Homeಮುಖಪುಟ‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

- Advertisement -
- Advertisement -

1991ರಲ್ಲಿ ಭಾರತ ಸರ್ಕಾರ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣಕ್ಕೆ ತೆರೆದುಕೊಂಡ ಬಳಿಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಜಾಗದಲ್ಲಿ ಖಾಸಗಿಯವರು ಆಕ್ರಮಿಸಿಕೊಳ್ಳುತ್ತಾ, ಹೇಗೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿಕೊಂಡಿದ್ದಾರೆ ಎಂಬುದನ್ನು ‘ಕಮರ್ಷಿಯಲ್‌’ ಎಲಿಮೆಂಟ್‌ಗಳೊಂದಿಗೆ ಹೇಳುವ ಸಿನಿಮಾ ‘ವಾತಿ’ (ತಮಿಳು). ‘ವೆಂಕಿ ಅತ್ಲುರಿ’ ನಿರ್ದೇಶನದ ಈ ಸಿನಿಮಾ ತಮಿಳು ಮತ್ತು ತೆಲುಗು (ಸರ್‌)- ಎರಡು ಭಾಷೆಯಲ್ಲೂ ಬಿಡುಗಡೆಯಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಭಾಗವಾಗಿದ್ದ ಮಾಸ್ಟರ್‌‌ (ವಾತಿ) ಬಾಲ ಮುರುಗನ್‌ (ಧನುಷ್‌), ಸರ್ಕಾರದ ನೀತಿಗಳ ಫಲವಾಗಿ ಅನುದಾನಿತ ಸರ್ಕಾರಿ ಶಾಲೆಯೊಂದಕ್ಕೆ ನೇಮಕವಾಗುತ್ತಾನೆ. ತಾನು ನಂಬಿದ್ದ ತಿರುಪತಿ (ಸಮುದ್ರಕನಿ) ನಡೆಸುತ್ತಿರುವ ಶಿಕ್ಷಣ ಮಾಫಿಯಾವನ್ನು ಅರ್ಥಮಾಡಿಕೊಂಡು ಆ ನಂತರ ಆತನ ವಿರುದ್ಧ ಸಿಡಿದೇಳುತ್ತೇನೆ. ಮುಂದೇನಾಗುತ್ತಾನೆ ಎಂಬುದೇ ಇಲ್ಲಿನ ಕತೆ.

2022ರ ಕಾಲಘಟ್ಟದಲ್ಲಿ ಕತೆ ಆರಂಭವಾದರೂ, 90ರ ದಶಕಕ್ಕೆ ಜಾರುತ್ತದೆ. ಬಾಲ ಮುರುಗನ್‌ ಎಂಬ ಮೇಷ್ಟ್ರ ಜೀವನಗಾಥೆ ಎಳೆಎಳೆಯಾಗಿ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ.

ಮುರುಗನ್‌ ಶಿಕ್ಷಕನಾಗಿ ಬಂದಿರುವ ಆ ಗ್ರಾಮದಲ್ಲಿ ಶಿಕ್ಷಣವೆಂಬುದು ಮರೀಚಿಕೆ. ಇಲ್ಲಿನ ಎಲ್ಲ ಜನಕ್ಕೂ ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ತಾತ್ಸಾರವಿದೆ. ಅವರದ್ದೇ ಆದ ಜಂಜಾಟಗಳಲ್ಲಿರುವ ಜನರು ಮಕ್ಕಳನ್ನು ದುಡಿಮೆಗೆ ದೂಡಿದ್ದಾರೆ. ಇಲ್ಲಿನ ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವ ನಿಟ್ಟಿನಲ್ಲಿ ಮೇಷ್ಟ್ರು ಪಣತೊಡುತ್ತಾನೆ. ಇದು ಸಿನಿಮಾ ಭಾಷೆಯ ಮಿತಿಗಳನ್ನು ಮೀರಿ ಹೆಚ್ಚಿನ ಕಮರ್ಷಿಯಲ್ ಆಯಾಮಗಳೊಂದಿಗೆ ಚಿತ್ರಿತವಾಗಿರುವುದು ಭಾರವೆನಿಸುತ್ತದೆ. ಅತಿಯಾದ ವೈಭವೀಕರಣಕ್ಕೆ ಒತ್ತು ನೀಡಿರುವುದು ಅನಗತ್ಯವೆನಿಸುತ್ತದೆ. ಕೆಳ ಮಧ್ಯಮವರ್ಗದವನ್ನು ಕೇಂದ್ರೀಕರಿಸಿದ್ದರೂ ಇಡೀ ಗ್ರಾಮವೇ ಫ್ಯೂಡಲ್ ವ್ಯವಸ್ಥೆಯನ್ನು ಒಪ್ಪಿಕೊಂಡು, ಅದರಂತೆಯೇ ಜೀವಿಸುತ್ತಿರುವುದಾಗಿ ಚಿತ್ರಿಸಲಾಗಿದೆ. ಶಿಕ್ಷಣ ಮಾಫಿಯಾದೊಂದಿಗೆ ಕೈಜೋಡಿಸಿರುವ ಗ್ರಾಮದ ಅಧ್ಯಕ್ಷನು ಮೇಷ್ಟ್ರಿಗೆ ತೊಂದರೆ ಕೊಡುವುದು, ಸರ್ಕಾರಿ ಶಾಲೆಗೆ ಒಳ್ಳೆಯ ಅಂಕಗಳು ಬಂದರೆ ಖಾಸಗಿ ಸಂಸ್ಥೆಗಳಿಗೆ ಧಕ್ಕೆಯಾಗುತ್ತದೆ ಎಂದು ಖಾಸಗೀ ಮಾಫಿಯಾಗಳು ಶಿಕ್ಷಕನ ಮೇಲೆ ದಾಳಿ ಮಾಡುವುದು, ಮೆಚ್ಚಿನ ಮೇಷ್ಟ್ರು ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಊರು ಬಿಟ್ಟು ಹೊರಡುವಾಗ ಇಡೀ ಊರಿನ ಮಕ್ಕಳೆಲ್ಲ ಅವರ ಹಿಂದೆ ನಡೆದು ಬಂದು, ಬಸ್ಸು ಹತ್ತಿಸುವುದು- ಇವೆಲ್ಲವೂ ತೀವ್ರ ಭಾವಕತೆಯನ್ನು ಹೊತ್ತು, ಒಂದು ಗೆರೆ ದಾಟಿದೆ ಎನ್ನುವಷ್ಟರ ಮಟ್ಟಿಗೆ ಅತಿಯಾಗಿವೆ. ಇಂತಹ ಎಳೆಗಳನ್ನು ಕೊಂಚ ಕಡಿಮೆ ಮಾಡಬಹುದಿತ್ತು ಎನಿಸುತ್ತದೆ.

