Homeಮುಖಪುಟರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ ಬಂಧನ: ಡ್ರಗ್ಸ್ ಬಳಕೆ ಒಪ್ಪಿಕೊಂಡ ನಟಿ

ರಿಯಾ ಚಕ್ರವರ್ತಿ, ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿಧದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ. 

- Advertisement -
- Advertisement -

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಮಾದಕವಸ್ತು ಸಂಬಂಧಿತ ಆರೋಪಗಳಿಗೆ ಸಂಬಂಧಿಸಿದಂತೆ ಇಂದು ಎನ್‌ಸಿಬಿ ಅಧಿಕಾರಿಗಳು ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ. ನಟಿ ತಾನು ಡ್ರಗ್ಸ್ ಬಳಸುತ್ತಿದ್ದೆ ಎಂದು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಕಸ್ಟಡಿಯಲ್ಲಿರುವ ರಿಯಾ ಚಕ್ರವರ್ತಿಯನ್ನು ಡ್ರಗ್ಸ್ ವಿರೋಧಿ ಸಂಸ್ಥೆ ತನ್ನ ಕಸ್ಟಡಿಗೆ ಪಡೆಯುವುದಿಲ್ಲ ಎಂದು ಆನ್‌ಲೈನ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ ತಿಳಿಸಿದೆ. ಏಕೆಂದರೆ ಮೂಲಗಳ ಪ್ರಕಾರ ಸಂಸ್ಥೆ ತನಗೆ ಬೇಕಾದ ಪುರಾವೆ ಮತ್ತು ಮಾಹಿತಿಯನ್ನು ಸಂಪೂರ್ಣವಾಗಿ ಹೊಂದಿದೆ ಎಂದು ಮೂಲಗಳು ತಿಳಿಸುತ್ತವೆ. ನಟಿಗೆ ಜಾಮೀನು ನೀಡುವ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ.

ನಟ ಸುಶಾಂತ್ ಸಿಂಗ್ ರಜಪೂತ್‌ರ ಕೊನೆಯ ದಿನಗಳಲ್ಲಿ ರಿಯಾ ಚಕ್ರವರ್ತಿ ಆತನ ಗೆಳತಿಯಾಗಿದ್ದರು. ಬಾಲಿವುಡ್ ತಾರೆಯರಿಗಾಗಿ ಡ್ರಗ್ಸ್ ಹೊಂದಿಸುತ್ತಿದ್ದದ್ದು, ಮತ್ತು ಕೆಲವು ಬಾರಿ ತಾನು ಬಳಸುತ್ತಿದೆ ಎಂದು ಅವರು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳಷ್ಟೇ ಬಳಕೆ: ಬೆಂಗಳೂರಿನ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಮುಚ್ಚಲು ನಿರ್ಧಾರ!

28 ವರ್ಷದ ನಟಿ ಟಿವಿ ಸಂದರ್ಶನದಲ್ಲಿ ಡ್ರಗ್ಸ್ ಬಳಸುವುದನ್ನು ನಿರಾಕರಿಸಿದ್ದರು. ಆದರೆ ಕಳೆದ ವಾರ ತನ್ನ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಬಂಧಿಸಿದಾಗ ನಟಿ ಆತಂಕಕ್ಕೆ ಒಳಗಾಗಿದ್ದರು.

ಆಕೆಯ ಫೋನ್‌ನಿಂದ ಮರುಪಡೆಯಲಾದ ವಾಟ್ಸಾಪ್ ಚಾಟ್‌ಗಳ ಆಧಾರದ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನ್ನ ವಿಚಾರಣೆಯನ್ನು ಪ್ರಾರಂಭಿಸಿತು, ಇದು ಔಷಧಿಗಳನ್ನು ಸಂಗ್ರಹಿಸುವ, ಹಂಚುವ ಬಗ್ಗೆ ಅನುಮಾನಾಸ್ಪದ ಸಂಭಾಷಣೆಗಳನ್ನು ಬಹಿರಂಗಪಡಿಸಿತು.

ಎರಡನೇ ದಿನದಂದು ರಿಯಾ ಚಕ್ರವರ್ತಿ “ನಾನು ಏನೇ ಮಾಡಿದರೂ ಸುಶಾಂತ್‌ಗಾಗಿ ಮಾಡಿದ್ದೇನೆ”  ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ ಮುಂದೆ ಭಾವನಾತ್ಮಕವಾಗಿ ಮಾತನಾಡಿದ್ದರು.

ಶೋಯಿಕ್ ಚಕ್ರವರ್ತಿ ಮತ್ತು ಸುಶಾಂತ್ ರಜಪೂತ್ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಗಾಂಜಾ ಖರೀದಿಸಿರುವ ಬಗ್ಗೆ ಪುರಾವೆಗಳಿವೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಹೇಳಿಕೊಂಡಿದೆ.

ಇದನ್ನೂ ಓದಿ: ಮೋದಿಯವರ ಯಾವ ವಿಡಿಯೋ ಸಹ ಬಿಡುತ್ತಿಲ್ಲ: ಇಂದೂ ಡಿಸ್‌ಲೈಕ್‌ಗಳ ಸುರಿಮಳೆ!

ರಿಯಾ ಮತ್ತು ಶೋಯಿಕ್ ಚಕ್ರವರ್ತಿಯವರ ಆದೇಶದ ಮೇರೆಗೆ ಸುಶಾಂತ್ ಸಿಂಗ್ ರಜಪೂತ್ ಅವರ ಮನೆಯ ಸಿಬ್ಬಂದಿ ದೀಪೇಶ್ ಸಾವಂತ್ ಅವರು ಮಾರ್ಚ್ ಮತ್ತು ಜೂನ್ ನಡುವೆ ಒಟ್ಟು 165 ಗ್ರಾಂ ಗಾಂಜಾವನ್ನು ಸಂಗ್ರಹಿಸಿ ನೀಡಿದ್ದಾರೆ ಎಂದು ಬ್ಯೂರೋ ಹೇಳಿಕೊಂಡಿದೆ. ಜೊತೆಗೆ ಸೆಪ್ಟೆಂಬರ್ 2018 ರಿಂದ ಸುಶಾಂತ್ ಸಿಂಗ್ ರಜಪೂತ್ ಅವರು ಗಾಂಜಾ ಸೇದುವುದನ್ನು ನೋಡಿದ್ದೇನೆ ಎಂದು ಸಾವಂತ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬವು ನಟಿ ರಿಯಾ ಮೇಲೆ ದೂರು ನೀಡಿತ್ತು. ಸುಶಾಂತ್‌ನನ್ನು  ಹಣಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ, ಮಾನಸಿಕವಾಗಿ ಕಿರುಕುಳ ನೀಡಿ ಮತ್ತು ಅವರ ಸಾವಿನಲ್ಲಿ ಪಾತ್ರವಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಸದ್ಯ ರಿಯಾ ಚಕ್ರವರ್ತಿಯನ್ನು ಮೂರು ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ.


ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...