Homeಕರ್ನಾಟಕಪಡಿತರ ಅಕ್ಕಿ ಕಡಿತ: ಸರ್ಕಾರದ ವಿರುದ್ಧ ಹೆಚ್.ಕೆ.ಪಾಟೀಲ್ ಆಕ್ರೋಶ

ಪಡಿತರ ಅಕ್ಕಿ ಕಡಿತ: ಸರ್ಕಾರದ ವಿರುದ್ಧ ಹೆಚ್.ಕೆ.ಪಾಟೀಲ್ ಆಕ್ರೋಶ

ಈ ಮೊದಲು 7 ಅಕ್ಕಿ ನೀಡಲಾಗುತ್ತಿತ್ತು. ಅದನ್ನು ಇತ್ತೀಚೆಗೆ 5 ಕೆಜಿಗೆ ಇಳಿಸಲಾಗಿತ್ತು. ಈಗ ಮತ್ತೊಮ್ಮೆ 3 ಕೆಜಿ ಕಡಿತ ಮಾಡಿ 2 ಕೆಜಿ ನೀಡಲು ಸರ್ಕಾರ ತೀರ್ಮಾನಿಸಿದೆ.

- Advertisement -
- Advertisement -

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿಯಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ನೀಡುತ್ತಿದ್ದ ಅಕ್ಕಿ ಪ್ರಮಾಣವನ್ನು ರಾಜ್ಯ ಸರ್ಕಾರ ಮತ್ತೆ ಕಡಿತಗೊಳಿಸಿದೆ.

ಈ ಮೊದಲು ವ್ಯಕ್ತಿಯೊಬ್ಬರಿಗೆ 7 ಅಕ್ಕಿ ನೀಡಲಾಗುತ್ತಿತ್ತು. ಅದನ್ನು ಇತ್ತೀಚೆಗೆ 5 ಕೆಜಿಗೆ ಇಳಿಸಲಾಗಿತ್ತು. ಈಗ ಮತ್ತೊಮ್ಮೆ 3 ಕೆಜಿ ಕಡಿತ ಮಾಡಿ 2 ಕೆಜಿ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ವ್ಯತ್ಯಾಸವನ್ನು ಸರಿದೂಗಿಸಲು 3ಕೆಜಿ ರಾಗಿ ಮತ್ತು 2ಕೆಜಿ ಗೋಧಿ ನೀಡಲು ಸರ್ಕಾರ ಮುಂದಾಗಿದೆ.

ಅಕ್ಕಿಯನ್ನು ಹೊರರಾಜ್ಯಗಳಿಂದ ಆಮದು ಮಾಡಿಕೊಂಡು ವಿತರಿಸಲಾಗುತ್ತಿತ್ತು. ಅದರ ಬದಲಿಗೆ ನಮ್ಮದೇ ರಾಜ್ಯದ ರೈತರು ಬೆಳೆದ ರಾಗಿಯನ್ನು ಬೆಂಬಲ ಬೆಲೆ ನೀಡಿ ಕೊಂಡು ಪಡಿತರ ವ್ಯವಸ್ಥೆ ಮೂಲಕ ವಿತರಿಸಲು ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಆದರೆ ಸರ್ಕಾರದ ಈ ಅಕ್ಕಿ ಕಡಿತ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಗದಗಿನ ಶಾಸಕ ಹೆಚ್.ಕೆ.ಪಾಟೀಲ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ “ಸರ್ಕಾರ ಬಡವರಿಗೆ ಅನ್ಯಾಯ ಮಾಡಲು ಹೊರಟಿದೆ” ಎಂದು ಕಿಡಿಕಾರಿದ್ದಾರೆ.

“ಈ ಹಿಂದೆ ಕಾಂಗ್ರೆಸ್ ಸರ್ಕಾರ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು ಈ ಬಿಜೆಪಿ ಸರ್ಕಾರ 5ಕೆಜಿಗೆ ಇಳಿಸಿತ್ತು. ಈಗ ಮತ್ತೆ 5 ಕೆಜಿಯಿಂದ 2 ಕೆಜಿಗೆ ಕಡಿತಗೊಳಿಸಲು ಹೊರಟಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ. ಇದರಿಂದ ಬಡವರಿಗೆ ಅನ್ಯಾಯವಾಗಲಿದ್ದು, ಯಾವುದೇ ಕಾರಣಕ್ಕೂ ಅಕ್ಕಿ ಪ್ರಮಾಣದಲ್ಲಿ ಕಡಿತ ಮಾಡಬಾರದು” ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ಭರವಸೆ ನೀಡಿದರೆ 5ಕೆಜಿ ಅಕ್ಕಿಯ ಜೊತೆಗೆ 3ಕೆಜಿ ರಾಗಿ ಅಥವಾ ಜೋಳ ನೀಡಬೇಕು. ಹೊರತಾಗಿ ಕೋವಿಡ್ ಸಂಕಷ್ಟದ ಕಾಲದಲ್ಲಿ ಅಕ್ಕಿ ಕಡಿತದಂತಹ ಬಡವರ ವಿರೋಧಿ ನಿರ್ಣಯ ಕೈಗೊಂಡರೆ ಬಿಜೆಪಿ ಸರ್ಕಾರ ಗಂಭೀರ ಪರಿಸ್ಥಿತಿಯನ್ನು ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...