Homeಮುಖಪುಟ’ವೇಟಿಂಗ್ ಪಾರ್ ಗಾಡೋ’ ; ನಮ್ಮನ್ನು ಉದ್ದೇಶಿಸಿ ಮಾತನಾಡುವ ನಾಟಕ...

’ವೇಟಿಂಗ್ ಪಾರ್ ಗಾಡೋ’ ; ನಮ್ಮನ್ನು ಉದ್ದೇಶಿಸಿ ಮಾತನಾಡುವ ನಾಟಕ…

ಎರಡು ಮಹಾಯುದ್ದಗಳನ್ನು ಕಣ್ಣಾರೆ ಕಂಡ ಬೆಕೆಟ್, ಯುದ್ದದ ಸಂರ್ಭದಲ್ಲಿ ನಡೆದ ಸಾವು ನೋವುಗಳು ಅವರ ಮನಕಲಿಕಿದವು. ಯುದ್ದದ ಕ್ರೌರ್ಯ, ಮಾನಸಿಕ ವೇದನೆ, ತವಕ-ತಲ್ಲಣಗಳ ಕುರಿತು ತನ್ನ ಕೃತಿಗಳಲ್ಲಿ ಕಟ್ಟಿಕೊಟ್ಟ ಅವರು ಆಹೊತ್ತಿನ ಭೀಕರತೆ, ಭೀಭತ್ಸತೆಗೆ ಕನ್ನಡಿ ಹಿಡಿದು ಓದುಗರನ್ನು ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -
- Advertisement -

ಸ್ಯಾಮುಯಲ್ ಬೆಕೆಟ್ ಐರಿಷ್ ಕವಿ. ಅವನೊಬ್ಬ ಶ್ರೇಷ್ಟ ಕಾದಂಬರಿಕಾರ. ಕಥೆಗಾರ ಹಾಗೆಯೇ ನಾಟಕಕಾರ. ಅಷ್ಟೇ ಅಲ್ಲ ಭಾಷಾಂತರಕಾರ ಕೂಡ. ಫ್ರೆಂಚ್ ಮತ್ತು ಐರೀಷ್ ಎರಡು ಭಾಷೆಗಳಲ್ಲೂ ಹಲವು ಶ್ರೇಷ್ಟಮಟ್ಟದ ಕೃತಿಗಳನ್ನು ರಚಿಸಿರುವ ಬೆಕೆಟ್ 1906 ರಲ್ಲಿ ಜನಿಸಿ 1989ರಲ್ಲಿ ತೀರಿಕೊಂಡ. ಜೀವಿತದ ಅವಧಿಯಲ್ಲಿ ಮರ್ಫಿ, ವಾಲ್, ಮಲೋನೆ ಡೈಸ್, ವೈಟಿಂಗ್ ಫಾರ್ ಗಾಡೋ, ಎಂಡ್ ಗೇಮ್ ಹೀಗೆ ಹತ್ತಾರು ಪ್ರಮುಖ ಕೃತಿಗಳನ್ನು ರಚಿಸಿದ್ದು ಈತನಿಗೆ 1969ರಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ.

