Homeಮುಖಪುಟಆರ್ ಜಿ ಕರ್ ಬಿಕ್ಕಟ್ಟು | 2ನೇ ಸುತ್ತಿನ ಮಾತುಕತೆ ಬಳಿಕವೂ ಮುಷ್ಕರ ಮುಂದುವರಿಕೆ!

ಆರ್ ಜಿ ಕರ್ ಬಿಕ್ಕಟ್ಟು | 2ನೇ ಸುತ್ತಿನ ಮಾತುಕತೆ ಬಳಿಕವೂ ಮುಷ್ಕರ ಮುಂದುವರಿಕೆ!

- Advertisement -
- Advertisement -

ಕೋಲ್ಕತ್ತಾ ಪಶ್ಚಿಮ ಬಂಗಾಳದ ಸರ್ಕಾರದ ಕಿರಿಯ ವೈದ್ಯರು ಮತ್ತು ಅಧಿಕಾರಿಗಳ ನಡುವಿನ ಎರಡನೇ ಸುತ್ತಿನ ಮಾತುಕತೆ ಕೂಡಾ ಆರ್‌ಜಿ ಕಾರ್ ಸಮಸ್ಯೆಯ ಕುರಿತು ವೈದ್ಯಾಧಿಕಾರಿಗಳು ನಡೆಸುತ್ತಿರುವ ಮುಷ್ಕರವನ್ನು ನಿಲ್ಲಸಲು ವಿಫಲವಾಗಿದೆ. ಸಭೆಯಲ್ಲಿ ಚರ್ಚಿಸಿದ ವಿಷಯಗಳ ಬಗ್ಗೆ ಬರೆದು ಸಹಿ ಮಾಡುವ ಲಿಖಿತ ನಡಾವಳಿಗಳನ್ನು ನೀಡಲು ರಾಜ್ಯ ಸರ್ಕಾರ ನಿರಾಕರಿಸಿದೆ ಎಂದು ವೈದ್ಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಭೆಯ ನಂತರ ವೈದ್ಯಾಧಿಕಾರಿಗಳು ತಮ್ಮ ಆಂದೋಲನ ಮತ್ತು ‘ಕೆಲಸ ನಿಲ್ಲಿಸಿ’ ನಡೆಸುತ್ತಿರುವ ಚಳವಳಿಯನ್ನು ಮುಂದುವರೆಸುವುದಾಗಿ ಘೋಷಿಸಿದ್ದಾರೆ. ಸಭೆಯಲ್ಲಿ ಒಪ್ಪಿಗೆಯಂತೆ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಸುರಕ್ಷತೆಯ ಕುರಿತು ಸರ್ಕಾರವು ಲಿಖಿತ ನಿರ್ದೇಶನಗಳನ್ನು ಹೊರಡಿಸುತ್ತದೆ. “ಮಾತುಕತೆಗಳು ಸುಗಮವಾಗಿ ನಡೆದಾಗ, ಚರ್ಚಿಸಿದ ವಿಷಯಗಳ ಸಹಿ ಮತ್ತು ಲಿಖಿತ ನಡಾವಳಿಗಳನ್ನು ನೀಡಲು ಸರ್ಕಾರ ನಿರಾಕರಿಸಿತು. ಸರ್ಕಾರದ ಧೋರಣೆಯಿಂದ ನಾವು ನಿರಾಶರಾಗಿದ್ದೇವೆ” ಎಂದು ಧರಣಿ ನಿರತ ವೈದ್ಯರಲ್ಲಿ ಒಬ್ಬರಾದ ಡಾ ಅನಿಕೇತ್ ಮಹತೋ ಬುಧವಾರ ರಾತ್ರಿ ಹೇಳಿದ್ದಾರೆ.

“ನಾವು ನಮ್ಮ ಬೇಡಿಕೆಗಳನ್ನು ವಿವರಿಸುವ ಇಮೇಲ್ ಅನ್ನು ನಾಳೆ ಕಳುಹಿಸುತ್ತೇವೆ. ಅದರ ಆಧಾರದ ಮೇಲೆ ಸರ್ಕಾರವು ನಿರ್ದೇಶನಗಳನ್ನು ನೀಡುತ್ತದೆ ಎಂದು ಭರವಸೆ ನೀಡಿದೆ. ಆ ನಿರ್ದೇಶನಗಳನ್ನು ನೀಡುವವರೆಗೂ ನಾವು ನಮ್ಮ ಆಂದೋಲನವನ್ನು ಮುಂದುವರೆಸುತ್ತೇವೆ” ಎಂದು ಮಹತೋ ಹೇಳಿದ್ದಾರೆ.

