Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...