Homeಮುಖಪುಟಮರು ಪರಿಶೀಲನಾ ಅರ್ಜಿ ಸಲ್ಲಿಕೆ : ಯುಎಇಯಲ್ಲಿ ಯುಪಿ ಮಹಿಳೆಯ ಮರಣದಂಡನೆ ಮುಂದೂಡಿಕೆ : ವರದಿ

ಮರು ಪರಿಶೀಲನಾ ಅರ್ಜಿ ಸಲ್ಲಿಕೆ : ಯುಎಇಯಲ್ಲಿ ಯುಪಿ ಮಹಿಳೆಯ ಮರಣದಂಡನೆ ಮುಂದೂಡಿಕೆ : ವರದಿ

- Advertisement -
- Advertisement -

ತನ್ನ ಆರೈಕೆಯಲ್ಲಿದ್ದ ಶಿಶುವಿನ ಸಾವಿಗೆ ಸಂಬಂಧಿಸಿದಂತೆ ಮರಣದಂಡನೆಗೆ ಗುರಿಯಾಗಿರುವ ಉತ್ತರ ಪ್ರದೇಶದ ನಿವಾಸಿ ಶೆಹಝಾದಿ ಅವರಿಗೆ ಶಿಕ್ಷೆ ಜಾರಿ ಮುಂದೂಡಿಕೆಯಾಗಿದೆ. ಸದ್ಯಕ್ಕೆ ಅವರಿಗೆ ಶಿಕ್ಷೆ ವಿಧಿಸುತ್ತಿಲ್ಲ ಎಂದು ಯುಎಇ ಅಧಿಕಾರಿಗಳು ಭಾರತೀಯ ರಾಯಭಾರ ಕಚೇರಿಗೆ ತಿಳಿಸಿದ್ದಾಗಿ ವರದಿಯಾಗಿದೆ.

ಮೂಲಗಳ ಪ್ರಕಾರ, ಶೆಹಝಾದಿ ಅವರ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿರುವ ಮರು ಪರಿಶೀಲನಾ ಅರ್ಜಿಯು ಪ್ರಸ್ತುತ ಪರಿಗಣನೆಯಲ್ಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಮನೆಗೆ ಕೊನೆಯ ಫೋನ್ ಕರೆ’ ಮಾಡಿದ 24 ಗಂಟೆಯ ಒಳಗೆ ಶೆಹಝಾದಿ ಅವರಿಗೆ ಮರಣದಂಡನೆ ಜಾರಿಯಾಗಲಿದೆ ಎಂದು ವರದಿಯಾಗಿತ್ತು. ಶೆಹಝಾದಿ ಮನೆಗೆ ಕೊನೆಯ ಕರೆ ಮಾಡಿದ್ದಾರೆ ಎಂದು ಭಾರತೀಯ ಮಾಧ್ಯಮಗಳು ನಿನ್ನೆ (ಫೆ.17) ವರದಿ ಮಾಡಿತ್ತು. ಆ ಬಳಿಕ ಈ ಪ್ರಕರಣ ಮನ ಸೆಳೆದಿದೆ.

“ಶೆಹಝಾದಿ ಅವರನ್ನು 24 ಗಂಟೆಯೊಳಗೆ ಗಲ್ಲಿಗೇರಿಸಲಾಗುವುದು ಎಂಬ ವರದಿ ತಪ್ಪಾಗಿದೆ. ಯುಎಇ ಅಧಿಕಾರಿಗಳಿಂದ ರಾಯಭಾರ ಕಚೇರಿ ಇದನ್ನು ದೃಢಪಡಿಸಿದೆ. ಶೆಹಝಾದಿ ಅವರ ಪ್ರಕರಣದಲ್ಲಿ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಅದು ಈಗ ವಿಚಾರಣೆಯ ಹಂತದಲ್ಲಿದೆ” ಎಂದು ಮೂಲಗಳು ತಿಳಿಸಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮತೌಂಧ್ ಪೊಲೀಸ್ ಠಾಣೆ ವ್ಯಾಪ್ತಿಯ ಗೊಯ್ರಾ ಮುಗ್ಲಿ ಗ್ರಾಮದ ನಿವಾಸಿಯಾಗಿರುವ ಶೆಹಝಾದಿ ಬಡ ಕುಟುಂಬದ ಹೆಣ್ಣು ಮಗಳು. ಬಾಲ್ಯದಲ್ಲಿ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಗೆ ಸುಟ್ಟ ಗಾಯಗಳಾಗಿದ್ದವು. ಈಕೆಗೆ ಆಗ್ರಾದ ನಿವಾಸಿ ಉಝೈರ್ ಎಂಬಾತ ಫೇಸ್ಬುಕ್ ಮೂಲಕ ಪರಿಚಯವಾಗಿದ್ದ. ಬಳಿಕ ಇಬ್ಬರ ನಡುವೆ ಪ್ರೀತಿ ಬೆಳೆದಿದೆ. 2021ರಲ್ಲಿ ಆಕೆಯ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡುವುದಾಗಿ ಆಗ್ರಾಕ್ಕೆ ಕರೆದುಕೊಂಡು ಹೋದ ಉಝೈರ್, ಆಕೆಯನ್ನು ತನ್ನ ಸಂಬಂಧಿಕರಾದ ಫೈಝ್ ಮತ್ತು ನಾದಿಯಾ ಎಂಬ ದಂಪತಿಗೆ ಮಾರಾಟ ಮಾಡಿದ್ದಾನೆ ಎಂದು ಹೇಳಲಾಗಿದೆ. ಆಕೆಯನ್ನು ದಂಪತಿ ದುಬೈಗೆ ಕರೆದುಕೊಂಡು ಹೋಗಿದ್ದಾರೆ.

