Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...