Homeಮುಖಪುಟಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

ಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

- Advertisement -
- Advertisement -

8 ದಿನಗಳ ಅವಧಿಯಲ್ಲಿ ಸಂಸತ್ತಿನಲ್ಲಿ 146 ವಿರೋಧ ಪಕ್ಷದ ಸದಸ್ಯರನ್ನು ವಜಾಗೊಳಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಕಳಂಕ ಎಂದು ಹೇಳಿದೆ ಮತ್ತು ಅಮಾನತುಗೊಂಡ ಸಂಸದರು ಎತ್ತಿರುವ ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ತಕ್ಷಣವೇ ಉತ್ತರವನ್ನು ಸಚಿವರುಗಳು ಅಪ್‌ಲೋಡ್ ಮಾಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

146 ಸಂಸದರನ್ನು ಅಮಾನತುಗೊಳಿಸಿದ ಬಳಿಕ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಅಧಿವೇಶನಗಳಲ್ಲಿ ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮಗಳು ಆಕಸ್ಮಿಕವಲ್ಲ. ಇದು ಸಂಸತ್ತಿನ ಪ್ರಕ್ರಿಯೆಯನ್ನು ಅಪಮೌಲ್ಯಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟವಾಗಿ ಸೂಚಿಸಿದೆ ಎಂದು ಪಿಯುಸಿಎಲ್‌ ಹೇಳಿದೆ.

ವಿರೋಧ ಪಕ್ಷದ ಸದಸ್ಯರ ಸಾಮೂಹಿಕ ಅಮಾನತಿನಿಂದ ಸಂಸತ್ತಿನಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಿದಂತಾಗುತ್ತದೆ. ಈ ಹಿಂದೆ ಲೋಕಸಭೆಯಿಂದ ಅಮಾನತುಗೊಂಡ ಹೆಚ್ಚು ಸಂಸದರ ಸಂಖ್ಯೆ 63. ಈ ಬಾರಿ 100 ಸಂಸದರನ್ನು ಅಮಾನತು ಮಾಡಲಾಗಿದೆ. ವಿರೋಧ ಪಕ್ಷಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಸಮಾಜವಾದಿ ಪಕ್ಷ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಯೂನಿಯನ್ ಮುಸ್ಲಿಂ ಲೀಗ್, ಜನತಾ ದಳ ಯುನೈಟೆಡ್, ಡಿಎಂಕೆ, ಆಮ್ ಆದ್ಮಿ ಪಾರ್ಟಿ,  ಬಹುಜನ ಸಮಾಜ ಪಕ್ಷ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿ ಹಲವು ಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ 46 ಸಂಸದರನ್ನು ಅಮಾನತುಗೊಳಿಸಲಾಗಿದೆ, ಅಸ್ಸಾಂನ ಪಕ್ಷೇತರ ಸಂಸದ, ಜನತಾ ದಳ ಯುನೈಟೆಡ್, ಜಾರ್ಖಂಡ್ ಮುಕ್ತಿ ಮೋರ್ಚಾದ ಸಂಸದರನ್ನು ಕೂಡ ಅಮಾನತು ಮಾಡಲಾಗಿದೆ. ಈ ಎಲ್ಲಾ ಅಮಾನತುಗಳು ಅಶಿಸ್ತಿನ ನಡವಳಿಕೆ ನೆಪದಲ್ಲಿ ನಡೆದಿದೆ. ಸಂಸದರ ನಿಜವಾದ ಬೇಡಿಕೆ ಎಂದರೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚಿಸುವುದಾಗಿತ್ತು. ಗೃಹ ಸಚಿವರೊಬ್ಬರು ವಿಶೇಷವಾಗಿ ಸಂಸತ್ತಿನ ಭದ್ರತೆಯ ಉಲ್ಲಂಘನೆಯಂತಹ ಗಂಭೀರ ವಿಷಯದ ಬಗ್ಗೆ ಹೇಳಿಕೆ ನೀಡಲು ನಿರಾಕರಿಸುವುದು  ಆಘಾತಕಾರಿಯಾಗಿದೆ ಎಂದು ಪಿಯುಸಿಎಲ್‌ ಹೇಳಿದೆ.

ಲೋಕಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ ಪರಿಣಾಮ 19 ಕೋಟಿಗೂ ಅಧಿಕ ಜನರು ಸಂಸತ್ತಿನಲ್ಲಿ ಧ್ವನಿ ಕಳೆದುಕೊಂಡಂತಾಗಿದೆ. ಈ ಅಮಾನತುಗಳಿಂದ ಪ್ರಜಾಸತ್ತಾತ್ಮಕ ಭರವಸೆ ಹುಸಿಯಾಗಿದೆ. ಸರ್ಕಾರವು ತನ್ನ ಅಜೆಂಡಾಗಳನ್ನು ಸಾಧಿಸಲು ಸಂಸತ್ತಿನ ಅಧಿಕಾರಗಳನ್ನು ಬಳಸುವುದನ್ನು ಮುಂದುವರೆಸಿದಾಗ, ಅದು ಸಂಸದೀಯ ಪ್ರಜಾಪ್ರಭುತ್ವದ ಅರ್ಥವನ್ನು ವಿರೂಪಗೊಳಿಸುತ್ತದೆ. ಇದು ಚರ್ಚೆ ಮತ್ತು ಚರ್ಚೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾಂವಿಧಾನಿಕ ನಿಯಮವನ್ನು ಅಣಕಿಸುತ್ತದೆ ಎಂದು ಪಿಯುಸಿಎಲ್‌ ಹೇಳಿದೆ.

