Homeಮುಖಪುಟಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

ಅಮಾನತುಗೊಂಡ ಸಂಸದರು ಕೇಳಿರುವ ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ: PUCL

- Advertisement -
- Advertisement -

8 ದಿನಗಳ ಅವಧಿಯಲ್ಲಿ ಸಂಸತ್ತಿನಲ್ಲಿ 146 ವಿರೋಧ ಪಕ್ಷದ ಸದಸ್ಯರನ್ನು ವಜಾಗೊಳಿಸಿರುವುದನ್ನು ಪಿಯುಸಿಎಲ್‌( PEOPLE’S UNION FOR CIVIL LIBERTIES) ಖಂಡಿಸಿದ್ದು, ಭಾರತದ ಸಾಂವಿಧಾನಿಕ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಕಳಂಕ ಎಂದು ಹೇಳಿದೆ ಮತ್ತು ಅಮಾನತುಗೊಂಡ ಸಂಸದರು ಎತ್ತಿರುವ ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ಸಂಸತ್ತಿನ ವೆಬ್‌ಸೈಟ್‌ನಲ್ಲಿ ತಕ್ಷಣವೇ ಉತ್ತರವನ್ನು ಸಚಿವರುಗಳು ಅಪ್‌ಲೋಡ್ ಮಾಡಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಈ ಕುರಿತು ಪಿಯುಸಿಎಲ್‌ ಅಧ್ಯಕ್ಷರಾದ ಕವಿತಾ ಶ್ರೀವತ್ಸವ್‌ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ವಿ,ಸುರೇಶ್‌ ಅವರು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

146 ಸಂಸದರನ್ನು ಅಮಾನತುಗೊಳಿಸಿದ ಬಳಿಕ ಆಡಳಿತಾರೂಢ ಬಿಜೆಪಿ ಸರ್ಕಾರವು ಹಿಂದಿನ ಅಧಿವೇಶನಗಳಲ್ಲಿ ಯಾವುದೇ ಅರ್ಥಪೂರ್ಣ ಚರ್ಚೆಯಿಲ್ಲದೆ ಸಂಸತ್ತಿನಲ್ಲಿ ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮಗಳು ಆಕಸ್ಮಿಕವಲ್ಲ. ಇದು ಸಂಸತ್ತಿನ ಪ್ರಕ್ರಿಯೆಯನ್ನು ಅಪಮೌಲ್ಯಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಸ್ಪಷ್ಟವಾಗಿ ಸೂಚಿಸಿದೆ ಎಂದು ಪಿಯುಸಿಎಲ್‌ ಹೇಳಿದೆ.

ವಿರೋಧ ಪಕ್ಷದ ಸದಸ್ಯರ ಸಾಮೂಹಿಕ ಅಮಾನತಿನಿಂದ ಸಂಸತ್ತಿನಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಿದಂತಾಗುತ್ತದೆ. ಈ ಹಿಂದೆ ಲೋಕಸಭೆಯಿಂದ ಅಮಾನತುಗೊಂಡ ಹೆಚ್ಚು ಸಂಸದರ ಸಂಖ್ಯೆ 63. ಈ ಬಾರಿ 100 ಸಂಸದರನ್ನು ಅಮಾನತು ಮಾಡಲಾಗಿದೆ. ವಿರೋಧ ಪಕ್ಷಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್, ಸಮಾಜವಾದಿ ಪಕ್ಷ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಯೂನಿಯನ್ ಮುಸ್ಲಿಂ ಲೀಗ್, ಜನತಾ ದಳ ಯುನೈಟೆಡ್, ಡಿಎಂಕೆ, ಆಮ್ ಆದ್ಮಿ ಪಾರ್ಟಿ,  ಬಹುಜನ ಸಮಾಜ ಪಕ್ಷ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಕ್ರಾಂತಿಕಾರಿ ಸಮಾಜವಾದಿ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸೇರಿ ಹಲವು ಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ. ರಾಜ್ಯಸಭೆಯಲ್ಲಿ 46 ಸಂಸದರನ್ನು ಅಮಾನತುಗೊಳಿಸಲಾಗಿದೆ, ಅಸ್ಸಾಂನ ಪಕ್ಷೇತರ ಸಂಸದ, ಜನತಾ ದಳ ಯುನೈಟೆಡ್, ಜಾರ್ಖಂಡ್ ಮುಕ್ತಿ ಮೋರ್ಚಾದ ಸಂಸದರನ್ನು ಕೂಡ ಅಮಾನತು ಮಾಡಲಾಗಿದೆ. ಈ ಎಲ್ಲಾ ಅಮಾನತುಗಳು ಅಶಿಸ್ತಿನ ನಡವಳಿಕೆ ನೆಪದಲ್ಲಿ ನಡೆದಿದೆ. ಸಂಸದರ ನಿಜವಾದ ಬೇಡಿಕೆ ಎಂದರೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚಿಸುವುದಾಗಿತ್ತು. ಗೃಹ ಸಚಿವರೊಬ್ಬರು ವಿಶೇಷವಾಗಿ ಸಂಸತ್ತಿನ ಭದ್ರತೆಯ ಉಲ್ಲಂಘನೆಯಂತಹ ಗಂಭೀರ ವಿಷಯದ ಬಗ್ಗೆ ಹೇಳಿಕೆ ನೀಡಲು ನಿರಾಕರಿಸುವುದು  ಆಘಾತಕಾರಿಯಾಗಿದೆ ಎಂದು ಪಿಯುಸಿಎಲ್‌ ಹೇಳಿದೆ.

ಲೋಕಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ ಪರಿಣಾಮ 19 ಕೋಟಿಗೂ ಅಧಿಕ ಜನರು ಸಂಸತ್ತಿನಲ್ಲಿ ಧ್ವನಿ ಕಳೆದುಕೊಂಡಂತಾಗಿದೆ. ಈ ಅಮಾನತುಗಳಿಂದ ಪ್ರಜಾಸತ್ತಾತ್ಮಕ ಭರವಸೆ ಹುಸಿಯಾಗಿದೆ. ಸರ್ಕಾರವು ತನ್ನ ಅಜೆಂಡಾಗಳನ್ನು ಸಾಧಿಸಲು ಸಂಸತ್ತಿನ ಅಧಿಕಾರಗಳನ್ನು ಬಳಸುವುದನ್ನು ಮುಂದುವರೆಸಿದಾಗ, ಅದು ಸಂಸದೀಯ ಪ್ರಜಾಪ್ರಭುತ್ವದ ಅರ್ಥವನ್ನು ವಿರೂಪಗೊಳಿಸುತ್ತದೆ. ಇದು ಚರ್ಚೆ ಮತ್ತು ಚರ್ಚೆಯ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾಂವಿಧಾನಿಕ ನಿಯಮವನ್ನು ಅಣಕಿಸುತ್ತದೆ ಎಂದು ಪಿಯುಸಿಎಲ್‌ ಹೇಳಿದೆ.

