Homeಮುಖಪುಟಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಗಾಗಿ ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 10 ಕೆ.ಜಿ ಅಕ್ಕಿ ನೀಡಲು 2 ಲಕ್ಷದ 29 ಸಾವಿರ ಮೆಟ್ರಿಕ್​ ಟನ್ ಅಕ್ಕಿ ಬೇಕು. ಪಂಜಾಬ್​ ಸರ್ಕಾರವೂ ನವೆಂಬರ್​ ತಿಂಗಳಿನಿಂದ ಅಕ್ಕಿ ಕೊಡುವುದಾಗಿ ತಿಳಿಸಿದೆ ಎಂದರು.

ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಅವರ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ. ಖಾಸಗಿಯವರಿಗೆ ಹರಾಜು ಮಾಡುತ್ತಾರೆ. ಆದರೆ, ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. ಇಂತಹ ದ್ವೇಷದ ರಾಜಕಾರಣ ಮಾಡುವವರನ್ನು ಬಡವರ ವಿರೋಧಿ ಎನ್ನಬೇಕು ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದ್ದಾರೆ.

ಇಂದು (ಜೂನ್ 23) ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ಸಿದ್ಧಗೊಂಡಿದೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...