ಹೃತಿಕ್ ರೋಷನ್ ಅಭಿನಯದ ‘ಸೂಪರ್ 30’ ಸಿನಿಮಾದ ಛಾಯೆ ‘ವಾತಿ’ಯಲ್ಲೂ ಇದೆ. 30 ಬಡ ಮಕ್ಕಳು ಐಐಟಿ ಪ್ರವೇಶ ಪರೀಕ್ಷೆಯನ್ನು ಪಾಸ್‌ ಮಾಡುವಂತೆ ಗಣಿತ ಶಿಕ್ಷಕ ಆನಂದ್‌ ತರಬೇತಿ ನೀಡುತ್ತಾರೆಂಬ ಕತೆಯನ್ನು ‘ಸೂಪರ್‌ 30’  ಒಳಗೊಂಡಿದೆ. ಇಲ್ಲೂ ಅದೇ ಮಾದರಿ ಕಂಡು ಬರುತ್ತದೆ. ‘ವಾದಿ’ ಸಿನಿಮಾದಲ್ಲಿನ ಮೇಷ್ಟ್ರು ಕೂಡ ‘ಗಣಿತ ಶಿಕ್ಷಕ!’. ಆದರೆ ಸೂಪರ್‌ 30ಯಷ್ಟು ತೀವ್ರತೆ ‘ವಾದಿ’ಯಲ್ಲಿ ಇಲ್ಲವಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರನ್ನು ‘ಕಸ್ಟಮರ್ಸ್’ (ಗ್ರಾಹಕರು) ಎಂದು ನಮೂದಿಸಿ ಖಾಸಗಿ ಮಾಫಿಯಾದ ಪ್ರತಿನಿಧಿ ಮಾತನಾಡುತ್ತಾನೆ. ಇದು ವಾಸ್ತವಕ್ಕೆ ಹತ್ತಿರವಾಗಿದೆ. ಶಿಕ್ಷಣ ದಂಧೆಕೋರರ ಕಣ್ಣಿಗೆ ಮಕ್ಕಳು ಮತ್ತು ಪೋಷಕರು ಗ್ರಾಹಕರೇ ತಾನೆ?

