Homeಮುಖಪುಟ’ವೇಟಿಂಗ್ ಪಾರ್ ಗಾಡೋ’ ; ನಮ್ಮನ್ನು ಉದ್ದೇಶಿಸಿ ಮಾತನಾಡುವ ನಾಟಕ...

’ವೇಟಿಂಗ್ ಪಾರ್ ಗಾಡೋ’ ; ನಮ್ಮನ್ನು ಉದ್ದೇಶಿಸಿ ಮಾತನಾಡುವ ನಾಟಕ…

ಎರಡು ಮಹಾಯುದ್ದಗಳನ್ನು ಕಣ್ಣಾರೆ ಕಂಡ ಬೆಕೆಟ್, ಯುದ್ದದ ಸಂರ್ಭದಲ್ಲಿ ನಡೆದ ಸಾವು ನೋವುಗಳು ಅವರ ಮನಕಲಿಕಿದವು. ಯುದ್ದದ ಕ್ರೌರ್ಯ, ಮಾನಸಿಕ ವೇದನೆ, ತವಕ-ತಲ್ಲಣಗಳ ಕುರಿತು ತನ್ನ ಕೃತಿಗಳಲ್ಲಿ ಕಟ್ಟಿಕೊಟ್ಟ ಅವರು ಆಹೊತ್ತಿನ ಭೀಕರತೆ, ಭೀಭತ್ಸತೆಗೆ ಕನ್ನಡಿ ಹಿಡಿದು ಓದುಗರನ್ನು ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -
- Advertisement -

ಸ್ಯಾಮುಯಲ್ ಬೆಕೆಟ್ ಐರಿಷ್ ಕವಿ. ಅವನೊಬ್ಬ ಶ್ರೇಷ್ಟ ಕಾದಂಬರಿಕಾರ. ಕಥೆಗಾರ ಹಾಗೆಯೇ ನಾಟಕಕಾರ. ಅಷ್ಟೇ ಅಲ್ಲ ಭಾಷಾಂತರಕಾರ ಕೂಡ. ಫ್ರೆಂಚ್ ಮತ್ತು ಐರೀಷ್ ಎರಡು ಭಾಷೆಗಳಲ್ಲೂ ಹಲವು ಶ್ರೇಷ್ಟಮಟ್ಟದ ಕೃತಿಗಳನ್ನು ರಚಿಸಿರುವ ಬೆಕೆಟ್ 1906 ರಲ್ಲಿ ಜನಿಸಿ 1989ರಲ್ಲಿ ತೀರಿಕೊಂಡ. ಜೀವಿತದ ಅವಧಿಯಲ್ಲಿ ಮರ್ಫಿ, ವಾಲ್, ಮಲೋನೆ ಡೈಸ್, ವೈಟಿಂಗ್ ಫಾರ್ ಗಾಡೋ, ಎಂಡ್ ಗೇಮ್ ಹೀಗೆ ಹತ್ತಾರು ಪ್ರಮುಖ ಕೃತಿಗಳನ್ನು ರಚಿಸಿದ್ದು ಈತನಿಗೆ 1969ರಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ.

