Homeಮುಖಪುಟಆರ್ ಜಿ ಕರ್ ಬಿಕ್ಕಟ್ಟು | 2ನೇ ಸುತ್ತಿನ ಮಾತುಕತೆ ಬಳಿಕವೂ ಮುಷ್ಕರ ಮುಂದುವರಿಕೆ!

ಆರ್ ಜಿ ಕರ್ ಬಿಕ್ಕಟ್ಟು | 2ನೇ ಸುತ್ತಿನ ಮಾತುಕತೆ ಬಳಿಕವೂ ಮುಷ್ಕರ ಮುಂದುವರಿಕೆ!

- Advertisement -
- Advertisement -

ಕೋಲ್ಕತ್ತಾ ಪಶ್ಚಿಮ ಬಂಗಾಳದ ಸರ್ಕಾರದ ಕಿರಿಯ ವೈದ್ಯರು ಮತ್ತು ಅಧಿಕಾರಿಗಳ ನಡುವಿನ ಎರಡನೇ ಸುತ್ತಿನ ಮಾತುಕತೆ ಕೂಡಾ ಆರ್‌ಜಿ ಕಾರ್ ಸಮಸ್ಯೆಯ ಕುರಿತು ವೈದ್ಯಾಧಿಕಾರಿಗಳು ನಡೆಸುತ್ತಿರುವ ಮುಷ್ಕರವನ್ನು ನಿಲ್ಲಸಲು ವಿಫಲವಾಗಿದೆ. ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಬರೆದು ಸಹಿ ಮಾಡುವ ಲಿಖಿತ ನಡಾವಳಿಗಳನ್ನು ನೀಡಲು ರಾಜ್ಯ ಸರ್ಕಾರ ನಿರಾಕರಿಸಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಭೆಯ ನಂತರ ವೈದ್ಯಾಧಿಕಾರಿಗಳು ತಮ್ಮ ಆಂದೋಲನ ಮತ್ತು ‘ಕೆಲಸ ನಿಲ್ಲಿಸಿ’ ನಡೆಸುತ್ತಿರುವ ಚಳವಳಿಯನ್ನು ಮುಂದುವರೆಸುವುದಾಗಿ ಘೋಷಿಸಿದ್ದಾರೆ. ಸಭೆಯಲ್ಲಿ ಒಪ್ಪಿಗೆಯಂತೆ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಸುರಕ್ಷತೆಯ ಕುರಿತು ಸರ್ಕಾರವು ಲಿಖಿತ ನಿರ್ದೇಶನಗಳನ್ನು ಹೊರಡಿಸುತ್ತದೆ. “ಮಾತುಕತೆಗಳು ಸುಗಮವಾಗಿ ನಡೆದಾಗ, ಚರ್ಚಿಸಿದ ವಿಷಯಗಳ ಸಹಿ ಮತ್ತು ಲಿಖಿತ ನಡಾವಳಿಗಳನ್ನು ನೀಡಲು ಸರ್ಕಾರ ನಿರಾಕರಿಸಿತು. ಸರ್ಕಾರದ ಧೋರಣೆಯಿಂದ ನಾವು ನಿರಾಶರಾಗಿದ್ದೇವೆ” ಎಂದು ಧರಣಿ ನಿರತ ವೈದ್ಯರಲ್ಲಿ ಒಬ್ಬರಾದ ಡಾ ಅನಿಕೇತ್ ಮಹತೋ ಬುಧವಾರ ರಾತ್ರಿ ಹೇಳಿದ್ದಾರೆ.

“ನಾವು ನಮ್ಮ ಬೇಡಿಕೆಗಳನ್ನು ವಿವರಿಸುವ ಇಮೇಲ್ ಅನ್ನು ನಾಳೆ ಕಳುಹಿಸುತ್ತೇವೆ. ಅದರ ಆಧಾರದ ಮೇಲೆ ಸರ್ಕಾರವು ನಿರ್ದೇಶನಗಳನ್ನು ನೀಡುತ್ತದೆ ಎಂದು ಭರವಸೆ ನೀಡಿದೆ. ಆ ನಿರ್ದೇಶನಗಳನ್ನು ನೀಡುವವರೆಗೂ ನಾವು ನಮ್ಮ ಆಂದೋಲನವನ್ನು ಮುಂದುವರೆಸುತ್ತೇವೆ” ಎಂದು ಮಹತೋ ಹೇಳಿದ್ದಾರೆ.

ಆರ್ ಜಿ ಕರ್ ಆಸ್ಪತ್ರೆಯ ಪಿಜಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯದರ್ಶಿ ಎನ್ ಎಸ್ ನಿಗಮ್ ವಿರುದ್ಧ ಇಲಾಖಾ ತನಿಖೆಯನ್ನು ಆರಂಭಿಸಬೇಕೆಂಬ ವೈದ್ಯರ ಬೇಡಿಕೆಯನ್ನು ಒಪ್ಪಿಕೊಳ್ಳಲು ರಾಜ್ಯ ನಿರಾಕರಿಸಿದೆ.

