Homeಮುಖಪುಟರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ, ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿಧದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾದಕವಸ್ತು ಸಂಬಂಧಿತ ಆರೋಪಗಳಿಗೆ ಸಂಬಂಧಿಸಿದಂತೆ ಇಂದು ಎನ್‌ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ನಟಿ ತಾನು ಡ್ರಗ್ಸ್ ಬಳಸುತ್ತಿದ್ದೆ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಸ್ಟಡಿಯಲ್ಲಿರುವ ರಿಯಾ ಚಕ್ರವರ್ತಿಯನ್ನು ಡ್ರಗ್ಸ್ ವಿರೋಧಿ ಸಂಸ್ಥೆ ತನ್ನ ಕಸ್ಟಡಿಗೆ ಪಡೆಯುವುದಿಲ್ಲ ಎಂದು ಆನ್‌ಲೈನ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತಿಳಿಸಿದೆ. ಏಕೆಂದರೆ ಮೂಲಗಳ ಪ್ರಕಾರ ಸಂಸ್ಥೆ ತನಗೆ ಬೇಕಾದ ಪುರಾವೆ ಮತ್ತು ಮಾಹಿತಿಯನ್ನು ಸಂಪೂರ್ಣವಾಗಿ ಹೊಂದಿದೆ ಎಂದು ಮೂಲಗಳು ತಿಳಿಸುತ್ತವೆ. ನಟಿಗೆ ಜಾಮೀನು ನೀಡುವ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ.

ನಟ ಸುಶಾಂತ್ ಸಿಂಗ್ ರಜಪೂತ್‌ರ ಕೊನೆಯ ದಿನಗಳಲ್ಲಿ ರಿಯಾ ಚಕ್ರವರ್ತಿ ಆತನ ಗೆಳತಿಯಾಗಿದ್ದರು. ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿದ್ದದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

28 ವರ್ಷದ ನಟಿ ಟಿವಿ ಸಂದರ್ಶನದಲ್ಲಿ ಡ್ರಗ್ಸ್ ಬಳಸುವುದನ್ನು ನಿರಾಕರಿಸಿದ್ದರು. ಆದರೆ ಕಳೆದ ವಾರ ತನ್ನ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಬಂಧಿಸಿದಾಗ ನಟಿ ಆತಂಕಕ್ಕೆ ಒಳಗಾಗಿದ್ದರು.

ಆಕೆಯ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನ್ನ ವಿಚಾರಣೆಯನ್ನು ಪ್ರಾರಂಭಿಸಿತು, ಇದು ಔಷಧಿಗಳನ್ನು ಸಂಗ್ರಹಿಸುವ, ಹಂಚುವ ಬಗ್ಗೆ ಅನುಮಾನಾಸ್ಪದ ಸಂಭಾಷಣೆಗಳನ್ನು ಬಹಿರಂಗಪಡಿಸಿತು.

ಎರಡನೇ ದಿನದಂದು ರಿಯಾ ಚಕ್ರವರ್ತಿ “ನಾನು ಏನೇ ಮಾಡಿದರೂ ಸುಶಾಂತ್‌ಗಾಗಿ ಮಾಡಿದ್ದೇನೆ”  ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಮುಂದೆ ಭಾವನಾತ್ಮಕವಾಗಿ ಮಾತನಾಡಿದ್ದರು.

ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ರಜಪೂತ್ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಗಾಂಜಾ ಖರೀದಿಸಿರುವ ಬಗ್ಗೆ ಪುರಾವೆಗಳಿವೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಹೇಳಿಕೊಂಡಿದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ರಿಯಾ ಮತ್ತು ಶೋಯಿಕ್ ಚಕ್ರವರ್ತಿಯವರ ಆದೇಶದ ಮೇರೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಮನೆಯ ಸಿಬ್ಬಂದಿ ದೀಪೇಶ್ ಸಾವಂತ್ ಅವರು ಮಾರ್ಚ್ ಮತ್ತು ಜೂನ್ ನಡುವೆ ಒಟ್ಟು 165 ಗ್ರಾಂ ಗಾಂಜಾವನ್ನು ಸಂಗ್ರಹಿಸಿ ನೀಡಿದ್ದಾರೆ ಎಂದು ಬ್ಯೂರೋ ಹೇಳಿಕೊಂಡಿದೆ. ಜೊತೆಗೆ ಸೆಪ್ಟೆಂಬರ್ 2018 ರಿಂದ ಸುಶಾಂತ್ ಸಿಂಗ್ ರಜಪೂತ್ ಅವರು ಗಾಂಜಾ ಸೇದುವುದನ್ನು ನೋಡಿದ್ದೇನೆ ಎಂದು ಸಾವಂತ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬವು ನಟಿ ರಿಯಾ ಮೇಲೆ ದೂರು ನೀಡಿತ್ತು. ಸುಶಾಂತ್‌ನನ್ನು  ಹಣಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ, ಮಾನಸಿಕವಾಗಿ ಕಿರುಕುಳ ನೀಡಿ ಮತ್ತು ಅವರ ಸಾವಿನಲ್ಲಿ ಪಾತ್ರವಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಸದ್ಯ ರಿಯಾ ಚಕ್ರವರ್ತಿಯನ್ನು ಮೂರು ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.


ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...