ಎರಡು ಮಹಾಯುದ್ದಗಳನ್ನು ಕಣ್ಣಾರೆ ಕಂಡ ಬೆಕೆಟ್, ಯುದ್ದದ ಸಂರ್ಭದಲ್ಲಿ ನಡೆದ ಸಾವು ನೋವುಗಳು ಅವರ ಮನಕಲಿಕಿದವು. ಯುದ್ದದ ಕ್ರೌರ್ಯ, ಮಾನಸಿಕ ವೇದನೆ, ತವಕ-ತಲ್ಲಣಗಳ ಕುರಿತು ತನ್ನ ಕೃತಿಗಳಲ್ಲಿ ಕಟ್ಟಿಕೊಟ್ಟ ಅವರು ಆಹೊತ್ತಿನ ಭೀಕರತೆ, ಭೀಭತ್ಸತೆಗೆ ಕನ್ನಡಿ ಹಿಡಿದು ಓದುಗರನ್ನು ಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಕೆಟ್ ನ ‘ವೇಟಿಂಗ್ ಫಾರ್ ಗಾಡೋ ನಾಟಕ ‘ಸುಖದುಃಖಾಂತ್ಯ’ ನಾಟಕ. ಕೇವಲ ಐದೇ ಐದು ಪಾತ್ರಗಳು ಮನುಷ್ಯನ ದುಖಃ, ಸುಖ, ನೋವಿಗೆ ತಾವಾಗಿಯೇ ತೆರೆದುಕೊಳ್ಳುತ್ತವೆ. ತಮ್ಮೊಳಗಿನ ಗೊಂದಲಗಳನ್ನು ಪ್ರೇಕ್ಷಕರ ಮುಂದೆ ಇಡುತ್ತವೆ. ನಾಳೆಗಳ ಕನಸುಗಳನ್ನು ಕಟ್ಟಿಕೊಳ್ಳುತ್ತಲೇ ಆ ಕನಸುಗಳನ್ನು ಕೊಂದುಕೊಳ್ಳುತ್ತವೆ. ಇಂಥದ್ದೊಂದು ನಾಟಕವನ್ನು ತುಮಕೂರಿನಲ್ಲಿ ಪ್ರದರ್ಶಿಸಲಾಯಿತು. ಲೋಕಚರಿತ ರಂಗ ಕೇಂದ್ರ ಎಂಬ ಚಿಕ್ಕದಾಳವಟ್ಟದ ಗ್ರಾಮೀಣ ಸಂಘಟನೆ ಬೆಕೆಟ್ ನ ವೇಟಿಂಗ್ ಫಾರ್ ಗಾಡೋ ನಾಟಕ ಪ್ರದರ್ಶನಕ್ಕೆ ವೇದಿಕೆ ಒದಗಿಸಿತ್ತು. ರಂಗ ತಂಡದ ಕಲಾವಿದರು ಪುಟ್ಟ ಹೆಜ್ಜೆಗಳನ್ನು ಇಡುತ್ತಿದ್ದರೂ ಅವು ದೃಢವಾಗಿದ್ದವು. ಅವರು ಪ್ರತಿಯೊಂದು ಸನ್ನಿವೇಶದಲ್ಲೂ ಸಭಿಕರ ಮನಸ್ಸನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾದರು.

ಬರಡುಭೂಮಿ, ಬೆಟ್ಟಗುಡ್ಡಗಳು, ಎಲೆಗಳೇ ಇಲ್ಲದ ಮರಗಳು. ಅಂಥ ಪ್ರದೇಶದಲ್ಲಿ ಇಬ್ಬರು ದಿಕ್ಕುದೆಸ (ಬೇವರ್ಸಿಗಳು) ಇಲ್ಲದ ಅಬ್ಬೇಪಾರಿಗಳು. ಮೊದಲಿಗೆ ಗುಡ್ಡವೊಂದರ ಮೇಲೆ ಕುಳಿತು ತನ್ನ ಎಡಗಾಲಿನ ಬೂಟು ಬಿಚ್ಚುವ ದೃಶ್ಯದಿಂದ ಆರಂಭವಾಗುವ ನಾಟಕ ಮುಂದೆ ತನ್ನ ಕಥಾಹಂದರವನ್ನು ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಮೊದಲು ಗುಡ್ಡದ ಮೇಲೆ ಕುಳಿತ ವ್ಯಕ್ತಿಯ ಜೊತೆಗೆ ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಅಮೂರ್ತ ರೂಪದ ಗಾಡೋನಿಗಾಗಿ ಕಾಯುವುದು. ಕಾಲದೂಡಲು, ಬೇಸರ ನಿವಾರಣೆಗೆ ಮತ್ತು ಮೌನ ವಾತಾವರಣ ಮುರಿದು ಹಾಕಲು ಇಬ್ಬರು ಬೇವರ್ಸಿಗಳು ಮಾತಿಗೆ ಆರಂಭಿಸುತ್ತಾರೆ. ಅವರ ಮಾತುಗಳು ಎಲ್ಲೆಲ್ಲೋ ಹೋಗುತ್ತವೆ. ಇಬ್ಬರು ಅಬ್ಬೇಪಾರಿಗಳ ನಡುವಿನ ಸಂಭಾಷಣೆ ಅಸಂಬದ್ದವಾಗಿರುತ್ತದೆ. ತಾಳತಪ್ಪುತ್ತದೆ. ಒಂದಕ್ಕೊಂದು ಸಂಬಂಧವೇ ಇಲ್ಲದಂತೆ ಆಗುತ್ತದೆ. ಇದು ಎರಡು ಮಹಾಯುದ್ದದ ಸಮಯದಲ್ಲಾದ ಸನ್ನಿವೇಶಕ್ಕೆ ಹಿಡಿದ ಕನ್ನಡಿಯಾಗಿದೆ.

