Homeಮುಖಪುಟಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಚುನಾವಣಾ ಆಯೋಗ ಪ್ರಾರಂಭಿಸುತ್ತಿದ್ದಂತೆ, ಈ ಕ್ರಮವನ್ನು ಕಾನೂನಾತ್ಮಕವಾಗಿ, ರಾಜಕೀಯವಾಗಿ ಮತ್ತು ಇತರ ಎಲ್ಲಾ ಮಾರ್ಗಗಳ ಮೂಲಕ ವಿರೋಧಿಸುವುದಾಗಿ ಕಾಂಗ್ರೆಸ್ ಭಾನುವಾರ (ಜೂ.29) ಹೇಳಿದೆ.

ಶನಿವಾರ (ಜೂ.28) ಚುನಾವಣಾ ಆಯೋಗವು, ರಾಜ್ಯದ 7.89 ಕೋಟಿ ಮತದಾರರಲ್ಲಿ ಸುಮಾರು 2.93 ಕೋಟಿ ಜನರು ಅಥವಾ ಸುಮಾರು 37% ಮತದಾರರು ತಮ್ಮ ಅರ್ಹತೆಯ ಪುರಾವೆಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಹೇಳಿದೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪ್ರವೀಣ್ ಚಕ್ರವರ್ತಿ, ಬಿಹಾರದ ಶೇಕಡ 37ರಷ್ಟು ಮತದಾರರು ಮರು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಲು ಚುನಾವಣಾ ಆಯೋಗ ಅಳವಡಿಸಿಕೊಂಡ ವಿಧಾನವನ್ನು ಪ್ರಶ್ನಿಸಿದ್ದಾರೆ.

“ಶೇ.37ರಷ್ಟು ಮತದಾರರು ದಾಖಲೆಗಳನ್ನು ಸಲ್ಲಿಸಿ ತಮ್ಮ ಮತದಾನದ ಆರ್ಹತೆಯನ್ನು ಖಚಿತಪಡಿಸಿಕೊಳ್ಳುವಂತೆ ಹೇಳಲು ಚುನಾವಣಾ ಆಯೋಗ ಅಳವಡಿಸಿಕೊಂಡ ವಿಧಾನ ಯಾವುದು? ಅವರಿಗೆ ಈ 37 ಶೇಕಡ ಅಂಕಿ ಅಂಶ ಸಿಕ್ಕಿದ್ದು ಎಲ್ಲಿ? ಇದರರ್ಥ ಅವರ ಬಳಿ 2003ರ ಮತದಾರರ ಪಟ್ಟಿ ಮೆಶಿನ್ ರೀಡೇಬಲ್ ಸ್ವರೂಪದಲ್ಲಿದೆ ಎಂದಾಗಿದೆಯೇ? ಇಲ್ಲದಿದ್ದರೆ, ವಿಶ್ಲೇಷಿಸಿ ಅಂಕಿ ಅಂಶವನ್ನು ನೀಡುವುದು ಅಸಾಧ್ಯ. ಕಾಂಗ್ರೆಸ್ ಬಹಳ ದಿನಗಳಿಂದ ಮಹಾರಾಷ್ಟ್ರದ ಮತದಾರರ ಪಟ್ಟಿಯನ್ನು ಕೇಳುತ್ತಿದೆ. ಅವರ ಬಳಿ 2003ರ ಮತದಾರರ ಪಟ್ಟಿ ಇದ್ದರೆ, ಅವರು ನಮಗೆ 2024ರ ಮಹಾರಾಷ್ಟ್ರ ಮತದಾರರ ಪಟ್ಟಿಯನ್ನು ಏಕೆ ತೋರಿಸುತ್ತಿಲ್ಲ?” ಎಂದು ಸಮೀಕ್ಷೆಗಳನ್ನು ಪರಿಶೀಲಿಸುವ ಎಂಟು ಸದಸ್ಯರ ಕಾಂಗ್ರೆಸ್ ಸಮಿತಿಯ ಸದಸ್ಯ ಚಕ್ರವರ್ತಿ ಕೇಳಿದ್ದಾರೆ.

