗನ್‌ ಎಂಬ ಮೇಷ್ಟ್ರ ಜೀವನಗಾಥೆ ಎಳೆಎಳೆಯಾಗಿ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ.

ಮುರುಗನ್‌ ಶಿಕ್ಷಕನಾಗಿ ಬಂದಿರುವ ಆ ಗ್ರಾಮದಲ್ಲಿ ಶಿಕ್ಷಣವೆಂಬುದು ಮರೀಚಿಕೆ. ಇಲ್ಲಿನ ಎಲ್ಲ ಜನಕ್ಕೂ ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ತಾತ್ಸಾರವಿದೆ. ಅವರದ್ದೇ ಆದ ಜಂಜಾಟಗಳಲ್ಲಿರುವ ಜನರು ಮಕ್ಕಳನ್ನು ದುಡಿಮೆಗೆ ದೂಡಿದ್ದಾರೆ. ಇಲ್ಲಿನ ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವ ನಿಟ್ಟಿನಲ್ಲಿ ಮೇಷ್ಟ್ರು ಪಣತೊಡುತ್ತಾನೆ. ಇದು ಸಿನಿಮಾ ಭಾಷೆಯ ಮಿತಿಗಳನ್ನು ಮೀರಿ ಹೆಚ್ಚಿನ ಕಮರ್ಷಿಯಲ್ ಆಯಾಮಗಳೊಂದಿಗೆ ಚಿತ್ರಿತವಾಗಿರುವುದು ಭಾರವೆನಿಸುತ್ತದೆ. ಅತಿಯಾದ ವೈಭವೀಕರಣಕ್ಕೆ ಒತ್ತು ನೀಡಿರುವುದು ಅನಗತ್ಯವೆನಿಸುತ್ತದೆ. ಕೆಳ ಮಧ್ಯಮವರ್ಗದವನ್ನು ಕೇಂದ್ರೀಕರಿಸಿದ್ದರೂ ಇಡೀ ಗ್ರಾಮವೇ ಫ್ಯೂಡಲ್ ವ್ಯವಸ್ಥೆಯನ್ನು ಒಪ್ಪಿಕೊಂಡು, ಅದರಂತೆಯೇ ಜೀವಿಸುತ್ತಿರುವುದಾಗಿ ಚಿತ್ರಿಸಲಾಗಿದೆ. ಶಿಕ್ಷಣ ಮಾಫಿಯಾದೊಂದಿಗೆ ಕೈಜೋಡಿಸಿರುವ ಗ್ರಾಮದ ಅಧ್ಯಕ್ಷನು ಮೇಷ್ಟ್ರಿಗೆ ತೊಂದರೆ ಕೊಡುವುದು, ಸರ್ಕಾರಿ ಶಾಲೆಗೆ ಒಳ್ಳೆಯ ಅಂಕಗಳು ಬಂದರೆ ಖಾಸಗಿ ಸಂಸ್ಥೆಗಳಿಗೆ ಧಕ್ಕೆಯಾಗುತ್ತದೆ ಎಂದು ಖಾಸಗೀ ಮಾಫಿಯಾಗಳು ಶಿಕ್ಷಕನ ಮೇಲೆ ದಾಳಿ ಮಾಡುವುದು, ಮೆಚ್ಚಿನ ಮೇಷ್ಟ್ರು ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಊರು ಬಿಟ್ಟು ಹೊರಡುವಾಗ ಇಡೀ ಊರಿನ ಮಕ್ಕಳೆಲ್ಲ ಅವರ ಹಿಂದೆ ನಡೆದು ಬಂದು, ಬಸ್ಸು ಹತ್ತಿಸುವುದು- ಇವೆಲ್ಲವೂ ತೀವ್ರ ಭಾವಕತೆಯನ್ನು ಹೊತ್ತು, ಒಂದು ಗೆರೆ ದಾಟಿದೆ ಎನ್ನುವಷ್ಟರ ಮಟ್ಟಿಗೆ ಅತಿಯಾಗಿವೆ. ಇಂತಹ ಎಳೆಗಳನ್ನು ಕೊಂಚ ಕಡಿಮೆ ಮಾಡಬಹುದಿತ್ತು ಎನಿಸುತ್ತದೆ.

