Homeಚಳವಳಿರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಇಂದು ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸದಸ್ಯರು ಬೆಂಗಳೂರು ರೈಲು ನಿಲ್ದಾಣದಿಂದ ಹೊರಟು ಫ್ರೀಡಂ ಪಾರ್ಕ್‌ವರೆಗೆ ದೊಡ್ಡಮಟ್ಟದ ರ್‍ಯಾಲಿ ನಡೆಸಿ, ನಂತರ ಅಲ್ಲಿಯೇ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ.

- Advertisement -
- Advertisement -

ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ರಾಜ್ಯದ ಹಲವು ಸಂಘಟನೆಗಳು ಇಂದು ಬೆಂಗಳೂರಿನಲ್ಲಿ ಐಕ್ಯ ಹೋರಾಟವನ್ನು ಹಮ್ಮಿಕೊಂಡಿವೆ. ರಾಜ್ಯ ಸರ್ಕಾರ ಈ ಕೂಡಲೇ ರೈತವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯದಿದ್ದರೆ, ಮುಖ್ಯಮಂತ್ರಿ ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ ಎಂದು ರೈತಸಂಘದ ರಾಜ್ಯಾದ್ಯಕ್ಷರಾದ ಬಡಗಲಪುರ ನಾಗೇಂದ್ರ ಸವಾಲು ಹಾಕಿದ್ದಾರೆ.

ಇಂದಿನಿಂದ ಕರ್ನಾಟಕ ವಿಧಾನಸಭಾ ಅಧಿವೇಶನ ಆರಂಭವಾಗಲಿದ್ದು, ಸರ್ಕಾರ ಇಲ್ಲಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಜೊತೆಗೆ ಈಗಾಗಲೇ ಸುಗ್ರೀವಾಜ್ಞೆ ಮೂಲಕ ತಂದಿರುವ ಕೆಲವು ಮಸೂದೆಗಳಿಗೆ ಅಧಿಕೃತವಾಗಿ ಅಂಗೀಕಾರ ಪಡೆಯುವ ಸಾಧ್ಯತೆಯಿದೆ. ಇದರಲ್ಲಿ ಕೃಷಿ ಸಂಬಂಧಿತ ಮಸೂದೆಗಳೂ ಸೇರಿದ್ದು, ಅವುಗಳು ರೈತವಿರೋಧಿಯಾಗಿವೆ ಎಂದು ರಾಜ್ಯದಾದ್ಯಂತ ಇರುವ ರೈತ, ದಲಿತ, ಕಾರ್ಮಿಕ ಮತ್ತು ಇತರ ಸಂಘಟನೆಗಳು ಒಟ್ಟಾಗಿ ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳು ಹೇಳುವುದೇನು..?: ವಿರೋಧಕ್ಕೆ ಕಾರಣಗಳೇನು..?

ಇಂದು ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸದಸ್ಯರು ಬೆಂಗಳೂರು ರೈಲು ನಿಲ್ದಾಣದಿಂದ ಹೊರಟು ಫ್ರೀಡಂ ಪಾರ್ಕ್‌ವರೆಗೆ ದೊಡ್ಡಮಟ್ಟದ ರ್‍ಯಾಲಿ ನಡೆಸಿ, ನಂತರ ಅಲ್ಲಿಯೇ ಅನಿರ್ಧಿಷ್ಟಾವಧಿ ಧರಣಿ ಮಾಡುತ್ತೇವೆ ಎಂದು ರೈತಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