ಎರಡು ಮಹಾಯುದ್ದಗಳನ್ನು ಕಣ್ಣಾರೆ ಕಂಡ ಬೆಕೆಟ್, ಯುದ್ದದ ಸಂರ್ಭದಲ್ಲಿ ನಡೆದ ಸಾವು ನೋವುಗಳು ಅವರ ಮನಕಲಿಕಿದವು. ಯುದ್ದದ ಕ್ರೌರ್ಯ, ಮಾನಸಿಕ ವೇದನೆ, ತವಕ-ತಲ್ಲಣಗಳ ಕುರಿತು ತನ್ನ ಕೃತಿಗಳಲ್ಲಿ ಕಟ್ಟಿಕೊಟ್ಟ ಅವರು ಆಹೊತ್ತಿನ ಭೀಕರತೆ, ಭೀಭತ್ಸತೆಗೆ ಕನ್ನಡಿ ಹಿಡಿದು ಓದುಗರನ್ನು ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಕೆಟ್ ನ ‘ವೇಟಿಂಗ್ ಫಾರ್ ಗಾಡೋ ನಾಟಕ ‘ಸುಖದುಃಖಾಂತ್ಯ’ ನಾಟಕ. ಕೇವಲ ಐದೇ ಐದು ಪಾತ್ರಗಳು ಮನುಷ್ಯನ ದುಖಃ, ಸುಖ, ನೋವಿಗೆ ತಾವಾಗಿಯೇ ತೆರೆದುಕೊಳ್ಳುತ್ತವೆ. ತಮ್ಮೊಳಗಿನ ಗೊಂದಲಗಳನ್ನು ಪ್ರೇಕ್ಷಕರ ಮುಂದೆ ಇಡುತ್ತವೆ. ನಾಳೆಗಳ ಕನಸುಗಳನ್ನು ಕಟ್ಟಿಕೊಳ್ಳುತ್ತಲೇ ಆ ಕನಸುಗಳನ್ನು ಕೊಂದುಕೊಳ್ಳುತ್ತವೆ. ಇಂಥದ್ದೊಂದು ನಾಟಕವನ್ನು ತುಮಕೂರಿನಲ್ಲಿ ಪ್ರದರ್ಶಿಸಲಾಯಿತು. ಲೋಕಚರಿತ ರಂಗ ಕೇಂದ್ರ ಎಂಬ ಚಿಕ್ಕದಾಳವಟ್ಟದ ಗ್ರಾಮೀಣ ಸಂಘಟನೆ ಬೆಕೆಟ್ ನ ವೇಟಿಂಗ್ ಫಾರ್ ಗಾಡೋ ನಾಟಕ ಪ್ರದರ್ಶನಕ್ಕೆ ವೇದಿಕೆ ಒದಗಿಸಿತ್ತು. ರಂಗ ತಂಡದ ಕಲಾವಿದರು ಪುಟ್ಟ ಹೆಜ್ಜೆಗಳನ್ನು ಇಡುತ್ತಿದ್ದರೂ ಅವು ದೃಢವಾಗಿದ್ದವು. ಅವರು ಪ್ರತಿಯೊಂದು ಸನ್ನಿವೇಶದಲ್ಲೂ ಸಭಿಕರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾದರು.

ಬರಡುಭೂಮಿ, ಬೆಟ್ಟಗುಡ್ಡಗಳು, ಎಲೆಗಳೇ ಇಲ್ಲದ ಮರಗಳು. ಅಂಥ ಪ್ರದೇಶದಲ್ಲಿ ಇಬ್ಬರು ದಿಕ್ಕುದೆಸ (ಬೇವರ್ಸಿಗಳು) ಇಲ್ಲದ ಅಬ್ಬೇಪಾರಿಗಳು. ಮೊದಲಿಗೆ ಗುಡ್ಡವೊಂದರ ಮೇಲೆ ಕುಳಿತು ತನ್ನ ಎಡಗಾಲಿನ ಬೂಟು ಬಿಚ್ಚುವ ದೃಶ್ಯದಿಂದ ಆರಂಭವಾಗುವ ನಾಟಕ ಮುಂದೆ ತನ್ನ ಕಥಾಹಂದರವನ್ನು ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಮೊದಲು ಗುಡ್ಡದ ಮೇಲೆ ಕುಳಿತ ವ್ಯಕ್ತಿಯ ಜೊತೆಗೆ ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಅಮೂರ್ತ ರೂಪದ ಗಾಡೋನಿಗಾಗಿ ಕಾಯುವುದು. ಕಾಲದೂಡಲು, ಬೇಸರ ನಿವಾರಣೆಗೆ ಮತ್ತು ಮೌನ ವಾತಾವರಣ ಮುರಿದು ಹಾಕಲು ಇಬ್ಬರು ಬೇವರ್ಸಿಗಳು ಮಾತಿಗೆ ಆರಂಭಿಸುತ್ತಾರೆ. ಅವರ ಮಾತುಗಳು ಎಲ್ಲೆಲ್ಲೋ ಹೋಗುತ್ತವೆ. ಇಬ್ಬರು ಅಬ್ಬೇಪಾರಿಗಳ ನಡುವಿನ ಸಂಭಾಷಣೆ ಅಸಂಬದ್ದವಾಗಿರುತ್ತದೆ. ತಾಳತಪ್ಪುತ್ತದೆ. ಒಂದಕ್ಕೊಂದು ಸಂಬಂಧವೇ ಇಲ್ಲದಂತೆ ಆಗುತ್ತದೆ. ಇದು ಎರಡು ಮಹಾಯುದ್ದದ ಸಮಯದಲ್ಲಾದ ಸನ್ನಿವೇಶಕ್ಕೆ ಹಿಡಿದ ಕನ್ನಡಿಯಾಗಿದೆ.