ಹೃತಿಕ್ ರೋಷನ್ ಅಭಿನಯದ ‘ಸೂಪರ್ 30’ ಸಿನಿಮಾದ ಛಾಯೆ ‘ವಾತಿ’ಯಲ್ಲೂ ಇದೆ. 30 ಬಡ ಮಕ್ಕಳು ಐಐಟಿ ಪ್ರವೇಶ ಪರೀಕ್ಷೆಯನ್ನು ಪಾಸ್‌ ಮಾಡುವಂತೆ ಗಣಿತ ಶಿಕ್ಷಕ ಆನಂದ್‌ ತರಬೇತಿ ನೀಡುತ್ತಾರೆಂಬ ಕತೆಯನ್ನು ‘ಸೂಪರ್‌ 30’  ಒಳಗೊಂಡಿದೆ. ಇಲ್ಲೂ ಅದೇ ಮಾದರಿ ಕಂಡು ಬರುತ್ತದೆ. ‘ವಾದಿ’ ಸಿನಿಮಾದಲ್ಲಿನ ಮೇಷ್ಟ್ರು ಕೂಡ ‘ಗಣಿತ ಶಿಕ್ಷಕ!’. ಆದರೆ ಸೂಪರ್‌ 30ಯಷ್ಟು ತೀವ್ರತೆ ‘ವಾದಿ’ಯಲ್ಲಿ ಇಲ್ಲವಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರನ್ನು ‘ಕಸ್ಟಮರ್ಸ್’ (ಗ್ರಾಹಕರು) ಎಂದು ನಮೂದಿಸಿ ಖಾಸಗಿ ಮಾಫಿಯಾದ ಪ್ರತಿನಿಧಿ ಮಾತನಾಡುತ್ತಾನೆ. ಇದು ವಾಸ್ತವಕ್ಕೆ ಹತ್ತಿರವಾಗಿದೆ. ಶಿಕ್ಷಣ ದಂಧೆಕೋರರ ಕಣ್ಣಿಗೆ ಮಕ್ಕಳು ಮತ್ತು ಪೋಷಕರು ಗ್ರಾಹಕರೇ ತಾನೆ?

ಪ್ರವೇಶ ಪರೀಕ್ಷೆಗಳಿಂದಾಗಿ ತಲೆ ಎತ್ತಿರುವ ‘ಕೋಚಿಂಗ್ ಸೆಂಟರ್‌ ಮಾಫಿಯಾ’ಗಳ ಕುರಿತು ‘ವಾತಿ’ ಸ್ಪಷ್ಟವಾಗಿ ಮಾತನಾಡಿದೆ. ಕಳೆದ ವರ್ಷ ನಡೆದ ಘಟನೆ. ನೀಟ್‌ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ, ಈ ಟಾಪರ್‌ಗಳೆಲ್ಲ ನಮ್ಮಲ್ಲಿ ತರಬೇತಿ ಪಡೆದಿದ್ದಾರೆ ಎಂದು ವಿವಿಧ ಕೋಚಿಂಗ್ ಸೆಂಟರ್‌ಗಳು ಜಾಹೀರಾತು ಪ್ರಕಟಿಸಿದ್ದು ಸುದ್ದಿಯಾಗಿತ್ತಲ್ಲವೇ? ಟಾಪರ್‌ಗಳನ್ನು ನಾವು ಸೃಷ್ಟಿ ಮಾಡುತ್ತೇವೆ ಎಂದು ತೋರಿಸಿಕೊಂಡು ಪೋಷಕರನ್ನು ನಂಬಿಸುವುದು ಈ ಜಾಹೀರಾತುಗಳ ಹಿಂದಿನ ಜಾಲ. ‘ವಾತಿ’ ಕೂಡ ಈ ದಂಧೆಯ ಕುರಿತು ಸುಳಿವನ್ನು ನೀಡಿದೆ. ಜಾಹೀರಾತುಗಳಿಗೆ ಮರುಳಾಗಬೇಡಿ ಎಂದು ಸಂದೇಶ ನೀಡಿದೆ. ಜನಪ್ರತಿನಿಧಿಗಳು ಮತ್ತು ಕಾರ್ಪೊರೆಟ್ ಶಕ್ತಿಗಳ ನಡುವಿನ ಆತ್ಮೀಯ ಸಂಬಂಧಗಳಿಂದಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಮೂರಾಬಟ್ಟೆಯಾಗುತ್ತಿರುವುದನ್ನು ತನ್ನೆಲ್ಲ ಮಿತಿಗಳ ನಡುವೆ ‘ವಾತಿ’ ಚರ್ಚಿಸಿದೆ. ತಾರತಮ್ಯದ ಭಾವನೆಗಳು ಮಕ್ಕಳಲ್ಲಿ ಮೊಳೆಯದಂತೆ ಅರಿವು ಮೂಡಿಸುವ ಕರ್ತವ್ಯ ಶಿಕ್ಷಕರ ಮೇಲಿದೆ ಎಂಬುದನ್ನು ಸ್ಪಷ್ಟವಾಗಿ ದಾಟಿಸಿದೆ.