ಪ್ರವೇಶ ಪರೀಕ್ಷೆಗಳಿಂದಾಗಿ ತಲೆ ಎತ್ತಿರುವ ‘ಕೋಚಿಂಗ್ ಸೆಂಟರ್‌ ಮಾಫಿಯಾ’ಗಳ ಕುರಿತು ‘ವಾತಿ’ ಸ್ಪಷ್ಟವಾಗಿ ಮಾತನಾಡಿದೆ. ಕಳೆದ ವರ್ಷ ನಡೆದ ಘಟನೆ. ನೀಟ್‌ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ, ಈ ಟಾಪರ್‌ಗಳೆಲ್ಲ ನಮ್ಮಲ್ಲಿ ತರಬೇತಿ ಪಡೆದಿದ್ದಾರೆ ಎಂದು ವಿವಿಧ ಕೋಚಿಂಗ್ ಸೆಂಟರ್‌ಗಳು ಜಾಹೀರಾತು ಪ್ರಕಟಿಸಿದ್ದು ಸುದ್ದಿಯಾಗಿತ್ತಲ್ಲವೇ? ಟಾಪರ್‌ಗಳನ್ನು ನಾವು ಸೃಷ್ಟಿ ಮಾಡುತ್ತೇವೆ ಎಂದು ತೋರಿಸಿಕೊಂಡು ಪೋಷಕರನ್ನು ನಂಬಿಸುವುದು ಈ ಜಾಹೀರಾತುಗಳ ಹಿಂದಿನ ಜಾಲ. ‘ವಾತಿ’ ಕೂಡ ಈ ದಂಧೆಯ ಕುರಿತು ಸುಳಿವನ್ನು ನೀಡಿದೆ. ಜಾಹೀರಾತುಗಳಿಗೆ ಮರುಳಾಗಬೇಡಿ ಎಂದು ಸಂದೇಶ ನೀಡಿದೆ. ಜನಪ್ರತಿನಿಧಿಗಳು ಮತ್ತು ಕಾರ್ಪೊರೆಟ್ ಶಕ್ತಿಗಳ ನಡುವಿನ ಆತ್ಮೀಯ ಸಂಬಂಧಗಳಿಂದಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಮೂರಾಬಟ್ಟೆಯಾಗುತ್ತಿರುವುದನ್ನು ತನ್ನೆಲ್ಲ ಮಿತಿಗಳ ನಡುವೆ ‘ವಾತಿ’ ಚರ್ಚಿಸಿದೆ. ತಾರತಮ್ಯದ ಭಾವನೆಗಳು ಮಕ್ಕಳಲ್ಲಿ ಮೊಳೆಯದಂತೆ ಅರಿವು ಮೂಡಿಸುವ ಕರ್ತವ್ಯ ಶಿಕ್ಷಕರ ಮೇಲಿದೆ ಎಂಬುದನ್ನು ಸ್ಪಷ್ಟವಾಗಿ ದಾಟಿಸಿದೆ.

ಇದನ್ನೂ ಓದಿರಿ: ಗೌರಿ ಸಾಕ್ಷ್ಯಚಿತ್ರ; ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಬೇಕಾದ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ ಸಿನಿಮಾ

ಸಹ ಶಿಕ್ಷಕಿ ಮೀನಾಕ್ಷಿ (ಸಂಯುಕ್ತ ಮೆನಾನ್‌) ಪಾತ್ರಕ್ಕೆ ಹೆಚ್ಚಿನ ಸ್ಪೇಸ್ ಇಲ್ಲ. ‘ಗಂಡಿಗೊಂದು ಹೆಣ್ಣು’ ಎಂಬ ಸಿದ್ಧ ಮಾದರಿ ಮಸಾಲೆ ಫಾರ್‍ಮುಲಾಕ್ಕಾಗಿ ನಾಯಕ ನಟಿಯ ಪಾತ್ರ ಬಂದಿದೆ ಎನಿಸುತ್ತದೆ. ಕತೆಯ ಕೇಂದ್ರಬಿಂದುವಿನೊಳಗೆ ಮೀನಾಕ್ಷಿ ಪಾತ್ರವನ್ನು ಕಟ್ಟುವ ಪ್ರಯತ್ನ ಮಾಡಿದ್ದರೂ ಅದು ಮೂರರಲ್ಲಿ ಮತ್ತೊಂದು ಆಗಿದೆಯಷ್ಟೇ. ಆದರೆ ಇಡೀ ಸಿನಿಮಾ ‘ಧನುಷ್‌’ ಕೇಂದ್ರಿತವಾಗಿ ಸಾಗುತ್ತದೆ.

ಸಾಯಿಕುಮಾರ್‌, ಸಮುದ್ರಕನಿ, ತನಿಕೆಲ್ಲ ಭರಣಿ, ಕೇನ್‌ ಕರುಣನ್‌ ಮೊದಲಾದವರ ಅಭಿನಯ ಮನೋಜ್ಞವಾಗಿದೆ. ಜಿ.ವಿ.ಪ್ರಕಾಶ್ ಕುಮಾರ್‌ ಅವರ ಸಂಗೀತವು ಸಿನಿಮಾದ ಕೆಲವು ಕೊರತೆಗಳನ್ನು ನೀಗಿಸಿದೆ. ಖಾಸಗಿ ಶಿಕ್ಷಣ ಮಾಫಿಯಾದ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕನ್ನಡದಲ್ಲಿ ‘ಕ್ರಾಂತಿ’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಕಮರ್ಷಿಯಲ್‌ ಎಳೆಗಳನ್ನು ಕೊಂಚ ಕಡಿಮೆಯಾಗಿಸಿ, ಕತೆಯ ಆಶಯಗಳ ಮೇಲೆ ಹೆಚ್ಚು ಕೇಂದ್ರೀಕೃತಗೊಳಿಸಿ ‘ಖಾಸಗಿ ಶಿಕ್ಷಣ ಮಾಫಿಯಾ’ ಕುರಿತು ಮತ್ತಷ್ಟು ಪರಿಣಾಮಕಾರಿ ಸಿನಿಮಾಗಳು ನಿರ್ಮಾಣವಾಗುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...