ಈ ನಾಟಕ ಸಂಪೂರ್ಣವಾಗಿ ಸಂಗತವೂ ಅಲ್ಲದ, ಅಸಂಗತವೂ ಅಲ್ಲದ ಸ್ಥಿತಿಯಲ್ಲಿ ಮುಂದುವರಿಯುತ್ತದೆ. ಶಬರಿ ರಾಮನಿಗಾಗಿ ವರ್ಷಾನುಗಟ್ಟಲೆ ಕಾಯುವಂತೆ (ಕೊನೆಗೂ ಶಬರಿಗೆ ರಾಮನ ದರ್ಶನವಾಗುತ್ತದೆ.) ಈ ಇಬ್ಬರು ಬೇವರ್ಸಿಗಳು ತಾವೂ ನೋಡಿಯೇ ಇಲ್ಲದ, ಪರಿಚಯವೇ ಇಲ್ಲದ ಗಾಡೋನಿಗಾಗಿ ಕಾಯುತ್ತಾ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸುತ್ತಾರೆ. ಈ ಪಾತ್ರಗಳು ಪ್ರತಿಯೊಬ್ಬ ವ್ಯಕ್ತಿಯ ಮನದಾಳದ ಗೊಂದಲಗಳಿಗೆ ಮುಖಾಮುಖಿಯಾಗುತ್ತಾರೆ. ಇಂದಿನ ಸಮಾಜದಲ್ಲೂ ವ್ಯಕ್ತಿ ಯಾರನ್ನೋ ಕಾಯುತ್ತಾ, ನಿರೀಕ್ಷೆ ಮಾಡುತ್ತ, ಅವರು ಸಿಗದೇ, ಬೇಸರ, ನೋವು ತಡೆಯಲಾರದೆ ಆತ್ಮಹತ್ಯೆಗೆ ಯತ್ನಿಸುವ ಸನ್ನಿವೇಶಕ್ಕೂ ಈ ಪಾತ್ರಗಳು ಮುಖಾಮುಖಿಯಾಗುತ್ತವೆ. ಯುದ್ದದಂತಹ ಸನ್ನಿವೇಶದಲ್ಲಿ ಮನುಷ್ಯನ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಈ ಪಾತ್ರಗಳು ಕಟ್ಟಿಕೊಡುತ್ತವೆ.

ಮನುಷ್ಯನ ಮನಸ್ಸು ಕ್ಷಣಕ್ಷಣಕ್ಕೂ ಬದಲಾಗುತ್ತಿರುತ್ತದೆ. ಒಮ್ಮೆ ಆಡಿದ ಮಾತು ಮತ್ತೊಮ್ಮೆ ಆಡುವುದಿಲ್ಲ. ಹಾಗೆಯೇ ಈ ಬೇವರ್ಸಿ ಪಾತ್ರಗಳು ನಮ್ಮ ಕಣ್ಣ ಮುಂದೆ ನಿಲ್ಲುತ್ತವೆ. ನಮ್ಮ ನಿರೀಕ್ಷೆಗಳು ಸುಳ್ಳಾಗಬಹುದು. ನೋವು, ಸಂಕಟ, ದುಃಖ ಕ್ಷಣ ಕಾಲ ಮರೆಯಾಗಬಹುದು. ಆದರೆ ದುತ್ತೆಂದು ಒಕ್ಕರಿಸುತ್ತವೆ ಎಂಬುದನ್ನು ಈ ಪಾತ್ರಗಳು ಸಾಕ್ಷೀಕರಿಸುತ್ತವೆ. ಒಮ್ಮೆ ಒಣಗಿದ ಮರವೂ ಚಿಗುರಬಹುದು. ಹಾಗೆಯೇ ಮನುಷ್ಯನಲ್ಲೂ ಬದುಕುವ ಉತ್ಸಾಹ ಮೂಡಬಹುದು. ಅದು ಹೆಚ್ಚು ದಿನ ಇರುವುದಿಲ್ಲ. ಕೊನೆಗೆ ಆ ಎರಡು ಪಾತ್ರಗಳು ಹೀಗೆ ಸಾರುತ್ತವೆ. ನಾವು ನಾಳೆ ಇಲ್ಲಿಗೆ ಮರಳಿ ಬಂದರೆ ಬದುಕಿರುತ್ತೇವೆ. ಬಾರದೆ ಇದ್ದರೆ ನಾವು ಸತ್ತಂತೆ ಎಂಬಲ್ಲಿಗೆ ನಾಟಕ ಅಂತ್ಯವಾಗುತ್ತದೆ. ಇಡೀ ನಾಟಕದ ಉದ್ದಕ್ಕೂ ಎರಡು ಬೇವರ್ಸಿ ಪಾತ್ರಗಳೇ ಪ್ರಧಾನವಾಗಿವೆ.

