Homeಮುಖಪುಟ‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

- Advertisement -
- Advertisement -

1991ರಲ್ಲಿ ಭಾರತ ಸರ್ಕಾರ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣಕ್ಕೆ ತೆರೆದುಕೊಂಡ ಬಳಿಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಜಾಗದಲ್ಲಿ ಖಾಸಗಿಯವರು ಆಕ್ರಮಿಸಿಕೊಳ್ಳುತ್ತಾ, ಹೇಗೆ ಶಿಕ್ಷಣವನ್ನು ವ್ಯಾಪಾರೀಕರಣ ಮಾಡಿಕೊಂಡಿದ್ದಾರೆ ಎಂಬುದನ್ನು ‘ಕಮರ್ಷಿಯಲ್‌’ ಎಲಿಮೆಂಟ್‌ಗಳೊಂದಿಗೆ ಹೇಳುವ ಸಿನಿಮಾ ‘ವಾತಿ’ (ತಮಿಳು). ‘ವೆಂಕಿ ಅತ್ಲುರಿ’ ನಿರ್ದೇಶನದ ಈ ಸಿನಿಮಾ ತಮಿಳು ಮತ್ತು ತೆಲುಗು (ಸರ್‌)- ಎರಡು ಭಾಷೆಯಲ್ಲೂ ಬಿಡುಗಡೆಯಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಭಾಗವಾಗಿದ್ದ ಮಾಸ್ಟರ್‌‌ (ವಾತಿ) ಬಾಲ ಮುರುಗನ್‌ (ಧನುಷ್‌), ಸರ್ಕಾರದ ನೀತಿಗಳ ಫಲವಾಗಿ ಅನುದಾನಿತ ಸರ್ಕಾರಿ ಶಾಲೆಯೊಂದಕ್ಕೆ ನೇಮಕವಾಗುತ್ತಾನೆ. ತಾನು ನಂಬಿದ್ದ ತಿರುಪತಿ (ಸಮುದ್ರಕನಿ) ನಡೆಸುತ್ತಿರುವ ಶಿಕ್ಷಣ ಮಾಫಿಯಾವನ್ನು ಅರ್ಥಮಾಡಿಕೊಂಡು ಆ ನಂತರ ಆತನ ವಿರುದ್ಧ ಸಿಡಿದೇಳುತ್ತೇನೆ. ಮುಂದೇನಾಗುತ್ತಾನೆ ಎಂಬುದೇ ಇಲ್ಲಿನ ಕತೆ.

2022ರ ಕಾಲಘಟ್ಟದಲ್ಲಿ ಕತೆ ಆರಂಭವಾದರೂ, 90ರ ದಶಕಕ್ಕೆ ಜಾರುತ್ತದೆ. ಬಾಲ ಮುರುಗನ್‌ ಎಂಬ ಮೇಷ್ಟ್ರ ಜೀವನಗಾಥೆ ಎಳೆಎಳೆಯಾಗಿ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ.

ಮುರುಗನ್‌ ಶಿಕ್ಷಕನಾಗಿ ಬಂದಿರುವ ಆ ಗ್ರಾಮದಲ್ಲಿ ಶಿಕ್ಷಣವೆಂಬುದು ಮರೀಚಿಕೆ. ಇಲ್ಲಿನ ಎಲ್ಲ ಜನಕ್ಕೂ ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ತಾತ್ಸಾರವಿದೆ. ಅವರದ್ದೇ ಆದ ಜಂಜಾಟಗಳಲ್ಲಿರುವ ಜನರು ಮಕ್ಕಳನ್ನು ದುಡಿಮೆಗೆ ದೂಡಿದ್ದಾರೆ. ಇಲ್ಲಿನ ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವ ನಿಟ್ಟಿನಲ್ಲಿ ಮೇಷ್ಟ್ರು ಪಣತೊಡುತ್ತಾನೆ. ಇದು ಸಿನಿಮಾ ಭಾಷೆಯ ಮಿತಿಗಳನ್ನು ಮೀರಿ ಹೆಚ್ಚಿನ ಕಮರ್ಷಿಯಲ್ ಆಯಾಮಗಳೊಂದಿಗೆ ಚಿತ್ರಿತವಾಗಿರುವುದು ಭಾರವೆನಿಸುತ್ತದೆ. ಅತಿಯಾದ ವೈಭವೀಕರಣಕ್ಕೆ ಒತ್ತು ನೀಡಿರುವುದು ಅನಗತ್ಯವೆನಿಸುತ್ತದೆ. ಕೆಳ ಮಧ್ಯಮವರ್ಗದವನ್ನು ಕೇಂದ್ರೀಕರಿಸಿದ್ದರೂ ಇಡೀ ಗ್ರಾಮವೇ ಫ್ಯೂಡಲ್ ವ್ಯವಸ್ಥೆಯನ್ನು ಒಪ್ಪಿಕೊಂಡು, ಅದರಂತೆಯೇ ಜೀವಿಸುತ್ತಿರುವುದಾಗಿ ಚಿತ್ರಿಸಲಾಗಿದೆ. ಶಿಕ್ಷಣ ಮಾಫಿಯಾದೊಂದಿಗೆ ಕೈಜೋಡಿಸಿರುವ ಗ್ರಾಮದ ಅಧ್ಯಕ್ಷನು ಮೇಷ್ಟ್ರಿಗೆ ತೊಂದರೆ ಕೊಡುವುದು, ಸರ್ಕಾರಿ ಶಾಲೆಗೆ ಒಳ್ಳೆಯ ಅಂಕಗಳು ಬಂದರೆ ಖಾಸಗಿ ಸಂಸ್ಥೆಗಳಿಗೆ ಧಕ್ಕೆಯಾಗುತ್ತದೆ ಎಂದು ಖಾಸಗೀ ಮಾಫಿಯಾಗಳು ಶಿಕ್ಷಕನ ಮೇಲೆ ದಾಳಿ ಮಾಡುವುದು, ಮೆಚ್ಚಿನ ಮೇಷ್ಟ್ರು ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಊರು ಬಿಟ್ಟು ಹೊರಡುವಾಗ ಇಡೀ ಊರಿನ ಮಕ್ಕಳೆಲ್ಲ ಅವರ ಹಿಂದೆ ನಡೆದು ಬಂದು, ಬಸ್ಸು ಹತ್ತಿಸುವುದು- ಇವೆಲ್ಲವೂ ತೀವ್ರ ಭಾವಕತೆಯನ್ನು ಹೊತ್ತು, ಒಂದು ಗೆರೆ ದಾಟಿದೆ ಎನ್ನುವಷ್ಟರ ಮಟ್ಟಿಗೆ ಅತಿಯಾಗಿವೆ. ಇಂತಹ ಎಳೆಗಳನ್ನು ಕೊಂಚ ಕಡಿಮೆ ಮಾಡಬಹುದಿತ್ತು ಎನಿಸುತ್ತದೆ.

