Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಚುನಾವಣಾ ಆಯೋಗ ಪ್ರಾರಂಭಿಸುತ್ತಿದ್ದಂತೆ, ಈ ಕ್ರಮವನ್ನು ಕಾನೂನಾತ್ಮಕವಾಗಿ, ರಾಜಕೀಯವಾಗಿ ಮತ್ತು ಇತರ ಎಲ್ಲಾ ಮಾರ್ಗಗಳ ಮೂಲಕ ವಿರೋಧಿಸುವುದಾಗಿ ಕಾಂಗ್ರೆಸ್ ಭಾನುವಾರ (ಜೂ.29) ಹೇಳಿದೆ.

ಶನಿವಾರ (ಜೂ.28) ಚುನಾವಣಾ ಆಯೋಗವು, ರಾಜ್ಯದ 7.89 ಕೋಟಿ ಮತದಾರರಲ್ಲಿ ಸುಮಾರು 2.93 ಕೋಟಿ ಜನರು ಅಥವಾ ಸುಮಾರು 37% ಮತದಾರರು ತಮ್ಮ ಅರ್ಹತೆಯ ಪುರಾವೆಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಹೇಳಿದೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪ್ರವೀಣ್ ಚಕ್ರವರ್ತಿ, ಬಿಹಾರದ ಶೇಕಡ 37ರಷ್ಟು ಮತದಾರರು ಮರು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಲು ಚುನಾವಣಾ ಆಯೋಗ ಅಳವಡಿಸಿಕೊಂಡ ವಿಧಾನವನ್ನು ಪ್ರಶ್ನಿಸಿದ್ದಾರೆ.

“ಶೇ.37ರಷ್ಟು ಮತದಾರರು ದಾಖಲೆಗಳನ್ನು ಸಲ್ಲಿಸಿ ತಮ್ಮ ಮತದಾನದ ಆರ್ಹತೆಯನ್ನು ಖಚಿತಪಡಿಸಿಕೊಳ್ಳುವಂತೆ ಹೇಳಲು ಚುನಾವಣಾ ಆಯೋಗ ಅಳವಡಿಸಿಕೊಂಡ ವಿಧಾನ ಯಾವುದು? ಅವರಿಗೆ ಈ 37 ಶೇಕಡ ಅಂಕಿ ಅಂಶ ಸಿಕ್ಕಿದ್ದು ಎಲ್ಲಿ? ಇದರರ್ಥ ಅವರ ಬಳಿ 2003ರ ಮತದಾರರ ಪಟ್ಟಿ ಮೆಶಿನ್ ರೀಡೇಬಲ್ ಸ್ವರೂಪದಲ್ಲಿದೆ ಎಂದಾಗಿದೆಯೇ? ಇಲ್ಲದಿದ್ದರೆ, ವಿಶ್ಲೇಷಿಸಿ ಅಂಕಿ ಅಂಶವನ್ನು ನೀಡುವುದು ಅಸಾಧ್ಯ. ಕಾಂಗ್ರೆಸ್ ಬಹಳ ದಿನಗಳಿಂದ ಮಹಾರಾಷ್ಟ್ರದ ಮತದಾರರ ಪಟ್ಟಿಯನ್ನು ಕೇಳುತ್ತಿದೆ. ಅವರ ಬಳಿ 2003ರ ಮತದಾರರ ಪಟ್ಟಿ ಇದ್ದರೆ, ಅವರು ನಮಗೆ 2024ರ ಮಹಾರಾಷ್ಟ್ರ ಮತದಾರರ ಪಟ್ಟಿಯನ್ನು ಏಕೆ ತೋರಿಸುತ್ತಿಲ್ಲ?” ಎಂದು ಸಮೀಕ್ಷೆಗಳನ್ನು ಪರಿಶೀಲಿಸುವ ಎಂಟು ಸದಸ್ಯರ ಕಾಂಗ್ರೆಸ್ ಸಮಿತಿಯ ಸದಸ್ಯ ಚಕ್ರವರ್ತಿ ಕೇಳಿದ್ದಾರೆ.