ಈ ನಾಟಕ ಸಂಪೂರ್ಣವಾಗಿ ಸಂಗತವೂ ಅಲ್ಲದ, ಅಸಂಗತವೂ ಅಲ್ಲದ ಸ್ಥಿತಿಯಲ್ಲಿ ಮುಂದುವರಿಯುತ್ತದೆ. ಶಬರಿ ರಾಮನಿಗಾಗಿ ವರ್ಷಾನುಗಟ್ಟಲೆ ಕಾಯುವಂತೆ (ಕೊನೆಗೂ ಶಬರಿಗೆ ರಾಮನ ದರ್ಶನವಾಗುತ್ತದೆ.) ಈ ಇಬ್ಬರು ಬೇವರ್ಸಿಗಳು ತಾವೂ ನೋಡಿಯೇ ಇಲ್ಲದ, ಪರಿಚಯವೇ ಇಲ್ಲದ ಗಾಡೋನಿಗಾಗಿ ಕಾಯುತ್ತಾ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸುತ್ತಾರೆ. ಈ ಪಾತ್ರಗಳು ಪ್ರತಿಯೊಬ್ಬ ವ್ಯಕ್ತಿಯ ಮನದಾಳದ ಗೊಂದಲಗಳಿಗೆ ಮುಖಾಮುಖಿಯಾಗುತ್ತಾರೆ. ಇಂದಿನ ಸಮಾಜದಲ್ಲೂ ವ್ಯಕ್ತಿ ಯಾರನ್ನೋ ಕಾಯುತ್ತಾ, ನಿರೀಕ್ಷೆ ಮಾಡುತ್ತ, ಅವರು ಸಿಗದೇ, ಬೇಸರ, ನೋವು ತಡೆಯಲಾರದೆ ಆತ್ಮಹತ್ಯೆಗೆ ಯತ್ನಿಸುವ ಸನ್ನಿವೇಶಕ್ಕೂ ಈ ಪಾತ್ರಗಳು ಮುಖಾಮುಖಿಯಾಗುತ್ತವೆ. ಯುದ್ದದಂತಹ ಸನ್ನಿವೇಶದಲ್ಲಿ ಮನುಷ್ಯನ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಈ ಪಾತ್ರಗಳು ಕಟ್ಟಿಕೊಡುತ್ತವೆ.

ಮನುಷ್ಯನ ಮನಸ್ಸು ಕ್ಷಣಕ್ಷಣಕ್ಕೂ ಬದಲಾಗುತ್ತಿರುತ್ತದೆ. ಒಮ್ಮೆ ಆಡಿದ ಮಾತು ಮತ್ತೊಮ್ಮೆ ಆಡುವುದಿಲ್ಲ. ಹಾಗೆಯೇ ಈ ಬೇವರ್ಸಿ ಪಾತ್ರಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆ. ನಮ್ಮ ನಿರೀಕ್ಷೆಗಳು ಸುಳ್ಳಾಗಬಹುದು. ನೋವು, ಸಂಕಟ, ದುಃಖ ಕ್ಷಣ ಕಾಲ ಮರೆಯಾಗಬಹುದು. ಆದರೆ ದುತ್ತೆಂದು ಒಕ್ಕರಿಸುತ್ತವೆ ಎಂಬುದನ್ನು ಈ ಪಾತ್ರಗಳು ಸಾಕ್ಷೀಕರಿಸುತ್ತವೆ. ಒಮ್ಮೆ ಒಣಗಿದ ಮರವೂ ಚಿಗುರಬಹುದು. ಹಾಗೆಯೇ ಮನುಷ್ಯನಲ್ಲೂ ಬದುಕುವ ಉತ್ಸಾಹ ಮೂಡಬಹುದು. ಅದು ಹೆಚ್ಚು ದಿನ ಇರುವುದಿಲ್ಲ. ಕೊನೆಗೆ ಆ ಎರಡು ಪಾತ್ರಗಳು ಹೀಗೆ ಸಾರುತ್ತವೆ. ನಾವು ನಾಳೆ ಇಲ್ಲಿಗೆ ಮರಳಿ ಬಂದರೆ ಬದುಕಿರುತ್ತೇವೆ. ಬಾರದೆ ಇದ್ದರೆ ನಾವು ಸತ್ತಂತೆ ಎಂಬಲ್ಲಿಗೆ ನಾಟಕ ಅಂತ್ಯವಾಗುತ್ತದೆ. ಇಡೀ ನಾಟಕದ ಉದ್ದಕ್ಕೂ ಎರಡು ಬೇವರ್ಸಿ ಪಾತ್ರಗಳೇ ಪ್ರಧಾನವಾಗಿವೆ.