ಹೃತಿಕ್ ರೋಷನ್ ಅಭಿನಯದ ‘ಸೂಪರ್ 30’ ಸಿನಿಮಾದ ಛಾಯೆ ‘ವಾತಿ’ಯಲ್ಲೂ ಇದೆ. 30 ಬಡ ಮಕ್ಕಳು ಐಐಟಿ ಪ್ರವೇಶ ಪರೀಕ್ಷೆಯನ್ನು ಪಾಸ್‌ ಮಾಡುವಂತೆ ಗಣಿತ ಶಿಕ್ಷಕ ಆನಂದ್‌ ತರಬೇತಿ ನೀಡುತ್ತಾರೆಂಬ ಕತೆಯನ್ನು ‘ಸೂಪರ್‌ 30’  ಒಳಗೊಂಡಿದೆ. ಇಲ್ಲೂ ಅದೇ ಮಾದರಿ ಕಂಡು ಬರುತ್ತದೆ. ‘ವಾದಿ’ ಸಿನಿಮಾದಲ್ಲಿನ ಮೇಷ್ಟ್ರು ಕೂಡ ‘ಗಣಿತ ಶಿಕ್ಷಕ!’. ಆದರೆ ಸೂಪರ್‌ 30ಯಷ್ಟು ತೀವ್ರತೆ ‘ವಾದಿ’ಯಲ್ಲಿ ಇಲ್ಲವಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರನ್ನು ‘ಕಸ್ಟಮರ್ಸ್’ (ಗ್ರಾಹಕರು) ಎಂದು ನಮೂದಿಸಿ ಖಾಸಗಿ ಮಾಫಿಯಾದ ಪ್ರತಿನಿಧಿ ಮಾತನಾಡುತ್ತಾನೆ. ಇದು ವಾಸ್ತವಕ್ಕೆ ಹತ್ತಿರವಾಗಿದೆ. ಶಿಕ್ಷಣ ದಂಧೆಕೋರರ ಕಣ್ಣಿಗೆ ಮಕ್ಕಳು ಮತ್ತು ಪೋಷಕರು ಗ್ರಾಹಕರೇ ತಾನೆ?

