HomeUncategorizedಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ 'ಅಂತಿಮ' ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

ಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ ‘ಅಂತಿಮ’ ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

- Advertisement -
- Advertisement -

ಪ್ರತಿಭಟನಾನಿರತ ವೈದ್ಯರೊಂದಿಗೆ ಎರಡು ಬಾರಿ ನಡೆದ ಮಾತುಕತೆ ವಿಫಲಗೊಂಡ ನಂತರವೂ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪಶ್ಚಿಮ ಬಂಗಾಳ ಸರ್ಕಾರವು ಮತ್ತೊಮ್ಮೆ ವೈದ್ಯರನ್ನು ಸಂಪರ್ಕಿಸಿದೆ. ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್ ಅವರು ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿದ್ದು, “ಸಭೆಗೆ ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ” ಎಂದು ತಿಳಿಸಿದ್ದಾರೆ. ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ ಸಭೆಯನ್ನು ವೀಡಿಯೊಗ್ರಾಫ್ ಮಾಡಲು ಅಥವಾ ಲೈವ್-ಸ್ಟ್ರೀಮ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಸೂಚಿಸಿದ್ದಾರೆ. ಇದೇ ಕಾರಣಕ್ಕೆ ಹಿಂದಿನ ಸಭೆಗಳು ರದ್ದಾಗಿದ್ದವು.

“ಇದು ಐದನೇ ಮತ್ತು ಕೊನೆಯ ಬಾರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ನಿಮ್ಮ ಪ್ರತಿನಿಧಿಗಳ ನಡುವಿನ ಸಭೆಗಾಗಿ ನಾವು ನಿಮ್ಮನ್ನು ಸಂಪರ್ಕಿಸುತ್ತಿದ್ದೇವೆ. ಹಿಂದಿನ ದಿನದ ನಮ್ಮ ಚರ್ಚೆಗೆ ಅನುಗುಣವಾಗಿ, ನಾವು ಮತ್ತೊಮ್ಮೆ ಮಾನ್ಯ ಮುಖ್ಯಮಂತ್ರಿಗಳೊಂದಿಗಿನ ಸಭೆಗೆ ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ. ಅವರು ಕಾಳಿಘಾಟ್ ನಿವಾಸದಲ್ಲಿ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಲಿದ್ದಾರೆ” ಎಂದು ಪತ್ರದಲ್ಲಿ ಆಹ್ವಾನಿಸಲಾಗಿದೆ.

ಇದನ್ನೂಓದಿ: ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಏತನ್ಮಧ್ಯೆ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಸೋಮವಾರ ಕೂಡಾ ತಮ್ಮ ಮುಷ್ಕರವನ್ನು ಮುಂದುವರೆಸಿದ್ದಾರೆ. ವೈದ್ಯರ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ತಮ್ಮ ಕೆಲಸ ತೊರೆದು ನಡೆಸುತ್ತಿರುವ 36 ನೇ ದಿನದ ಮುಷ್ಕರವನ್ನು ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಾದ ಸ್ವಾಸ್ಥ್ಯ ಭವನದ ಹೊರಗೆ ತಮ್ಮ ಧರಣಿ ನಡೆಸುವ ಮೂಲಕ ಮುಂದುವರೆಸಿದ್ದಾರೆ. ಅವರು ತಮ್ಮ ಬೇಡಿಕೆಗಳಾದ ಕೋಲ್ಕತ್ತಾ ಪೊಲೀಸ್ ಕಮಿಷನರ್ ಮತ್ತು ಹಿರಿಯ ರಾಜ್ಯ ಆರೋಗ್ಯ ಅಧಿಕಾರಿಗಳನ್ನು ವಜಾಗೊಳಿಸುವವರೆಗೂ ಮುಂದುವರಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸುತ್ತೇವೆ. ರಾಜ್ಯ ಸರಕಾರ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಧರಣಿ ನಿರತ ಕಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಪ್ರತಿಭಟನಾ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ವೈದ್ಯರಿಗೆ ಅವರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಿಂದ ಸ್ನಾತಕೋತ್ತರ ಮಹಿಳಾ ವೈದ್ಯರ ಶವ ಪತ್ತೆಯಾಗಿತ್ತು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ತನಿಖೆ ನಡೆಸುತ್ತಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾನುವಾರ (ಫೆ.15) ಪೋಸ್ಟ್ ಹಾಕಿರುವ...

ಬಂಗಾಳ: ಎಸ್‌ಐಆರ್ ವಿಚಾರಣೆಗೆಂದು ಕರೆ ಮಾಡಿ ವ್ಯಕ್ತಿಯನ್ನು ಕೊಂದು, ಕತ್ತರಿಸಿ, ಮೂರು ಚೀಲಗಳಲ್ಲಿ ಕಾಲುವೆಗೆ ಎಸೆದ ಬಿಎಲ್‌ಒ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 36 ವರ್ಷದ ವ್ಯಕ್ತಿಯೊಬ್ಬರ ಭೀಕರ ಕೊಲೆ ಮತ್ತು ಛಿದ್ರಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ...

ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ...

ಭಯೋತ್ಪಾದಕರ ಸಂಪರ್ಕ ಶಂಕೆ: ಮಹಾರಾಷ್ಟ್ರದ 21 ಸ್ಥಳಗಳಲ್ಲಿ ದಾಳಿ ನಡೆಸಿದ ಎಟಿಎಸ್

ಮುಂಬೈ: ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬೆಳಿಗ್ಗೆ ಸುಮಾರು 21 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಯಾವತ್ಮಲ್ ಮತ್ತು ಅಹಲ್ಯಾನಗರ...

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ...

ಬೌದ್ಧಿಕ ದಾರಿದ್ರ್ಯ ಮತ್ತು ಸಾಂಸ್ಥಿಕ ಹತ್ಯೆಗಳು: ಡಾ.ಪಿ. ನಂದಕುಮಾರ 

                                                      ಸಂವಿಧಾನ ವಿರೋಧಿ ಹಾಗೂ ದಲಿತ, ಹಿಂದುಳಿದ, ಮಹಿಳೆಯರ ಹಕ್ಕುಗಳ ಅಂದಿನ ಮನುವಾದಿ  ಆರ್ಯಪಳೆಯುಳಿಕೆಗಳೆ ಇಂದೂ ಯುಜಿಸಿ- 2026ರ ಕರಡು ವಿರುದ್ಧ ಷಂಡ್ಯಂತ್ರ ರೂಪಿಸುತ್ತಿರುವುದು. ಕೇವಲ 3% ಜನಾಭಿಪ್ರಾಯವೇ ಭಾರತೀಯ ಒಟ್ಟು ಬಹುಸಮುದಾಯಗಳ ಅಭಿಪ್ರಾಯವೆಂಬಂತೆ...

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ...

ಅಮೆರಿಕದ ಕ್ಯಾಲಿಫೋರ್ನಿಯದಲ್ಲಿ ಕಾಣೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.   ಈ ಕುರಿತು ಭಾರತದ ಕಾನ್ಸುಲೇಟ್ ಜನರಲ್ ಪ್ರಕಟಣೆ ಹೊರಡಿಸಿದ್ದು, ಸ್ಥಳೀಯ ಪೊಲೀಸರು...

ಬೆಂಗಳೂರು | ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಸಾವು

ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನ ನೆಲಮಂಗಲದ ಜಿಂದಾಲ್‌ ಸಂಸ್ಥೆಯ ಬಳಿ...