ಈ ನಡುವೆ ಆ ಬರಡು ಭೂಮಿಯಲ್ಲಿದ್ದ ಇಬ್ಬರು ಬೇವರ್ಸಿ ಪಾತ್ರಗಳಗಳ ಜೊತೆಗೆ ಎಷ್ಟೋ ದಿನ ಕಳೆದ ಮೇಲೆ ಅಲ್ಲಿಗೆ ಪೋಜೋ ಅಲ್ಲಿಗೆ ಲಕ್ಕಿಯೊಂದಿಗೆ ಬರುತ್ತಾನೆ. ಆತ ವಿರಾಮ ಪಡೆಯಲು ಆ ಬೇವರ್ಸಿಗಳೊಂದಿಗೆ ಕೆಲಕಾಲ ಮಾತಿಗೆ ಇಳಿಯುತ್ತಾನೆ. ಅವರ ನಡುವೆ ನಡೆಯುವ ಸಂಭಾಷಣೆ ನಗೆಯುಕ್ಕಿಸುತ್ತದೆ. ಪೋಜೋ ಬಿಸುಟ ಮೋಟು ಬೀಡಿ, ಮೂಳೆ ಚಿಕನ್ ಗಳನ್ನು ಆ ಇಬ್ಬರು ಬೇವರ್ಸಿ ಪಾತ್ರಗಳು ತೆಗೆದುಕೊಂಡು ಮೋಜು ಮಾಡುತ್ತವೆ. ಲಕ್ಕಿಯದು ಪೋಜೇನ ಸಾಮಾನುಗಳನ್ನು ಹೊರುವ ಕೆಲಸ. ಹೇಳಿದ್ದು ಮಾಡುವ ಚಾಕರಿ. ಯುದ್ದದಂತಹ ಪರಿಸ್ಥಿತಿಯಲ್ಲಿ ಶ್ರೀಮಂತರು ಬಡವರನ್ನು ಗುಲಾಮರನ್ನಾಗಿ ಇಟ್ಟುಕೊಳ್ಳುತ್ತಿದ್ದರು ಎಂಬುದನ್ನು ಈ ಪಾತ್ರ ಹೇಳುತ್ತದೆ.  ಇವರ ನುಡವೆ ನಡೆಯುವ ಸಂಭಾಷಣೆಯಲ್ಲಿ ಕಪ್ಪು, ಬಿಳುಪು, ಹಸಿರು ಮೊದಲಾದ ಬಣ್ಣಗಳ ಕುರಿತು ವ್ಯಕ್ತವಾಗುವ ಮಾತುಗಳು ಅಸಂಬದ್ದತೆ ಪ್ರೇಕ್ಷಕರಲ್ಲಿ ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ.