ಪ್ರವೇಶ ಪರೀಕ್ಷೆಗಳಿಂದಾಗಿ ತಲೆ ಎತ್ತಿರುವ ‘ಕೋಚಿಂಗ್ ಸೆಂಟರ್‌ ಮಾಫಿಯಾ’ಗಳ ಕುರಿತು ‘ವಾತಿ’ ಸ್ಪಷ್ಟವಾಗಿ ಮಾತನಾಡಿದೆ. ಕಳೆದ ವರ್ಷ ನಡೆದ ಘಟನೆ. ನೀಟ್‌ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ, ಈ ಟಾಪರ್‌ಗಳೆಲ್ಲ ನಮ್ಮಲ್ಲಿ ತರಬೇತಿ ಪಡೆದಿದ್ದಾರೆ ಎಂದು ವಿವಿಧ ಕೋಚಿಂಗ್ ಸೆಂಟರ್‌ಗಳು ಜಾಹೀರಾತು ಪ್ರಕಟಿಸಿದ್ದು ಸುದ್ದಿಯಾಗಿತ್ತಲ್ಲವೇ? ಟಾಪರ್‌ಗಳನ್ನು ನಾವು ಸೃಷ್ಟಿ ಮಾಡುತ್ತೇವೆ ಎಂದು ತೋರಿಸಿಕೊಂಡು ಪೋಷಕರನ್ನು ನಂಬಿಸುವುದು ಈ ಜಾಹೀರಾತುಗಳ ಹಿಂದಿನ ಜಾಲ. ‘ವಾತಿ’ ಕೂಡ ಈ ದಂಧೆಯ ಕುರಿತು ಸುಳಿವನ್ನು ನೀಡಿದೆ. ಜಾಹೀರಾತುಗಳಿಗೆ ಮರುಳಾಗಬೇಡಿ ಎಂದು ಸಂದೇಶ ನೀಡಿದೆ. ಜನಪ್ರತಿನಿಧಿಗಳು ಮತ್ತು ಕಾರ್ಪೊರೆಟ್ ಶಕ್ತಿಗಳ ನಡುವಿನ ಆತ್ಮೀಯ ಸಂಬಂಧಗಳಿಂದಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಮೂರಾಬಟ್ಟೆಯಾಗುತ್ತಿರುವುದನ್ನು ತನ್ನೆಲ್ಲ ಮಿತಿಗಳ ನಡುವೆ ‘ವಾತಿ’ ಚರ್ಚಿಸಿದೆ. ತಾರತಮ್ಯದ ಭಾವನೆಗಳು ಮಕ್ಕಳಲ್ಲಿ ಮೊಳೆಯದಂತೆ ಅರಿವು ಮೂಡಿಸುವ ಕರ್ತವ್ಯ ಶಿಕ್ಷಕರ ಮೇಲಿದೆ ಎಂಬುದನ್ನು ಸ್ಪಷ್ಟವಾಗಿ ದಾಟಿಸಿದೆ.

ಇದನ್ನೂ ಓದಿರಿ: ಗೌರಿ ಸಾಕ್ಷ್ಯಚಿತ್ರ; ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಬೇಕಾದ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ ಸಿನಿಮಾ

ಸಹ ಶಿಕ್ಷಕಿ ಮೀನಾಕ್ಷಿ (ಸಂಯುಕ್ತ ಮೆನಾನ್‌) ಪಾತ್ರಕ್ಕೆ ಹೆಚ್ಚಿನ ಸ್ಪೇಸ್ ಇಲ್ಲ. ‘ಗಂಡಿಗೊಂದು ಹೆಣ್ಣು’ ಎಂಬ ಸಿದ್ಧ ಮಾದರಿ ಮಸಾಲೆ ಫಾರ್‍ಮುಲಾಕ್ಕಾಗಿ ನಾಯಕ ನಟಿಯ ಪಾತ್ರ ಬಂದಿದೆ ಎನಿಸುತ್ತದೆ. ಕತೆಯ ಕೇಂದ್ರಬಿಂದುವಿನೊಳಗೆ ಮೀನಾಕ್ಷಿ ಪಾತ್ರವನ್ನು ಕಟ್ಟುವ ಪ್ರಯತ್ನ ಮಾಡಿದ್ದರೂ ಅದು ಮೂರರಲ್ಲಿ ಮತ್ತೊಂದು ಆಗಿದೆಯಷ್ಟೇ. ಆದರೆ ಇಡೀ ಸಿನಿಮಾ ‘ಧನುಷ್‌’ ಕೇಂದ್ರಿತವಾಗಿ ಸಾಗುತ್ತದೆ.

ಸಾಯಿಕುಮಾರ್‌, ಸಮುದ್ರಕನಿ, ತನಿಕೆಲ್ಲ ಭರಣಿ, ಕೇನ್‌ ಕರುಣನ್‌ ಮೊದಲಾದವರ ಅಭಿನಯ ಮನೋಜ್ಞವಾಗಿದೆ. ಜಿ.ವಿ.ಪ್ರಕಾಶ್ ಕುಮಾರ್‌ ಅವರ ಸಂಗೀತವು ಸಿನಿಮಾದ ಕೆಲವು ಕೊರತೆಗಳನ್ನು ನೀಗಿಸಿದೆ. ಖಾಸಗಿ ಶಿಕ್ಷಣ ಮಾಫಿಯಾದ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕನ್ನಡದಲ್ಲಿ ‘ಕ್ರಾಂತಿ’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಕಮರ್ಷಿಯಲ್‌ ಎಳೆಗಳನ್ನು ಕೊಂಚ ಕಡಿಮೆಯಾಗಿಸಿ, ಕತೆಯ ಆಶಯಗಳ ಮೇಲೆ ಹೆಚ್ಚು ಕೇಂದ್ರೀಕೃತಗೊಳಿಸಿ ‘ಖಾಸಗಿ ಶಿಕ್ಷಣ ಮಾಫಿಯಾ’ ಕುರಿತು ಮತ್ತಷ್ಟು ಪರಿಣಾಮಕಾರಿ ಸಿನಿಮಾಗಳು ನಿರ್ಮಾಣವಾಗುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...