Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಚುನಾವಣಾ ಆಯೋಗ ಪ್ರಾರಂಭಿಸುತ್ತಿದ್ದಂತೆ, ಈ ಕ್ರಮವನ್ನು ಕಾನೂನಾತ್ಮಕವಾಗಿ, ರಾಜಕೀಯವಾಗಿ ಮತ್ತು ಇತರ ಎಲ್ಲಾ ಮಾರ್ಗಗಳ ಮೂಲಕ ವಿರೋಧಿಸುವುದಾಗಿ ಕಾಂಗ್ರೆಸ್ ಭಾನುವಾರ (ಜೂ.29) ಹೇಳಿದೆ.

ಶನಿವಾರ (ಜೂ.28) ಚುನಾವಣಾ ಆಯೋಗವು, ರಾಜ್ಯದ 7.89 ಕೋಟಿ ಮತದಾರರಲ್ಲಿ ಸುಮಾರು 2.93 ಕೋಟಿ ಜನರು ಅಥವಾ ಸುಮಾರು 37% ಮತದಾರರು ತಮ್ಮ ಅರ್ಹತೆಯ ಪುರಾವೆಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಹೇಳಿದೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪ್ರವೀಣ್ ಚಕ್ರವರ್ತಿ, ಬಿಹಾರದ ಶೇಕಡ 37ರಷ್ಟು ಮತದಾರರು ಮರು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಲು ಚುನಾವಣಾ ಆಯೋಗ ಅಳವಡಿಸಿಕೊಂಡ ವಿಧಾನವನ್ನು ಪ್ರಶ್ನಿಸಿದ್ದಾರೆ.

“ಶೇ.37ರಷ್ಟು ಮತದಾರರು ದಾಖಲೆಗಳನ್ನು ಸಲ್ಲಿಸಿ ತಮ್ಮ ಮತದಾನದ ಆರ್ಹತೆಯನ್ನು ಖಚಿತಪಡಿಸಿಕೊಳ್ಳುವಂತೆ ಹೇಳಲು ಚುನಾವಣಾ ಆಯೋಗ ಅಳವಡಿಸಿಕೊಂಡ ವಿಧಾನ ಯಾವುದು? ಅವರಿಗೆ ಈ 37 ಶೇಕಡ ಅಂಕಿ ಅಂಶ ಸಿಕ್ಕಿದ್ದು ಎಲ್ಲಿ? ಇದರರ್ಥ ಅವರ ಬಳಿ 2003ರ ಮತದಾರರ ಪಟ್ಟಿ ಮೆಶಿನ್ ರೀಡೇಬಲ್ ಸ್ವರೂಪದಲ್ಲಿದೆ ಎಂದಾಗಿದೆಯೇ? ಇಲ್ಲದಿದ್ದರೆ, ವಿಶ್ಲೇಷಿಸಿ ಅಂಕಿ ಅಂಶವನ್ನು ನೀಡುವುದು ಅಸಾಧ್ಯ. ಕಾಂಗ್ರೆಸ್ ಬಹಳ ದಿನಗಳಿಂದ ಮಹಾರಾಷ್ಟ್ರದ ಮತದಾರರ ಪಟ್ಟಿಯನ್ನು ಕೇಳುತ್ತಿದೆ. ಅವರ ಬಳಿ 2003ರ ಮತದಾರರ ಪಟ್ಟಿ ಇದ್ದರೆ, ಅವರು ನಮಗೆ 2024ರ ಮಹಾರಾಷ್ಟ್ರ ಮತದಾರರ ಪಟ್ಟಿಯನ್ನು ಏಕೆ ತೋರಿಸುತ್ತಿಲ್ಲ?” ಎಂದು ಸಮೀಕ್ಷೆಗಳನ್ನು ಪರಿಶೀಲಿಸುವ ಎಂಟು ಸದಸ್ಯರ ಕಾಂಗ್ರೆಸ್ ಸಮಿತಿಯ ಸದಸ್ಯ ಚಕ್ರವರ್ತಿ ಕೇಳಿದ್ದಾರೆ.