ಹುಡುಗನ ಪಾತ್ರ ಎರಡೇ ಬಾರಿ ರಂಗದ ಮೇಲೆ ಕಂಡು ಬಂದರೂ ಗಮನ ಸೆಳೆಯುತ್ತದೆ. ಬೇವರ್ಸಿಗಳ ಬಳಿ ಬರುವ ಆ ಹುಡುಗ ನಾನು ಗಾಡೋನನ್ನು ನೋಡಿದ್ದೇನೆ. ಅವನ ಬಳಿಯಿಂದಲೇ ಬಂದಿದ್ದೇನೆ ಎನ್ನುತ್ತಾನೆ. ಅದಕ್ಕೆ ಬೇವರ್ಸಿಗಳು ನಾವು ಗಾಡೋಗಾಗಿ ಕಾಯುತ್ತಿದ್ದೇವೆ ಎಂಬುದನ್ನು ತಿಳಿಸುವಂತೆ ಆ ಹುಡುಗನಿಗೆ ಹೇಳುತ್ತಾರೆ. ಆದರೆ ಆ ಹುಡುಗ ಎರಡನೇ ಬಾರಿ ಬಂದಾಗ ನಾನು ನೆನ್ನೆ ಬಂದ ಹುಡುಗನಲ್ಲ. ನಾನು ಗಾಡೋ ನೋಡಿಲ್ಲ. ನೀವು ಯಾರು? ನಿಮ್ಮನ್ನೂ ನಾನು ಭೇಟಿ ಮಾಡಿಲ್ಲ ಎಂದು ಪ್ರೇಕ್ಷಕರನ್ನು ಗೊಂದಲದಲ್ಲಿ ಕೆಡವುತ್ತಾನೆ. ಮತ್ತೆ ಆ ಬೇವರ್ಸಿಗಳು ನಿನ್ನೆ ನೀನು ಬಂದಿದ್ದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರೂ ಒಪ್ಪಿಕೊಳ್ಳುವುದಿಲ್ಲ ಆ ಹುಡುಗ. ಇಂದು ಕೂಡ ಅಂಥವೇ ಸಂಗತಿಗಳು ನಮ್ಮ ನಡುವೆ ನಡೆಯುತ್ತಿರುವುದನ್ನು ನೋಡುತ್ತೇವೆ.

ಜಗತ್ತಿನಲ್ಲಿ ಜನಾಂಗೀಯ ದಬ್ಬಾಳಿಕೆ ನಡೆಯುತ್ತಿರುವುದಕ್ಕೆ, ಸಮಾಜದಲ್ಲಿ ತಾರತಮ್ಯದ ಮನೋಭಾವ ಇಂದಿಗೂ ಇರುವ ಬಗ್ಗೆ ಮಾರ್ಮಿಕವಾಗಿ ಧ್ವನಿಸುತ್ತದೆ. ಆಧುನಿಕ ಜಗತ್ತಿನ ನಾಗಾಲೋಟದಲ್ಲಿ ಮನುಷ್ಯ ಕ್ಷಣ ನಿಂತು ಆಲೋಚಿಸುವುದಕ್ಕೂ ಸಮಯವಿಲ್ಲದ ಪರಿಯನ್ನು ಹೇಳುತ್ತದೆ. ಗೊಂದಲದಲ್ಲಿರುವ ಮನುಷ್ಯನ ಮಾನಸಲೋಕದ ಅಲ್ಲೋಲಕಲ್ಲೋಲಗಳಿಗೆ ಪಾತ್ರಗಳು ಜೀವ ತುಂಬುತ್ತವೆ. ವೇಟಿಂಗ್ ಪಾರ್ ಗಾಡೋ ಇಂದಿಗೂ ಪ್ರಸ್ತುತವಾಗಿದೆ. ಮನುಷ್ಯನಲ್ಲಾಗುವ ಬದಲಾವಣೆಗಳನ್ನು ಹೇಳುತ್ತದೆ.

ರವಿಶಂಕರ್ ಆರ್ ನೀನಾಸಂ ನಿರ್ದೇಶನದಲ್ಲಿ ನಾಟಕ ಚನ್ನಾಗಿ ಮೂಡಿಬಂತು. ಚನ್ನಕೇಶವ, ಜಿತೇಂದ್ರ, ಜಿ.ಎಸ್. ಮೋಹನ್, ಶ್ರೀಕಾಂತ್, ಸುಮಂತ್ ಜಿ.ಜಿ. ವೇಟಿಮಗ್ ಫಾರ್ ಗಾಡೋ ನಾಟಕದ ಪಾತ್ರಗಳಿಗೆ ಜೀವ ತುಂಬಿದರು. ಲೋಕಚರಿತ ರಂಗ ಕೇಂದ್ರದ ಮುಖ್ಯಸ್ಥ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...