Homeಮುಖಪುಟರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ, ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿಧದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾದಕವಸ್ತು ಸಂಬಂಧಿತ ಆರೋಪಗಳಿಗೆ ಸಂಬಂಧಿಸಿದಂತೆ ಇಂದು ಎನ್‌ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ನಟಿ ತಾನು ಡ್ರಗ್ಸ್ ಬಳಸುತ್ತಿದ್ದೆ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಸ್ಟಡಿಯಲ್ಲಿರುವ ರಿಯಾ ಚಕ್ರವರ್ತಿಯನ್ನು ಡ್ರಗ್ಸ್ ವಿರೋಧಿ ಸಂಸ್ಥೆ ತನ್ನ ಕಸ್ಟಡಿಗೆ ಪಡೆಯುವುದಿಲ್ಲ ಎಂದು ಆನ್‌ಲೈನ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತಿಳಿಸಿದೆ. ಏಕೆಂದರೆ ಮೂಲಗಳ ಪ್ರಕಾರ ಸಂಸ್ಥೆ ತನಗೆ ಬೇಕಾದ ಪುರಾವೆ ಮತ್ತು ಮಾಹಿತಿಯನ್ನು ಸಂಪೂರ್ಣವಾಗಿ ಹೊಂದಿದೆ ಎಂದು ಮೂಲಗಳು ತಿಳಿಸುತ್ತವೆ. ನಟಿಗೆ ಜಾಮೀನು ನೀಡುವ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ.

ನಟ ಸುಶಾಂತ್ ಸಿಂಗ್ ರಜಪೂತ್‌ರ ಕೊನೆಯ ದಿನಗಳಲ್ಲಿ ರಿಯಾ ಚಕ್ರವರ್ತಿ ಆತನ ಗೆಳತಿಯಾಗಿದ್ದರು. ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿದ್ದದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

28 ವರ್ಷದ ನಟಿ ಟಿವಿ ಸಂದರ್ಶನದಲ್ಲಿ ಡ್ರಗ್ಸ್ ಬಳಸುವುದನ್ನು ನಿರಾಕರಿಸಿದ್ದರು. ಆದರೆ ಕಳೆದ ವಾರ ತನ್ನ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಬಂಧಿಸಿದಾಗ ನಟಿ ಆತಂಕಕ್ಕೆ ಒಳಗಾಗಿದ್ದರು.

ಆಕೆಯ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನ್ನ ವಿಚಾರಣೆಯನ್ನು ಪ್ರಾರಂಭಿಸಿತು, ಇದು ಔಷಧಿಗಳನ್ನು ಸಂಗ್ರಹಿಸುವ, ಹಂಚುವ ಬಗ್ಗೆ ಅನುಮಾನಾಸ್ಪದ ಸಂಭಾಷಣೆಗಳನ್ನು ಬಹಿರಂಗಪಡಿಸಿತು.

ಎರಡನೇ ದಿನದಂದು ರಿಯಾ ಚಕ್ರವರ್ತಿ “ನಾನು ಏನೇ ಮಾಡಿದರೂ ಸುಶಾಂತ್‌ಗಾಗಿ ಮಾಡಿದ್ದೇನೆ”  ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಮುಂದೆ ಭಾವನಾತ್ಮಕವಾಗಿ ಮಾತನಾಡಿದ್ದರು.

ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ರಜಪೂತ್ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಗಾಂಜಾ ಖರೀದಿಸಿರುವ ಬಗ್ಗೆ ಪುರಾವೆಗಳಿವೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಹೇಳಿಕೊಂಡಿದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ರಿಯಾ ಮತ್ತು ಶೋಯಿಕ್ ಚಕ್ರವರ್ತಿಯವರ ಆದೇಶದ ಮೇರೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಮನೆಯ ಸಿಬ್ಬಂದಿ ದೀಪೇಶ್ ಸಾವಂತ್ ಅವರು ಮಾರ್ಚ್ ಮತ್ತು ಜೂನ್ ನಡುವೆ ಒಟ್ಟು 165 ಗ್ರಾಂ ಗಾಂಜಾವನ್ನು ಸಂಗ್ರಹಿಸಿ ನೀಡಿದ್ದಾರೆ ಎಂದು ಬ್ಯೂರೋ ಹೇಳಿಕೊಂಡಿದೆ. ಜೊತೆಗೆ ಸೆಪ್ಟೆಂಬರ್ 2018 ರಿಂದ ಸುಶಾಂತ್ ಸಿಂಗ್ ರಜಪೂತ್ ಅವರು ಗಾಂಜಾ ಸೇದುವುದನ್ನು ನೋಡಿದ್ದೇನೆ ಎಂದು ಸಾವಂತ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬವು ನಟಿ ರಿಯಾ ಮೇಲೆ ದೂರು ನೀಡಿತ್ತು. ಸುಶಾಂತ್‌ನನ್ನು  ಹಣಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ, ಮಾನಸಿಕವಾಗಿ ಕಿರುಕುಳ ನೀಡಿ ಮತ್ತು ಅವರ ಸಾವಿನಲ್ಲಿ ಪಾತ್ರವಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಸದ್ಯ ರಿಯಾ ಚಕ್ರವರ್ತಿಯನ್ನು ಮೂರು ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.


ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...