ಸಂಸತ್ತಿನಲ್ಲಿ ಬಹುತೇಕ ಸಂಸದರನ್ನು ಅಮಾನತು ಮಾಡಿದ ಬಳಿಕ ಆಡಳಿತಾರೂಢ ಸರ್ಕಾರವು ಭಾರತದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯ ಸ್ವರೂಪವನ್ನು ಬದಲಾಯಿಸಲು ಮೂರು ನಿರ್ಣಾಯಕ ಕಾನೂನುಗಳನ್ನು ಅಂಗೀಕರಿಸಿದೆ. ಭಾರತೀಯ ಸಾಕ್ಷಿ (ಎರಡನೇ) ಮಸೂದೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ-2023 ಮತ್ತು ಭಾರತೀಯ ನ್ಯಾಯ (ಎರಡನೇ) ಸಂಹಿತಾ-2023ನ್ನು ಆಡಳಿತ ಪಕ್ಷದ ಸದಸ್ಯರ ಧ್ವನಿ ಮತದೊಂದಿಗೆ ಅಂಗೀಕರಿಸಿದವು. ಇದಲ್ಲದೆ ವಿವಾದಾತ್ಮಕ ದೂರಸಂಪರ್ಕ ಮಸೂದೆ-2023 ನ್ನು ಲೋಕಸಭೆ ಮತ್ತು ರಾಜ್ಯಸಭೆ ಎರಡರಿಂದಲೂ ಅಂಗೀಕರಿಸಲಾಯಿತು. ಇದ ಗಂಭೀರ ಗೌಪ್ಯತೆಯ ಕಾಳಜಿಯನ್ನು ಹೊಂದಿದೆ. ಸಂಸದರ ಅಮಾನತು ಆರಂಭವಾದ ನಂತರ ಈ ಅಧಿವೇಶನದಲ್ಲಿ ಆತಂಕಕಾರಿಯಾದ ಒಟ್ಟು 14 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದಲ್ಲದೆ ಪೋಸ್ಟ್ ಆಫೀಸ್ ಬಿಲ್-2023, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ- 2023, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವೆಯ ಷರತ್ತುಗಳು) ಮಸೂದೆ-2023ನ್ನು ಅಂಗೀಕರಿಸಲಾಗಿದೆ. ಇವೆಲ್ಲಾ ಮಸೂದೆಗಳನ್ನು ಚರ್ಚೆ ಮಾಡದೆ, ಪ್ರತಿಪಕ್ಷಗಳ ಅಭಿಪ್ರಾಯವನ್ನು ಪಡೆಯದೆ ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ ಎಂದು ಪಿಯುಸಿಎಲ್‌ ಕಳವಳ ವ್ಯಕ್ತಪಡಿಸಿದೆ.

146 ಸಂಸದರನ್ನು ಅಮಾನತುಗೊಳಿಸುವುದರೊಂದಿಗೆ ಅವರು ಸಂಸತ್ತಿನಲ್ಲಿ ಉತ್ತರಿಸಲು ಸರ್ಕಾರಕ್ಕೆ ಕೇಳಿದ ಪ್ರಶ್ನೆಗಳನ್ನು ಕೂಡ ಡಿಲಿಟ್‌ ಮಾಡಲಾಗಿದೆ. ಭಾರತದ ಸಾಮಾನ್ಯ ನಾಗರಿಕರ ಮಾಹಿತಿಯ ಹಕ್ಕನ್ನು ಪ್ರತಿನಿಧಿಸುವ ವಿರೋಧ ಪಕ್ಷದ ಸಂಸದರು ಈ ಅಧಿವೇಶನದಲ್ಲಿ ಎತ್ತಿದ 290 ಪ್ರಶ್ನೆಗಳನ್ನು ರದ್ದುಗೊಳಿಸಿರುವುದು ಆಘಾತಕಾರಿಯಾಗಿದೆ. 146 ಸಂಸದರ ಅಮಾನತು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಅಡಿಪಾಯವನ್ನು ದುರ್ಬಲಗೊಳಿಸಿದೆ. ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮುಕ್ತವಾಗಿ ಭಾಗವಹಿಸಲು 146 ಸಂಸದರ ಅಮಾನತು ತಕ್ಷಣವೇ ಜಾರಿಗೆ ಬರುವಂತೆ ಹಿಂಪಡೆಯಬೇಕು. ಎಲ್ಲಾ 290 ಪ್ರಶ್ನೆಗಳಿಗೆ ಉತ್ತರಗಳನ್ನು ತಕ್ಷಣವೇ ಸಂಸತ್ತಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. 2024ರ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಅವುಗಳನ್ನು ಹೆಚ್ಚಿನ ಚರ್ಚೆಗೆ ತೆಗೆದುಕೊಳ್ಳಬೇಕು. ಮುಂದಿನ ಅಧಿವೇಶನವು ಲೋಕಸಭೆಯ ಭದ್ರತೆಯ ಉಲ್ಲಂಘನೆಯನ್ನು ಚರ್ಚಿಸುವುದರೊಂದಿಗೆ ಪ್ರಾರಂಭವಾಗಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಇದನ್ನು ಓದಿ: ಸಂಸತ್ ಭದ್ರತಾ ಲೋಪ ಪ್ರಕರಣದಲ್ಲಿ ಬಂಧಿತ ಯುವಕರ ಮೇಲಿನ ಯುಎಪಿಎ ಆರೋಪ ಕೈಬಿಡಿ: PUCL

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...