Homeಮುಖಪುಟಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

ಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

- Advertisement -
- Advertisement -

8 ದಿನಗಳ ಅವಧಿಯಲ್ಲಿ ಸಂಸತ್ತಿನಲ್ಲಿ 146 ವಿರೋಧ ಪಕ್ಷದ ಸದಸ್ಯರನ್ನು ವಜಾಗೊಳಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಕಳಂಕ ಎಂದು ಹೇಳಿದೆ ಮತ್ತು ಅಮಾನತುಗೊಂಡ ಸಂಸದರು ಎತ್ತಿರುವ ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ತಕ್ಷಣವೇ ಉತ್ತರವನ್ನು ಸಚಿವರುಗಳು ಅಪ್‌ಲೋಡ್ ಮಾಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

146 ಸಂಸದರನ್ನು ಅಮಾನತುಗೊಳಿಸಿದ ಬಳಿಕ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಅಧಿವೇಶನಗಳಲ್ಲಿ ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮಗಳು ಆಕಸ್ಮಿಕವಲ್ಲ. ಇದು ಸಂಸತ್ತಿನ ಪ್ರಕ್ರಿಯೆಯನ್ನು ಅಪಮೌಲ್ಯಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟವಾಗಿ ಸೂಚಿಸಿದೆ ಎಂದು ಪಿಯುಸಿಎಲ್‌ ಹೇಳಿದೆ.

ವಿರೋಧ ಪಕ್ಷದ ಸದಸ್ಯರ ಸಾಮೂಹಿಕ ಅಮಾನತಿನಿಂದ ಸಂಸತ್ತಿನಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಿದಂತಾಗುತ್ತದೆ. ಈ ಹಿಂದೆ ಲೋಕಸಭೆಯಿಂದ ಅಮಾನತುಗೊಂಡ ಹೆಚ್ಚು ಸಂಸದರ ಸಂಖ್ಯೆ 63. ಈ ಬಾರಿ 100 ಸಂಸದರನ್ನು ಅಮಾನತು ಮಾಡಲಾಗಿದೆ. ವಿರೋಧ ಪಕ್ಷಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಸಮಾಜವಾದಿ ಪಕ್ಷ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಯೂನಿಯನ್ ಮುಸ್ಲಿಂ ಲೀಗ್, ಜನತಾ ದಳ ಯುನೈಟೆಡ್, ಡಿಎಂಕೆ, ಆಮ್ ಆದ್ಮಿ ಪಾರ್ಟಿ,  ಬಹುಜನ ಸಮಾಜ ಪಕ್ಷ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿ ಹಲವು ಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ 46 ಸಂಸದರನ್ನು ಅಮಾನತುಗೊಳಿಸಲಾಗಿದೆ, ಅಸ್ಸಾಂನ ಪಕ್ಷೇತರ ಸಂಸದ, ಜನತಾ ದಳ ಯುನೈಟೆಡ್, ಜಾರ್ಖಂಡ್ ಮುಕ್ತಿ ಮೋರ್ಚಾದ ಸಂಸದರನ್ನು ಕೂಡ ಅಮಾನತು ಮಾಡಲಾಗಿದೆ. ಈ ಎಲ್ಲಾ ಅಮಾನತುಗಳು ಅಶಿಸ್ತಿನ ನಡವಳಿಕೆ ನೆಪದಲ್ಲಿ ನಡೆದಿದೆ. ಸಂಸದರ ನಿಜವಾದ ಬೇಡಿಕೆ ಎಂದರೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚಿಸುವುದಾಗಿತ್ತು. ಗೃಹ ಸಚಿವರೊಬ್ಬರು ವಿಶೇಷವಾಗಿ ಸಂಸತ್ತಿನ ಭದ್ರತೆಯ ಉಲ್ಲಂಘನೆಯಂತಹ ಗಂಭೀರ ವಿಷಯದ ಬಗ್ಗೆ ಹೇಳಿಕೆ ನೀಡಲು ನಿರಾಕರಿಸುವುದು  ಆಘಾತಕಾರಿಯಾಗಿದೆ ಎಂದು ಪಿಯುಸಿಎಲ್‌ ಹೇಳಿದೆ.

ಲೋಕಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ ಪರಿಣಾಮ 19 ಕೋಟಿಗೂ ಅಧಿಕ ಜನರು ಸಂಸತ್ತಿನಲ್ಲಿ ಧ್ವನಿ ಕಳೆದುಕೊಂಡಂತಾಗಿದೆ. ಈ ಅಮಾನತುಗಳಿಂದ ಪ್ರಜಾಸತ್ತಾತ್ಮಕ ಭರವಸೆ ಹುಸಿಯಾಗಿದೆ. ಸರ್ಕಾರವು ತನ್ನ ಅಜೆಂಡಾಗಳನ್ನು ಸಾಧಿಸಲು ಸಂಸತ್ತಿನ ಅಧಿಕಾರಗಳನ್ನು ಬಳಸುವುದನ್ನು ಮುಂದುವರೆಸಿದಾಗ, ಅದು ಸಂಸದೀಯ ಪ್ರಜಾಪ್ರಭುತ್ವದ ಅರ್ಥವನ್ನು ವಿರೂಪಗೊಳಿಸುತ್ತದೆ. ಇದು ಚರ್ಚೆ ಮತ್ತು ಚರ್ಚೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾಂವಿಧಾನಿಕ ನಿಯಮವನ್ನು ಅಣಕಿಸುತ್ತದೆ ಎಂದು ಪಿಯುಸಿಎಲ್‌ ಹೇಳಿದೆ.