ಈ ನಡುವೆ ಆ ಬರಡು ಭೂಮಿಯಲ್ಲಿದ್ದ ಇಬ್ಬರು ಬೇವರ್ಸಿ ಪಾತ್ರಗಳಗಳ ಜೊತೆಗೆ ಎಷ್ಟೋ ದಿನ ಕಳೆದ ಮೇಲೆ ಅಲ್ಲಿಗೆ ಪೋಜೋ ಅಲ್ಲಿಗೆ ಲಕ್ಕಿಯೊಂದಿಗೆ ಬರುತ್ತಾನೆ. ಆತ ವಿರಾಮ ಪಡೆಯಲು ಆ ಬೇವರ್ಸಿಗಳೊಂದಿಗೆ ಕೆಲಕಾಲ ಮಾತಿಗೆ ಇಳಿಯುತ್ತಾನೆ. ಅವರ ನಡುವೆ ನಡೆಯುವ ಸಂಭಾಷಣೆ ನಗೆಯುಕ್ಕಿಸುತ್ತದೆ. ಪೋಜೋ ಬಿಸುಟ ಮೋಟು ಬೀಡಿ, ಮೂಳೆ ಚಿಕನ್ ಗಳನ್ನು ಆ ಇಬ್ಬರು ಬೇವರ್ಸಿ ಪಾತ್ರಗಳು ತೆಗೆದುಕೊಂಡು ಮೋಜು ಮಾಡುತ್ತವೆ. ಲಕ್ಕಿಯದು ಪೋಜೇನ ಸಾಮಾನುಗಳನ್ನು ಹೊರುವ ಕೆಲಸ. ಹೇಳಿದ್ದು ಮಾಡುವ ಚಾಕರಿ. ಯುದ್ದದಂತಹ ಪರಿಸ್ಥಿತಿಯಲ್ಲಿ ಶ್ರೀಮಂತರು ಬಡವರನ್ನು ಗುಲಾಮರನ್ನಾಗಿ ಇಟ್ಟುಕೊಳ್ಳುತ್ತಿದ್ದರು ಎಂಬುದನ್ನು ಈ ಪಾತ್ರ ಹೇಳುತ್ತದೆ.  ಇವರ ನುಡವೆ ನಡೆಯುವ ಸಂಭಾಷಣೆಯಲ್ಲಿ ಕಪ್ಪು, ಬಿಳುಪು, ಹಸಿರು ಮೊದಲಾದ ಬಣ್ಣಗಳ ಕುರಿತು ವ್ಯಕ್ತವಾಗುವ ಮಾತುಗಳು ಅಸಂಬದ್ದತೆ ಪ್ರೇಕ್ಷಕರಲ್ಲಿ ನಗೆಗಡಲಲ್ಲಿ ತೇಲುವಂತೆ ಮಾಡುತ್ತವೆ.