ಮಾರ್ಚ್ 8ರಂದು ಚುನಾವಣಾ ಆಯೋಗವು ಆಧಾರ್ ಬಳಸಿ ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದು ಪರಿಪೂರ್ಣವಲ್ಲದಿದ್ದರೂ, ಬಿಹಾರದಲ್ಲಿ ತೀವ್ರವಾದ ಮತದಾರರ ಪರಿಷ್ಕರಣೆಗಿಂತ ಹೆಚ್ಚು ಕಾರ್ಯಸಾಧ್ಯವಾದ ಪರ್ಯಾಯ ಪರಿಹಾರವಾಗಿದೆ ಎಂದು ಚಕ್ರವರ್ತಿ ಹೇಳಿದ್ದಾರೆ.

“ಆಧಾರ್ ಪ್ರಸ್ತಾವನೆಯ ಮೂರು ತಿಂಗಳ ನಂತರ ಚುನಾವಣಾ ಆಯೋಗವು ಇದ್ದಕ್ಕಿದ್ದಂತೆ ಎಸ್‌ಐಆರ್ ಘೋಷಿಸಿದ್ದು ಏಕೆ? ಆಧಾರ್ ಪ್ರಸ್ತಾವನೆ ಕೈ ಬಿಟ್ಟಿದ್ದು ಏಕೆ? ಎಂದು ಚಕ್ರವರ್ತಿ ಪ್ರಶ್ನಿಸಿದ್ದಾರೆ.

ಜೂನ್ 24ರಂದು ಚುನಾವಣಾ ಆಯೋಗವು 2003ರ ಪಟ್ಟಿಯಲ್ಲಿಲ್ಲದ, ಪ್ರಸ್ತುತ ಇರುವ ಮತದಾರರು ತಮ್ಮ ಮತ್ತು ತಮ್ಮ ಪೋಷಕರ ಪೌರತ್ವದ ಪುರಾವೆಗಳನ್ನು ಒದಗಿಸಬೇಕೆಂದು ಆದೇಶಿಸಿದೆ. ಇದು ಬಡವರು ಮತ್ತು ತಳವರ್ಗದ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಮತ್ತು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕಳವಳ ಉಂಟು ಮಾಡಿದೆ.

“ನಾನು 2024 ಅಥವಾ 2019ರಲ್ಲಿ ಮತದಾರನಾಗಿದ್ದರೆ, ಈಗ ಮತದಾರನಲ್ಲ. ನಾನು ಮರು ನೋಂದಣಿ ಮಾಡಿಕೊಳ್ಳಬೇಕು. ಈಗ, ನಾನು ಮತದಾರನಾಗಿ ನನ್ನ ಸತ್ಯಾಸತ್ಯತೆಯನ್ನು ಸಾಬೀತುಪಡಿಸಬೇಕು. ದಿನಾಂಕ ಮತ್ತು ಜನ್ಮ ಸ್ಥಳವನ್ನು ಸಾಬೀತುಪಡಿಸಬೇಕು ಎಂದು ಅವರು ಹೇಳುತ್ತಿದ್ದಾರೆ. ನಿರಪರಾಧಿ ಎಂದು ಸಾಬೀತಾಗುವವರೆಗೂ ನಾನೇಕೆ ತಪ್ಪಿತಸ್ಥನಾಗಬೇಕು?” ಎಂದು ಚಕ್ರವರ್ತಿ ಹೇಳಿದ್ದಾರೆ.

ಮತದಾರರು ಮತ್ತು ಅವರ ಪೋಷಕರ ಜನನ ಪ್ರಮಾಣಪತ್ರಗಳನ್ನು ಒದಗಿಸಲು, ಹುಟ್ಟಿದ ವರ್ಷವನ್ನು ಅವಲಂಬಿಸಿ, ಚುನಾವಣಾ ಆಯೋಗವು ಕಠಿಣ ನಿಯಮಗಳನ್ನು ತಂದಿದೆ ಎಂದು ಚಕ್ರವರ್ತಿ ತಿಳಿಸಿದ್ದಾರೆ.

ಇದಲ್ಲದೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಈಗ ಯಾರ ಬಳಿ ಸರಿಯಾದ ದಾಖಲೆಗಳಿವೆ ಮತ್ತು ಯಾರ ಬಳಿ ಇಲ್ಲ ಎಂಬುದನ್ನು ನಿರ್ದೇಶಿಸುತ್ತಾರೆ. ಹೀಗಾಗಿ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಯಾರು ಮತ ಚಲಾಯಿಸಬೇಕು ಎಂಬುದನ್ನು ಅವರು ನಿರ್ದೇಶಿಸುತ್ತಾರೆ ಎಂದು ಚಕ್ರವರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...