Homeಮುಖಪುಟಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

ಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

- Advertisement -
- Advertisement -

8 ದಿನಗಳ ಅವಧಿಯಲ್ಲಿ ಸಂಸತ್ತಿನಲ್ಲಿ 146 ವಿರೋಧ ಪಕ್ಷದ ಸದಸ್ಯರನ್ನು ವಜಾಗೊಳಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಕಳಂಕ ಎಂದು ಹೇಳಿದೆ ಮತ್ತು ಅಮಾನತುಗೊಂಡ ಸಂಸದರು ಎತ್ತಿರುವ ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ತಕ್ಷಣವೇ ಉತ್ತರವನ್ನು ಸಚಿವರುಗಳು ಅಪ್‌ಲೋಡ್ ಮಾಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

146 ಸಂಸದರನ್ನು ಅಮಾನತುಗೊಳಿಸಿದ ಬಳಿಕ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಅಧಿವೇಶನಗಳಲ್ಲಿ ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮಗಳು ಆಕಸ್ಮಿಕವಲ್ಲ. ಇದು ಸಂಸತ್ತಿನ ಪ್ರಕ್ರಿಯೆಯನ್ನು ಅಪಮೌಲ್ಯಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟವಾಗಿ ಸೂಚಿಸಿದೆ ಎಂದು ಪಿಯುಸಿಎಲ್‌ ಹೇಳಿದೆ.

ವಿರೋಧ ಪಕ್ಷದ ಸದಸ್ಯರ ಸಾಮೂಹಿಕ ಅಮಾನತಿನಿಂದ ಸಂಸತ್ತಿನಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಿದಂತಾಗುತ್ತದೆ. ಈ ಹಿಂದೆ ಲೋಕಸಭೆಯಿಂದ ಅಮಾನತುಗೊಂಡ ಹೆಚ್ಚು ಸಂಸದರ ಸಂಖ್ಯೆ 63. ಈ ಬಾರಿ 100 ಸಂಸದರನ್ನು ಅಮಾನತು ಮಾಡಲಾಗಿದೆ. ವಿರೋಧ ಪಕ್ಷಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಸಮಾಜವಾದಿ ಪಕ್ಷ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಯೂನಿಯನ್ ಮುಸ್ಲಿಂ ಲೀಗ್, ಜನತಾ ದಳ ಯುನೈಟೆಡ್, ಡಿಎಂಕೆ, ಆಮ್ ಆದ್ಮಿ ಪಾರ್ಟಿ,  ಬಹುಜನ ಸಮಾಜ ಪಕ್ಷ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿ ಹಲವು ಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ 46 ಸಂಸದರನ್ನು ಅಮಾನತುಗೊಳಿಸಲಾಗಿದೆ, ಅಸ್ಸಾಂನ ಪಕ್ಷೇತರ ಸಂಸದ, ಜನತಾ ದಳ ಯುನೈಟೆಡ್, ಜಾರ್ಖಂಡ್ ಮುಕ್ತಿ ಮೋರ್ಚಾದ ಸಂಸದರನ್ನು ಕೂಡ ಅಮಾನತು ಮಾಡಲಾಗಿದೆ. ಈ ಎಲ್ಲಾ ಅಮಾನತುಗಳು ಅಶಿಸ್ತಿನ ನಡವಳಿಕೆ ನೆಪದಲ್ಲಿ ನಡೆದಿದೆ. ಸಂಸದರ ನಿಜವಾದ ಬೇಡಿಕೆ ಎಂದರೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚಿಸುವುದಾಗಿತ್ತು. ಗೃಹ ಸಚಿವರೊಬ್ಬರು ವಿಶೇಷವಾಗಿ ಸಂಸತ್ತಿನ ಭದ್ರತೆಯ ಉಲ್ಲಂಘನೆಯಂತಹ ಗಂಭೀರ ವಿಷಯದ ಬಗ್ಗೆ ಹೇಳಿಕೆ ನೀಡಲು ನಿರಾಕರಿಸುವುದು  ಆಘಾತಕಾರಿಯಾಗಿದೆ ಎಂದು ಪಿಯುಸಿಎಲ್‌ ಹೇಳಿದೆ.

ಲೋಕಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ ಪರಿಣಾಮ 19 ಕೋಟಿಗೂ ಅಧಿಕ ಜನರು ಸಂಸತ್ತಿನಲ್ಲಿ ಧ್ವನಿ ಕಳೆದುಕೊಂಡಂತಾಗಿದೆ. ಈ ಅಮಾನತುಗಳಿಂದ ಪ್ರಜಾಸತ್ತಾತ್ಮಕ ಭರವಸೆ ಹುಸಿಯಾಗಿದೆ. ಸರ್ಕಾರವು ತನ್ನ ಅಜೆಂಡಾಗಳನ್ನು ಸಾಧಿಸಲು ಸಂಸತ್ತಿನ ಅಧಿಕಾರಗಳನ್ನು ಬಳಸುವುದನ್ನು ಮುಂದುವರೆಸಿದಾಗ, ಅದು ಸಂಸದೀಯ ಪ್ರಜಾಪ್ರಭುತ್ವದ ಅರ್ಥವನ್ನು ವಿರೂಪಗೊಳಿಸುತ್ತದೆ. ಇದು ಚರ್ಚೆ ಮತ್ತು ಚರ್ಚೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾಂವಿಧಾನಿಕ ನಿಯಮವನ್ನು ಅಣಕಿಸುತ್ತದೆ ಎಂದು ಪಿಯುಸಿಎಲ್‌ ಹೇಳಿದೆ.

