Homeಮುಖಪುಟ’ವೇಟಿಂಗ್ ಪಾರ್ ಗಾಡೋ’ ; ನಮ್ಮನ್ನು ಉದ್ದೇಶಿಸಿ ಮಾತನಾಡುವ ನಾಟಕ...

’ವೇಟಿಂಗ್ ಪಾರ್ ಗಾಡೋ’ ; ನಮ್ಮನ್ನು ಉದ್ದೇಶಿಸಿ ಮಾತನಾಡುವ ನಾಟಕ…

ಎರಡು ಮಹಾಯುದ್ದಗಳನ್ನು ಕಣ್ಣಾರೆ ಕಂಡ ಬೆಕೆಟ್, ಯುದ್ದದ ಸಂರ್ಭದಲ್ಲಿ ನಡೆದ ಸಾವು ನೋವುಗಳು ಅವರ ಮನಕಲಿಕಿದವು. ಯುದ್ದದ ಕ್ರೌರ್ಯ, ಮಾನಸಿಕ ವೇದನೆ, ತವಕ-ತಲ್ಲಣಗಳ ಕುರಿತು ತನ್ನ ಕೃತಿಗಳಲ್ಲಿ ಕಟ್ಟಿಕೊಟ್ಟ ಅವರು ಆಹೊತ್ತಿನ ಭೀಕರತೆ, ಭೀಭತ್ಸತೆಗೆ ಕನ್ನಡಿ ಹಿಡಿದು ಓದುಗರನ್ನು ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -
- Advertisement -

ಸ್ಯಾಮುಯಲ್ ಬೆಕೆಟ್ ಐರಿಷ್ ಕವಿ. ಅವನೊಬ್ಬ ಶ್ರೇಷ್ಟ ಕಾದಂಬರಿಕಾರ. ಕಥೆಗಾರ ಹಾಗೆಯೇ ನಾಟಕಕಾರ. ಅಷ್ಟೇ ಅಲ್ಲ ಭಾಷಾಂತರಕಾರ ಕೂಡ. ಫ್ರೆಂಚ್ ಮತ್ತು ಐರೀಷ್ ಎರಡು ಭಾಷೆಗಳಲ್ಲೂ ಹಲವು ಶ್ರೇಷ್ಟಮಟ್ಟದ ಕೃತಿಗಳನ್ನು ರಚಿಸಿರುವ ಬೆಕೆಟ್ 1906 ರಲ್ಲಿ ಜನಿಸಿ 1989ರಲ್ಲಿ ತೀರಿಕೊಂಡ. ಜೀವಿತದ ಅವಧಿಯಲ್ಲಿ ಮರ್ಫಿ, ವಾಲ್, ಮಲೋನೆ ಡೈಸ್, ವೈಟಿಂಗ್ ಫಾರ್ ಗಾಡೋ, ಎಂಡ್ ಗೇಮ್ ಹೀಗೆ ಹತ್ತಾರು ಪ್ರಮುಖ ಕೃತಿಗಳನ್ನು ರಚಿಸಿದ್ದು ಈತನಿಗೆ 1969ರಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ.