ಸಂಸತ್ತಿನಲ್ಲಿ ಬಹುತೇಕ ಸಂಸದರನ್ನು ಅಮಾನತು ಮಾಡಿದ ಬಳಿಕ ಆಡಳಿತಾರೂಢ ಸರ್ಕಾರವು ಭಾರತದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯ ಸ್ವರೂಪವನ್ನು ಬದಲಾಯಿಸಲು ಮೂರು ನಿರ್ಣಾಯಕ ಕಾನೂನುಗಳನ್ನು ಅಂಗೀಕರಿಸಿದೆ. ಭಾರತೀಯ ಸಾಕ್ಷಿ (ಎರಡನೇ) ಮಸೂದೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ-2023 ಮತ್ತು ಭಾರತೀಯ ನ್ಯಾಯ (ಎರಡನೇ) ಸಂಹಿತಾ-2023ನ್ನು ಆಡಳಿತ ಪಕ್ಷದ ಸದಸ್ಯರ ಧ್ವನಿ ಮತದೊಂದಿಗೆ ಅಂಗೀಕರಿಸಿದವು. ಇದಲ್ಲದೆ ವಿವಾದಾತ್ಮಕ ದೂರಸಂಪರ್ಕ ಮಸೂದೆ-2023 ನ್ನು ಲೋಕಸಭೆ ಮತ್ತು ರಾಜ್ಯಸಭೆ ಎರಡರಿಂದಲೂ ಅಂಗೀಕರಿಸಲಾಯಿತು. ಇದ ಗಂಭೀರ ಗೌಪ್ಯತೆಯ ಕಾಳಜಿಯನ್ನು ಹೊಂದಿದೆ. ಸಂಸದರ ಅಮಾನತು ಆರಂಭವಾದ ನಂತರ ಈ ಅಧಿವೇಶನದಲ್ಲಿ ಆತಂಕಕಾರಿಯಾದ ಒಟ್ಟು 14 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದಲ್ಲದೆ ಪೋಸ್ಟ್ ಆಫೀಸ್ ಬಿಲ್-2023, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ- 2023, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವೆಯ ಷರತ್ತುಗಳು) ಮಸೂದೆ-2023ನ್ನು ಅಂಗೀಕರಿಸಲಾಗಿದೆ. ಇವೆಲ್ಲಾ ಮಸೂದೆಗಳನ್ನು ಚರ್ಚೆ ಮಾಡದೆ, ಪ್ರತಿಪಕ್ಷಗಳ ಅಭಿಪ್ರಾಯವನ್ನು ಪಡೆಯದೆ ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

146 ಸಂಸದರನ್ನು ಅಮಾನತುಗೊಳಿಸುವುದರೊಂದಿಗೆ ಅವರು ಸಂಸತ್ತಿನಲ್ಲಿ ಉತ್ತರಿಸಲು ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳನ್ನು ಕೂಡ ಡಿಲಿಟ್‌ ಮಾಡಲಾಗಿದೆ. ಭಾರತದ ಸಾಮಾನ್ಯ ನಾಗರಿಕರ ಮಾಹಿತಿಯ ಹಕ್ಕನ್ನು ಪ್ರತಿನಿಧಿಸುವ ವಿರೋಧ ಪಕ್ಷದ ಸಂಸದರು ಈ ಅಧಿವೇಶನದಲ್ಲಿ ಎತ್ತಿದ 290 ಪ್ರಶ್ನೆಗಳನ್ನು ರದ್ದುಗೊಳಿಸಿರುವುದು ಆಘಾತಕಾರಿಯಾಗಿದೆ. 146 ಸಂಸದರ ಅಮಾನತು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಅಡಿಪಾಯವನ್ನು ದುರ್ಬಲಗೊಳಿಸಿದೆ. ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮುಕ್ತವಾಗಿ ಭಾಗವಹಿಸಲು 146 ಸಂಸದರ ಅಮಾನತು ತಕ್ಷಣವೇ ಜಾರಿಗೆ ಬರುವಂತೆ ಹಿಂಪಡೆಯಬೇಕು. ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ತಕ್ಷಣವೇ ಸಂಸತ್ತಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. 2024ರ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಅವುಗಳನ್ನು ಹೆಚ್ಚಿನ ಚರ್ಚೆಗೆ ತೆಗೆದುಕೊಳ್ಳಬೇಕು. ಮುಂದಿನ ಅಧಿವೇಶನವು ಲೋಕಸಭೆಯ ಭದ್ರತೆಯ ಉಲ್ಲಂಘನೆಯನ್ನು ಚರ್ಚಿಸುವುದರೊಂದಿಗೆ ಪ್ರಾರಂಭವಾಗಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಇದನ್ನು ಓದಿ: ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...