Homeಮುಖಪುಟರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ, ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿಧದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾದಕವಸ್ತು ಸಂಬಂಧಿತ ಆರೋಪಗಳಿಗೆ ಸಂಬಂಧಿಸಿದಂತೆ ಇಂದು ಎನ್‌ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ನಟಿ ತಾನು ಡ್ರಗ್ಸ್ ಬಳಸುತ್ತಿದ್ದೆ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಸ್ಟಡಿಯಲ್ಲಿರುವ ರಿಯಾ ಚಕ್ರವರ್ತಿಯನ್ನು ಡ್ರಗ್ಸ್ ವಿರೋಧಿ ಸಂಸ್ಥೆ ತನ್ನ ಕಸ್ಟಡಿಗೆ ಪಡೆಯುವುದಿಲ್ಲ ಎಂದು ಆನ್‌ಲೈನ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತಿಳಿಸಿದೆ. ಏಕೆಂದರೆ ಮೂಲಗಳ ಪ್ರಕಾರ ಸಂಸ್ಥೆ ತನಗೆ ಬೇಕಾದ ಪುರಾವೆ ಮತ್ತು ಮಾಹಿತಿಯನ್ನು ಸಂಪೂರ್ಣವಾಗಿ ಹೊಂದಿದೆ ಎಂದು ಮೂಲಗಳು ತಿಳಿಸುತ್ತವೆ. ನಟಿಗೆ ಜಾಮೀನು ನೀಡುವ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ.

ನಟ ಸುಶಾಂತ್ ಸಿಂಗ್ ರಜಪೂತ್‌ರ ಕೊನೆಯ ದಿನಗಳಲ್ಲಿ ರಿಯಾ ಚಕ್ರವರ್ತಿ ಆತನ ಗೆಳತಿಯಾಗಿದ್ದರು. ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿದ್ದದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

28 ವರ್ಷದ ನಟಿ ಟಿವಿ ಸಂದರ್ಶನದಲ್ಲಿ ಡ್ರಗ್ಸ್ ಬಳಸುವುದನ್ನು ನಿರಾಕರಿಸಿದ್ದರು. ಆದರೆ ಕಳೆದ ವಾರ ತನ್ನ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಬಂಧಿಸಿದಾಗ ನಟಿ ಆತಂಕಕ್ಕೆ ಒಳಗಾಗಿದ್ದರು.

ಆಕೆಯ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನ್ನ ವಿಚಾರಣೆಯನ್ನು ಪ್ರಾರಂಭಿಸಿತು, ಇದು ಔಷಧಿಗಳನ್ನು ಸಂಗ್ರಹಿಸುವ, ಹಂಚುವ ಬಗ್ಗೆ ಅನುಮಾನಾಸ್ಪದ ಸಂಭಾಷಣೆಗಳನ್ನು ಬಹಿರಂಗಪಡಿಸಿತು.

ಎರಡನೇ ದಿನದಂದು ರಿಯಾ ಚಕ್ರವರ್ತಿ “ನಾನು ಏನೇ ಮಾಡಿದರೂ ಸುಶಾಂತ್‌ಗಾಗಿ ಮಾಡಿದ್ದೇನೆ”  ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಮುಂದೆ ಭಾವನಾತ್ಮಕವಾಗಿ ಮಾತನಾಡಿದ್ದರು.

ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ರಜಪೂತ್ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಗಾಂಜಾ ಖರೀದಿಸಿರುವ ಬಗ್ಗೆ ಪುರಾವೆಗಳಿವೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಹೇಳಿಕೊಂಡಿದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ರಿಯಾ ಮತ್ತು ಶೋಯಿಕ್ ಚಕ್ರವರ್ತಿಯವರ ಆದೇಶದ ಮೇರೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಮನೆಯ ಸಿಬ್ಬಂದಿ ದೀಪೇಶ್ ಸಾವಂತ್ ಅವರು ಮಾರ್ಚ್ ಮತ್ತು ಜೂನ್ ನಡುವೆ ಒಟ್ಟು 165 ಗ್ರಾಂ ಗಾಂಜಾವನ್ನು ಸಂಗ್ರಹಿಸಿ ನೀಡಿದ್ದಾರೆ ಎಂದು ಬ್ಯೂರೋ ಹೇಳಿಕೊಂಡಿದೆ. ಜೊತೆಗೆ ಸೆಪ್ಟೆಂಬರ್ 2018 ರಿಂದ ಸುಶಾಂತ್ ಸಿಂಗ್ ರಜಪೂತ್ ಅವರು ಗಾಂಜಾ ಸೇದುವುದನ್ನು ನೋಡಿದ್ದೇನೆ ಎಂದು ಸಾವಂತ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬವು ನಟಿ ರಿಯಾ ಮೇಲೆ ದೂರು ನೀಡಿತ್ತು. ಸುಶಾಂತ್‌ನನ್ನು  ಹಣಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ, ಮಾನಸಿಕವಾಗಿ ಕಿರುಕುಳ ನೀಡಿ ಮತ್ತು ಅವರ ಸಾವಿನಲ್ಲಿ ಪಾತ್ರವಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಸದ್ಯ ರಿಯಾ ಚಕ್ರವರ್ತಿಯನ್ನು ಮೂರು ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.


ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...