“ಸರ್ಕಾರ ಭೂಸುಧಾರಣೆ ಕಾಯ್ದೆಗಳಿಗೆ ತಿದ್ದುಪಡಿ ತಂದು ಅವುಗಳನ್ನು ರೈತವಿರೋಧಿ ಕಾಯ್ದೆಗಳನ್ನಾಗಿ ಮಾಡಲು ಹೊರಟಿದೆ. ಇದರ ಮೂಲಕ ಕಾರ್ಪೋರೇಟ್ ಕುಳಗಳಿಗೆ ಅನುಕೂಲ ಮಾಡಿಕೊಟ್ಟು, ರೈತರನ್ನು ಅವರ ಗುಲಾಮರಾಗುವಂತೆ ಮಾಡಲಾಗುತ್ತಿದೆ. ಕೊರೊನಾ ಸಂಕಷ್ಟದ ನಡುವೆ ಈ ಕಾಯ್ದೆಗಳಿಗೆ ತಿದ್ದುಪಡಿ ತರುವ ಅಗತ್ಯವೇನಿತ್ತು. ಭೂ ಒಡೆತನ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮುಂತಾದ ಕಾಯ್ದೆಗಳ ತಿದ್ದುಪಡಿಗೆ ಸುಗ್ರೀವಾಜ್ಞೆ ತರಲಾಗಿದೆ. ಈ ಮೂಲಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನಾಡಿನ ರೈತ, ದಲಿತ ಮತ್ತು ಕಾರ್ಮಿಕ ಸಮುದಾಯವನ್ನು ಎದುರು ಹಾಕಿಕೊಂಡಿದೆ. ಈಗ ತಿದ್ದುಪಡಿ ಕಾಯ್ದೆಗಳನ್ನು ಈ ಕೂಡಲೇ ವಾಪಸ್ಸು ಪಡೆಯದಿದ್ದರೇ, ಯಡಿಯೂರಪ್ಪನವರ ಕುರ್ಚಿಯನ್ನು ಅವರು ಹೇಗೆ ಉಳಿಸಿಕೊಳ್ಳುತ್ತಾರೆ ನೋಡೋಣ. ರಾಜ್ಯದ ರೈತರು ದಲಿತರು ಕಾರ್ಮಿಕರನ್ನು ಎದುರು ಹಾಕಿಕೊಂಡು ಯಾವ ಸರ್ಕಾರವೂ ಉಳಿಯಲು ಸಾಧ್ಯವಿಲ್ಲ. ಹಾಗಾಗಿ ಸರ್ಕಾರ ಅಧಿವೇಶನದಲ್ಲಿ ರೈತಪರವಾದ ನಿಲುವಿಗೆ ಬರದಿದ್ದರೆ ಖಂಡಿತವಾಗಿಯೂ ನಾವು ಅವರನ್ನು ಕುರ್ಚಿಯಿಂದ ಇಳಿಸುತ್ತೇವೆ” ಎಂದು ಹೇಳಿದರು.

ಈಗಾಗಲೇ ನೂರಾರು ರೈತರು, ಭೂಹೀನರು, ಹೋರಾಟಗಾರರು ರೈಲು ನಿಲ್ದಾಣದ ಬಳಿ ಸೇರುತ್ತಿದ್ದು, ಇನ್ನೇನು ಕೆಲವೇ ನಿಮಿಷಗಳಲ್ಲಿ ರ್‍ಯಾಲಿ ಹೊರಡಲಿದೆ.

ಇದನ್ನೂ ಓದಿ:ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ ಖಂಡಿಸಿ‘#KisanVirodhiNarendraModi’ ಟ್ರೆಂಡ್

ಈ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಜನತಾಧಿವೇಶನ ನಡೆಸಿ, ಚರ್ಚೆ ಸಂವಾದಗಳನ್ನು ಹಮ್ಮಿಕೊಳ್ಳಲಾಗಿದೆ. ಈ ರಾಜ್ಯದ 39 ಸಂಘಟನೆಗಳ ಹೋರಾಟಗಾರರು ಸೇರಿದಂತೆ, ಸ್ವರಾಜ್ ಇಂಡಿಯಾ ಪಕ್ಷದ ಮುಖಂಡರಾದ ಯೋಗೇಂದ್ರ ಯಾದವ್, ಹೋರಾಟಗಾರರು ಮತ್ತು ಸಾಹಿತಿಗಳಾದ ದೇವನೂರು ಮಹಾದೇವ, ವಿಶ್ರಾಂತ ನ್ಯಾ. ಎಚ್.ಎನ್.ನಾಗಮೋಹನದಾಸ್, ಅಖಿಲಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಡಾ.ಅಶೋಕ್ ದಾವಲೆ, ನೂರ್ ಶ್ರೀಧರ್, ಎಸ್.ಆರ್.ಹಿರೇಮಠ್, ಶಿವಕುಮಾರ್ ಕಕ್ಕಾಚಿ, ಮೈಕೆಲ್ ಬಿ.ಫರ್ನಾಂಡೀಸ್ ಸೇರಿಂದಂತೆ ಹಲವಾರು ಚಿಂತಕರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.


ಇದನ್ನೂ ಓದಿ: ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...