Homeಮುಖಪುಟಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ಚತ್ತೀಸ್‌ಘಡದಿಂದ ಅಕ್ಕಿ, ತೆಲಂಗಾಣದಿಂದ ಭತ್ತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿಗಾಗಿ ತೆಲಂಗಾಣ ಸರ್ಕಾರವು ಕರ್ನಾಟಕಕ್ಕೆ ಭತ್ತ ಕೊಡುವುದಾಗಿ ಮತ್ತು ಛತ್ತೀಸ​ಗಢ ​ಸರ್ಕಾರ ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ 10 ಕೆ.ಜಿ ಅಕ್ಕಿ ನೀಡಲು 2 ಲಕ್ಷದ 29 ಸಾವಿರ ಮೆಟ್ರಿಕ್​ ಟನ್ ಅಕ್ಕಿ ಬೇಕು. ಪಂಜಾಬ್​ ಸರ್ಕಾರವೂ ನವೆಂಬರ್​ ತಿಂಗಳಿನಿಂದ ಅಕ್ಕಿ ಕೊಡುವುದಾಗಿ ತಿಳಿಸಿದೆ ಎಂದರು.

ಬಡವರ ಕಾರ್ಯಕ್ರಮಕ್ಕೆ ತೊಂದರೆ ನೀಡಬೇಕೆಂದು ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಅವರ ಬಳಿ ಲಕ್ಷಗಟ್ಟಲೆ ಟನ್ ಅಕ್ಕಿಯಿದೆ. ಖಾಸಗಿಯವರಿಗೆ ಹರಾಜು ಮಾಡುತ್ತಾರೆ. ಆದರೆ, ರಾಜ್ಯಗಳಿಗೆ ನೀಡುವುದಿಲ್ಲ ಎನ್ನುತ್ತಾರೆ. ಹಣ ನೀಡಿದರೂ ಕೊಡುವುದಿಲ್ಲ. ಇಂತಹ ದ್ವೇಷದ ರಾಜಕಾರಣ ಮಾಡುವವರನ್ನು ಬಡವರ ವಿರೋಧಿ ಎನ್ನಬೇಕು ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದ್ದಾರೆ.

ಇಂದು (ಜೂನ್ 23) ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ಸಿದ್ಧಗೊಂಡಿದೆ: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...