ಎರಡು ಮಹಾಯುದ್ದಗಳನ್ನು ಕಣ್ಣಾರೆ ಕಂಡ ಬೆಕೆಟ್, ಯುದ್ದದ ಸಂರ್ಭದಲ್ಲಿ ನಡೆದ ಸಾವು ನೋವುಗಳು ಅವರ ಮನಕಲಿಕಿದವು. ಯುದ್ದದ ಕ್ರೌರ್ಯ, ಮಾನಸಿಕ ವೇದನೆ, ತವಕ-ತಲ್ಲಣಗಳ ಕುರಿತು ತನ್ನ ಕೃತಿಗಳಲ್ಲಿ ಕಟ್ಟಿಕೊಟ್ಟ ಅವರು ಆಹೊತ್ತಿನ ಭೀಕರತೆ, ಭೀಭತ್ಸತೆಗೆ ಕನ್ನಡಿ ಹಿಡಿದು ಓದುಗರನ್ನು ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಕೆಟ್ ನ ‘ವೇಟಿಂಗ್ ಫಾರ್ ಗಾಡೋ ನಾಟಕ ‘ಸುಖದುಃಖಾಂತ್ಯ’ ನಾಟಕ. ಕೇವಲ ಐದೇ ಐದು ಪಾತ್ರಗಳು ಮನುಷ್ಯನ ದುಖಃ, ಸುಖ, ನೋವಿಗೆ ತಾವಾಗಿಯೇ ತೆರೆದುಕೊಳ್ಳುತ್ತವೆ. ತಮ್ಮೊಳಗಿನ ಗೊಂದಲಗಳನ್ನು ಪ್ರೇಕ್ಷಕರ ಮುಂದೆ ಇಡುತ್ತವೆ. ನಾಳೆಗಳ ಕನಸುಗಳನ್ನು ಕಟ್ಟಿಕೊಳ್ಳುತ್ತಲೇ ಆ ಕನಸುಗಳನ್ನು ಕೊಂದುಕೊಳ್ಳುತ್ತವೆ. ಇಂಥದ್ದೊಂದು ನಾಟಕವನ್ನು ತುಮಕೂರಿನಲ್ಲಿ ಪ್ರದರ್ಶಿಸಲಾಯಿತು. ಲೋಕಚರಿತ ರಂಗ ಕೇಂದ್ರ ಎಂಬ ಚಿಕ್ಕದಾಳವಟ್ಟದ ಗ್ರಾಮೀಣ ಸಂಘಟನೆ ಬೆಕೆಟ್ ನ ವೇಟಿಂಗ್ ಫಾರ್ ಗಾಡೋ ನಾಟಕ ಪ್ರದರ್ಶನಕ್ಕೆ ವೇದಿಕೆ ಒದಗಿಸಿತ್ತು. ರಂಗ ತಂಡದ ಕಲಾವಿದರು ಪುಟ್ಟ ಹೆಜ್ಜೆಗಳನ್ನು ಇಡುತ್ತಿದ್ದರೂ ಅವು ದೃಢವಾಗಿದ್ದವು. ಅವರು ಪ್ರತಿಯೊಂದು ಸನ್ನಿವೇಶದಲ್ಲೂ ಸಭಿಕರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾದರು.

ಬರಡುಭೂಮಿ, ಬೆಟ್ಟಗುಡ್ಡಗಳು, ಎಲೆಗಳೇ ಇಲ್ಲದ ಮರಗಳು. ಅಂಥ ಪ್ರದೇಶದಲ್ಲಿ ಇಬ್ಬರು ದಿಕ್ಕುದೆಸ (ಬೇವರ್ಸಿಗಳು) ಇಲ್ಲದ ಅಬ್ಬೇಪಾರಿಗಳು. ಮೊದಲಿಗೆ ಗುಡ್ಡವೊಂದರ ಮೇಲೆ ಕುಳಿತು ತನ್ನ ಎಡಗಾಲಿನ ಬೂಟು ಬಿಚ್ಚುವ ದೃಶ್ಯದಿಂದ ಆರಂಭವಾಗುವ ನಾಟಕ ಮುಂದೆ ತನ್ನ ಕಥಾಹಂದರವನ್ನು ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಮೊದಲು ಗುಡ್ಡದ ಮೇಲೆ ಕುಳಿತ ವ್ಯಕ್ತಿಯ ಜೊತೆಗೆ ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಅಮೂರ್ತ ರೂಪದ ಗಾಡೋನಿಗಾಗಿ ಕಾಯುವುದು. ಕಾಲದೂಡಲು, ಬೇಸರ ನಿವಾರಣೆಗೆ ಮತ್ತು ಮೌನ ವಾತಾವರಣ ಮುರಿದು ಹಾಕಲು ಇಬ್ಬರು ಬೇವರ್ಸಿಗಳು ಮಾತಿಗೆ ಆರಂಭಿಸುತ್ತಾರೆ. ಅವರ ಮಾತುಗಳು ಎಲ್ಲೆಲ್ಲೋ ಹೋಗುತ್ತವೆ. ಇಬ್ಬರು ಅಬ್ಬೇಪಾರಿಗಳ ನಡುವಿನ ಸಂಭಾಷಣೆ ಅಸಂಬದ್ದವಾಗಿರುತ್ತದೆ. ತಾಳತಪ್ಪುತ್ತದೆ. ಒಂದಕ್ಕೊಂದು ಸಂಬಂಧವೇ ಇಲ್ಲದಂತೆ ಆಗುತ್ತದೆ. ಇದು ಎರಡು ಮಹಾಯುದ್ದದ ಸಮಯದಲ್ಲಾದ ಸನ್ನಿವೇಶಕ್ಕೆ ಹಿಡಿದ ಕನ್ನಡಿಯಾಗಿದೆ.

