Homeಮುಖಪುಟಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ: ಹೊಸ ಸಿಬಿಐ ತನಿಖೆ ನಡೆಸಬೇಕೆಂಬ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಆರ್‌ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣ: ಹೊಸ ಸಿಬಿಐ ತನಿಖೆ ನಡೆಸಬೇಕೆಂಬ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಕೊಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣದ ಹೊಸ ಬೆಳವಣಿಗೆಯಲ್ಲಿ, ಕೇಂದ್ರ ತನಿಖಾ ದಳ (ಸಿಬಿಐ) ದಿಂದ ಹೊಸದಾಗಿ ತನಿಖೆ ನಡೆಸಬೇಕೆಂದು ಕೋರಿ ಸಂತ್ರಸ್ತೆಯ ಪೋಷಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಈ ಪ್ರಕರಣವು, ಕೋಲ್ಕತ್ತಾ ಮೂಲದ ವೈದ್ಯಕೀಯ ಸಂಸ್ಥೆಯೊಳಗೆ ನಡೆದ ಸ್ನಾತಕೋತ್ತರ ತರಬೇತಿ ವೈದ್ಯೆಯ ದುರಂತ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು, “ಅರ್ಜಿದಾರರು, ಸಂತ್ರಸ್ತೆಯ ಪೋಷಕರು, ಕಲ್ಕತ್ತಾ ಹೈಕೋರ್ಟ್‌ನಲ್ಲಿ ತಮ್ಮ ಅರ್ಜಿಯನ್ನು ಮುಂದುವರಿಸಲು ಸ್ವಾತಂತ್ರ್ಯ ಹೊಂದಿದ್ದಾರೆ” ಎಂದು ಹೇಳಿದೆ.

ಈ ಹಂತದಲ್ಲಿ ಹೊಸ ಸಿಬಿಐ ತನಿಖೆಗೆ ನಿರ್ದೇಶನ ನೀಡುವುದಕ್ಕೆ ನ್ಯಾಯಾಲಯವು ನಿರಾಕರಿಸಿತು. ಹಿರಿಯ ವಕೀಲೆ ಕರುಣಾ ನುಂಡಿ ಸಂತ್ರಸ್ತೆಯ ಕುಟುಂಬವನ್ನು ಪ್ರತಿನಿಧಿಸಿದರು. ಸಿಬಿಐ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಂಸ್ಥೆಯ ನಿಲುವನ್ನು ಮಂಡಿಸಿದರು.

ಈ ತಿಂಗಳ ಆರಂಭದಲ್ಲಿ, ಬಲಿಪಶು ವೈದ್ಯೆಗೆ ನ್ಯಾಯ ಕೋರಿ ಕೋಲ್ಕತ್ತಾದಲ್ಲಿ ಎರಡು ರ್ಯಾಲಿಗಳು ನಡೆದವು. ಈ ಘೋರ ಅಪರಾಧಕ್ಕೆ ಏಳು ತಿಂಗಳು ತುಂಬಿದ್ದನ್ನು ಸ್ಮರಿಸಲು ನಾಗರಿಕ ಸಮಾಜದ ಒಂದು ವಿಭಾಗವು ಆಯೋಜಿಸಿದ್ದ ರ್ಯಾಲಿಗಳಲ್ಲಿ, ಮಾರ್ಚ್ 1 ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಶಿಕ್ಷಣ ಸಚಿವ ಬ್ರಾತ್ಯ ಬಸು ಅವರ ವಾಹನ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಗಾಯಗೊಂಡ ಪ್ರಕರಣವನ್ನು ಖಂಡಿಸಿದವು.

ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಾಜಿ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್‌ಗೆ ಸೀಲ್ಡಾ ಸೆಷನ್ಸ್ ನ್ಯಾಯಾಲಯವು ಜೀವನದ ಕೊನೆಯವರೆಗೂ ಜೈಲು ಶಿಕ್ಷೆ ವಿಧಿಸಿದೆ. ಆದರೂ, ಕೇಂದ್ರ ಸಂಸ್ಥೆ ಈ ವಿಷಯದ ಬಗ್ಗೆ ತನ್ನ ತನಿಖೆಯನ್ನು ಮುಂದುವರೆಸಿದೆ. ಈ ಅಪರಾಧದಲ್ಲಿ ಇತರರು ಭಾಗಿಯಾಗಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಹೇಳಿಕೊಂಡಿದ್ದು, ನೇರವಾಗಿ ಅಥವಾ ಪರೋಕ್ಷವಾಗಿ ಭಾಗಿಯಾಗಿರಬಹುದಾದ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಕರಣದ ಹಿನ್ನಲೆ:

ಆಗಸ್ಟ್ 9, 2024 ರಂದು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗ ಸ್ನಾತಕೋತ್ತರ ತರಬೇತಿ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ನಂತರ, ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ 32 ವರ್ಷದ ಮಹಿಳೆಯ ಅರೆಬೆತ್ತಲೆ ಶವ ಪತ್ತೆಯಾಯಿತು. ಮರುದಿನ ಅಪರಾಧಕ್ಕೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಯಿತು. ಇದರ ನಂತರ, ಕಲ್ಕತ್ತಾ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸಲು ಆದೇಶಿಸಿತ್ತು.

ಫೆಬ್ರವರಿಯಲ್ಲಿ ಭಾರತದ ಸಗಟು ಬೆಲೆ ಹಣದುಬ್ಬರ ಶೇ.2.38 ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...