HomeUncategorizedಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ 'ಅಂತಿಮ' ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

ಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ ‘ಅಂತಿಮ’ ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

- Advertisement -
- Advertisement -

ಪ್ರತಿಭಟನಾನಿರತ ವೈದ್ಯರೊಂದಿಗೆ ಎರಡು ಬಾರಿ ನಡೆದ ಮಾತುಕತೆ ವಿಫಲಗೊಂಡ ನಂತರವೂ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪಶ್ಚಿಮ ಬಂಗಾಳ ಸರ್ಕಾರವು ಮತ್ತೊಮ್ಮೆ ವೈದ್ಯರನ್ನು ಸಂಪರ್ಕಿಸಿದೆ. ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್ ಅವರು ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿದ್ದು, “ಸಭೆಗೆ ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ” ಎಂದು ತಿಳಿಸಿದ್ದಾರೆ. ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ ಸಭೆಯನ್ನು ವೀಡಿಯೊಗ್ರಾಫ್ ಮಾಡಲು ಅಥವಾ ಲೈವ್-ಸ್ಟ್ರೀಮ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಸೂಚಿಸಿದ್ದಾರೆ. ಇದೇ ಕಾರಣಕ್ಕೆ ಹಿಂದಿನ ಸಭೆಗಳು ರದ್ದಾಗಿದ್ದವು.

“ಇದು ಐದನೇ ಮತ್ತು ಕೊನೆಯ ಬಾರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ನಿಮ್ಮ ಪ್ರತಿನಿಧಿಗಳ ನಡುವಿನ ಸಭೆಗಾಗಿ ನಾವು ನಿಮ್ಮನ್ನು ಸಂಪರ್ಕಿಸುತ್ತಿದ್ದೇವೆ. ಹಿಂದಿನ ದಿನದ ನಮ್ಮ ಚರ್ಚೆಗೆ ಅನುಗುಣವಾಗಿ, ನಾವು ಮತ್ತೊಮ್ಮೆ ಮಾನ್ಯ ಮುಖ್ಯಮಂತ್ರಿಗಳೊಂದಿಗಿನ ಸಭೆಗೆ ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ. ಅವರು ಕಾಳಿಘಾಟ್ ನಿವಾಸದಲ್ಲಿ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಲಿದ್ದಾರೆ” ಎಂದು ಪತ್ರದಲ್ಲಿ ಆಹ್ವಾನಿಸಲಾಗಿದೆ.

ಇದನ್ನೂಓದಿ: ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಏತನ್ಮಧ್ಯೆ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಸೋಮವಾರ ಕೂಡಾ ತಮ್ಮ ಮುಷ್ಕರವನ್ನು ಮುಂದುವರೆಸಿದ್ದಾರೆ. ವೈದ್ಯರ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ತಮ್ಮ ಕೆಲಸ ತೊರೆದು ನಡೆಸುತ್ತಿರುವ 36 ನೇ ದಿನದ ಮುಷ್ಕರವನ್ನು ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಾದ ಸ್ವಾಸ್ಥ್ಯ ಭವನದ ಹೊರಗೆ ತಮ್ಮ ಧರಣಿ ನಡೆಸುವ ಮೂಲಕ ಮುಂದುವರೆಸಿದ್ದಾರೆ. ಅವರು ತಮ್ಮ ಬೇಡಿಕೆಗಳಾದ ಕೋಲ್ಕತ್ತಾ ಪೊಲೀಸ್ ಕಮಿಷನರ್ ಮತ್ತು ಹಿರಿಯ ರಾಜ್ಯ ಆರೋಗ್ಯ ಅಧಿಕಾರಿಗಳನ್ನು ವಜಾಗೊಳಿಸುವವರೆಗೂ ಮುಂದುವರಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸುತ್ತೇವೆ. ರಾಜ್ಯ ಸರಕಾರ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಧರಣಿ ನಿರತ ಕಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಪ್ರತಿಭಟನಾ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ವೈದ್ಯರಿಗೆ ಅವರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಿಂದ ಸ್ನಾತಕೋತ್ತರ ಮಹಿಳಾ ವೈದ್ಯರ ಶವ ಪತ್ತೆಯಾಗಿತ್ತು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ತನಿಖೆ ನಡೆಸುತ್ತಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...