ಇದನ್ನೂಓದಿ:‘ರಾಹುಲ್ ಗಾಂಧಿ ಭಾರತೀಯರಲ್ಲ’ ಎಂಬ ಹೇಳಿಕೆ; ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಹಿಂದೂ ಸೇನಾ…

ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಮತ್ತು ನಂತರದ ಸರ್ಕಾರಿ ಆರೋಗ್ಯ ಸೌಲಭ್ಯಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪಗಳನ್ನು ವಿದ್ಯಾರ್ಥಿಗಳು ಮತ್ತು ಟ್ರೈನಿ ವೈದ್ಯರು ಆರೋಪಿಸಿದ್ದರು. ಜೊತೆಗೆ ಈ ಸಮಸ್ಯೆಗಲನ್ನು ಪರಿಹರಿಸಬೇಕು ಎಂದು ಭಾರಿ ಪ್ರತಿಭಟನೆ ನಡೆಸುತ್ತಿದ್ದು, ಆರೋಗ್ಯ ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.ಕೋಲ್ಕತ್ತಾ

48 ಗಂಟೆಗಳಲ್ಲಿ ವೈದ್ಯಾಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ನಡುವೆ ನಡೆದ ಎರಡನೇ ಸುತ್ತಿನ ಮಾತುಕತೆ ಇದಾಗಿದೆ. ಸೋಮವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ಮೊದಲ ಸುತ್ತಿನ ಸಭೆಯನ್ನು ನಡೆಸಲಾಯಿತು.

ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ನೇತೃತ್ವದ ರಾಜ್ಯ ಮಟ್ಟದ ಸಾರ್ವಜನಿಕ ಆರೋಗ್ಯ ಕಾರ್ಯಪಡೆ ಮತ್ತು 30 ಕಿರಿಯ ವೈದ್ಯರ ನಿಯೋಗದ ನಡುವಿನ ಸಭೆಯು ನಬನ್ನಾದಲ್ಲಿರುವ ರಾಜ್ಯ ಸಚಿವಾಲಯದಲ್ಲಿ 7 ರ ಸುಮಾರಿಗೆ ಪ್ರಾರಂಭವಾಯಿತು. ರಾಜ್ಯ ಸರ್ಕಾರವು ನಿಗದಿಪಡಿಸಿದ ನಿಗದಿತ ಸಮಯದ ಒಂದು ಗಂಟೆಯ ನಂತರ ಪ್ರಾರಂಭವಾದ ಸಭೆಯು ಐದೂವರೆ ಗಂಟೆಗಳ ಕಾಲ ನಡೆಯಿತು.

ಇದನ್ನೂಓದಿ:ಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!

ಸರ್ಕಾರಿ ಆಸ್ಪತ್ರೆಯ ಆವರಣದೊಳಗೆ ತಮ್ಮ ಸುರಕ್ಷತೆಯ ಸಮಸ್ಯೆಗಳು, ಕಾರ್ಯಪಡೆಯ ರಚನೆ ಮತ್ತು ಕಾರ್ಯಗಳ ವಿವರಗಳನ್ನು ಸಭೆಯಲ್ಲಿ ಎತ್ತಿ ತೋರಿಸಿದ್ದೇವೆ ಎಂದು ಪ್ರತಿಭಟನಾನಿರತ ವೈದ್ಯರು ಹೇಳಿದ್ದಾರೆ. ರೆಫರಲ್ ವ್ಯವಸ್ಥೆಗಳಲ್ಲಿ ಪಾರದರ್ಶಕತೆ, ರೋಗಿಗಳಿಗೆ ಹಾಸಿಗೆ ಹಂಚಿಕೆ, ಆರೋಗ್ಯ ಕಾರ್ಯಕರ್ತರ ನೇಮಕಾತಿ ಮತ್ತು ಕ್ಯಾಂಪಸ್‌ಗಳಲ್ಲಿ ಚಾಲ್ತಿಯಲ್ಲಿರುವ “ಬೆದರಿಕೆ ಸಂಸ್ಕೃತಿ” ಯ ಅಂತ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ವೈದ್ಯರು ಅಲ್ಲಿ ಪ್ರಸ್ತಾಪಿಸಿದ್ದಾರೆ.

ಯೂನಿಯನ್‌ಗಳು, ಹಾಸ್ಟೆಲ್‌ಗಳು ಮತ್ತು ಆಸ್ಪತ್ರೆಗಳ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಪ್ರಾತಿನಿಧ್ಯ, ಕಾಲೇಜು ಮಟ್ಟದ ಕಾರ್ಯಪಡೆಗಳ ಸ್ಥಾಪನೆ, ಕಾಲೇಜು ಕೌನ್ಸಿಲ್ ಮತ್ತು ನಿವಾಸಿ ವೈದ್ಯರ ಸಂಘದ ಚುನಾವಣೆಗಳನ್ನು ನಡೆಸುವುದು ಸಹ ಸಭೆಯಲ್ಲಿ ಪ್ರಸ್ತಾಪವಾಗಿದೆ. ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಂತಹ ಘೋರ ಘಟನೆ ಎಂದಿಗೂ ಪುನರಾವರ್ತನೆಯಾಗಬಾದರು ಎಂಬ ಕಾಳಜಿಯೊಂದಿಗೆ ವೈದ್ಯರ ಈ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

“ನಮ್ಮ ಹೆಚ್ಚಿನ ಬೇಡಿಕೆಗಳು ನ್ಯಾಯಯುತವಾಗಿದ್ದು, ತಕ್ಷಣವೇ ಅನುಷ್ಠಾನಗೊಳ್ಳುವ ಅಗತ್ಯವಿದೆ ಎಂದು ಸರ್ಕಾರ ಒಪ್ಪಿಕೊಂಡಿತು. ಆದರೆ ಮಾತುಕತೆಯ ಕೊನೆಯಲ್ಲಿ ಮುಖ್ಯ ಕಾರ್ಯದರ್ಶಿ ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು ಬರೆದು ಸಹಿ ಮಾಡಿದ ನಡಾವಳಿಗಳನ್ನು ನಮಗೆ ನೀಡಲು ನಿರಾಕರಿಸಿದಾಗ ನಾವು ನಿರಾಶೆಗೊಂಡೆವು” ಎಂದು ವೈದ್ಯರು ಹೇಳಿದ್ದಾರೆ.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...