Homeಮುಖಪುಟಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

- Advertisement -
- Advertisement -

‘ವಿವಾದಾತ್ಮಕ ಕೃಷಿ ಕಾನೂನುಗಳ ಅನುಷ್ಠಾನವನ್ನು 18 ತಿಂಗಳುಗಳ ಕಾಲ ಅಮಾನತಿನಲ್ಲಿರಿಸುವ ತಮ್ಮ ಸರ್ಕಾರದ ಪ್ರಸ್ತಾವನೆ ಇನ್ನೂ ಜಾರಿಯಾಗಿಲ್ಲ. ಕೋಪಗೊಂಡ ರೈತರೊಂದಿಗೆ ವಾರಗಳ ಕಾಲ ಸ್ಥಗಿತಗೊಂಡಿರುವ ಮಾತುಕತೆ ಮುಂದುವರೆಸುವ ಪ್ರಯತ್ನ ಸಾಗಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಒಂಬತ್ತು ಸುತ್ತಿನ ಮಾತುಕತೆ ಪ್ರಗತಿಯನ್ನು ನೀಡಲು ವಿಫಲವಾದ ನಂತರ ಈ ತಿಂಗಳ ಆರಂಭದಲ್ಲಿ ಕೇಂದ್ರದಿಂದ ಮಂಡಿಸಲಾದ ಪ್ರಸ್ತಾಪವನ್ನು ತಿರಸ್ಕರಿಸಿದ್ದ ರೈತರು ಎಲ್ಲಾ ಮೂರು ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದರು.

“ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಸರ್ಕಾರ ರೈತರ ಸಮಸ್ಯೆಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುತ್ತದೆ ಎಂದು ಭರವಸೆ ನೀಡಿದರು. ಜನವರಿ 22 ರಂದು ಇದ್ದಂತೆ ಸರ್ಕಾರದ ನಿಲುವು ಕೃಷಿ ಸಚಿವರ ಪ್ರಸ್ತಾಪವೇ (ಕಾಯ್ದೆಗಳನ್ನು 18 ತಿಂಗಳು ಅಮಾನತಿನಲ್ಲಿಡುವ ಪ್ರಸ್ತಾಪ) ಆಗಿದೆ ಎಂದು ಪ್ರಧಾನಿ ಹೇಳಿದರು ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಈ ಕುರಿತು ಜೋಶಿ ಟ್ವೀಟ್ ಕೂಡ ಮಾಡಿದ್ದಾರೆ.

“ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದನ್ನು ಪ್ರಧಾನಿ ಪುನರುಚ್ಚರಿಸಿದರು, ಕೃಷಿ ಸಚಿವರು ಮಾತುಕತೆಗೆ ದೂರವಾಣಿ ಕರೆ ಮಾಡಿದ್ದಾರೆ” ಎಂದು ಜೋಶಿ ಹೇಳಿದರು. ಮೊದಲ ನಿರಾಕರಣೆಯ ನಂತರ ಕಳೆದ ವಾರ ಮತ್ತೊಮ್ಮೆ ಹನ್ನೊಂದನೇ ಸುತ್ತಿನ ಮಾತುಕತೆಯಲ್ಲಿ ಸರ್ಕಾರದ ಈ ಪ್ರಸ್ತಾಪವನ್ನು (ಕಾಯ್ದೆಗಳನ್ನು 18 ತಿಂಗಳು ಅಮಾನತಿನಲ್ಲಿಡುವ ಪ್ರಸ್ತಾಪ) ನಿರಾಕರಿಸಲಾಯಿತು. ಆಗ ತೋಮರ್ ಅವರು “ಚೆಂಡು ಈಗ ನಿಮ್ಮ (ರೈತರ) ನ್ಯಾಯಾಲಯದಲ್ಲಿದೆ” ಎಂದು ಘೋಷಿಸಬೇಕಾಗಿತು ಎಂದು ತಿಳಿಸಿದ್ದಾರೆ.

ಸೋಮವಾರ ಕೇಂದ್ರ ಬಜೆಟ್ ಮಂಡಿಸುವ ಮೊದಲು ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಧಾನ ಮಂತ್ರಿ ಆ ಪ್ರಸ್ತಾಪವನ್ನು ಪುನರಾವರ್ತಿಸಿದರು. 20 ವಿರೋಧ ಪಕ್ಷಗಳು ಪ್ರತಿಭಟನಾ ನಿರತ ರೈತರನ್ನು ಬೆಂಬಲಿಸಿ ರಾಷ್ಟ್ರಪತಿಗಳ ಭಾಷಣವನ್ನು ಬಹಿಷ್ಕರಿಸಿದ ಒಂದು ದಿನದ ನಂತರ ಈ ಸಭೆ ನಡೆಯಿತು. ಇದು ಗಣರಾಜ್ಯೋತ್ಸವದ ಹಿಂಸಾಚಾರದ ಚರ್ಚೆಯನ್ನು ಮತ್ತು ನಿರ್ದಿಷ್ಟವಾಗಿ ಕೆಂಪು ಕೋಟೆಯಲ್ಲಿ ನಡೆದ ಘಟನೆಯ ಚರ್ಚೆಯನ್ನು ಒಳಗೊಂಡಿತ್ತು .

ವಿರೋಧ ಪಕ್ಷಗಳು ಹಿಂಸಾಚಾರವನ್ನು ಖಂಡಿಸಿದವು, ಆದರೆ “ಹೊರಗಿನ ವ್ಯಕ್ತಿಗಳು” ರೈತರ ಆಂದೋಲನಕ್ಕೆ ಹೇಗೆ ನುಸುಳಿದರು ಎಂಬ ಬಗ್ಗೆ ತನಿಖೆಗೆ ಒತ್ತಾಯಿಸಿದವು.
ಈ ವಾರ ರೈತರು ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ, ‘ಪಂಜಾಬಿ ನಟ ದೀಪ್ ಸಿಧು ಘರ್ಷಣೆಯನ್ನು ಪ್ರಚೋದಿಸಿದರು ಮತ್ತು ಕೆಂಪು ಕೋಟೆಯಲ್ಲಿ ಸಿಖ್ ಧಾರ್ಮಿಕ ಧ್ವಜವನ್ನು ನೆಟ್ಟಿದ್ದಾರೆ’ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ‘ದೆಹಲಿ ಗಡಿಯಲ್ಲಿನ ರೈತ ಪ್ರತಿಭಟನೆಗೆ ಸೇರಿಕೊಳ್ಳಿ’: ಕಾರ್ಯಕರ್ತರಿಗೆ ಮನವಿ ಮಾಡಿದ ಅಕಾಲಿ ದಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...