Homeಮುಖಪುಟವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : 'ರಾಷ್ಟ್ರೀಯ ಕಾರ್ಯಪಡೆ' ರಚಿಸಿದ ಸುಪ್ರೀಂ ಕೋರ್ಟ್

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ‘ರಾಷ್ಟ್ರೀಯ ಕಾರ್ಯಪಡೆ’ ರಚಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೇಶದಾದ್ಯಂತ ವೈದ್ಯರು ಮತ್ತು ವೈದ್ಯಕೀಯ ವೃತ್ತಿಪರರಿಗೆ ಸುರಕ್ಷತೆಯ ಕೊರತೆಯ ಬಗ್ಗೆ ಸುಪ್ರೀಂ ಕೋರ್ಟ್ ಇಂದು (ಆ.20) ತೀವ್ರ ಕಳವಳ ವ್ಯಕ್ತಪಡಿಸಿದೆ. ವೈದ್ಯರ ಸುರಕ್ಷತೆಗಾಗಿ ‘ರಾಷ್ಟ್ರೀಯ ಕಾರ್ಯಪಡೆ’ ರಚಿಸಿದೆ.

ಆ.9ರಂದು ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಸಂಬಂಧ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಿತು.

ಈ ವೇಳೆ, ಕೋಲ್ಕತ್ತಾದ ಒಂದು ಪ್ರಕರಣ ಸಂಬಂಧ ನಾವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿಲ್ಲ. ದೇಶದಾದ್ಯಂತ ನಡೆಯುತ್ತಿರುವ ಘಟನೆಗಳನ್ನು ತಡೆಗಟ್ಟಲು ಒಂದು ವ್ಯವಸ್ಥಿತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಹಾಗಾಗಿ, ನಾವು ಪ್ರಕರಣ ಕೈಗೆತ್ತಿಕೊಂಡಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ಯುವ ವೈದ್ಯರು, ಅದರಲ್ಲೂ ಮಹಿಳಾ ವೈದ್ಯರ ಕೆಲಸದ ಸ್ಥಳದಲ್ಲಿ ಸುರಕ್ಷತೆ ಕೊರತೆ ಗಂಭೀರ ವಿಷಯವಾಗಿದೆ. ಲಿಂಗದ ಕಾರಣಕ್ಕೆ ಮಹಿಳಾ ವೈದ್ಯರು ಸುರಕ್ಷತೆಯ ಕೊರತೆ ಅನುಭವಿಸುವುದರ ಬಗ್ಗೆ ಕಳವಳ ಹೊಂದಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಅದಕ್ಕೊಂದು ರಾಷ್ಟ್ರೀಯ ಶಿಷ್ಟಾಚಾರ ಇರಬೇಕು. ಮಹಿಳೆಯರು ಕೆಲಸಕ್ಕೆ ಹೋಗಿ ಸುರಕ್ಷಿತವಾಗಿ ವಾಪಸ್ ಬರಲು ಸಾಧ್ಯವಾಗದಿದ್ದರೆ ನಾವು ಅವರಿಗೆ ಸಮಾನ ಅವಕಾಶವನ್ನು ನಿರಾಕರಿಸಿದ್ದೇವೆ ಎಂದರ್ಥ. ಹಾಗಾಗಿ, ಮಹಿಳೆಯರಿಗೆ ಸುರಕ್ಷತೆ ಒದಗಿಸಿದ್ದೇವೆ ಎಂದು ಖಚಿತಪಡಿಸಿಕೊಳ್ಳಲು ನಾವು ಏನಾದರು ಮಾಡಬೇಕಾಗಿದೆ ಎಂದು ಸಿಜೆಐ ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವೈದ್ಯರ, ವಿ‍ಶೇಷವಾಗಿ ಮಹಿಳಾ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅನುಸರಿಸಬೇಕಾದ ವಿಧಾನಗಳ ಕುರಿತು ಶಿಫಾರಸುಗಳನ್ನು ನೀಡಲು ನ್ಯಾಯಾಲಯವು ದೇಶದ ಪ್ರಮುಖ ಸಂಸ್ಥೆಗಳ ವೈದ್ಯರನ್ನು ಒಳಗೊಂಡ ‘ರಾಷ್ಟ್ರೀಯ ಕಾರ್ಯಪಡೆ’ಯನ್ನು ರಚಿಸುತ್ತಿದೆ ಎಂದು ಸಿಜೆಐ ತಿಳಿಸಿದ್ದಾರೆ.

ಮಹಾರಾಷ್ಟ್ರ, ಕೇರಳ, ತೆಲಂಗಾಣ ಮುಂತಾದ ಹಲವಾರು ರಾಜ್ಯಗಳು ವೈದ್ಯರ ಮೇಲಿನ ದೌರ್ಜನ್ಯವನ್ನು ಎದುರಿಸಲು ರಾಜ್ಯ ಮಟ್ಟದಲ್ಲಿ ಕಾನೂನುಗಳನ್ನು ರೂಪಿಸಿವೆ ಎಂಬುವುದನ್ನು ಪೀಠವು ಗಮನಿಸಿದೆ. ಆದಾಗ್ಯೂ, ಈ ಕಾನೂನುಗಳು ಸಾಂಸ್ಥಿಕ ಸುರಕ್ಷತಾ ಮಾನದಂಡಗಳಲ್ಲಿನ ನ್ಯೂನತೆಗಳನ್ನು ಪರಿಹರಿಸಿಲ್ಲ ಎಂದಿದೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಪ್ರತಿಭಟನೆ ಮುಂದುವರೆಸಿದ ಕಿರಿಯ ವೈದ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...