ಮಾರ್ಚ್ 8ರಂದು ಚುನಾವಣಾ ಆಯೋಗವು ಆಧಾರ್ ಬಳಸಿ ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದು ಪರಿಪೂರ್ಣವಲ್ಲದಿದ್ದರೂ, ಬಿಹಾರದಲ್ಲಿ ತೀವ್ರವಾದ ಮತದಾರರ ಪರಿಷ್ಕರಣೆಗಿಂತ ಹೆಚ್ಚು ಕಾರ್ಯಸಾಧ್ಯವಾದ ಪರ್ಯಾಯ ಪರಿಹಾರವಾಗಿದೆ ಎಂದು ಚಕ್ರವರ್ತಿ ಹೇಳಿದ್ದಾರೆ.

“ಆಧಾರ್ ಪ್ರಸ್ತಾವನೆಯ ಮೂರು ತಿಂಗಳ ನಂತರ ಚುನಾವಣಾ ಆಯೋಗವು ಇದ್ದಕ್ಕಿದ್ದಂತೆ ಎಸ್‌ಐಆರ್ ಘೋಷಿಸಿದ್ದು ಏಕೆ? ಆಧಾರ್ ಪ್ರಸ್ತಾವನೆ ಕೈ ಬಿಟ್ಟಿದ್ದು ಏಕೆ? ಎಂದು ಚಕ್ರವರ್ತಿ ಪ್ರಶ್ನಿಸಿದ್ದಾರೆ.

ಜೂನ್ 24ರಂದು ಚುನಾವಣಾ ಆಯೋಗವು 2003ರ ಪಟ್ಟಿಯಲ್ಲಿಲ್ಲದ, ಪ್ರಸ್ತುತ ಇರುವ ಮತದಾರರು ತಮ್ಮ ಮತ್ತು ತಮ್ಮ ಪೋಷಕರ ಪೌರತ್ವದ ಪುರಾವೆಗಳನ್ನು ಒದಗಿಸಬೇಕೆಂದು ಆದೇಶಿಸಿದೆ. ಇದು ಬಡವರು ಮತ್ತು ತಳವರ್ಗದ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಮತ್ತು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕಳವಳ ಉಂಟು ಮಾಡಿದೆ.

“ನಾನು 2024 ಅಥವಾ 2019ರಲ್ಲಿ ಮತದಾರನಾಗಿದ್ದರೆ, ಈಗ ಮತದಾರನಲ್ಲ. ನಾನು ಮರು ನೋಂದಣಿ ಮಾಡಿಕೊಳ್ಳಬೇಕು. ಈಗ, ನಾನು ಮತದಾರನಾಗಿ ನನ್ನ ಸತ್ಯಾಸತ್ಯತೆಯನ್ನು ಸಾಬೀತುಪಡಿಸಬೇಕು. ದಿನಾಂಕ ಮತ್ತು ಜನ್ಮ ಸ್ಥಳವನ್ನು ಸಾಬೀತುಪಡಿಸಬೇಕು ಎಂದು ಅವರು ಹೇಳುತ್ತಿದ್ದಾರೆ. ನಿರಪರಾಧಿ ಎಂದು ಸಾಬೀತಾಗುವವರೆಗೂ ನಾನೇಕೆ ತಪ್ಪಿತಸ್ಥನಾಗಬೇಕು?” ಎಂದು ಚಕ್ರವರ್ತಿ ಹೇಳಿದ್ದಾರೆ.

ಮತದಾರರು ಮತ್ತು ಅವರ ಪೋಷಕರ ಜನನ ಪ್ರಮಾಣಪತ್ರಗಳನ್ನು ಒದಗಿಸಲು, ಹುಟ್ಟಿದ ವರ್ಷವನ್ನು ಅವಲಂಬಿಸಿ, ಚುನಾವಣಾ ಆಯೋಗವು ಕಠಿಣ ನಿಯಮಗಳನ್ನು ತಂದಿದೆ ಎಂದು ಚಕ್ರವರ್ತಿ ತಿಳಿಸಿದ್ದಾರೆ.

ಇದಲ್ಲದೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಈಗ ಯಾರ ಬಳಿ ಸರಿಯಾದ ದಾಖಲೆಗಳಿವೆ ಮತ್ತು ಯಾರ ಬಳಿ ಇಲ್ಲ ಎಂಬುದನ್ನು ನಿರ್ದೇಶಿಸುತ್ತಾರೆ. ಹೀಗಾಗಿ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಯಾರು ಮತ ಚಲಾಯಿಸಬೇಕು ಎಂಬುದನ್ನು ಅವರು ನಿರ್ದೇಶಿಸುತ್ತಾರೆ ಎಂದು ಚಕ್ರವರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...