Homeಮುಖಪುಟಮರು ಪರಿಶೀಲನಾ ಅರ್ಜಿ ಸಲ್ಲಿಕೆ : ಯುಎಇಯಲ್ಲಿ ಯುಪಿ ಮಹಿಳೆಯ ಮರಣದಂಡನೆ ಮುಂದೂಡಿಕೆ : ವರದಿ

ಮರು ಪರಿಶೀಲನಾ ಅರ್ಜಿ ಸಲ್ಲಿಕೆ : ಯುಎಇಯಲ್ಲಿ ಯುಪಿ ಮಹಿಳೆಯ ಮರಣದಂಡನೆ ಮುಂದೂಡಿಕೆ : ವರದಿ

- Advertisement -
- Advertisement -

ತನ್ನ ಆರೈಕೆಯಲ್ಲಿದ್ದ ಶಿಶುವಿನ ಸಾವಿಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾಗಿರುವ ಉತ್ತರ ಪ್ರದೇಶದ ನಿವಾಸಿ ಶೆಹಝಾದಿ ಅವರಿಗೆ ಶಿಕ್ಷೆ ಜಾರಿ ಮುಂದೂಡಿಕೆಯಾಗಿದೆ. ಸದ್ಯಕ್ಕೆ ಅವರಿಗೆ ಶಿಕ್ಷೆ ವಿಧಿಸುತ್ತಿಲ್ಲ ಎಂದು ಯುಎಇ ಅಧಿಕಾರಿಗಳು ಭಾರತೀಯ ರಾಯಭಾರ ಕಚೇರಿಗೆ ತಿಳಿಸಿದ್ದಾಗಿ ವರದಿಯಾಗಿದೆ.

ಮೂಲಗಳ ಪ್ರಕಾರ, ಶೆಹಝಾದಿ ಅವರ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿಯು ಪ್ರಸ್ತುತ ಪರಿಗಣನೆಯಲ್ಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಮನೆಗೆ ಕೊನೆಯ ಫೋನ್ ಕರೆ’ ಮಾಡಿದ 24 ಗಂಟೆಯ ಒಳಗೆ ಶೆಹಝಾದಿ ಅವರಿಗೆ ಮರಣದಂಡನೆ ಜಾರಿಯಾಗಲಿದೆ ಎಂದು ವರದಿಯಾಗಿತ್ತು. ಶೆಹಝಾದಿ ಮನೆಗೆ ಕೊನೆಯ ಕರೆ ಮಾಡಿದ್ದಾರೆ ಎಂದು ಭಾರತೀಯ ಮಾಧ್ಯಮಗಳು ನಿನ್ನೆ (ಫೆ.17) ವರದಿ ಮಾಡಿತ್ತು. ಆ ಬಳಿಕ ಈ ಪ್ರಕರಣ ಮನ ಸೆಳೆದಿದೆ.

“ಶೆಹಝಾದಿ ಅವರನ್ನು 24 ಗಂಟೆಯೊಳಗೆ ಗಲ್ಲಿಗೇರಿಸಲಾಗುವುದು ಎಂಬ ವರದಿ ತಪ್ಪಾಗಿದೆ. ಯುಎಇ ಅಧಿಕಾರಿಗಳಿಂದ ರಾಯಭಾರ ಕಚೇರಿ ಇದನ್ನು ದೃಢಪಡಿಸಿದೆ. ಶೆಹಝಾದಿ ಅವರ ಪ್ರಕರಣದಲ್ಲಿ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಅದು ಈಗ ವಿಚಾರಣೆಯ ಹಂತದಲ್ಲಿದೆ” ಎಂದು ಮೂಲಗಳು ತಿಳಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮತೌಂಧ್ ಪೊಲೀಸ್ ಠಾಣೆ ವ್ಯಾಪ್ತಿಯ ಗೊಯ್ರಾ ಮುಗ್ಲಿ ಗ್ರಾಮದ ನಿವಾಸಿಯಾಗಿರುವ ಶೆಹಝಾದಿ ಬಡ ಕುಟುಂಬದ ಹೆಣ್ಣು ಮಗಳು. ಬಾಲ್ಯದಲ್ಲಿ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಗೆ ಸುಟ್ಟ ಗಾಯಗಳಾಗಿದ್ದವು. ಈಕೆಗೆ ಆಗ್ರಾದ ನಿವಾಸಿ ಉಝೈರ್ ಎಂಬಾತ ಫೇಸ್ಬುಕ್ ಮೂಲಕ ಪರಿಚಯವಾಗಿದ್ದ. ಬಳಿಕ ಇಬ್ಬರ ನಡುವೆ ಪ್ರೀತಿ ಬೆಳೆದಿದೆ. 2021ರಲ್ಲಿ ಆಕೆಯ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡುವುದಾಗಿ ಆಗ್ರಾಕ್ಕೆ ಕರೆದುಕೊಂಡು ಹೋದ ಉಝೈರ್, ಆಕೆಯನ್ನು ತನ್ನ ಸಂಬಂಧಿಕರಾದ ಫೈಝ್ ಮತ್ತು ನಾದಿಯಾ ಎಂಬ ದಂಪತಿಗೆ ಮಾರಾಟ ಮಾಡಿದ್ದಾನೆ ಎಂದು ಹೇಳಲಾಗಿದೆ. ಆಕೆಯನ್ನು ದಂಪತಿ ದುಬೈಗೆ ಕರೆದುಕೊಂಡು ಹೋಗಿದ್ದಾರೆ.

ಬಂದಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಈಗ ದುಬೈನಲ್ಲಿ ನೆಲೆಸಿರುವ ಈ ದಂಪತಿ ವಿರುದ್ಧ ಮಾನವ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿ ಹುಡುಕಾಟವನ್ನು ನಡೆಸುತ್ತಿದ್ದಾರೆ.

ಶೆಹಝಾದಿ ಇದ್ದ ಮನೆಯಲ್ಲಿ, ಇದ್ದಕ್ಕಿದ್ದಂತೆ ಒಂದು ದಿನ ಅವರ ಮಗುವಿನ ಆರೋಗ್ಯ ಹದಗೆಟ್ಟು ಮೃತಪಟ್ಟಿದೆ. ಮಗು ಮೃತಪಟ್ಟ ಎರಡು ತಿಂಗಳ ನಂತರ ಮಗುವಿನ ಸಾವಿಗೆ ಶೆಹಝಾದಿ ಕಾರಣ ಎಂದು ಪೋಷಕರು ಆರೋಪಿಸಿ ದೂರು ನೀಡಿದ್ದಾರೆ. ಬಳಿಕ ಅವರ ಬಂಧನವೂ ನಡೆದಿದೆ. ಈ ಕುರಿತ ತನಿಖೆಯ ನಂತರ ದುಬೈ ನ್ಯಾಯಾಲಯವು ಶೆಹಝಾದಿ ತಪ್ಪಿತಸ್ಥೆ ಎಂದು ಮರಣದಂಡನೆ ಶಿಕ್ಷೆ ವಿಧಿಸಿದೆ. ಶೆಹಝಾದಿ ಪ್ರಸ್ತುತ ಅಲ್ಬತ್ವಾ ಜೈಲಿನಲ್ಲಿ ಬಂಧಿಯಾಗಿದ್ದಾರೆ.

ದುಬೈನಲ್ಲಿ ಶೆಹಝಾದಿ ಮರಣದಂಡನೆಗೆ ಗುರಿಯಾದ ನಂತರ, ಆಕೆಯ ತಂದೆ ಶಬ್ಬೀರ್ ಖಾನ್, ಉತ್ತರ ಪ್ರದೇಶದ ಬಂದಾ ಜಿಲ್ಲಾಡಳಿತ, ರಾಜ್ಯ ಸರ್ಕಾರ ಎರಡಕ್ಕೂ ಮಧ್ಯಪ್ರವೇಶಿಸಿ ತನ್ನ ಮಗಳನ್ನು ಉಳಿಸುವಂತೆ ಮನವಿ ಮಾಡಿದ್ದರು.

ಮಗುವಿನ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣ ಎಂದು ಶೆಹಝಾದಿ ಮತ್ತು ಆಕೆಯ ತಂದೆ ಹೇಳಿಕೊಂಡಿದ್ದಾರೆ. ಆದರೆ, ದಂಪತಿ ಶೆಹಝಾದಿಯ ಮೇಲೆ ಆರೋಪ ಹೊರಿಸಿದ್ದರು. ಇದು ಆಕೆಯ ವಿರುದ್ಧ ಮೊಕದ್ದಮೆ ಹೂಡಲು ಮತ್ತು ಅಂತಿಮವಾಗಿ ಮರಣದಂಡನೆ ಶಿಕ್ಷೆ ವಿಧಿಸಲು ಕಾರಣವಾಗಿದೆ.

“ಫೆಬ್ರವರಿ 16ರಂದು ಶೆಹಝಾದಿ ಅವರ ಕುಟುಂಬಕ್ಕೆ ದುಬೈನಿಂದ ಕರೆ ಬಂದಿದೆ. ಆಕೆ ತನ್ನ ತಂದೆ, ತಾಯಿಯ ಜೊತೆ ಮಾತನಾಡುತ್ತಾ, ನನ್ನನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ನನ್ನನ್ನು ಗಲ್ಲಿಗೇರಿಸುವುದಾಗಿ ಜೈಲಿನ ಕ್ಯಾಪ್ಟನ್ ತಿಳಿಸಿದ್ದಾರೆ” ಎಂದು ಹೇಳಿದ್ದಾಗಿ ವರದಿಯಾಗಿದೆ.

‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...