Homeಮುಖಪುಟ1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

1% ಶ್ರೀಮಂತರ ಬಳಿ 40.5% ದೇಶದ ಸಂಪತ್ತು: ಆಕ್ಸ್‌ಫ್ಯಾಮ್ ಇಂಡಿಯಾ ವರದಿ

- Advertisement -
- Advertisement -

ಭಾರತದ ಜನಸಂಖ್ಯೆಯ 1% ಶ್ರೀಮಂತರು ದೇಶದ ಒಟ್ಟು ಸಂಪತ್ತಿನ 40.5%ಕ್ಕಿಂತ ಹೆಚ್ಚು ಸಂಪತ್ತನ್ನು 2021ರಲ್ಲಿ ಹೊಂದಿದ್ದರು. ಆದರೆ ದೇಶದ ಜನಸಂಖ್ಯೆಯಲ್ಲಿ ಕೊನೆಯ ಸ್ಥಾನದಲ್ಲಿರುವ 50% ಜನರು ಸುಮಾರು 3%ರಷ್ಟು ಸಂಪತ್ತನ್ನು ಮಾತ್ರ ಹೊಂದಿದ್ದಾರೆ ಎಂದು ಲಾಭರಹಿತ ಸಂಸ್ಥೆಯಾಗಿರುವ ‘ಆಕ್ಸ್‌ಫ್ಯಾಮ್ ಇಂಡಿಯಾ’ ತನ್ನ ವರದಿಯಲ್ಲಿ ತಿಳಿಸಿದೆ.

‘ಶ್ರೀಮಂತರ ಬದುಕುಳಿಯುವಿಕೆ: ಭಾರತ ಪೂರಕ’ ಎಂಬ ವರದಿಯನ್ನು ಆಕ್ಸ್‌ಫ್ಯಾಮ್ ಬಿಡುಗಡೆ ಮಾಡಿದ್ದು, ಭಾರತದ 100 ಶ್ರೀಮಂತ ವ್ಯಕ್ತಿಗಳ ಒಟ್ಟು ಸಂಪತ್ತು 2022ರಲ್ಲಿ 54.12 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದೆ ಎಂದು ಹೇಳಿದೆ. 2022ರಲ್ಲಿ 10 ಶ್ರೀಮಂತ ಭಾರತೀಯರ ಒಟ್ಟು ಸಂಪತ್ತು 27.52 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು, 2021ರಿಂದ 32.8% ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಒಟ್ಟು ಶತಕೋಟ್ಯಾಧಿಪತಿಗಳ ಸಂಖ್ಯೆಯು 2020ರಲ್ಲಿ 102 ಇತ್ತು. 2021ರಲ್ಲಿ 142ಕ್ಕೆ ಏರಿಕೆಯಾಯಿತು. 2022ರಲ್ಲಿ ಈ ಸಂಖ್ಯೆ 166ಕ್ಕೆ ತಲುಪಿದೆ. ಇದಕ್ಕೆ ತದ್ವಿರುದ್ಧವಾಗಿ ಭಾರತದಲ್ಲಿ 22.89 ಕೋಟಿ ಜನರು ಬಡತನ ನರಳುತ್ತಿದ್ದಾರೆ. ಇದು ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಾಗಿದೆ. ತೆರಿಗೆ ಪದ್ಧತಿಯು ಪ್ರಗತಿಪರವಾಗದಿದ್ದರೆ ಈ ಅಸಮಾನತೆ ಮತ್ತಷ್ಟು ಉಲ್ಬಣವಾಗಬಹುದು ಎಂದು ವರದಿ ಎಚ್ಚರಿಸಿದೆ.

ಪ್ರಗತಿಪರ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆಯ ಪ್ರಮಾಣವು ಹೆಚ್ಚಾದಂತೆ ತೆರಿಗೆ ದರವು ಹೆಚ್ಚಾಗುತ್ತದೆ. ಭಾರತದಲ್ಲಿ ಆದಾಯ ತೆರಿಗೆ ದರಗಳು ಆದಾಯವನ್ನು ಆಧರಿಸಿರುತ್ತದೆ, ಆದರೆ ಪರೋಕ್ಷ ತೆರಿಗೆಗಳು ಅವರ ಗಳಿಕೆಯನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಒಂದೇ ರೀತಿಯಲ್ಲಿ ಇರುತ್ತದೆ ಎಂದು ‘ಆಕ್ಸ್‌ಫ್ಯಾಮ್ ಇಂಡಿಯಾ’ ಗಮನಸೆಳೆದಿದೆ.

