Homeಮುಖಪುಟಆರ್‌ಜಿ ಕರ್ ವೈದ್ಯೆ ಅತ್ಯಾಚಾರ ಪ್ರಕರಣ: ನಾಳೆ (ಜ.18) ತೀರ್ಪು; ಪ್ರಕರಣದ ಇದುವರೆಗಿನ ಪ್ರಮುಖ ಅಂಶಗಳು

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ ಪ್ರಕರಣ: ನಾಳೆ (ಜ.18) ತೀರ್ಪು; ಪ್ರಕರಣದ ಇದುವರೆಗಿನ ಪ್ರಮುಖ ಅಂಶಗಳು

- Advertisement -
- Advertisement -

ಕಳೆದ ವರ್ಷ ಆಗಸ್ಟ್‌ನಲ್ಲಿ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶನಿವಾರ ಸೀಲ್ಡಾ ನ್ಯಾಯಾಲಯವು ತೀರ್ಪು ನೀಡಲಿದೆ.

ಜನವರಿ 18ರಂದು ಸೀಲ್ಡಾ ನ್ಯಾಯಾಲಯದ ನಿಯೋಜಿತ ನ್ಯಾಯಾಧೀಶರು ತೀರ್ಪು ನೀಡಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಳೆದ ವರ್ಷ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾದ ಆರ್‌ಜಿ ಕರ್ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ ಕೇಂದ್ರ ಸಂಸ್ಥೆ (ಸಿಬಿಐ)ಗೆ ಹಸ್ತಾಂತರಿಸಿದ ನಂತರ ಕೇಂದ್ರ ತನಿಖಾ ದಳವು ತನಿಖೆ ನಡೆಸುತ್ತಿದೆ.

ಕಳೆದ ವರ್ಷ ಆಗಸ್ಟ್ 9ರಂದು ಉತ್ತರ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅಪರಾಧ ಎಸಗಿದ ಆರೋಪ ಹೊತ್ತಿರುವ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸಬೇಕೆಂದು ಸಿಬಿಐ ಆಗ್ರಹಿಸಿದೆ.

ಮೃತ ವೈದ್ಯೆಯ ತಂದೆಯು ಈ ಕುರಿತು ನ್ಯಾಯಯುತ ತೀರ್ಪಿನ ಭರವಸೆಯನ್ನು ವ್ಯಕ್ತಪಡಿಸಿದ್ದು, ನಮ್ಮ ಕುಟುಂಬವು ತಮ್ಮ ಮಗಳಿಗೆ ನ್ಯಾಯ ಪಡೆಯಲು ನ್ಯಾಯಾಲಯದಿಂದ ನ್ಯಾಯಾಲಯಕ್ಕೆ ಹೋಗುತ್ತಿದೆ ಎಂದು ಹೇಳಿದ್ದಾರೆ.

“ನ್ಯಾಯಾಲಯವು ಎಲ್ಲವನ್ನೂ ಪರಿಶೀಲಿಸಿ ಪರಿಗಣಿಸಿದ ನಂತರ ನಮಗೆ ಉತ್ತಮ ತೀರ್ಪು ಸಿಗುತ್ತದೆ. ಡಿಎನ್‌ಎ ವರದಿಯು ಇತರ ಆರೋಪಿಗಳು ಈ ಕೃತ್ಯದಲ್ಲಿ ಪಾಲ್ಗೊಂಡಿರುವುದನ್ನು ಸಾಬೀತುಪಡಿಸಿದೆ. ನಾವು ನ್ಯಾಯಾಲಯಗಳನ್ನು ಸಂಪರ್ಕಿಸುತ್ತಿದ್ದೇವೆ, ಒಂದು ವಿಷಯವು ಹೈಕೋರ್ಟ್ ಮುಂದೆ ವಿಚಾರಣೆಯಲ್ಲಿದೆ ಮತ್ತು ಇನ್ನೊಂದು ವಿಷಯವು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಂದಿದೆ” ಎಂದು ತಂದೆಯ ಹೇಳಿಕೆಯನ್ನು ಪಿಟಿಐ ಉಲ್ಲೇಖಿಸಿದೆ.

“ನನ್ನ ಮಗಳಿಗೆ ನಿಜವಾದ ನ್ಯಾಯವನ್ನು ನಾವು ಬಯಸುತ್ತೇವೆ. ಇದಕ್ಕಾಗಿ ನಮಗೆ ಬೇಕಾದ ಕಡೆ ನಾವು ಹೋಗುತ್ತೇವೆ” ಎಂದು ತಂದೆ ಹೇಳಿದರು.

