HomeUncategorizedಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ 'ಅಂತಿಮ' ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

ಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ ‘ಅಂತಿಮ’ ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

- Advertisement -
- Advertisement -

ಪ್ರತಿಭಟನಾನಿರತ ವೈದ್ಯರೊಂದಿಗೆ ಎರಡು ಬಾರಿ ನಡೆದ ಮಾತುಕತೆ ವಿಫಲಗೊಂಡ ನಂತರವೂ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪಶ್ಚಿಮ ಬಂಗಾಳ ಸರ್ಕಾರವು ಮತ್ತೊಮ್ಮೆ ವೈದ್ಯರನ್ನು ಸಂಪರ್ಕಿಸಿದೆ. ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್ ಅವರು ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿದ್ದು, “ಸಭೆಗೆ ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ” ಎಂದು ತಿಳಿಸಿದ್ದಾರೆ. ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ ಸಭೆಯನ್ನು ವೀಡಿಯೊಗ್ರಾಫ್ ಮಾಡಲು ಅಥವಾ ಲೈವ್-ಸ್ಟ್ರೀಮ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಸೂಚಿಸಿದ್ದಾರೆ. ಇದೇ ಕಾರಣಕ್ಕೆ ಹಿಂದಿನ ಸಭೆಗಳು ರದ್ದಾಗಿದ್ದವು.

“ಇದು ಐದನೇ ಮತ್ತು ಕೊನೆಯ ಬಾರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ನಿಮ್ಮ ಪ್ರತಿನಿಧಿಗಳ ನಡುವಿನ ಸಭೆಗಾಗಿ ನಾವು ನಿಮ್ಮನ್ನು ಸಂಪರ್ಕಿಸುತ್ತಿದ್ದೇವೆ. ಹಿಂದಿನ ದಿನದ ನಮ್ಮ ಚರ್ಚೆಗೆ ಅನುಗುಣವಾಗಿ, ನಾವು ಮತ್ತೊಮ್ಮೆ ಮಾನ್ಯ ಮುಖ್ಯಮಂತ್ರಿಗಳೊಂದಿಗಿನ ಸಭೆಗೆ ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ. ಅವರು ಕಾಳಿಘಾಟ್ ನಿವಾಸದಲ್ಲಿ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಲಿದ್ದಾರೆ” ಎಂದು ಪತ್ರದಲ್ಲಿ ಆಹ್ವಾನಿಸಲಾಗಿದೆ.

ಇದನ್ನೂಓದಿ: ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಏತನ್ಮಧ್ಯೆ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಸೋಮವಾರ ಕೂಡಾ ತಮ್ಮ ಮುಷ್ಕರವನ್ನು ಮುಂದುವರೆಸಿದ್ದಾರೆ. ವೈದ್ಯರ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ತಮ್ಮ ಕೆಲಸ ತೊರೆದು ನಡೆಸುತ್ತಿರುವ 36 ನೇ ದಿನದ ಮುಷ್ಕರವನ್ನು ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಾದ ಸ್ವಾಸ್ಥ್ಯ ಭವನದ ಹೊರಗೆ ತಮ್ಮ ಧರಣಿ ನಡೆಸುವ ಮೂಲಕ ಮುಂದುವರೆಸಿದ್ದಾರೆ. ಅವರು ತಮ್ಮ ಬೇಡಿಕೆಗಳಾದ ಕೋಲ್ಕತ್ತಾ ಪೊಲೀಸ್ ಕಮಿಷನರ್ ಮತ್ತು ಹಿರಿಯ ರಾಜ್ಯ ಆರೋಗ್ಯ ಅಧಿಕಾರಿಗಳನ್ನು ವಜಾಗೊಳಿಸುವವರೆಗೂ ಮುಂದುವರಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸುತ್ತೇವೆ. ರಾಜ್ಯ ಸರಕಾರ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಧರಣಿ ನಿರತ ಕಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಪ್ರತಿಭಟನಾ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ವೈದ್ಯರಿಗೆ ಅವರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಿಂದ ಸ್ನಾತಕೋತ್ತರ ಮಹಿಳಾ ವೈದ್ಯರ ಶವ ಪತ್ತೆಯಾಗಿತ್ತು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ತನಿಖೆ ನಡೆಸುತ್ತಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ...

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...