ಮಾರ್ಚ್ 8ರಂದು ಚುನಾವಣಾ ಆಯೋಗವು ಆಧಾರ್ ಬಳಸಿ ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದು ಪರಿಪೂರ್ಣವಲ್ಲದಿದ್ದರೂ, ಬಿಹಾರದಲ್ಲಿ ತೀವ್ರವಾದ ಮತದಾರರ ಪರಿಷ್ಕರಣೆಗಿಂತ ಹೆಚ್ಚು ಕಾರ್ಯಸಾಧ್ಯವಾದ ಪರ್ಯಾಯ ಪರಿಹಾರವಾಗಿದೆ ಎಂದು ಚಕ್ರವರ್ತಿ ಹೇಳಿದ್ದಾರೆ.

“ಆಧಾರ್ ಪ್ರಸ್ತಾವನೆಯ ಮೂರು ತಿಂಗಳ ನಂತರ ಚುನಾವಣಾ ಆಯೋಗವು ಇದ್ದಕ್ಕಿದ್ದಂತೆ ಎಸ್‌ಐಆರ್ ಘೋಷಿಸಿದ್ದು ಏಕೆ? ಆಧಾರ್ ಪ್ರಸ್ತಾವನೆ ಕೈ ಬಿಟ್ಟಿದ್ದು ಏಕೆ? ಎಂದು ಚಕ್ರವರ್ತಿ ಪ್ರಶ್ನಿಸಿದ್ದಾರೆ.

ಜೂನ್ 24ರಂದು ಚುನಾವಣಾ ಆಯೋಗವು 2003ರ ಪಟ್ಟಿಯಲ್ಲಿಲ್ಲದ, ಪ್ರಸ್ತುತ ಇರುವ ಮತದಾರರು ತಮ್ಮ ಮತ್ತು ತಮ್ಮ ಪೋಷಕರ ಪೌರತ್ವದ ಪುರಾವೆಗಳನ್ನು ಒದಗಿಸಬೇಕೆಂದು ಆದೇಶಿಸಿದೆ. ಇದು ಬಡವರು ಮತ್ತು ತಳವರ್ಗದ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಮತ್ತು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕಳವಳ ಉಂಟು ಮಾಡಿದೆ.

“ನಾನು 2024 ಅಥವಾ 2019ರಲ್ಲಿ ಮತದಾರನಾಗಿದ್ದರೆ, ಈಗ ಮತದಾರನಲ್ಲ. ನಾನು ಮರು ನೋಂದಣಿ ಮಾಡಿಕೊಳ್ಳಬೇಕು. ಈಗ, ನಾನು ಮತದಾರನಾಗಿ ನನ್ನ ಸತ್ಯಾಸತ್ಯತೆಯನ್ನು ಸಾಬೀತುಪಡಿಸಬೇಕು. ದಿನಾಂಕ ಮತ್ತು ಜನ್ಮ ಸ್ಥಳವನ್ನು ಸಾಬೀತುಪಡಿಸಬೇಕು ಎಂದು ಅವರು ಹೇಳುತ್ತಿದ್ದಾರೆ. ನಿರಪರಾಧಿ ಎಂದು ಸಾಬೀತಾಗುವವರೆಗೂ ನಾನೇಕೆ ತಪ್ಪಿತಸ್ಥನಾಗಬೇಕು?” ಎಂದು ಚಕ್ರವರ್ತಿ ಹೇಳಿದ್ದಾರೆ.

ಮತದಾರರು ಮತ್ತು ಅವರ ಪೋಷಕರ ಜನನ ಪ್ರಮಾಣಪತ್ರಗಳನ್ನು ಒದಗಿಸಲು, ಹುಟ್ಟಿದ ವರ್ಷವನ್ನು ಅವಲಂಬಿಸಿ, ಚುನಾವಣಾ ಆಯೋಗವು ಕಠಿಣ ನಿಯಮಗಳನ್ನು ತಂದಿದೆ ಎಂದು ಚಕ್ರವರ್ತಿ ತಿಳಿಸಿದ್ದಾರೆ.

ಇದಲ್ಲದೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಈಗ ಯಾರ ಬಳಿ ಸರಿಯಾದ ದಾಖಲೆಗಳಿವೆ ಮತ್ತು ಯಾರ ಬಳಿ ಇಲ್ಲ ಎಂಬುದನ್ನು ನಿರ್ದೇಶಿಸುತ್ತಾರೆ. ಹೀಗಾಗಿ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಯಾರು ಮತ ಚಲಾಯಿಸಬೇಕು ಎಂಬುದನ್ನು ಅವರು ನಿರ್ದೇಶಿಸುತ್ತಾರೆ ಎಂದು ಚಕ್ರವರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...