ಸಂಸತ್ತಿನಲ್ಲಿ ಬಹುತೇಕ ಸಂಸದರನ್ನು ಅಮಾನತು ಮಾಡಿದ ಬಳಿಕ ಆಡಳಿತಾರೂಢ ಸರ್ಕಾರವು ಭಾರತದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯ ಸ್ವರೂಪವನ್ನು ಬದಲಾಯಿಸಲು ಮೂರು ನಿರ್ಣಾಯಕ ಕಾನೂನುಗಳನ್ನು ಅಂಗೀಕರಿಸಿದೆ. ಭಾರತೀಯ ಸಾಕ್ಷಿ (ಎರಡನೇ) ಮಸೂದೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ-2023 ಮತ್ತು ಭಾರತೀಯ ನ್ಯಾಯ (ಎರಡನೇ) ಸಂಹಿತಾ-2023ನ್ನು ಆಡಳಿತ ಪಕ್ಷದ ಸದಸ್ಯರ ಧ್ವನಿ ಮತದೊಂದಿಗೆ ಅಂಗೀಕರಿಸಿದವು. ಇದಲ್ಲದೆ ವಿವಾದಾತ್ಮಕ ದೂರಸಂಪರ್ಕ ಮಸೂದೆ-2023 ನ್ನು ಲೋಕಸಭೆ ಮತ್ತು ರಾಜ್ಯಸಭೆ ಎರಡರಿಂದಲೂ ಅಂಗೀಕರಿಸಲಾಯಿತು. ಇದ ಗಂಭೀರ ಗೌಪ್ಯತೆಯ ಕಾಳಜಿಯನ್ನು ಹೊಂದಿದೆ. ಸಂಸದರ ಅಮಾನತು ಆರಂಭವಾದ ನಂತರ ಈ ಅಧಿವೇಶನದಲ್ಲಿ ಆತಂಕಕಾರಿಯಾದ ಒಟ್ಟು 14 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದಲ್ಲದೆ ಪೋಸ್ಟ್ ಆಫೀಸ್ ಬಿಲ್-2023, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ- 2023, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವೆಯ ಷರತ್ತುಗಳು) ಮಸೂದೆ-2023ನ್ನು ಅಂಗೀಕರಿಸಲಾಗಿದೆ. ಇವೆಲ್ಲಾ ಮಸೂದೆಗಳನ್ನು ಚರ್ಚೆ ಮಾಡದೆ, ಪ್ರತಿಪಕ್ಷಗಳ ಅಭಿಪ್ರಾಯವನ್ನು ಪಡೆಯದೆ ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

146 ಸಂಸದರನ್ನು ಅಮಾನತುಗೊಳಿಸುವುದರೊಂದಿಗೆ ಅವರು ಸಂಸತ್ತಿನಲ್ಲಿ ಉತ್ತರಿಸಲು ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳನ್ನು ಕೂಡ ಡಿಲಿಟ್‌ ಮಾಡಲಾಗಿದೆ. ಭಾರತದ ಸಾಮಾನ್ಯ ನಾಗರಿಕರ ಮಾಹಿತಿಯ ಹಕ್ಕನ್ನು ಪ್ರತಿನಿಧಿಸುವ ವಿರೋಧ ಪಕ್ಷದ ಸಂಸದರು ಈ ಅಧಿವೇಶನದಲ್ಲಿ ಎತ್ತಿದ 290 ಪ್ರಶ್ನೆಗಳನ್ನು ರದ್ದುಗೊಳಿಸಿರುವುದು ಆಘಾತಕಾರಿಯಾಗಿದೆ. 146 ಸಂಸದರ ಅಮಾನತು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಅಡಿಪಾಯವನ್ನು ದುರ್ಬಲಗೊಳಿಸಿದೆ. ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮುಕ್ತವಾಗಿ ಭಾಗವಹಿಸಲು 146 ಸಂಸದರ ಅಮಾನತು ತಕ್ಷಣವೇ ಜಾರಿಗೆ ಬರುವಂತೆ ಹಿಂಪಡೆಯಬೇಕು. ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ತಕ್ಷಣವೇ ಸಂಸತ್ತಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. 2024ರ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಅವುಗಳನ್ನು ಹೆಚ್ಚಿನ ಚರ್ಚೆಗೆ ತೆಗೆದುಕೊಳ್ಳಬೇಕು. ಮುಂದಿನ ಅಧಿವೇಶನವು ಲೋಕಸಭೆಯ ಭದ್ರತೆಯ ಉಲ್ಲಂಘನೆಯನ್ನು ಚರ್ಚಿಸುವುದರೊಂದಿಗೆ ಪ್ರಾರಂಭವಾಗಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಇದನ್ನು ಓದಿ: ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...