ಆರ್ ಜಿ ಕರ್ ಆಸ್ಪತ್ರೆಯ ಪಿಜಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯದರ್ಶಿ ಎನ್ ಎಸ್ ನಿಗಮ್ ವಿರುದ್ಧ ಇಲಾಖಾ ತನಿಖೆಯನ್ನು ಆರಂಭಿಸಬೇಕೆಂಬ ವೈದ್ಯರ ಬೇಡಿಕೆಯನ್ನು ಒಪ್ಪಿಕೊಳ್ಳಲು ರಾಜ್ಯ ನಿರಾಕರಿಸಿದೆ.

ಇದನ್ನೂಓದಿ:‘ರಾಹುಲ್ ಗಾಂಧಿ ಭಾರತೀಯರಲ್ಲ’ ಎಂಬ ಹೇಳಿಕೆ; ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಹಿಂದೂ ಸೇನಾ…

ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಮತ್ತು ನಂತರದ ಸರ್ಕಾರಿ ಆರೋಗ್ಯ ಸೌಲಭ್ಯಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪಗಳನ್ನು ವಿದ್ಯಾರ್ಥಿಗಳು ಮತ್ತು ಟ್ರೈನಿ ವೈದ್ಯರು ಆರೋಪಿಸಿದ್ದರು. ಜೊತೆಗೆ ಈ ಸಮಸ್ಯೆಗಲನ್ನು ಪರಿಹರಿಸಬೇಕು ಎಂದು ಭಾರಿ ಪ್ರತಿಭಟನೆ ನಡೆಸುತ್ತಿದ್ದು, ಆರೋಗ್ಯ ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.ಕೋಲ್ಕತ್ತಾ

48 ಗಂಟೆಗಳಲ್ಲಿ ವೈದ್ಯಾಧಿಕಾರಿಗಳು ಮತ್ತು ರಾಜ್ಯ ಸರ್ಕಾರದ ನಡುವೆ ನಡೆದ ಎರಡನೇ ಸುತ್ತಿನ ಮಾತುಕತೆ ಇದಾಗಿದೆ. ಸೋಮವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ಮೊದಲ ಸುತ್ತಿನ ಸಭೆಯನ್ನು ನಡೆಸಲಾಯಿತು.

ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ನೇತೃತ್ವದ ರಾಜ್ಯ ಮಟ್ಟದ ಸಾರ್ವಜನಿಕ ಆರೋಗ್ಯ ಕಾರ್ಯಪಡೆ ಮತ್ತು 30 ಕಿರಿಯ ವೈದ್ಯರ ನಿಯೋಗದ ನಡುವಿನ ಸಭೆಯು ನಬನ್ನಾದಲ್ಲಿರುವ ರಾಜ್ಯ ಸಚಿವಾಲಯದಲ್ಲಿ 7 ರ ಸುಮಾರಿಗೆ ಪ್ರಾರಂಭವಾಯಿತು. ರಾಜ್ಯ ಸರ್ಕಾರವು ನಿಗದಿಪಡಿಸಿದ ನಿಗದಿತ ಸಮಯದ ಒಂದು ಗಂಟೆಯ ನಂತರ ಪ್ರಾರಂಭವಾದ ಸಭೆಯು ಐದೂವರೆ ಗಂಟೆಗಳ ಕಾಲ ನಡೆಯಿತು.

ಇದನ್ನೂಓದಿ:ಆಂಬ್ಯುಲೆನ್ಸ್ ಇಲ್ಲದೆ ತಂದೆಯ ಶವ ಬೈಕ್‌ನಲ್ಲೆ ಕೊಂಡೊಯ್ದ ಮಕ್ಕಳು | ಯುಪಿ ಅಲ್ಲ, ಕರ್ನಾಟಕ!