ಈ ನಾಟಕ ಸಂಪೂರ್ಣವಾಗಿ ಸಂಗತವೂ ಅಲ್ಲದ, ಅಸಂಗತವೂ ಅಲ್ಲದ ಸ್ಥಿತಿಯಲ್ಲಿ ಮುಂದುವರಿಯುತ್ತದೆ. ಶಬರಿ ರಾಮನಿಗಾಗಿ ವರ್ಷಾನುಗಟ್ಟಲೆ ಕಾಯುವಂತೆ (ಕೊನೆಗೂ ಶಬರಿಗೆ ರಾಮನ ದರ್ಶನವಾಗುತ್ತದೆ.) ಈ ಇಬ್ಬರು ಬೇವರ್ಸಿಗಳು ತಾವೂ ನೋಡಿಯೇ ಇಲ್ಲದ, ಪರಿಚಯವೇ ಇಲ್ಲದ ಗಾಡೋನಿಗಾಗಿ ಕಾಯುತ್ತಾ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸುತ್ತಾರೆ. ಈ ಪಾತ್ರಗಳು ಪ್ರತಿಯೊಬ್ಬ ವ್ಯಕ್ತಿಯ ಮನದಾಳದ ಗೊಂದಲಗಳಿಗೆ ಮುಖಾಮುಖಿಯಾಗುತ್ತಾರೆ. ಇಂದಿನ ಸಮಾಜದಲ್ಲೂ ವ್ಯಕ್ತಿ ಯಾರನ್ನೋ ಕಾಯುತ್ತಾ, ನಿರೀಕ್ಷೆ ಮಾಡುತ್ತ, ಅವರು ಸಿಗದೇ, ಬೇಸರ, ನೋವು ತಡೆಯಲಾರದೆ ಆತ್ಮಹತ್ಯೆಗೆ ಯತ್ನಿಸುವ ಸನ್ನಿವೇಶಕ್ಕೂ ಈ ಪಾತ್ರಗಳು ಮುಖಾಮುಖಿಯಾಗುತ್ತವೆ. ಯುದ್ದದಂತಹ ಸನ್ನಿವೇಶದಲ್ಲಿ ಮನುಷ್ಯನ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಈ ಪಾತ್ರಗಳು ಕಟ್ಟಿಕೊಡುತ್ತವೆ.

ಮನುಷ್ಯನ ಮನಸ್ಸು ಕ್ಷಣಕ್ಷಣಕ್ಕೂ ಬದಲಾಗುತ್ತಿರುತ್ತದೆ. ಒಮ್ಮೆ ಆಡಿದ ಮಾತು ಮತ್ತೊಮ್ಮೆ ಆಡುವುದಿಲ್ಲ. ಹಾಗೆಯೇ ಈ ಬೇವರ್ಸಿ ಪಾತ್ರಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆ. ನಮ್ಮ ನಿರೀಕ್ಷೆಗಳು ಸುಳ್ಳಾಗಬಹುದು. ನೋವು, ಸಂಕಟ, ದುಃಖ ಕ್ಷಣ ಕಾಲ ಮರೆಯಾಗಬಹುದು. ಆದರೆ ದುತ್ತೆಂದು ಒಕ್ಕರಿಸುತ್ತವೆ ಎಂಬುದನ್ನು ಈ ಪಾತ್ರಗಳು ಸಾಕ್ಷೀಕರಿಸುತ್ತವೆ. ಒಮ್ಮೆ ಒಣಗಿದ ಮರವೂ ಚಿಗುರಬಹುದು. ಹಾಗೆಯೇ ಮನುಷ್ಯನಲ್ಲೂ ಬದುಕುವ ಉತ್ಸಾಹ ಮೂಡಬಹುದು. ಅದು ಹೆಚ್ಚು ದಿನ ಇರುವುದಿಲ್ಲ. ಕೊನೆಗೆ ಆ ಎರಡು ಪಾತ್ರಗಳು ಹೀಗೆ ಸಾರುತ್ತವೆ. ನಾವು ನಾಳೆ ಇಲ್ಲಿಗೆ ಮರಳಿ ಬಂದರೆ ಬದುಕಿರುತ್ತೇವೆ. ಬಾರದೆ ಇದ್ದರೆ ನಾವು ಸತ್ತಂತೆ ಎಂಬಲ್ಲಿಗೆ ನಾಟಕ ಅಂತ್ಯವಾಗುತ್ತದೆ. ಇಡೀ ನಾಟಕದ ಉದ್ದಕ್ಕೂ ಎರಡು ಬೇವರ್ಸಿ ಪಾತ್ರಗಳೇ ಪ್ರಧಾನವಾಗಿವೆ.

