Homeಮುಖಪುಟಮರು ಪರಿಶೀಲನಾ ಅರ್ಜಿ ಸಲ್ಲಿಕೆ : ಯುಎಇಯಲ್ಲಿ ಯುಪಿ ಮಹಿಳೆಯ ಮರಣದಂಡನೆ ಮುಂದೂಡಿಕೆ : ವರದಿ

ಮರು ಪರಿಶೀಲನಾ ಅರ್ಜಿ ಸಲ್ಲಿಕೆ : ಯುಎಇಯಲ್ಲಿ ಯುಪಿ ಮಹಿಳೆಯ ಮರಣದಂಡನೆ ಮುಂದೂಡಿಕೆ : ವರದಿ

- Advertisement -
- Advertisement -

ತನ್ನ ಆರೈಕೆಯಲ್ಲಿದ್ದ ಶಿಶುವಿನ ಸಾವಿಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾಗಿರುವ ಉತ್ತರ ಪ್ರದೇಶದ ನಿವಾಸಿ ಶೆಹಝಾದಿ ಅವರಿಗೆ ಶಿಕ್ಷೆ ಜಾರಿ ಮುಂದೂಡಿಕೆಯಾಗಿದೆ. ಸದ್ಯಕ್ಕೆ ಅವರಿಗೆ ಶಿಕ್ಷೆ ವಿಧಿಸುತ್ತಿಲ್ಲ ಎಂದು ಯುಎಇ ಅಧಿಕಾರಿಗಳು ಭಾರತೀಯ ರಾಯಭಾರ ಕಚೇರಿಗೆ ತಿಳಿಸಿದ್ದಾಗಿ ವರದಿಯಾಗಿದೆ.

ಮೂಲಗಳ ಪ್ರಕಾರ, ಶೆಹಝಾದಿ ಅವರ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿಯು ಪ್ರಸ್ತುತ ಪರಿಗಣನೆಯಲ್ಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಮನೆಗೆ ಕೊನೆಯ ಫೋನ್ ಕರೆ’ ಮಾಡಿದ 24 ಗಂಟೆಯ ಒಳಗೆ ಶೆಹಝಾದಿ ಅವರಿಗೆ ಮರಣದಂಡನೆ ಜಾರಿಯಾಗಲಿದೆ ಎಂದು ವರದಿಯಾಗಿತ್ತು. ಶೆಹಝಾದಿ ಮನೆಗೆ ಕೊನೆಯ ಕರೆ ಮಾಡಿದ್ದಾರೆ ಎಂದು ಭಾರತೀಯ ಮಾಧ್ಯಮಗಳು ನಿನ್ನೆ (ಫೆ.17) ವರದಿ ಮಾಡಿತ್ತು. ಆ ಬಳಿಕ ಈ ಪ್ರಕರಣ ಮನ ಸೆಳೆದಿದೆ.

“ಶೆಹಝಾದಿ ಅವರನ್ನು 24 ಗಂಟೆಯೊಳಗೆ ಗಲ್ಲಿಗೇರಿಸಲಾಗುವುದು ಎಂಬ ವರದಿ ತಪ್ಪಾಗಿದೆ. ಯುಎಇ ಅಧಿಕಾರಿಗಳಿಂದ ರಾಯಭಾರ ಕಚೇರಿ ಇದನ್ನು ದೃಢಪಡಿಸಿದೆ. ಶೆಹಝಾದಿ ಅವರ ಪ್ರಕರಣದಲ್ಲಿ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಅದು ಈಗ ವಿಚಾರಣೆಯ ಹಂತದಲ್ಲಿದೆ” ಎಂದು ಮೂಲಗಳು ತಿಳಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮತೌಂಧ್ ಪೊಲೀಸ್ ಠಾಣೆ ವ್ಯಾಪ್ತಿಯ ಗೊಯ್ರಾ ಮುಗ್ಲಿ ಗ್ರಾಮದ ನಿವಾಸಿಯಾಗಿರುವ ಶೆಹಝಾದಿ ಬಡ ಕುಟುಂಬದ ಹೆಣ್ಣು ಮಗಳು. ಬಾಲ್ಯದಲ್ಲಿ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಗೆ ಸುಟ್ಟ ಗಾಯಗಳಾಗಿದ್ದವು. ಈಕೆಗೆ ಆಗ್ರಾದ ನಿವಾಸಿ ಉಝೈರ್ ಎಂಬಾತ ಫೇಸ್ಬುಕ್ ಮೂಲಕ ಪರಿಚಯವಾಗಿದ್ದ. ಬಳಿಕ ಇಬ್ಬರ ನಡುವೆ ಪ್ರೀತಿ ಬೆಳೆದಿದೆ. 2021ರಲ್ಲಿ ಆಕೆಯ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡುವುದಾಗಿ ಆಗ್ರಾಕ್ಕೆ ಕರೆದುಕೊಂಡು ಹೋದ ಉಝೈರ್, ಆಕೆಯನ್ನು ತನ್ನ ಸಂಬಂಧಿಕರಾದ ಫೈಝ್ ಮತ್ತು ನಾದಿಯಾ ಎಂಬ ದಂಪತಿಗೆ ಮಾರಾಟ ಮಾಡಿದ್ದಾನೆ ಎಂದು ಹೇಳಲಾಗಿದೆ. ಆಕೆಯನ್ನು ದಂಪತಿ ದುಬೈಗೆ ಕರೆದುಕೊಂಡು ಹೋಗಿದ್ದಾರೆ.

ಬಂದಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಈಗ ದುಬೈನಲ್ಲಿ ನೆಲೆಸಿರುವ ಈ ದಂಪತಿ ವಿರುದ್ಧ ಮಾನವ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿ ಹುಡುಕಾಟವನ್ನು ನಡೆಸುತ್ತಿದ್ದಾರೆ.

ಶೆಹಝಾದಿ ಇದ್ದ ಮನೆಯಲ್ಲಿ, ಇದ್ದಕ್ಕಿದ್ದಂತೆ ಒಂದು ದಿನ ಅವರ ಮಗುವಿನ ಆರೋಗ್ಯ ಹದಗೆಟ್ಟು ಮೃತಪಟ್ಟಿದೆ. ಮಗು ಮೃತಪಟ್ಟ ಎರಡು ತಿಂಗಳ ನಂತರ ಮಗುವಿನ ಸಾವಿಗೆ ಶೆಹಝಾದಿ ಕಾರಣ ಎಂದು ಪೋಷಕರು ಆರೋಪಿಸಿ ದೂರು ನೀಡಿದ್ದಾರೆ. ಬಳಿಕ ಅವರ ಬಂಧನವೂ ನಡೆದಿದೆ. ಈ ಕುರಿತ ತನಿಖೆಯ ನಂತರ ದುಬೈ ನ್ಯಾಯಾಲಯವು ಶೆಹಝಾದಿ ತಪ್ಪಿತಸ್ಥೆ ಎಂದು ಮರಣದಂಡನೆ ಶಿಕ್ಷೆ ವಿಧಿಸಿದೆ. ಶೆಹಝಾದಿ ಪ್ರಸ್ತುತ ಅಲ್ಬತ್ವಾ ಜೈಲಿನಲ್ಲಿ ಬಂಧಿಯಾಗಿದ್ದಾರೆ.

ದುಬೈನಲ್ಲಿ ಶೆಹಝಾದಿ ಮರಣದಂಡನೆಗೆ ಗುರಿಯಾದ ನಂತರ, ಆಕೆಯ ತಂದೆ ಶಬ್ಬೀರ್ ಖಾನ್, ಉತ್ತರ ಪ್ರದೇಶದ ಬಂದಾ ಜಿಲ್ಲಾಡಳಿತ, ರಾಜ್ಯ ಸರ್ಕಾರ ಎರಡಕ್ಕೂ ಮಧ್ಯಪ್ರವೇಶಿಸಿ ತನ್ನ ಮಗಳನ್ನು ಉಳಿಸುವಂತೆ ಮನವಿ ಮಾಡಿದ್ದರು.

ಮಗುವಿನ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣ ಎಂದು ಶೆಹಝಾದಿ ಮತ್ತು ಆಕೆಯ ತಂದೆ ಹೇಳಿಕೊಂಡಿದ್ದಾರೆ. ಆದರೆ, ದಂಪತಿ ಶೆಹಝಾದಿಯ ಮೇಲೆ ಆರೋಪ ಹೊರಿಸಿದ್ದರು. ಇದು ಆಕೆಯ ವಿರುದ್ಧ ಮೊಕದ್ದಮೆ ಹೂಡಲು ಮತ್ತು ಅಂತಿಮವಾಗಿ ಮರಣದಂಡನೆ ಶಿಕ್ಷೆ ವಿಧಿಸಲು ಕಾರಣವಾಗಿದೆ.

“ಫೆಬ್ರವರಿ 16ರಂದು ಶೆಹಝಾದಿ ಅವರ ಕುಟುಂಬಕ್ಕೆ ದುಬೈನಿಂದ ಕರೆ ಬಂದಿದೆ. ಆಕೆ ತನ್ನ ತಂದೆ, ತಾಯಿಯ ಜೊತೆ ಮಾತನಾಡುತ್ತಾ, ನನ್ನನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ನನ್ನನ್ನು ಗಲ್ಲಿಗೇರಿಸುವುದಾಗಿ ಜೈಲಿನ ಕ್ಯಾಪ್ಟನ್ ತಿಳಿಸಿದ್ದಾರೆ” ಎಂದು ಹೇಳಿದ್ದಾಗಿ ವರದಿಯಾಗಿದೆ.

‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...