ಬಂದಾ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಈಗ ದುಬೈನಲ್ಲಿ ನೆಲೆಸಿರುವ ಈ ದಂಪತಿ ವಿರುದ್ಧ ಮಾನವ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿ ಹುಡುಕಾಟವನ್ನು ನಡೆಸುತ್ತಿದ್ದಾರೆ.

ಶೆಹಝಾದಿ ಇದ್ದ ಮನೆಯಲ್ಲಿ, ಇದ್ದಕ್ಕಿದ್ದಂತೆ ಒಂದು ದಿನ ಅವರ ಮಗುವಿನ ಆರೋಗ್ಯ ಹದಗೆಟ್ಟು ಮೃತಪಟ್ಟಿದೆ. ಮಗು ಮೃತಪಟ್ಟ ಎರಡು ತಿಂಗಳ ನಂತರ ಮಗುವಿನ ಸಾವಿಗೆ ಶೆಹಝಾದಿ ಕಾರಣ ಎಂದು ಪೋಷಕರು ಆರೋಪಿಸಿ ದೂರು ನೀಡಿದ್ದಾರೆ. ಬಳಿಕ ಅವರ ಬಂಧನವೂ ನಡೆದಿದೆ. ಈ ಕುರಿತ ತನಿಖೆಯ ನಂತರ ದುಬೈ ನ್ಯಾಯಾಲಯವು ಶೆಹಝಾದಿ ತಪ್ಪಿತಸ್ಥೆ ಎಂದು ಮರಣದಂಡನೆ ಶಿಕ್ಷೆ ವಿಧಿಸಿದೆ. ಶೆಹಝಾದಿ ಪ್ರಸ್ತುತ ಅಲ್ಬತ್ವಾ ಜೈಲಿನಲ್ಲಿ ಬಂಧಿಯಾಗಿದ್ದಾರೆ.

ದುಬೈನಲ್ಲಿ ಶೆಹಝಾದಿ ಮರಣದಂಡನೆಗೆ ಗುರಿಯಾದ ನಂತರ, ಆಕೆಯ ತಂದೆ ಶಬ್ಬೀರ್ ಖಾನ್, ಉತ್ತರ ಪ್ರದೇಶದ ಬಂದಾ ಜಿಲ್ಲಾಡಳಿತ, ರಾಜ್ಯ ಸರ್ಕಾರ ಎರಡಕ್ಕೂ ಮಧ್ಯಪ್ರವೇಶಿಸಿ ತನ್ನ ಮಗಳನ್ನು ಉಳಿಸುವಂತೆ ಮನವಿ ಮಾಡಿದ್ದರು.

ಮಗುವಿನ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯವೇ ಕಾರಣ ಎಂದು ಶೆಹಝಾದಿ ಮತ್ತು ಆಕೆಯ ತಂದೆ ಹೇಳಿಕೊಂಡಿದ್ದಾರೆ. ಆದರೆ, ದಂಪತಿ ಶೆಹಝಾದಿಯ ಮೇಲೆ ಆರೋಪ ಹೊರಿಸಿದ್ದರು. ಇದು ಆಕೆಯ ವಿರುದ್ಧ ಮೊಕದ್ದಮೆ ಹೂಡಲು ಮತ್ತು ಅಂತಿಮವಾಗಿ ಮರಣದಂಡನೆ ಶಿಕ್ಷೆ ವಿಧಿಸಲು ಕಾರಣವಾಗಿದೆ.

“ಫೆಬ್ರವರಿ 16ರಂದು ಶೆಹಝಾದಿ ಅವರ ಕುಟುಂಬಕ್ಕೆ ದುಬೈನಿಂದ ಕರೆ ಬಂದಿದೆ. ಆಕೆ ತನ್ನ ತಂದೆ, ತಾಯಿಯ ಜೊತೆ ಮಾತನಾಡುತ್ತಾ, ನನ್ನನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ನನ್ನನ್ನು ಗಲ್ಲಿಗೇರಿಸುವುದಾಗಿ ಜೈಲಿನ ಕ್ಯಾಪ್ಟನ್ ತಿಳಿಸಿದ್ದಾರೆ” ಎಂದು ಹೇಳಿದ್ದಾಗಿ ವರದಿಯಾಗಿದೆ.

‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...