ಈ ನಡುವೆ ಆ ಬರಡು ಭೂಮಿಯಲ್ಲಿದ್ದ ಇಬ್ಬರು ಬೇವರ್ಸಿ ಪಾತ್ರಗಳಗಳ ಜೊತೆಗೆ ಎಷ್ಟೋ ದಿನ ಕಳೆದ ಮೇಲೆ ಅಲ್ಲಿಗೆ ಪೋಜೋ ಅಲ್ಲಿಗೆ ಲಕ್ಕಿಯೊಂದಿಗೆ ಬರುತ್ತಾನೆ. ಆತ ವಿರಾಮ ಪಡೆಯಲು ಆ ಬೇವರ್ಸಿಗಳೊಂದಿಗೆ ಕೆಲಕಾಲ ಮಾತಿಗೆ ಇಳಿಯುತ್ತಾನೆ. ಅವರ ನಡುವೆ ನಡೆಯುವ ಸಂಭಾಷಣೆ ನಗೆಯುಕ್ಕಿಸುತ್ತದೆ. ಪೋಜೋ ಬಿಸುಟ ಮೋಟು ಬೀಡಿ, ಮೂಳೆ ಚಿಕನ್ ಗಳನ್ನು ಆ ಇಬ್ಬರು ಬೇವರ್ಸಿ ಪಾತ್ರಗಳು ತೆಗೆದುಕೊಂಡು ಮೋಜು ಮಾಡುತ್ತವೆ. ಲಕ್ಕಿಯದು ಪೋಜೇನ ಸಾಮಾನುಗಳನ್ನು ಹೊರುವ ಕೆಲಸ. ಹೇಳಿದ್ದು ಮಾಡುವ ಚಾಕರಿ. ಯುದ್ದದಂತಹ ಪರಿಸ್ಥಿತಿಯಲ್ಲಿ ಶ್ರೀಮಂತರು ಬಡವರನ್ನು ಗುಲಾಮರನ್ನಾಗಿ ಇಟ್ಟುಕೊಳ್ಳುತ್ತಿದ್ದರು ಎಂಬುದನ್ನು ಈ ಪಾತ್ರ ಹೇಳುತ್ತದೆ.  ಇವರ ನುಡವೆ ನಡೆಯುವ ಸಂಭಾಷಣೆಯಲ್ಲಿ ಕಪ್ಪು, ಬಿಳುಪು, ಹಸಿರು ಮೊದಲಾದ ಬಣ್ಣಗಳ ಕುರಿತು ವ್ಯಕ್ತವಾಗುವ ಮಾತುಗಳು ಅಸಂಬದ್ದತೆ ಪ್ರೇಕ್ಷಕರಲ್ಲಿ ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ.