ಸರ್ಕಾರಿ ಆಸ್ಪತ್ರೆಯ ಆವರಣದೊಳಗೆ ತಮ್ಮ ಸುರಕ್ಷತೆಯ ಸಮಸ್ಯೆಗಳು, ಕಾರ್ಯಪಡೆಯ ರಚನೆ ಮತ್ತು ಕಾರ್ಯಗಳ ವಿವರಗಳನ್ನು ಸಭೆಯಲ್ಲಿ ಎತ್ತಿ ತೋರಿಸಿದ್ದೇವೆ ಎಂದು ಪ್ರತಿಭಟನಾನಿರತ ವೈದ್ಯರು ಹೇಳಿದ್ದಾರೆ. ರೆಫರಲ್ ವ್ಯವಸ್ಥೆಗಳಲ್ಲಿ ಪಾರದರ್ಶಕತೆ, ರೋಗಿಗಳಿಗೆ ಹಾಸಿಗೆ ಹಂಚಿಕೆ, ಆರೋಗ್ಯ ಕಾರ್ಯಕರ್ತರ ನೇಮಕಾತಿ ಮತ್ತು ಕ್ಯಾಂಪಸ್‌ಗಳಲ್ಲಿ ಚಾಲ್ತಿಯಲ್ಲಿರುವ “ಬೆದರಿಕೆ ಸಂಸ್ಕೃತಿ” ಯ ಅಂತ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ವೈದ್ಯರು ಅಲ್ಲಿ ಪ್ರಸ್ತಾಪಿಸಿದ್ದಾರೆ.

ಯೂನಿಯನ್‌ಗಳು, ಹಾಸ್ಟೆಲ್‌ಗಳು ಮತ್ತು ಆಸ್ಪತ್ರೆಗಳ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಪ್ರಾತಿನಿಧ್ಯ, ಕಾಲೇಜು ಮಟ್ಟದ ಕಾರ್ಯಪಡೆಗಳ ಸ್ಥಾಪನೆ, ಕಾಲೇಜು ಕೌನ್ಸಿಲ್ ಮತ್ತು ನಿವಾಸಿ ವೈದ್ಯರ ಸಂಘದ ಚುನಾವಣೆಗಳನ್ನು ನಡೆಸುವುದು ಸಹ ಸಭೆಯಲ್ಲಿ ಪ್ರಸ್ತಾಪವಾಗಿದೆ. ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಂತಹ ಘೋರ ಘಟನೆ ಎಂದಿಗೂ ಪುನರಾವರ್ತನೆಯಾಗಬಾದರು ಎಂಬ ಕಾಳಜಿಯೊಂದಿಗೆ ವೈದ್ಯರ ಈ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

“ನಮ್ಮ ಹೆಚ್ಚಿನ ಬೇಡಿಕೆಗಳು ನ್ಯಾಯಯುತವಾಗಿದ್ದು, ತಕ್ಷಣವೇ ಅನುಷ್ಠಾನಗೊಳ್ಳುವ ಅಗತ್ಯವಿದೆ ಎಂದು ಸರ್ಕಾರ ಒಪ್ಪಿಕೊಂಡಿತು. ಆದರೆ ಮಾತುಕತೆಯ ಕೊನೆಯಲ್ಲಿ ಮುಖ್ಯ ಕಾರ್ಯದರ್ಶಿ ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು ಬರೆದು ಸಹಿ ಮಾಡಿದ ನಡಾವಳಿಗಳನ್ನು ನಮಗೆ ನೀಡಲು ನಿರಾಕರಿಸಿದಾಗ ನಾವು ನಿರಾಶೆಗೊಂಡೆವು” ಎಂದು ವೈದ್ಯರು ಹೇಳಿದ್ದಾರೆ.

ವಿಡಿಯೊ ನೋಡಿ: ಗುರುಪ್ರಸಾದ್ ಕಂಟಲಗೆರೆ ಅವರ ‘ಅಟ್ರಾಸಿಟಿ’ ಕಾದಂಬರಿ ಕುರಿತ ಚರ್ಚೆಯಲ್ಲಿ ಲೇಖಕಿ ದು.ಸರಸ್ವತಿ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...