Homeಕರ್ನಾಟಕಭ್ರೂಣ ಲಿಂಗ ಪತ್ತೆ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ ಬಹುಮಾನ ಘೋಷಣೆ

ಭ್ರೂಣ ಲಿಂಗ ಪತ್ತೆ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ ಬಹುಮಾನ ಘೋಷಣೆ

- Advertisement -
- Advertisement -

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಈಗ ಈ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆವೆ. ಅದರಲ್ಲೂ ಮುಖ್ಯವಾಗಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಅಧಿಕವಾಗಿದೆ. ಭ್ರೂಣ ಲಿಂಗ ಪತ್ತೆ ಮಾಡುವುದು ಮತ್ತು ಹತ್ಯೆ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ನಗದು ಬಹುಮಾನ ಯೋಜನೆಯನ್ನು ರೂಪಿಸಿದೆ.

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿದ್ದರೆ ಇದರ ಬಗ್ಗೆ ಜನರು ಇಲಾಖೆಗೆ ಸುಳಿವು ನೀಡಬಹುದು. ಸುಳಿವು ನೀಡಿದವರಿಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಹಾಗೆಯೇ ಸುಳಿವು ನೀಡಿದವರ ಮಾಹಿತಿಯೂ ಕೂಡಾ ಗೌಪ್ಯವಾಗಿರಿಸಲಾಗುತ್ತದೆ ಎಂದು ಈ ಹಿಂದೆಯೇ ಆರೋಗ್ಯ ಇಲಾಖೆ ತಿಳಿಸಿತ್ತು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ (ಪಿಪಿಪಿಎನ್‌ಡಿಟಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗುಪ್ತ ಕಾರ್ಯಾಚರಣೆಯು ಯಶಸ್ವಿಯಾದರೆ ಈ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುತ್ತದೆ.

ಒಂದು ಲಕ್ಷ ರೂಪಾಯಿ ಬಹುಮಾನ ಮೊತ್ತದಲ್ಲಿ 50 ಸಾವಿರ ರೂ. ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮತ್ತು ಇನ್ನುಳಿದ 50 ಸಾವಿರ ರೂ. ಹಣವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಪಿಪಿಎನ್‌ಡಿಟಿ ಶುಲ್ಕದಿಂದ ಭರಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಎರಡು ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದ ತಂಡವೊಂದನ್ನು ಕಳೆದ ಅಕ್ಟೋಬರ್​ನಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದರು. ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವಿರೇಶ್ ಎಂಬ ನಾಲ್ವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಬಳಿಯ ಆಲೆಮನೆಯಲ್ಲಿ ಕೂಡ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಮಾಡುವುದು ಬೆಳಕಿಗೆ ಬಂದಿತ್ತು. ಇತ್ತೀಚೆಗೆ ಬೆಳಗಾವಿಯಲ್ಲಿ ಕೂಡ ಮಕ್ಕಳ ಮಾರಾಟ ಮತ್ತು ಭ್ರೂಣ ಹತ್ಯೆ ಮಾಡುತ್ತಿದ್ದ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ : ಬೆಂಗಳೂರು | ಯುಎಪಿಎ ಕಾನೂನು ರದ್ದಾಗಬೇಕು: ಪ್ರಗತಿಪರ ಸಂಘಟನೆಗಳಿಂದ ಒಕ್ಕೊರಲ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...