ಇದನ್ನೂ ಓದಿರಿ: ಗೌರಿ ಸಾಕ್ಷ್ಯಚಿತ್ರ; ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಬೇಕಾದ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ ಸಿನಿಮಾ

ಸಹ ಶಿಕ್ಷಕಿ ಮೀನಾಕ್ಷಿ (ಸಂಯುಕ್ತ ಮೆನಾನ್‌) ಪಾತ್ರಕ್ಕೆ ಹೆಚ್ಚಿನ ಸ್ಪೇಸ್ ಇಲ್ಲ. ‘ಗಂಡಿಗೊಂದು ಹೆಣ್ಣು’ ಎಂಬ ಸಿದ್ಧ ಮಾದರಿ ಮಸಾಲೆ ಫಾರ್‍ಮುಲಾಕ್ಕಾಗಿ ನಾಯಕ ನಟಿಯ ಪಾತ್ರ ಬಂದಿದೆ ಎನಿಸುತ್ತದೆ. ಕತೆಯ ಕೇಂದ್ರಬಿಂದುವಿನೊಳಗೆ ಮೀನಾಕ್ಷಿ ಪಾತ್ರವನ್ನು ಕಟ್ಟುವ ಪ್ರಯತ್ನ ಮಾಡಿದ್ದರೂ ಅದು ಮೂರರಲ್ಲಿ ಮತ್ತೊಂದು ಆಗಿದೆಯಷ್ಟೇ. ಆದರೆ ಇಡೀ ಸಿನಿಮಾ ‘ಧನುಷ್‌’ ಕೇಂದ್ರಿತವಾಗಿ ಸಾಗುತ್ತದೆ.

ಸಾಯಿಕುಮಾರ್‌, ಸಮುದ್ರಕನಿ, ತನಿಕೆಲ್ಲ ಭರಣಿ, ಕೇನ್‌ ಕರುಣನ್‌ ಮೊದಲಾದವರ ಅಭಿನಯ ಮನೋಜ್ಞವಾಗಿದೆ. ಜಿ.ವಿ.ಪ್ರಕಾಶ್ ಕುಮಾರ್‌ ಅವರ ಸಂಗೀತವು ಸಿನಿಮಾದ ಕೆಲವು ಕೊರತೆಗಳನ್ನು ನೀಗಿಸಿದೆ. ಖಾಸಗಿ ಶಿಕ್ಷಣ ಮಾಫಿಯಾದ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕನ್ನಡದಲ್ಲಿ ‘ಕ್ರಾಂತಿ’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಕಮರ್ಷಿಯಲ್‌ ಎಳೆಗಳನ್ನು ಕೊಂಚ ಕಡಿಮೆಯಾಗಿಸಿ, ಕತೆಯ ಆಶಯಗಳ ಮೇಲೆ ಹೆಚ್ಚು ಕೇಂದ್ರೀಕೃತಗೊಳಿಸಿ ‘ಖಾಸಗಿ ಶಿಕ್ಷಣ ಮಾಫಿಯಾ’ ಕುರಿತು ಮತ್ತಷ್ಟು ಪರಿಣಾಮಕಾರಿ ಸಿನಿಮಾಗಳು ನಿರ್ಮಾಣವಾಗುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...