ಹುಡುಗನ ಪಾತ್ರ ಎರಡೇ ಬಾರಿ ರಂಗದ ಮೇಲೆ ಕಂಡು ಬಂದರೂ ಗಮನ ಸೆಳೆಯುತ್ತದೆ. ಬೇವರ್ಸಿಗಳ ಬಳಿ ಬರುವ ಆ ಹುಡುಗ ನಾನು ಗಾಡೋನನ್ನು ನೋಡಿದ್ದೇನೆ. ಅವನ ಬಳಿಯಿಂದಲೇ ಬಂದಿದ್ದೇನೆ ಎನ್ನುತ್ತಾನೆ. ಅದಕ್ಕೆ ಬೇವರ್ಸಿಗಳು ನಾವು ಗಾಡೋಗಾಗಿ ಕಾಯುತ್ತಿದ್ದೇವೆ ಎಂಬುದನ್ನು ತಿಳಿಸುವಂತೆ ಆ ಹುಡುಗನಿಗೆ ಹೇಳುತ್ತಾರೆ. ಆದರೆ ಆ ಹುಡುಗ ಎರಡನೇ ಬಾರಿ ಬಂದಾಗ ನಾನು ನೆನ್ನೆ ಬಂದ ಹುಡುಗನಲ್ಲ. ನಾನು ಗಾಡೋ ನೋಡಿಲ್ಲ. ನೀವು ಯಾರು? ನಿಮ್ಮನ್ನೂ ನಾನು ಭೇಟಿ ಮಾಡಿಲ್ಲ ಎಂದು ಪ್ರೇಕ್ಷಕರನ್ನು ಗೊಂದಲದಲ್ಲಿ ಕೆಡವುತ್ತಾನೆ. ಮತ್ತೆ ಆ ಬೇವರ್ಸಿಗಳು ನಿನ್ನೆ ನೀನು ಬಂದಿದ್ದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರೂ ಒಪ್ಪಿಕೊಳ್ಳುವುದಿಲ್ಲ ಆ ಹುಡುಗ. ಇಂದು ಕೂಡ ಅಂಥವೇ ಸಂಗತಿಗಳು ನಮ್ಮ ನಡುವೆ ನಡೆಯುತ್ತಿರುವುದನ್ನು ನೋಡುತ್ತೇವೆ.

ಜಗತ್ತಿನಲ್ಲಿ ಜನಾಂಗೀಯ ದಬ್ಬಾಳಿಕೆ ನಡೆಯುತ್ತಿರುವುದಕ್ಕೆ, ಸಮಾಜದಲ್ಲಿ ತಾರತಮ್ಯದ ಮನೋಭಾವ ಇಂದಿಗೂ ಇರುವ ಬಗ್ಗೆ ಮಾರ್ಮಿಕವಾಗಿ ಧ್ವನಿಸುತ್ತದೆ. ಆಧುನಿಕ ಜಗತ್ತಿನ ನಾಗಾಲೋಟದಲ್ಲಿ ಮನುಷ್ಯ ಕ್ಷಣ ನಿಂತು ಆಲೋಚಿಸುವುದಕ್ಕೂ ಸಮಯವಿಲ್ಲದ ಪರಿಯನ್ನು ಹೇಳುತ್ತದೆ. ಗೊಂದಲದಲ್ಲಿರುವ ಮನುಷ್ಯನ ಮಾನಸಲೋಕದ ಅಲ್ಲೋಲಕಲ್ಲೋಲಗಳಿಗೆ ಪಾತ್ರಗಳು ಜೀವ ತುಂಬುತ್ತವೆ. ವೇಟಿಂಗ್ ಪಾರ್ ಗಾಡೋ ಇಂದಿಗೂ ಪ್ರಸ್ತುತವಾಗಿದೆ. ಮನುಷ್ಯನಲ್ಲಾಗುವ ಬದಲಾವಣೆಗಳನ್ನು ಹೇಳುತ್ತದೆ.

ರವಿಶಂಕರ್ ಆರ್ ನೀನಾಸಂ ನಿರ್ದೇಶನದಲ್ಲಿ ನಾಟಕ ಚನ್ನಾಗಿ ಮೂಡಿಬಂತು. ಚನ್ನಕೇಶವ, ಜಿತೇಂದ್ರ, ಜಿ.ಎಸ್. ಮೋಹನ್, ಶ್ರೀಕಾಂತ್, ಸುಮಂತ್ ಜಿ.ಜಿ. ವೇಟಿಮಗ್ ಫಾರ್ ಗಾಡೋ ನಾಟಕದ ಪಾತ್ರಗಳಿಗೆ ಜೀವ ತುಂಬಿದರು. ಲೋಕಚರಿತ ರಂಗ ಕೇಂದ್ರದ ಮುಖ್ಯಸ್ಥ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...