ಜನವರಿ 18ರಂದು ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ತೀರ್ಪು:  ಇಲ್ಲಿಯವರೆಗೆ ನಮಗೆ ತಿಳಿದಿರುವುದು
ಆಗಸ್ಟ್ 9ರಂದು ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ವೈದ್ಯೆಯ ಶವವು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಪತ್ತೆಯಾಗಿತ್ತು. ಇದು ದೇಶಾದ್ಯಂತ ಭಾರೀ ಪ್ರತಿಭಟನೆಗಳನ್ನು ಹುಟ್ಟುಹಾಕಿತು. ಘಟನೆಯ ನಂತರ ಸಂಜಯ್ ರಾಯ್ ಅವರನ್ನು ಅಪರಾಧಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು.

ಈ ಅಪರಾಧವು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು ಮತ್ತು ಕೋಲ್ಕತ್ತಾದಲ್ಲಿ ಕಿರಿಯ ವೈದ್ಯರಿಂದ ದೀರ್ಘಕಾಲದ ಪ್ರತಿಭಟನೆಗೆ ಕಾರಣವಾಯಿತು, ಸಂತ್ರಸ್ತೆಗೆ ನ್ಯಾಯ ಮತ್ತು ದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಲಾಯಿತು.

ಕಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತು, ಇದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಹಣಕಾಸು ಅಕ್ರಮಗಳ ಕುರಿತು ಆರೋಪಪಟ್ಟಿ ಸಲ್ಲಿಸಿತು.

ಚಾರ್ಜ್‌ಶೀಟ್‌ನಲ್ಲಿ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಡಾ. ಆಶಿಶ್ ಕುಮಾರ್ ಪಾಂಡೆ, ಬಿಪ್ಲಬ್ ಸಿಂಘಾ, ಸುಮನ್ ಹಜ್ರಾ ಮತ್ತು ಅಫ್ಸರ್ ಅಲಿ ಖಾನ್ ಸೇರಿದಂತೆ ಇತರರ ವಿರುದ್ಧ ಹಣಕಾಸು ದುರುಪಯೋಗದಲ್ಲಿ ಭಾಗಿಯಾಗಿರುವ ಆರೋಪ ಹೊರಿಸಲಾಗಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಈ ತನಿಖೆ ಆರಂಭಿಸಲಾಯಿತು.

ಭ್ರಷ್ಟಾಚಾರ ಪ್ರಕರಣದ ಜೊತೆಗೆ, ಸಂದೀಪ್ ಘೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಎದುರಿಸಿದರು. ತನಿಖೆಯ ಭಾಗವಾಗಿ, ಸಿಬಿಐ ಅವರ ಮೇಲೆ ಪಾಲಿಗ್ರಾಫ್ ಪರೀಕ್ಷೆಗಳನ್ನು ನಡೆಸಿತು.

ಚಾರ್ಜ್‌ಶೀಟ್ ಸಲ್ಲಿಸುವಲ್ಲಿ ವಿಳಂಬವಾದ ಕಾರಣ ಅಭಿಜಿತ್ ಮೊಂಡಲ್ ಮತ್ತು ಸಂದೀಪ್ ಘೋಷ್ ಸೇರಿದಂತೆ ಆರೋಪಿಗಳಿಗೆ ಜಾಮೀನು ನೀಡಲಾಯಿತು. ಅತ್ಯಾಚಾರ ಮತ್ತು ಕೊಲೆ ಪ್ರಕರಣದ ರಹಸ್ಯ ವಿಚಾರಣೆ ನವೆಂಬರ್ 12ರಂದು ಪ್ರಾರಂಭವಾಯಿತು.

ವಿಚಾರಣೆಯು ಜನವರಿ 16 (ಗುರುವಾರ) ಮುಕ್ತಾಯಗೊಂಡಿತು, ಅದರ ನಂತರ ಸೀಲ್ಡಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಜನವರಿ 18ರಂದು ತೀರ್ಪು ನೀಡುವುದಾಗಿ ಹೇಳಿದರು.

ಈ ಅಪರಾಧದಲ್ಲಿ ಇತರ ವ್ಯಕ್ತಿಗಳು ಸಹ ಭಾಗಿಯಾಗಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ವಾದಿಸಿದ್ದಾರೆ. ಈ ಆರೋಪಿಗಳನ್ನು ಸಹ ಬಂಧಿಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ಪೋಷಕರು ನಿರೀಕ್ಷಿಸಿದ್ದಾರೆ.

ಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...