“ವ್ಯಾಟ್ [ಮೌಲ್ಯವರ್ಧಿತ ತೆರಿಗೆ] ನಂತಹ ತೆರಿಗೆಗಳ ಮೇಲೆ ಭಾರೀ ಅವಲಂಬಿಸುವುದು ಅಸಮಾನತೆಯನ್ನು ಹೆಚ್ಚಿಸುತ್ತದೆ. ಏಕೆಂದರೆ ಬಡ ಜನರು ತಮ್ಮ ಆದಾಯದ ಹೆಚ್ಚಿನ ಪಾಲನ್ನು ಇದಕ್ಕಾಗಿ ಪಾವತಿಸಬೇಕಾಗುತ್ತದೆ” ಎಂದಿದೆ.

ದೇಶದ ಜನಸಂಖ್ಯೆಯ ಕಟ್ಟೆಕಡೆಯಲ್ಲಿರುವ 50%ರಷ್ಟು ಜನರನ್ನು ಮೇಲ್ಬಾಗದಲ್ಲಿನ 10%ರಷ್ಟು ಜನರಿಗೆ ಹೋಲಿಸಿದರೆ ಆದಾಯದ ಶೇಕಡಾವಾರು ಪ್ರಮಾಣದಲ್ಲಿ ಆರು ಪಟ್ಟು ಹೆಚ್ಚು ಪರೋಕ್ಷ ತೆರಿಗೆಯನ್ನು ಶೇ.50ರಷ್ಟು ಜನರು ಪಾವತಿಸುತ್ತಾರೆ ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

ಆಹಾರ ಮತ್ತು ಆಹಾರೇತರ ವಸ್ತುಗಳಿಂದ ಸಂಗ್ರಹಿಸಲಾದ ಒಟ್ಟು ತೆರಿಗೆಗಳಲ್ಲಿ 64.3%ರಷ್ಟನ್ನು ಕಟ್ಟಕಡೆಯ 50% ಜನರಿಂದ ಪಡೆಯಲಾಗಿದೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸಿದರೆ ಸರ್ಕಾರದ ಆದಾಯ ಹೆಚ್ಚುತ್ತದೆ ಎಂದು ಆಕ್ಸ್‌ಫ್ಯಾಮ್ ಶಿಫಾರಸ್ಸು ಮಾಡಿದೆ. ಈ ಆದಾಯವನ್ನು ದೇಶದ ಅಭಿವೃದ್ಧಿಗೆ ಬಳಸಬಹುದು ಎಂದಿದೆ. ಉದಾಹರಣೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿಯವರು 2017-2021ರ ಅವಧಿಯಲ್ಲಿ ಅವಾಸ್ತವಿಕವಾಗಿ ಗಳಿಸಿದ ಲಾಭಗಳ ಮೇಲೆ ಒಂದು-ಬಾರಿ ತೆರಿಗೆಯನ್ನು ವಿಧಿಸಿದರೆ 1.79 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು. ಇಷ್ಟು ಹಣ ಒಂದು ವರ್ಷಕ್ಕೆ 50 ಲಕ್ಷಕ್ಕೂ ಹೆಚ್ಚು ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ದರಗಳನ್ನು ಕಡಿಮೆ ಮಾಡಲು, ಐಷಾರಾಮಿ ಸರಕುಗಳ ಮೇಲೆ ಹೆಚ್ಚಿಸಲು ಆಕ್ಸ್‌ಫ್ಯಾಮ್ ಸೂಚಿಸಿದೆ.

ಅಂಕಿ-ಅಂಶಗಳ ಕುರಿತು ಪ್ರತಿಕ್ರಿಯಿಸಿದ ಆಕ್ಸ್‌ಫ್ಯಾಮ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಬೆಹರ್, “ಶ್ರೀಮಂತರು ತಮ್ಮ ನ್ಯಾಯಯುತವಾದ ತೆರಿಗೆಯನ್ನು ಪಾವತಿಸುವುದನ್ನು ಖಚಿತಪಡಿಸಿಕೊಳ್ಳುವ ಸಮಯ ಬಂದಿದೆ” ಎಂದಿದ್ದಾರೆ.

“ಶ್ರೀಮಂತರನ್ನು ಬೆಳೆಸುವ ವ್ಯವಸ್ಥೆಯಲ್ಲಿ ಕಟ್ಟಕಡೆಯ ಸಮುದಾಯದವರಾದ ದಲಿತರು, ಆದಿವಾಸಿಗಳು, ಮುಸ್ಲಿಮರು, ಮಹಿಳೆಯರು ಮತ್ತು ಅನೌಪಚಾರಿಕ ವಲಯದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಪತ್ತಿನ ಮೇಲೆ ತೆರಿಗೆಯನ್ನು ವಿಧಿಸುವಂತಹ ಪ್ರಗತಿಪರ ತೆರಿಗೆ ಕ್ರಮಗಳನ್ನು ಹಣಕಾಸು ಸಚಿವರು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...