ಹುಡುಗನ ಪಾತ್ರ ಎರಡೇ ಬಾರಿ ರಂಗದ ಮೇಲೆ ಕಂಡು ಬಂದರೂ ಗಮನ ಸೆಳೆಯುತ್ತದೆ. ಬೇವರ್ಸಿಗಳ ಬಳಿ ಬರುವ ಆ ಹುಡುಗ ನಾನು ಗಾಡೋನನ್ನು ನೋಡಿದ್ದೇನೆ. ಅವನ ಬಳಿಯಿಂದಲೇ ಬಂದಿದ್ದೇನೆ ಎನ್ನುತ್ತಾನೆ. ಅದಕ್ಕೆ ಬೇವರ್ಸಿಗಳು ನಾವು ಗಾಡೋಗಾಗಿ ಕಾಯುತ್ತಿದ್ದೇವೆ ಎಂಬುದನ್ನು ತಿಳಿಸುವಂತೆ ಆ ಹುಡುಗನಿಗೆ ಹೇಳುತ್ತಾರೆ. ಆದರೆ ಆ ಹುಡುಗ ಎರಡನೇ ಬಾರಿ ಬಂದಾಗ ನಾನು ನೆನ್ನೆ ಬಂದ ಹುಡುಗನಲ್ಲ. ನಾನು ಗಾಡೋ ನೋಡಿಲ್ಲ. ನೀವು ಯಾರು? ನಿಮ್ಮನ್ನೂ ನಾನು ಭೇಟಿ ಮಾಡಿಲ್ಲ ಎಂದು ಪ್ರೇಕ್ಷಕರನ್ನು ಗೊಂದಲದಲ್ಲಿ ಕೆಡವುತ್ತಾನೆ. ಮತ್ತೆ ಆ ಬೇವರ್ಸಿಗಳು ನಿನ್ನೆ ನೀನು ಬಂದಿದ್ದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರೂ ಒಪ್ಪಿಕೊಳ್ಳುವುದಿಲ್ಲ ಆ ಹುಡುಗ. ಇಂದು ಕೂಡ ಅಂಥವೇ ಸಂಗತಿಗಳು ನಮ್ಮ ನಡುವೆ ನಡೆಯುತ್ತಿರುವುದನ್ನು ನೋಡುತ್ತೇವೆ.

ಜಗತ್ತಿನಲ್ಲಿ ಜನಾಂಗೀಯ ದಬ್ಬಾಳಿಕೆ ನಡೆಯುತ್ತಿರುವುದಕ್ಕೆ, ಸಮಾಜದಲ್ಲಿ ತಾರತಮ್ಯದ ಮನೋಭಾವ ಇಂದಿಗೂ ಇರುವ ಬಗ್ಗೆ ಮಾರ್ಮಿಕವಾಗಿ ಧ್ವನಿಸುತ್ತದೆ. ಆಧುನಿಕ ಜಗತ್ತಿನ ನಾಗಾಲೋಟದಲ್ಲಿ ಮನುಷ್ಯ ಕ್ಷಣ ನಿಂತು ಆಲೋಚಿಸುವುದಕ್ಕೂ ಸಮಯವಿಲ್ಲದ ಪರಿಯನ್ನು ಹೇಳುತ್ತದೆ. ಗೊಂದಲದಲ್ಲಿರುವ ಮನುಷ್ಯನ ಮಾನಸಲೋಕದ ಅಲ್ಲೋಲಕಲ್ಲೋಲಗಳಿಗೆ ಪಾತ್ರಗಳು ಜೀವ ತುಂಬುತ್ತವೆ. ವೇಟಿಂಗ್ ಪಾರ್ ಗಾಡೋ ಇಂದಿಗೂ ಪ್ರಸ್ತುತವಾಗಿದೆ. ಮನುಷ್ಯನಲ್ಲಾಗುವ ಬದಲಾವಣೆಗಳನ್ನು ಹೇಳುತ್ತದೆ.

ರವಿಶಂಕರ್ ಆರ್ ನೀನಾಸಂ ನಿರ್ದೇಶನದಲ್ಲಿ ನಾಟಕ ಚನ್ನಾಗಿ ಮೂಡಿಬಂತು. ಚನ್ನಕೇಶವ, ಜಿತೇಂದ್ರ, ಜಿ.ಎಸ್. ಮೋಹನ್, ಶ್ರೀಕಾಂತ್, ಸುಮಂತ್ ಜಿ.ಜಿ. ವೇಟಿಮಗ್ ಫಾರ್ ಗಾಡೋ ನಾಟಕದ ಪಾತ್ರಗಳಿಗೆ ಜೀವ ತುಂಬಿದರು. ಲೋಕಚರಿತ ರಂಗ ಕೇಂದ್ರದ ಮುಖ್ಯಸ್ಥ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ DMK ಮತ್ತು AIADMK ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...