ಸಂಸತ್ತಿನಲ್ಲಿ ಬಹುತೇಕ ಸಂಸದರನ್ನು ಅಮಾನತು ಮಾಡಿದ ಬಳಿಕ ಆಡಳಿತಾರೂಢ ಸರ್ಕಾರವು ಭಾರತದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯ ಸ್ವರೂಪವನ್ನು ಬದಲಾಯಿಸಲು ಮೂರು ನಿರ್ಣಾಯಕ ಕಾನೂನುಗಳನ್ನು ಅಂಗೀಕರಿಸಿದೆ. ಭಾರತೀಯ ಸಾಕ್ಷಿ (ಎರಡನೇ) ಮಸೂದೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ-2023 ಮತ್ತು ಭಾರತೀಯ ನ್ಯಾಯ (ಎರಡನೇ) ಸಂಹಿತಾ-2023ನ್ನು ಆಡಳಿತ ಪಕ್ಷದ ಸದಸ್ಯರ ಧ್ವನಿ ಮತದೊಂದಿಗೆ ಅಂಗೀಕರಿಸಿದವು. ಇದಲ್ಲದೆ ವಿವಾದಾತ್ಮಕ ದೂರಸಂಪರ್ಕ ಮಸೂದೆ-2023 ನ್ನು ಲೋಕಸಭೆ ಮತ್ತು ರಾಜ್ಯಸಭೆ ಎರಡರಿಂದಲೂ ಅಂಗೀಕರಿಸಲಾಯಿತು. ಇದ ಗಂಭೀರ ಗೌಪ್ಯತೆಯ ಕಾಳಜಿಯನ್ನು ಹೊಂದಿದೆ. ಸಂಸದರ ಅಮಾನತು ಆರಂಭವಾದ ನಂತರ ಈ ಅಧಿವೇಶನದಲ್ಲಿ ಆತಂಕಕಾರಿಯಾದ ಒಟ್ಟು 14 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದಲ್ಲದೆ ಪೋಸ್ಟ್ ಆಫೀಸ್ ಬಿಲ್-2023, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ- 2023, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವೆಯ ಷರತ್ತುಗಳು) ಮಸೂದೆ-2023ನ್ನು ಅಂಗೀಕರಿಸಲಾಗಿದೆ. ಇವೆಲ್ಲಾ ಮಸೂದೆಗಳನ್ನು ಚರ್ಚೆ ಮಾಡದೆ, ಪ್ರತಿಪಕ್ಷಗಳ ಅಭಿಪ್ರಾಯವನ್ನು ಪಡೆಯದೆ ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

146 ಸಂಸದರನ್ನು ಅಮಾನತುಗೊಳಿಸುವುದರೊಂದಿಗೆ ಅವರು ಸಂಸತ್ತಿನಲ್ಲಿ ಉತ್ತರಿಸಲು ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳನ್ನು ಕೂಡ ಡಿಲಿಟ್‌ ಮಾಡಲಾಗಿದೆ. ಭಾರತದ ಸಾಮಾನ್ಯ ನಾಗರಿಕರ ಮಾಹಿತಿಯ ಹಕ್ಕನ್ನು ಪ್ರತಿನಿಧಿಸುವ ವಿರೋಧ ಪಕ್ಷದ ಸಂಸದರು ಈ ಅಧಿವೇಶನದಲ್ಲಿ ಎತ್ತಿದ 290 ಪ್ರಶ್ನೆಗಳನ್ನು ರದ್ದುಗೊಳಿಸಿರುವುದು ಆಘಾತಕಾರಿಯಾಗಿದೆ. 146 ಸಂಸದರ ಅಮಾನತು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಅಡಿಪಾಯವನ್ನು ದುರ್ಬಲಗೊಳಿಸಿದೆ. ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮುಕ್ತವಾಗಿ ಭಾಗವಹಿಸಲು 146 ಸಂಸದರ ಅಮಾನತು ತಕ್ಷಣವೇ ಜಾರಿಗೆ ಬರುವಂತೆ ಹಿಂಪಡೆಯಬೇಕು. ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ತಕ್ಷಣವೇ ಸಂಸತ್ತಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. 2024ರ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಅವುಗಳನ್ನು ಹೆಚ್ಚಿನ ಚರ್ಚೆಗೆ ತೆಗೆದುಕೊಳ್ಳಬೇಕು. ಮುಂದಿನ ಅಧಿವೇಶನವು ಲೋಕಸಭೆಯ ಭದ್ರತೆಯ ಉಲ್ಲಂಘನೆಯನ್ನು ಚರ್ಚಿಸುವುದರೊಂದಿಗೆ ಪ್ರಾರಂಭವಾಗಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಇದನ್ನು ಓದಿ: ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...